Homeಮುಖಪುಟರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ಆದರೆ, ಪ್ರತಿಭಟನಾನಿರತ ರೈತ ಸಂಘಟನೆಗಳು ಶಾಂತಿಯುತವಾಗಿ ಹೋರಾಟ ಮುಂದುವರೆಸುವ ಅಚಲ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿವೆ.

- Advertisement -
- Advertisement -

ಕೇಂದ್ರದ ಮೂರು ಕೃಷಿ ಕಾಯ್ದೆಗಳ ರದ್ದತಿಗಾಗಿ ದೆಹಲಿಯ ಮೂರು ಗಡಿಗಳಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಶಾಂತಿಯುತವಾಗಿ ನಡೆಯುತ್ತ ಬಂದಿರುವ ರೈತ ಪ್ರತಿಭಟನೆಯನ್ನು ಸಂಪೂರ್ಣ ಹಾಳುಗೆಡವಲು ಕೇಂದ್ರ ಸರ್ಕಾರವು ಮೊದಲಿನಿಂದಲು ಸಂಚು ಮಾಡುತ್ತ ಬಂದಿದೆ. ಈಗ ಅದು ದೆಹಲಿಯ ಕೆಂಪುಕೋಟೆಯ ಅಹಿತಕರ ಘಟನೆ ನೆಪವಾಗಿ ಇಟ್ಟುಕೊಂಡು ಅರೆಸೇನಾಪಡೆಗಳು, ಪೊಲೀಸರ ಬಲ ಬಳಸಿ ರೈತರ ಮೆಲೆ ಮುಗಿಬೀಳಲು ಹೊರಟಿದೆ.

ಸಂಕ್ಷಿಪ್ತವಾಗಿ ಈ ಸಂಚಿನ ಕ್ರೊನೊಲಜಿ ಹೀಗಿದೆ.

* ಪಂಜಾಬ್, ಹರಿಯಾಣ, ಉತ್ತರಪ್ರದೇಶ ರಾಜ್ಯಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟಿಸಲು ಹೊರಟಾಗ, ಹೆದ್ದಾರಿಗಳಲ್ಲಿ ಕಂದಕ ತೋಡಲಾಗಿತು. ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಅಡ್ಡ ಹಾಕಲಾಯಿತು. ಜಲಫಿರಂಗಿ, ಆಶ್ರುವಾಯು, ಲಾಠಿ ಚಾರ್ಜ್ ಮೂಲಕ ದೌರ್ಜನ್ಯ ನಡೆಸಿತು.

* ಎಲ್ಲವನ್ನೂ ಭೇದಿಸಿ ರೈತರು ಲಕ್ಷ ಲಕ್ಷ ಸಂಖ್ಯೆಯಲ್ಲಿ ದೆಹಲಿಯ ಸಮೀಪ ಧಾವಿಸುತ್ತಿದ್ದಂತೆ, ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್ ಹೆಸರಿನ ಗೋಡೆಗಳನ್ನು ನಿರ್ಮಿಸಿ ದೆಹಲಿ ಪ್ರವೇಶವನ್ನು ನಿರಾಕರಿಸಿತು.

* ವಿಚಲಿತರಾಗದ ರೈತ ಸಂಘಟನೆಗಳು ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲೇ ಕುಳಿತು ಪ್ರತಿಭಟನೆಗಳನ್ನು ಹಮ್ಮಿಕೊಂಡವು. ದಿನೇ ದಿನೆ ಈ ಹೋರಾಟಕ್ಕೆ ಸಾಮನ್ಯ ನಾಗರಿಕರ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಮಾತುಕತೆಯ ನಾಟಕ ಶುರು ಮಾಡಿತು.

* ಪ್ರತಿ ಮಾತುಕತೆಯಲ್ಲೂ ಕಾಯ್ದೆಗಳನ್ನು ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ರೈತರನ್ನು ರೊಚ್ಚಿಗೆಬ್ಬಿಸಲು ನೊಡಿತು.

* ಆದರೆ ರೈತರು ಶಾಂತಿ ಕಾಪಾಡಿಕೊಂಡೇ ಬಂದರು. ಗಡಿಗಳಲ್ಲೇ ಕೆಲವರು ಆತ್ಮಹತ್ಯೆ ಮಾಡಿಕೊಂಡರೆ, ಹಲವಾರು ಜನ ಶೀತ ವಾತಾವರಣಕ್ಕೆ ನಲುಗಿ ಪ್ರಾಣ ಬಿಟ್ಟರು. ಅಷ್ಟೊತ್ತಿಗೆ ಕೇಂದ್ರ ಸರ್ಕಾರ ರೈತ ಹೋರಾಟಕ್ಕೆ ಕಳಂಕ ಹಚ್ಚುವ ಕೆಲಸ ಶುರು ಮಾಡಿತ್ತು. ಇದಕ್ಕೆ ಗೋದಿ ಮೀಡಿಯಾಗಳು, ಬಿಜೆಪಿ ಐಟಿ ಸೆಲ್ ಮತ್ತು ಮೋದಿಯ ಅಂಧಭಕ್ತರಾದ ನವ-ಮಧ್ಯಮವರ್ಗ ಸಾಥ್ ನೀಡಿದವು. ರೈತರನ್ನು ಭಯೋತ್ಪಾದಕರು, ಖಾಲಿಸ್ತಾನಿಗಳು, ದೇಶದ್ರೋಹಿಗಳು ಎಂದು ಅಪಪ್ರಚಾರ ಮಾಡುವ ಅಸಹ್ಯ ಅಭಿಯಾನ ನಡೆಯಿತು, ಅದು ಈಗಲೂ ಚಾಲ್ತಿಯಲ್ಲಿದೆ.

* ಇದ್ಯಾವುದೂ ರೈತ ಹೋರಾಟವನ್ನು ವಿಚಲಿತಗೊಲಿಸಲಿಲ್ಲ ಮತ್ತು ಹೋರಾಟಕ್ಕೆ ಜನರ ಬೆಂಬಲವು ಹೆಚ್ಚುತ್ತಲೇ ಹೋಗಿತು.

* 9 ಸುತ್ತು ಮತುಕತೆಗಳ ನಾಟಕದ ಬಳಿಕ, ಸುಪ್ರಿಂಕೋರ್ಟ್ ಅಂಗಳಕ್ಕೆ ಚೆಂಡನ್ನು ದಬ್ಬಿ ತನ್ನ ಪರ ಆದೇಶ ನಿರೀಕ್ಷೆ ಮಾಡಿತು. ಆದರೆ ಸುಪ್ರಿಂಕೋರ್ಟ್ ಕಾಯ್ದೆಗಳನ್ನು 8 ವಾರ ಅಮಾನತ್ತಿನಲ್ಲಿಡಲು ಸೂಚಿಸಿ, 4 ಜನರ ಸಮಿತಿಯನ್ನು ಸಮಾಲೋಚನೆಗೆ ನೇಮಿಸಿತು. ಕೇಂದ್ರ ಸೂಚಿಸಿದ ಈ ನಾಲ್ವರೂ ಕಾಯ್ದೆ ಪರ ಬ್ಯಾಟಿಂಗ್ ಮಾಡಿದವರೇ ಆಗಿದ್ದರಿಂದ ರೈತರು ಮಾತುಕತೆಗೆ ಒಪ್ಪಲಿಲ್ಲ.

* 10 ಮತ್ತು 11 ಸುತ್ತಿನಲ್ಲಿ, ವಿದ್ಯುತ್ ಕಾಯ್ದೆ ಮತ್ತು ತ್ಯಾಜ್ಯ ಸುಡುವ ಕಾಯ್ದೆ ಕೈ ಬಿಡಲು ಕೇಂದ್ರ ಒಪ್ಪಿತು. ಅಂತಿಮವಾಗಿ 18 ತಿಂಗಳುಗಳ ಕಾಲ ಕಾಯ್ದೆಗಳನ್ನು ಅಮಾನತಿನಲ್ಲಿಡುವ ಮಾತಾಡಿತು.

* ಸರ್ಕಾರದ ಈ ಹುನ್ನಾರ ಸ್ಪಷ್ಟವಾಗುತ್ತಿದ್ದಂತೆ, ರೈತ ಸಂಘಟನೆಗಳು ಜನವರಿ 26ರಂದು ಟ್ರ್ಯಾಕ್ಟರ್ ರ‍್ಯಾಲಿ ನಡೆಸುವ ತೀರ್ಮಾನಕ್ಕೆ ಗಟ್ಟಿಯಾಗಿ ಅಂಟಿಕೊಂಡವು. ಆಗ ಅದನ್ನು ತಡೆಯಲು ಮತ್ತೆ ಸುಪ್ರೀಂ ಮೊರೆ ಹೋದ ಕೇಂದ್ರಕ್ಕೆ ಅಲ್ಲೂ ನಿರಾಶೆಯಾಗಿತು.

* ದೆಹಲಿ ಪೊಲೀಸರು ಹೇಗಾದರೂ ರ‍್ಯಾಲಿ ತಡೆಯಲು ಹಲವಾರು ಷರತ್ತು ವಿಧಿಸಿದರು, ರೈತ ಒಕ್ಕೂಟ ಅದಕ್ಕೆ ಒಪ್ಪಿ ರ‍್ಯಾಲಿಗೆ ಸಿದ್ಧತೆ ಮಾಡಿಕೊಳ್ಳತೊಡಗಿತ್ತು.

* ಜನವರಿ 26 ರಂದು ಟ್ರ್ಯಾಕ್ಟರ್ ರ್ಯಾಲಿ ಶಾಂತಿಯುತವಾಗಿ ಆರಂಭವಾಗಿತ್ತು. ಆದರೆ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಭಿನ್ನಾಭಿಪ್ರಾಯವಿದ್ದ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ದೀಪ್ ಸಿಧು ಮತ್ತು ಸಿದಾನ ಲಖಾನ ಎಂಬುವವರು ಪೊಲೀಸ್ ಬ್ಯಾರಿಕೇಡ್ ಮುರಿದು ಕೆಂಪು ಕೋಟೆಯತ್ತ ತೆರಳಿದರು. ಅವರು ಬಿಜೆಪಿಯೊಂದಿಗೆ ಬಹಳ ಹತ್ತಿರದ ಸಂಪರ್ಕ ಹೊಂದಿರುವುದು ಜಗಜಾಹೀರಾಯಿತು.

*  ಅವರು ನಿಗದಿತ ಮಾರ್ಗ ಬಿಟ್ಟು ರ‍್ಯಾಲಿ ಮಾಡುವುದಾಗಿ, ಕೆಂಪುಕೋಟೆ ತಲುಪುವುದಾಗಿ ತಿಳಿಸಿದವು. ಕೇಂದ್ರದ ಅಪೇಕ್ಷೆಯೂ ಇದೇ ಆಗಿತ್ತು. ಹೀಗೆ ಭಿನ್ನ ಹಾದಿ ತುಳಿದವರಿಗೆ ಹೆಚ್ಚಿನ ಅಡೆತಡೆ ಇಲ್ಲದಂತೆ ದೆಹಲಿ ಮತ್ತು ಕೆಂಪುಕೋಟೆಗೆ ಪ್ರವೇಶ ಸಿಗುವಂತೆ ಸಹಕರಿಸಲಾಯಿತು. ಅವರು ಕೆಂಪುಕೊಟೆಯಲ್ಲಿ ಸಿಖ್ ಧ್ವಜ ಮತ್ತು ರೈತ ಧ್ವಜ ಹಾರಿಸಿದ್ದನ್ನು ಸರ್ಕಾರದ ಗೋದಿ ಮಾಧ್ಯಮಗಳು ದೇಶದ್ರೋಹ ಎಂಬಂತೆ ಬಿಂಬಿಸಿದವು. ಅಲ್ಲಿ ಪೊಲೀಸರು ಮತ್ತು ಕೆಲವು ಪ್ರತಿಭಟನಾಕಾರರ ನಡುವಿನ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದ್ದನ್ನು ಬಳಸಿಕೊಂಡು, ಇಡೀ ರ‍್ಯಾಲಿಯೇ ಹಿಂಸಾತ್ಮಕವಾಗಿತ್ತು ಎಂದು ಬಿಂಬಿಸಲು ಹೆಣಗಾಡಲಾಯಿತು. ಎರಡು ತಿಂಗಳು ಕಾಲ ಒಂದು ಐತಿಹಾಸಿಕ ಬೃಹತ್ ಪ್ರತಿಭಟನೆ ಶಾಂತಿಯುತವಾಗಿ ನಡೆದಾಗ ಅದರ ಬಗ್ಗೆ ದೇಶದ ಜನರಿಗೆ ತಿಳಿಸದ ಗೋದಿ ಮೀಡಿಯಾ ಜ.26ರಿಂದ ಸಕ್ರಿಯವಾಗಿತು.

* ಸಂಯುಕ್ತ್ ಕಿಸಾನ್ ಮೋರ್ಚಾ ಅಡಿ ಶಾಂತಿಯುತವಾಗಿ ನಡೆದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿಯನ್ನು ಪ್ರಸಾರ ಮಾಡದೇ ವೃತ್ತಿದ್ರೋಹ ಎಸಗಿದವು. ಇದೆಲ್ಲವೂ ಕ್ರೊನೊಲಜಿಯ ಭಾಗವೇ.

* ಕೆಂಪುಕೋಟೆ ಘಟನೆಗೆ ಪ್ರಮುಖ ಕಾರಣವಾದ ದೀಪ್ ಸಿಧು ಬಿಜೆಪಿ ಮನುಷ್ಯ ಎಂದು ಸಾಬೀತಾದೊಡನೆ ಸರ್ಕಾರ, ಗೋದಿ ಮಿಡಿಯಾ ಕೊಂಚ ಮುಜುಗರಕ್ಕೆ ಈಡಾದವು. ಜನರ ಗಮನ ಬೇರೆಡೆ ಸೆಳೆಯಲು ಮತ್ತೆ ಹಲವಾರು ಯತ್ನ ಶುರುವಾದವು.

* ಕ್ರೊನೊಲಜಿಯ ಈ ಹಂತದಲ್ಲಿ, ರೈತ ಒಕ್ಕೂಟದ ನಾಯಕರ ಹೆಸರುಗಳನ್ನು ಎಫ್‌ಐಆರ್‌ಗಳಲ್ಲಿ ಸೇರಿಸಲಾಗಿತು. ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್ ಸೇರಿ ಹಲವರಿಗೆ ಈಗ ನೋಟಿಸ್ ಜಾರಿ ಮಾಡಲಾಗಿದೆ. ಇದರ ಮುಂದುವರೆದ ಭಾಗವಾಗಿ, ತಪ್ಪಾಗಿ ಟ್ವೀಟ್ ಮಾಡಿದ ಕಾರಣಕ್ಕೆ ಶಶಿ ತರೂರ್, ರಾಜದೀಪ್ ಸರ್ದೇಸಾಯಿ ಇತರರ ನೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. (ಭೀಮಾ-ಕೊರೆಗಾಂವ್ ಪ್ರಕರಣ ನೆನಪಿಸಿಕೊಳ್ಳಿ)

* ಕೆಂಪುಕೋಟೆಯ ಅಹಿತಕರ ಘಟನೆ ಬಳಸಿಕೊಂಡು ರೈತ ಪ್ರತಿಭಟನೆಯ ಮೇಲೆ ಪೊಲೀಸ್ ಬಲ ಬಳಸುವ ಕೆಲಸಕ್ಕೆ ಪ್ರಭುತ್ವ ಮುಂದಾಗಿದೆ. ಅದರ ಮೊದಲ ಭಾಗವಾಗಿ ಉತ್ತರಪ್ರದೇಶದ ಯೋಗಿ ಸರ್ಕಾರವನ್ನು ಛೂ ಬಿಡಲಾಗಿದೆ. ಗಾಜಿಪುರ್ ಗಡಿಯಲ್ಲಿ ರೈತರ ಮೇಲೆ ಹಲ್ಲೆ ನಡೆಸಲಾಗಿದೆ. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಕಣ್ಣೀರು ಸಾವಿರಾರು ರೈತರು ಗಡಗಳತ್ತ ಬಂದು ಪ್ರತಿಭಟನೆಗೆ ಸೇರಲು ಸಹಾಯಕವಾಗಿದೆ.

ಸಿಂಘು ಗಡಿಯಲ್ಲಿ ದೆಹಲಿ ಕಡೆ ಕುಳಿತಿದ್ದ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ರೈತರ ಮೇಲೆ ನಿನ್ನೆ ಮತ್ತು ಇಂದು ಸ್ಥಳೀಯರ ಹೆಸರಿನಲ್ಲಿ ಹಿಂದೂ-ಸೇನಾ ಸಂಘಟನ್ ಎಂಬ ಬಿಜೆಪಿ ಆರ್‌ಎಸ್‌ಎಸ್‌ ಪ್ರೇರಿತ ಸಂಘಟನೆಯ ಮುಸುಕುಧಾರಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಪೊಲೀಸರು ಯಥಾಪ್ರಕಾರ ಕೈಕಟ್ಟಿಕೊಂಡು ದಾಳಿಗೆ ಅವಕಾಶ ಕೊಟ್ಟಿದ್ದಾರೆ. ಇದು ಇಡೀ ಸಿಂಘು ಹೋರಾಟಗಾರರ ಮೇಲಿನ ದಾಳಿ, ಟೆಂಟ್‌ಗಳನ್ನು ಕಿತ್ತರು ಎಂದು ತಪ್ಪು ಹರಡಲಾಗುತ್ತಿದೆ. ಸಿಂಘು ಗಡಿ ತೆರವುಗೊಳಿಸಲು ಸ್ಥಳೀಯರು ಪ್ರತಿಭಟಿಸುತ್ತಿದ್ದಾರೆ ಎಂದು ಸುದ್ದಿ ಹರಡಲಾಗುತ್ತಿದೆ.

ಆದರೆ ಸಿಂಘು ಗಡಿಯಲ್ಲಿ ಹರಿಯಾಣದ ಕಡೆಗೆ ಕಾಯ್ದೆ ವಿರೋಧಿಸಿ ಸಂಯುಕ್ತ್ ಕಿಸಾನ್ ಮೋರ್ಚಾ ಅಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಅಲ್ಲಿ ಯಾವುದೇ ದಾಳಿ ಆಗಿಲ್ಲ, ಸುರಕ್ಷಿತವಾಗಿ ಮತ್ತು ಶಾಂತಿಯುತವಾಗಿ ಹೋರಾಟ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಆದರೆ, ಪ್ರತಿಭಟನಾನಿರತ ರೈತ ಸಂಘಟನೆಗಳು ಶಾಂತಿಯುತವಾಗಿ ಹೋರಾಟ ಮುಂದುವರೆಸುವ ಅಚಲ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿವೆ. ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ಲಕ್ಷಾಂತರ ಜನರು ಪ್ರತಿಭಟನೆಗೆ ಹರಿದು ಬರುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...