Homeಮುಖಪುಟರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ಆದರೆ, ಪ್ರತಿಭಟನಾನಿರತ ರೈತ ಸಂಘಟನೆಗಳು ಶಾಂತಿಯುತವಾಗಿ ಹೋರಾಟ ಮುಂದುವರೆಸುವ ಅಚಲ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿವೆ.

- Advertisement -
- Advertisement -

ಕೇಂದ್ರದ ಮೂರು ಕೃಷಿ ಕಾಯ್ದೆಗಳ ರದ್ದತಿಗಾಗಿ ದೆಹಲಿಯ ಮೂರು ಗಡಿಗಳಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಶಾಂತಿಯುತವಾಗಿ ನಡೆಯುತ್ತ ಬಂದಿರುವ ರೈತ ಪ್ರತಿಭಟನೆಯನ್ನು ಸಂಪೂರ್ಣ ಹಾಳುಗೆಡವಲು ಕೇಂದ್ರ ಸರ್ಕಾರವು ಮೊದಲಿನಿಂದಲು ಸಂಚು ಮಾಡುತ್ತ ಬಂದಿದೆ. ಈಗ ಅದು ದೆಹಲಿಯ ಕೆಂಪುಕೋಟೆಯ ಅಹಿತಕರ ಘಟನೆ ನೆಪವಾಗಿ ಇಟ್ಟುಕೊಂಡು ಅರೆಸೇನಾಪಡೆಗಳು, ಪೊಲೀಸರ ಬಲ ಬಳಸಿ ರೈತರ ಮೆಲೆ ಮುಗಿಬೀಳಲು ಹೊರಟಿದೆ.

ಸಂಕ್ಷಿಪ್ತವಾಗಿ ಈ ಸಂಚಿನ ಕ್ರೊನೊಲಜಿ ಹೀಗಿದೆ.

* ಪಂಜಾಬ್, ಹರಿಯಾಣ, ಉತ್ತರಪ್ರದೇಶ ರಾಜ್ಯಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟಿಸಲು ಹೊರಟಾಗ, ಹೆದ್ದಾರಿಗಳಲ್ಲಿ ಕಂದಕ ತೋಡಲಾಗಿತು. ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಅಡ್ಡ ಹಾಕಲಾಯಿತು. ಜಲಫಿರಂಗಿ, ಆಶ್ರುವಾಯು, ಲಾಠಿ ಚಾರ್ಜ್ ಮೂಲಕ ದೌರ್ಜನ್ಯ ನಡೆಸಿತು.

* ಎಲ್ಲವನ್ನೂ ಭೇದಿಸಿ ರೈತರು ಲಕ್ಷ ಲಕ್ಷ ಸಂಖ್ಯೆಯಲ್ಲಿ ದೆಹಲಿಯ ಸಮೀಪ ಧಾವಿಸುತ್ತಿದ್ದಂತೆ, ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್ ಹೆಸರಿನ ಗೋಡೆಗಳನ್ನು ನಿರ್ಮಿಸಿ ದೆಹಲಿ ಪ್ರವೇಶವನ್ನು ನಿರಾಕರಿಸಿತು.

* ವಿಚಲಿತರಾಗದ ರೈತ ಸಂಘಟನೆಗಳು ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲೇ ಕುಳಿತು ಪ್ರತಿಭಟನೆಗಳನ್ನು ಹಮ್ಮಿಕೊಂಡವು. ದಿನೇ ದಿನೆ ಈ ಹೋರಾಟಕ್ಕೆ ಸಾಮನ್ಯ ನಾಗರಿಕರ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಮಾತುಕತೆಯ ನಾಟಕ ಶುರು ಮಾಡಿತು.

* ಪ್ರತಿ ಮಾತುಕತೆಯಲ್ಲೂ ಕಾಯ್ದೆಗಳನ್ನು ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ರೈತರನ್ನು ರೊಚ್ಚಿಗೆಬ್ಬಿಸಲು ನೊಡಿತು.

* ಆದರೆ ರೈತರು ಶಾಂತಿ ಕಾಪಾಡಿಕೊಂಡೇ ಬಂದರು. ಗಡಿಗಳಲ್ಲೇ ಕೆಲವರು ಆತ್ಮಹತ್ಯೆ ಮಾಡಿಕೊಂಡರೆ, ಹಲವಾರು ಜನ ಶೀತ ವಾತಾವರಣಕ್ಕೆ ನಲುಗಿ ಪ್ರಾಣ ಬಿಟ್ಟರು. ಅಷ್ಟೊತ್ತಿಗೆ ಕೇಂದ್ರ ಸರ್ಕಾರ ರೈತ ಹೋರಾಟಕ್ಕೆ ಕಳಂಕ ಹಚ್ಚುವ ಕೆಲಸ ಶುರು ಮಾಡಿತ್ತು. ಇದಕ್ಕೆ ಗೋದಿ ಮೀಡಿಯಾಗಳು, ಬಿಜೆಪಿ ಐಟಿ ಸೆಲ್ ಮತ್ತು ಮೋದಿಯ ಅಂಧಭಕ್ತರಾದ ನವ-ಮಧ್ಯಮವರ್ಗ ಸಾಥ್ ನೀಡಿದವು. ರೈತರನ್ನು ಭಯೋತ್ಪಾದಕರು, ಖಾಲಿಸ್ತಾನಿಗಳು, ದೇಶದ್ರೋಹಿಗಳು ಎಂದು ಅಪಪ್ರಚಾರ ಮಾಡುವ ಅಸಹ್ಯ ಅಭಿಯಾನ ನಡೆಯಿತು, ಅದು ಈಗಲೂ ಚಾಲ್ತಿಯಲ್ಲಿದೆ.

* ಇದ್ಯಾವುದೂ ರೈತ ಹೋರಾಟವನ್ನು ವಿಚಲಿತಗೊಲಿಸಲಿಲ್ಲ ಮತ್ತು ಹೋರಾಟಕ್ಕೆ ಜನರ ಬೆಂಬಲವು ಹೆಚ್ಚುತ್ತಲೇ ಹೋಗಿತು.

* 9 ಸುತ್ತು ಮತುಕತೆಗಳ ನಾಟಕದ ಬಳಿಕ, ಸುಪ್ರಿಂಕೋರ್ಟ್ ಅಂಗಳಕ್ಕೆ ಚೆಂಡನ್ನು ದಬ್ಬಿ ತನ್ನ ಪರ ಆದೇಶ ನಿರೀಕ್ಷೆ ಮಾಡಿತು. ಆದರೆ ಸುಪ್ರಿಂಕೋರ್ಟ್ ಕಾಯ್ದೆಗಳನ್ನು 8 ವಾರ ಅಮಾನತ್ತಿನಲ್ಲಿಡಲು ಸೂಚಿಸಿ, 4 ಜನರ ಸಮಿತಿಯನ್ನು ಸಮಾಲೋಚನೆಗೆ ನೇಮಿಸಿತು. ಕೇಂದ್ರ ಸೂಚಿಸಿದ ಈ ನಾಲ್ವರೂ ಕಾಯ್ದೆ ಪರ ಬ್ಯಾಟಿಂಗ್ ಮಾಡಿದವರೇ ಆಗಿದ್ದರಿಂದ ರೈತರು ಮಾತುಕತೆಗೆ ಒಪ್ಪಲಿಲ್ಲ.

* 10 ಮತ್ತು 11 ಸುತ್ತಿನಲ್ಲಿ, ವಿದ್ಯುತ್ ಕಾಯ್ದೆ ಮತ್ತು ತ್ಯಾಜ್ಯ ಸುಡುವ ಕಾಯ್ದೆ ಕೈ ಬಿಡಲು ಕೇಂದ್ರ ಒಪ್ಪಿತು. ಅಂತಿಮವಾಗಿ 18 ತಿಂಗಳುಗಳ ಕಾಲ ಕಾಯ್ದೆಗಳನ್ನು ಅಮಾನತಿನಲ್ಲಿಡುವ ಮಾತಾಡಿತು.

* ಸರ್ಕಾರದ ಈ ಹುನ್ನಾರ ಸ್ಪಷ್ಟವಾಗುತ್ತಿದ್ದಂತೆ, ರೈತ ಸಂಘಟನೆಗಳು ಜನವರಿ 26ರಂದು ಟ್ರ್ಯಾಕ್ಟರ್ ರ‍್ಯಾಲಿ ನಡೆಸುವ ತೀರ್ಮಾನಕ್ಕೆ ಗಟ್ಟಿಯಾಗಿ ಅಂಟಿಕೊಂಡವು. ಆಗ ಅದನ್ನು ತಡೆಯಲು ಮತ್ತೆ ಸುಪ್ರೀಂ ಮೊರೆ ಹೋದ ಕೇಂದ್ರಕ್ಕೆ ಅಲ್ಲೂ ನಿರಾಶೆಯಾಗಿತು.

* ದೆಹಲಿ ಪೊಲೀಸರು ಹೇಗಾದರೂ ರ‍್ಯಾಲಿ ತಡೆಯಲು ಹಲವಾರು ಷರತ್ತು ವಿಧಿಸಿದರು, ರೈತ ಒಕ್ಕೂಟ ಅದಕ್ಕೆ ಒಪ್ಪಿ ರ‍್ಯಾಲಿಗೆ ಸಿದ್ಧತೆ ಮಾಡಿಕೊಳ್ಳತೊಡಗಿತ್ತು.

* ಜನವರಿ 26 ರಂದು ಟ್ರ್ಯಾಕ್ಟರ್ ರ್ಯಾಲಿ ಶಾಂತಿಯುತವಾಗಿ ಆರಂಭವಾಗಿತ್ತು. ಆದರೆ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಭಿನ್ನಾಭಿಪ್ರಾಯವಿದ್ದ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ದೀಪ್ ಸಿಧು ಮತ್ತು ಸಿದಾನ ಲಖಾನ ಎಂಬುವವರು ಪೊಲೀಸ್ ಬ್ಯಾರಿಕೇಡ್ ಮುರಿದು ಕೆಂಪು ಕೋಟೆಯತ್ತ ತೆರಳಿದರು. ಅವರು ಬಿಜೆಪಿಯೊಂದಿಗೆ ಬಹಳ ಹತ್ತಿರದ ಸಂಪರ್ಕ ಹೊಂದಿರುವುದು ಜಗಜಾಹೀರಾಯಿತು.

*  ಅವರು ನಿಗದಿತ ಮಾರ್ಗ ಬಿಟ್ಟು ರ‍್ಯಾಲಿ ಮಾಡುವುದಾಗಿ, ಕೆಂಪುಕೋಟೆ ತಲುಪುವುದಾಗಿ ತಿಳಿಸಿದವು. ಕೇಂದ್ರದ ಅಪೇಕ್ಷೆಯೂ ಇದೇ ಆಗಿತ್ತು. ಹೀಗೆ ಭಿನ್ನ ಹಾದಿ ತುಳಿದವರಿಗೆ ಹೆಚ್ಚಿನ ಅಡೆತಡೆ ಇಲ್ಲದಂತೆ ದೆಹಲಿ ಮತ್ತು ಕೆಂಪುಕೋಟೆಗೆ ಪ್ರವೇಶ ಸಿಗುವಂತೆ ಸಹಕರಿಸಲಾಯಿತು. ಅವರು ಕೆಂಪುಕೊಟೆಯಲ್ಲಿ ಸಿಖ್ ಧ್ವಜ ಮತ್ತು ರೈತ ಧ್ವಜ ಹಾರಿಸಿದ್ದನ್ನು ಸರ್ಕಾರದ ಗೋದಿ ಮಾಧ್ಯಮಗಳು ದೇಶದ್ರೋಹ ಎಂಬಂತೆ ಬಿಂಬಿಸಿದವು. ಅಲ್ಲಿ ಪೊಲೀಸರು ಮತ್ತು ಕೆಲವು ಪ್ರತಿಭಟನಾಕಾರರ ನಡುವಿನ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದ್ದನ್ನು ಬಳಸಿಕೊಂಡು, ಇಡೀ ರ‍್ಯಾಲಿಯೇ ಹಿಂಸಾತ್ಮಕವಾಗಿತ್ತು ಎಂದು ಬಿಂಬಿಸಲು ಹೆಣಗಾಡಲಾಯಿತು. ಎರಡು ತಿಂಗಳು ಕಾಲ ಒಂದು ಐತಿಹಾಸಿಕ ಬೃಹತ್ ಪ್ರತಿಭಟನೆ ಶಾಂತಿಯುತವಾಗಿ ನಡೆದಾಗ ಅದರ ಬಗ್ಗೆ ದೇಶದ ಜನರಿಗೆ ತಿಳಿಸದ ಗೋದಿ ಮೀಡಿಯಾ ಜ.26ರಿಂದ ಸಕ್ರಿಯವಾಗಿತು.

* ಸಂಯುಕ್ತ್ ಕಿಸಾನ್ ಮೋರ್ಚಾ ಅಡಿ ಶಾಂತಿಯುತವಾಗಿ ನಡೆದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿಯನ್ನು ಪ್ರಸಾರ ಮಾಡದೇ ವೃತ್ತಿದ್ರೋಹ ಎಸಗಿದವು. ಇದೆಲ್ಲವೂ ಕ್ರೊನೊಲಜಿಯ ಭಾಗವೇ.

* ಕೆಂಪುಕೋಟೆ ಘಟನೆಗೆ ಪ್ರಮುಖ ಕಾರಣವಾದ ದೀಪ್ ಸಿಧು ಬಿಜೆಪಿ ಮನುಷ್ಯ ಎಂದು ಸಾಬೀತಾದೊಡನೆ ಸರ್ಕಾರ, ಗೋದಿ ಮಿಡಿಯಾ ಕೊಂಚ ಮುಜುಗರಕ್ಕೆ ಈಡಾದವು. ಜನರ ಗಮನ ಬೇರೆಡೆ ಸೆಳೆಯಲು ಮತ್ತೆ ಹಲವಾರು ಯತ್ನ ಶುರುವಾದವು.

* ಕ್ರೊನೊಲಜಿಯ ಈ ಹಂತದಲ್ಲಿ, ರೈತ ಒಕ್ಕೂಟದ ನಾಯಕರ ಹೆಸರುಗಳನ್ನು ಎಫ್‌ಐಆರ್‌ಗಳಲ್ಲಿ ಸೇರಿಸಲಾಗಿತು. ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್ ಸೇರಿ ಹಲವರಿಗೆ ಈಗ ನೋಟಿಸ್ ಜಾರಿ ಮಾಡಲಾಗಿದೆ. ಇದರ ಮುಂದುವರೆದ ಭಾಗವಾಗಿ, ತಪ್ಪಾಗಿ ಟ್ವೀಟ್ ಮಾಡಿದ ಕಾರಣಕ್ಕೆ ಶಶಿ ತರೂರ್, ರಾಜದೀಪ್ ಸರ್ದೇಸಾಯಿ ಇತರರ ನೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. (ಭೀಮಾ-ಕೊರೆಗಾಂವ್ ಪ್ರಕರಣ ನೆನಪಿಸಿಕೊಳ್ಳಿ)

* ಕೆಂಪುಕೋಟೆಯ ಅಹಿತಕರ ಘಟನೆ ಬಳಸಿಕೊಂಡು ರೈತ ಪ್ರತಿಭಟನೆಯ ಮೇಲೆ ಪೊಲೀಸ್ ಬಲ ಬಳಸುವ ಕೆಲಸಕ್ಕೆ ಪ್ರಭುತ್ವ ಮುಂದಾಗಿದೆ. ಅದರ ಮೊದಲ ಭಾಗವಾಗಿ ಉತ್ತರಪ್ರದೇಶದ ಯೋಗಿ ಸರ್ಕಾರವನ್ನು ಛೂ ಬಿಡಲಾಗಿದೆ. ಗಾಜಿಪುರ್ ಗಡಿಯಲ್ಲಿ ರೈತರ ಮೇಲೆ ಹಲ್ಲೆ ನಡೆಸಲಾಗಿದೆ. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಕಣ್ಣೀರು ಸಾವಿರಾರು ರೈತರು ಗಡಗಳತ್ತ ಬಂದು ಪ್ರತಿಭಟನೆಗೆ ಸೇರಲು ಸಹಾಯಕವಾಗಿದೆ.

ಸಿಂಘು ಗಡಿಯಲ್ಲಿ ದೆಹಲಿ ಕಡೆ ಕುಳಿತಿದ್ದ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ರೈತರ ಮೇಲೆ ನಿನ್ನೆ ಮತ್ತು ಇಂದು ಸ್ಥಳೀಯರ ಹೆಸರಿನಲ್ಲಿ ಹಿಂದೂ-ಸೇನಾ ಸಂಘಟನ್ ಎಂಬ ಬಿಜೆಪಿ ಆರ್‌ಎಸ್‌ಎಸ್‌ ಪ್ರೇರಿತ ಸಂಘಟನೆಯ ಮುಸುಕುಧಾರಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಪೊಲೀಸರು ಯಥಾಪ್ರಕಾರ ಕೈಕಟ್ಟಿಕೊಂಡು ದಾಳಿಗೆ ಅವಕಾಶ ಕೊಟ್ಟಿದ್ದಾರೆ. ಇದು ಇಡೀ ಸಿಂಘು ಹೋರಾಟಗಾರರ ಮೇಲಿನ ದಾಳಿ, ಟೆಂಟ್‌ಗಳನ್ನು ಕಿತ್ತರು ಎಂದು ತಪ್ಪು ಹರಡಲಾಗುತ್ತಿದೆ. ಸಿಂಘು ಗಡಿ ತೆರವುಗೊಳಿಸಲು ಸ್ಥಳೀಯರು ಪ್ರತಿಭಟಿಸುತ್ತಿದ್ದಾರೆ ಎಂದು ಸುದ್ದಿ ಹರಡಲಾಗುತ್ತಿದೆ.

ಆದರೆ ಸಿಂಘು ಗಡಿಯಲ್ಲಿ ಹರಿಯಾಣದ ಕಡೆಗೆ ಕಾಯ್ದೆ ವಿರೋಧಿಸಿ ಸಂಯುಕ್ತ್ ಕಿಸಾನ್ ಮೋರ್ಚಾ ಅಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಅಲ್ಲಿ ಯಾವುದೇ ದಾಳಿ ಆಗಿಲ್ಲ, ಸುರಕ್ಷಿತವಾಗಿ ಮತ್ತು ಶಾಂತಿಯುತವಾಗಿ ಹೋರಾಟ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಆದರೆ, ಪ್ರತಿಭಟನಾನಿರತ ರೈತ ಸಂಘಟನೆಗಳು ಶಾಂತಿಯುತವಾಗಿ ಹೋರಾಟ ಮುಂದುವರೆಸುವ ಅಚಲ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿವೆ. ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ಲಕ್ಷಾಂತರ ಜನರು ಪ್ರತಿಭಟನೆಗೆ ಹರಿದು ಬರುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...