Homeಕರ್ನಾಟಕ'ಅನ್ನಭಾಗ್ಯ'ಕ್ಕೆ ಕೇಂದ್ರ ಕತ್ತರಿ: ಕೊಟ್ಟ ಮಾತು ಉಳಿಸಿಕೊಳ್ಳಲು ಸಿದ್ದು ಸರ್ಕಾರ ಕಸರತ್ತು; ಇಂದು ಉನ್ನತ ಮಟ್ಟದ...

‘ಅನ್ನಭಾಗ್ಯ’ಕ್ಕೆ ಕೇಂದ್ರ ಕತ್ತರಿ: ಕೊಟ್ಟ ಮಾತು ಉಳಿಸಿಕೊಳ್ಳಲು ಸಿದ್ದು ಸರ್ಕಾರ ಕಸರತ್ತು; ಇಂದು ಉನ್ನತ ಮಟ್ಟದ ಸಭೆ

- Advertisement -
- Advertisement -

‘ಅನ್ನ ಭಾಗ್ಯ’ ಯೋಜನೆಗೆ ಕೇಂದ್ರ ಸರ್ಕಾರ ಕತ್ತರಿ ಹಾಕಿದ್ದು, ಇದೀಗ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಕಿ ಖರೀದಿಗೆ ಕಸರತ್ತು ಮುಂದುವರಿಸಿದ್ದು, ಅನ್ಯ ರಾಜ್ಯಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಅಕ್ಕಿ ಖರೀದಿ ನಿರ್ಧಾರ ಅಂತಿಮಗೊಳಿಸಲು ಇಂದು (ಸೋಮವಾರ) ಉನ್ನತ ಮಟ್ಟದ ಸಭೆ ನಡೆಯಲಿದೆ.

ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಹಾಗಾಗಿ ತೆಲಂಗಾಣದಿಂದ ಅಕ್ಕಿ ಖರೀದಿಸಲು ಸರ್ಕಾರ ಮುಂದಾಗಿತ್ತು. ಆದರೆ, ಅಲ್ಲಿ ದಾಸ್ತಾನು ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಇನ್ನು ಛತ್ತೀಸಗಢದಲ್ಲಿ 1.5 ಲಕ್ಷ ಟನ್ ಅಕ್ಕಿ ದಾಸ್ತಾನಿದೆ. ಅದನ್ನು ಪೂರೈಸಲು ಅಲ್ಲಿನ ರಾಜ್ಯ ಸರ್ಕಾರದ ಒಪ್ಪಿಗೆಗಾಗಿ ರಾಜ್ಯದ ಅಧಿಕಾರಿಗಳು ಕಾಯುತ್ತಿದ್ದಾರೆ ಎನ್ನುವ ಮಾಹಿತಿ ಬಂದಿದೆ.

ಅಕ್ಕಿ ಖರೀದಿಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿ ನಿರತರಾಗಿರುವ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ”ಛತ್ತೀಸಗಢದಿಂದ ಅಕ್ಕಿ ಖರೀದಿಸುವ ಕುರಿತು ಶನಿವಾರದಿಂದಲೂ ಮಾತುಕತೆ ನಡೆಯುತ್ತಿದೆ. ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು ಮಾರಾಟ ಮಾಡಲು ಅಲ್ಲಿನ ಸರ್ಕಾರ ಅಧಿಕೃತವಾಗಿ ಒಪ್ಪಿಗೆ ನೀಡಿದ ಬಳಿಕವಷ್ಟೇ ಮುಂದಿನ ನಿರ್ಧಾರ ಕೈಗೊಳ್ಳಲು ಸಾಧ್ಯ. ಅಕ್ಕಿಯ ದರ, ಸಾಗಣೆ ವೆಚ್ಚ ಸೇರಿದಂತೆ ಹಲವು ವಿಷಯಗಳಲ್ಲಿ ಇನ್ನಷ್ಟೇ ತೀರ್ಮಾನವಾಗಬೇಕಿದೆ” ಎಂದು ತಿಳಿಸಿದ್ದಾರೆ.

ಅಕ್ಕಿ ಮಾರಟಕ್ಕೆ ಛತ್ತೀಸಗಢ ಸರ್ಕಾರ ಒಪ್ಪಿದರೆ ಸಾಗಣೆ ಹೇಗೆ ಮಾಡಬೇಕು ಎನ್ನುವ ಬಗ್ಗೆ ಯೋಜನೆ ರೂಪಿಸಬೇಕಿದೆ. ಅಲ್ಲಿಂದ ರಾಜ್ಯಕ್ಕೆ ಅಕ್ಕಿ ಸಾಗಿಸಲು ದೀರ್ಘ ಸಮಯ ಬೇಕಾಗುತ್ತದೆ. ಅದಕ್ಕೆ ತಕ್ಕಂತೆ ಅನ್ನಭಾಗ್ಯ ಯೋಜನೆ ಅನುಷ್ಠಾನದ ವೇಳಾಪಟ್ಟಿಯನ್ನು ಹೊಂದಾಣಿಕೆ ಮಾಡಬೇಕಾಗುತ್ತದೆ. ಛತ್ತೀಸಗಢ ಸರ್ಕಾರ 1.5 ಲಕ್ಷ ಟನ್ ಅಕ್ಕಿ ಪೂರೈಸಲು ಒಪ್ಪಿಕೊಂಡರೂ ಪೂರ್ಣ ಪ್ರಮಾಣದ ಬೇಡಿಕೆ ಈಡೇರಿದಂತಾಗುವುದಿಲ್ಲ. ಉಳಿದಂತೆ ಕೊರತೆಯಾಗುವ ಅಕ್ಕಿಯನ್ನು ಯಾವ ಮೂಲದಿಂದ ಖರೀದಿಸಬೇಕು ಎಂಬ ನಿರ್ಧಾರ ಆಗಬೇಕಾಗುತ್ತದೆ. ಹಾಗಾಗಿ ಈ ಎಲ್ಲ ವಿಚಾರವಾಗಿ ಸೋಮವಾರದ ಸಭೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು, ಹಲವು ರಾಜ್ಯಗಳ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ, ರಾಜ್ಯಕ್ಕೆ ಅಕ್ಕಿ ಒದಗಿಸುವಂತೆ ಮನವಿ ಮಾಡಿದ್ದಾರೆ. ಸೋಮವಾರ ಕೆಲವು ರಾಜ್ಯಗಳಿಂದ ಪ್ರತಿಕ್ರಿಯೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿ ಇದ್ದಾರೆ.

ರಾಜ್ಯದ ಅನ್ನಭಾಗ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಅಡ್ಡಗಾಲು

”ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

”ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ” ಎಂದು ತಿಳಿಸಿದರು.

”ಭಾರತೀಯ ಆಹಾರ ನಿಗಮದ ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ತಲಾ 10ಕೆ.ಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ” ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...