Homeಕರ್ನಾಟಕಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ - ಸಿಪಿಐ(ಎಂ)

ಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ – ಸಿಪಿಐ(ಎಂ)

- Advertisement -
- Advertisement -

ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ ಕೇಂದ್ರ-ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಹೋರಾಟಗಳನ್ನು ತೀವ್ರಗೊಳಿಸಲು ಮತ್ತು ಕರ್ನಾಟಕದಲ್ಲಿ ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಪಕ್ಷವು ತೀರ್ಮಾನಿಸಿದೆ ಎಂದು ಸಿಪಿಐ(ಎಂ)ನ ನೂತನ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಕೆ. ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ಪಕ್ಷದ ರಾಜ್ಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ”ಕೇಂದ್ರದ ಮೋದಿ ಸರ್ಕಾರವು ದೇಶದ ಬಹುಸಂಖ್ಯಾತ ಬಡವರನ್ನು ಬಲಿಕೊಟ್ಟು ಮತೀಯವಾದಿ ನೀತಿಗಳ ನೆರಳಲ್ಲಿ ಕಾರ್ಪೊರೇಟ್ ಬಂಡವಾಳದಾರರ ಹಿತಕ್ಕಾಗಿ ನವ-ಉದಾರವಾದಿ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಇತ್ತ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಮೋದಿ ಸರ್ಕಾರದ ರೀತಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂದು ಸಮ್ಮೇಳನದಲ್ಲಿ ಮಂಡಿಸಿದ ರಾಜಕೀಯ ವರದಿಯಲ್ಲಿ ವಿಶ್ಲೇಷಿಸಿದೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಮತ್ತು ರಾಜ್ಯದ ಸರ್ಕಾರದ ನೀತಿಯಿಂದಾಗಿ ಬಡವರು, ಕೂಲಿ ಕಾರ್ಮಿಕರು, ರೈತರು, ಕಾರ್ಮಿಕರು ಮತ್ತು ಇತರೆ ದುಡಿಯುವ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಉದ್ಯೋಗ ಅಭದ್ರತೆ, ರೈತರ ಬೆಳೆಗೆ ಸಿಗದ ಬೆಲೆ, ಬಲವಂತದ ಭೂಸ್ವಾಧೀನ, ಶಿಕ್ಷಣ, ಆರೋಗ್ಯ, ಮತ್ತು ಇತರೆ ನಾಗರೀಕ ಸೇವೆಗಳ ದುಬಾರಿ, ಇತ್ಯಾದಿ ಸಮಸ್ಯೆಗಳಿಂದಾಗಿ ಜರ್ಜರಿತಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿರುವ ಕುರಿತು ಸಮ್ಮೇಳನ ಆತಂಕ ವ್ಯಕ್ತಪಡಿಸಿದೆ” ಎಂದಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆರೆಸ್ಸೆಸ್ ಮತ್ತು ಅದರ ಪರಿವಾರ ಸಂಘಟನೆಗಳು ಜನರ ಧಾರ್ಮಿಕ ನಂಬಿಕೆಗಳನ್ನು ದುರುಪಯೋಗಪಡಿಸಿಕೊಂಡು ಮತೀಯವಾದಿ ನೆಲೆಯಲ್ಲಿ ಜನರ ಐಕ್ಯತೆಯನ್ನು ಮುರಿಯಲು ನಡೆಸುತ್ತಿರುವ ಪ್ರಯತ್ನಗಳನ್ನು ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ಪಕ್ಷದ ಸಮ್ಮೇಳನವು ಅಭಿಪ್ರಾಯಪಟ್ಟಿದೆ. ಕೋಮು ವಿಭಜನೆ ತಡೆಗಟ್ಟುವ ವಿಚಾರದಲ್ಲಿ ಹಾಗೂ ಜನತೆಯ ಐಕ್ಯತೆಯನ್ನು ಕಾಪಾಡಲು ಸಿಪಿಐ(ಎಂ)ನ ಕಾರ್ಯಕರ್ತರು ಮುಂಚೂಣಿಯಲ್ಲಿರುವಂತೆ ಪಕ್ಷದ ಕಾರ್ಯಕರ್ತರಿಗೆ ಸಮ್ಮೇಳನವು ಕರೆ ನೀಡಿದೆ” ಎಂದು ಡಾ.ಪ್ರಕಾಶ್ ಹೇಳಿದ್ದಾರೆ.

ಭೂರಹಿತ ಕುಟುಂಬಗಳಿಗೆ ಮನೆ ನಿವೇಶನ, ಅರಣ್ಯ ಸಾಗುವಳಿದಾರರಿಗೆ ರಕ್ಷಣೆ, ಬಲವಂತದ ಭೂಸ್ವಾಧೀನ ಕೈಬಿಡಲು, ಕರಾಳ ಕೃಷಿ ಕಾಯ್ದೆಗಳ ರದ್ದತಿಗಾಗಿ, ಸಾರ್ವಜನಿಕ ಆಸ್ತಿಗಳ ಖಾಸಗೀಕರಣದ ವಿರುದ್ಧ, ಫೆಬ್ರವರಿ 10 ರಂದು ತಿಂಗಳಲ್ಲಿ ನಡೆಯುವ ಪಾದಯಾತ್ರೆಗೆ ಪಕ್ಷವು ಬೆಂಬಲ ನೀಡುವುದಾಗಿ ಪ್ರಕಾಶ್ ಅವರು ಹೇಳಿದ್ದಾರೆ.

ಐಸಿಡಿಎಸ್ ಯೋಜನೆ ದುರ್ಬಲಗೊಳಿಸುವುದರ ವಿರುದ್ಧ, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಕಡಿವಾಣಕ್ಕೆ ಒತ್ತಾಯಿಸಿ, ಸಾರ್ವಜನಿಕ ಪಡಿತರ ವ್ಯವಸ್ಥೆ ಬಲಪಡಿಸಲು ಹಾಗೂ ಬಡವರ ಬಿಪಿಎಲ್ ಕಾರ್ಡ್ ರದ್ಧತಿ ವಿರೋಧಿಸಿ, ಸಾಗರ ಮಾಲ ಯೋಜನೆಯಿಂದ ಕರಾವಳಿ ಜನರ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ನಿವಾರಣೆಗೆ ಒತ್ತಾಯಿಸಿ, ಕೃತಕ ಬುದ್ಧಿಮತ್ತೆಯಿಂದ ಹೆಚ್ಚುತ್ತಿರುವ ಉದ್ಯೋಗ ನಷ್ಟವನ್ನು ತಡೆಗಟ್ಟಲು, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶ) ಕಾಯ್ದೆಯಿಂದ ಐಟಿ/ಐಟಿಇಎಸ್ ವಲಯಕ್ಕೆ ವಿನಾಯಿತಿ ನೀಡಿರುವುದನ್ನು ವಿರೋಧಿಸಿ, ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಶೀಘ್ರವೇ ನಡೆಸುವಂತೆ ಒತ್ತಾಯಿಸುವ ನಿರ್ಣಯಗಳು ಸೇರಿದಂತೆ 33 ನಿರ್ಣಯಗಳನ್ನು ಪಕ್ಷದ ರಾಜ್ಯ ಸಮ್ಮೇಳನವು ಅಂಗೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಪಂಚಾಯಿತಿ, ಹಮಾಲಿ, ಸಾರಿಗೆ ಇತ್ಯಾದಿ ಶ್ರಮಜೀವಿ ವರ್ಗಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಮ್ಮೇಳನ ನಿರ್ಣಯ ಕೈಗೊಂಡಿದೆ ಮತ್ತು ಈ ನಿಟ್ಟಿನಲ್ಲಿ ನಡೆಯುವ ಹೋರಾಟಗಳನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ನೀತಿಗಳಲ್ಲಿ ವ್ಯತ್ಯಾಸವಿಲ್ಲದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಕಾರ್ಯನಿರ್ವಹಿಸುತ್ತಿರುವುದನ್ನು ಪಕ್ಷದ ರಾಜ್ಯ ಸಮ್ಮೇಳನವು ಗುರುತಿಸಿದೆ. ಜನರ ಸಂಕಷ್ಟಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದವನ್ನು ಬೆಳೆಸಲಾಗುತ್ತಿದೆ. ಜನತೆಗೆ ನೀತಿಗಳ ಪರ್ಯಾಯ ಮತ್ತು ರಾಜಕೀಯ ಪರ್ಯಾಯ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನತೆಗೆ ಅಗತ್ಯವಾದ ಒಂದು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನವು ತೀರ್ಮಾನಿಸಿದ್ದು, ರಾಜ್ಯದ ಎಡ ಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು, ಸಂಘಟನೆಗಳು, ಶಕ್ತಿಗಳು ಮತ್ತು ವ್ಯಕ್ತಿಗಳನ್ನು ಒಗ್ಗೂಡಿಸಿ ಈ ರಂಗವನ್ನು ಕಟ್ಟಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೋರಾಟಗಳು ಮತ್ತು ಆಂದೋಲನಗಳಲ್ಲಿ ಸಿಪಿಐ(ಎಂ) ಮತ್ತು ಇತರೆ ಕಮ್ಯುನಿಸ್ಟ್ ಪಕ್ಷಗಳು ಮುಂಚೂಣಿಯಲ್ಲಿದ್ದರೂ ಚುನಾವಣೆಗಳಲ್ಲಿ ಕಮ್ಯುನಿಸ್ಟ್ ಪಕ್ಷಗಳ ಮತಗಳಿಕೆ ಪ್ರಮಾಣ ಕುಸಿಯುತ್ತಿರುವುದನ್ನು ಗಂಭೀರವಾಗಿ ಸಮ್ಮೇಳನವು ವಿಮರ್ಶಿಸಿದ್ದು, ಕೆಳಹಂತದ ಪಕ್ಷ ಸಂಘಟನೆಗೆ ಒತ್ತು ಮತ್ತು ಸಮೂಹಗಳ ರಾಜಕೀಯ ಪ್ರಜ್ಞೆಯನ್ನು ಎತ್ತರಿಸಬೇಕೆಂದು ಸಮ್ಮೇಳನವು ತೀರ್ಮಾನ ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...