Homeಮುಖಪುಟನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರ ಅನುಮೋದನೆ

ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರ ಅನುಮೋದನೆ

ನ್ಯಾ. ನಾಗರತ್ನ ಭಿನ್ನಾಭಿಪ್ರಾಯ ಕಡೆಗಣಿಸಿದ ಸರ್ಕಾರ

- Advertisement -
- Advertisement -

ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಈ ಮಾಹಿತಿಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಬುಧವಾರ (ಆ.27) ಮಧ್ಯಾಹ್ನ ಎಕ್ಸ್‌ನಲ್ಲಿ ಪ್ರಕಟಿಸಿದ್ದಾರೆ.

34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿರುವ ಸುಪ್ರೀಂ ಕೋರ್ಟ್ ಪ್ರಸ್ತುತ 32 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿದೆ, 2 ಹುದ್ದೆಗಳು ಖಾಲಿ ಇವೆ. ಈ ನೇಮಕಾತಿಗಳೊಂದಿಗೆ, ಸುಪ್ರೀಂ ಕೋರ್ಟ್ ತನ್ನ ಪೂರ್ಣ ಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಆಗಸ್ಟ್ 25 ರಂದು ನಡೆದ ಸಭೆಯಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ.ಕೆ. ಮಹೇಶ್ವರಿ ಮತ್ತು ಬಿ.ವಿ ನಾಗರತ್ನ ಅವರನ್ನೊಳಗೊಂಡ ಕೊಲಿಜಿಯಂ, ನ್ಯಾಯಮೂರ್ತಿಗಳಾದ ಆರಾಧೆ ಮತ್ತು ಪಂಚೋಲಿ ಅವರಿಗೆ ಬಡ್ತಿ ನೀಡಲು ಶಿಫಾರಸು ಮಾಡಿತ್ತು.

ಆದರೆ, ನ್ಯಾಯಮೂರ್ತಿ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಪ್ರಸ್ತಾಪಕ್ಕೆ ನ್ಯಾಯಮೂರ್ತಿ ನಾಗರತ್ನ ಅವರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು.

ನ್ಯಾಯಮೂರ್ತಿ ಆರಾಧೆ ಅವರನ್ನು 2009ರಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಗಿತ್ತು. 2011ರಲ್ಲಿ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಮಾಡಲಾಗಿತ್ತು.

2016ರಲ್ಲಿ ಅವರನ್ನು ಜಮ್ಮು ಕಾಶ್ಮೀರದ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು ಮತ್ತು 2018ರಲ್ಲಿ 3 ತಿಂಗಳು ಅದರ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ಅದಾದ ನಂತರ, ನವೆಂಬರ್ 17, 2018 ರಂದು ಅವರು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು 2022ರಲ್ಲಿ ಕೆಲವು ತಿಂಗಳುಗಳ ಕಾಲ ಅದರ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ಜುಲೈ 2023ರಲ್ಲಿ, ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು. ನಂತರ ಅವರನ್ನು ಜನವರಿ 2025ರಲ್ಲಿ ಬಾಂಬೆ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಯಿತು, ಅಲ್ಲಿ ಅವರು ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.

ನ್ಯಾಯಮೂರ್ತಿ ಪಾಂಚೋಲಿ ಅವರ ಮಾತೃ ನ್ಯಾಯಾಲಯ ಗುಜರಾತ್ ಹೈಕೋರ್ಟ್ ಆಗಿದೆ. ಅವರನ್ನು ಜುಲೈ 2023ರಲ್ಲಿ ಪಾಟ್ನಾಗೆ ವರ್ಗಾಯಿಸಲಾಗಿತ್ತು.

ಮೇ 28, 1968ರಂದು ಜನಿಸಿದ ಪಾಂಚೋಲಿ ಅವರು, ಸೆಪ್ಟೆಂಬರ್ 1991ರಲ್ಲಿ ವಕೀಲಿಕೆ ವೃತ್ತಿಗೆ ಸೇರಿದರು ಮತ್ತು ಗುಜರಾತ್ ಹೈಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಪ್ರಾರಂಭಿಸಿದರು.

ಅಕ್ಟೋಬರ್ 1, 2014ರಂದು ಗುಜರಾತ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದ ಅವರು, ಜೂನ್ 10, 2016 ರಂದು ಶಾಶ್ವತ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

ನಂತರ, ಜುಲೈ 2023ರಲ್ಲಿ ಗುಜರಾತ್ ಹೈಕೋರ್ಟ್ ವಕೀಲರ ಸಂಘ (ಜಿಹೆಚ್‌ಸಿಎಎ) ವಿರೋಧದ ನಡುವೆಯೂ ಗುಜರಾತ್‌ನಿಂದ ಪಾಟ್ನಾ ಹೈಕೋರ್ಟ್‌ಗೆ ಪಾಂಚೋಲಿ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ವಿಷಯ ವಿವಾದದ ಸ್ವರೂಪ ಪಡೆದಿತ್ತು.

ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ನೀಡಿದ ವರದಿಯಲ್ಲಿ, ನ್ಯಾಯಮೂರ್ತಿ ಪಾಂಚೋಲಿ ಅವರು ಉತ್ತಮ ನ್ಯಾಯಾಧೀಶರು ಹೊಂದಿರಬೇಕಾದ ಎಲ್ಲಾ ಗುಣಗಳನ್ನು ಹೊಂದಿದ್ದಾರೆ ಎಂದು ಜಿಹೆಚ್‌ಸಿಎಎ ಹೇಳಿತ್ತು.

ನ್ಯಾಯಮೂರ್ತಿ ಪಾಂಚೋಲಿ 35,000ಕ್ಕೂ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ಅದು ಮತ್ತಷ್ಟು ಎತ್ತಿ ತೋರಿಸಿತ್ತು. ವಿರೋಧದ ಹೊರತಾಗಿಯೂ, ವರ್ಗಾವಣೆ ಜಾರಿಗೆ ಬಂದಿತ್ತು.

ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸುವುದಕ್ಕೆ ನ್ಯಾಯಮೂರ್ತಿ ಬಿ.ವಿ ನಾಗರತ್ನ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಅವರು ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಕಾರಣ ಉಲ್ಲೇಖಿಸಿದ್ದಾರೆ. ಏಕೆಂದರೆ, ಹೈಕೋರ್ಟ್ ನ್ಯಾಯಾಧೀಶರ ಹಿರಿತನದ ಅಖಿಲ ಭಾರತ ಪಟ್ಟಿಯಲ್ಲಿ ನ್ಯಾಯಮೂರ್ತಿ ಪಾಂಚೋಲಿ ಪ್ರಸ್ತುತ 57ನೇ ಸ್ಥಾನದಲ್ಲಿದ್ದಾರೆ ಎಂದು ವರದಿಗಳು ಹೇಳಿವೆ.

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಿದ ಮೂರು ತಿಂಗಳೊಳಗೆ, ಮೂಲತಃ ಅದೇ ಹೈಕೋರ್ಟ್‌ನವರಾದ ಮತ್ತೊಬ್ಬರು ನ್ಯಾಯಾಧೀಶರನ್ನು ಶಿಫಾರಸು ಮಾಡುವುದಕ್ಕೆ ನಾಗರತ್ನ ಅವರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಮೇ ತಿಂಗಳಲ್ಲಿ, ನ್ಯಾಯಮೂರ್ತಿ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಬಗ್ಗೆ ಚರ್ಚೆ ಶುರುವಾಗಿತ್ತು. ಆಗ ಸುಪ್ರೀಂ ಕೋರ್ಟ್ ಕೊಲಿಜಿಯಂನ ಕನಿಷ್ಠ ಇಬ್ಬರು ನ್ಯಾಯಾಧೀಶರು ಪಾಂಚೋಲಿಯವರ ಹಿರಿತನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಅಂಜಾರಿಯಾ ಸೇರಿದಂತೆ ಹಿರಿಯರನ್ನು ಈ ನೇಮಕ ಬೈಪಾಸ್ ಮಾಡಲಿದೆ ಎಂದಿದ್ದರು.

ಹಿರಿತನದ ಬಗ್ಗೆ ಇರುವ ಕಳವಳಗಳನ್ನು ಪರಿಹರಿಸಲು, ಕೊಲಿಜಿಯಂ ಪಾಂಚೋಲಿ ಬದಲಿಗೆ ಹಿರಿಯರಾದ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ಪಾಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನೇಮಿಸಿತ್ತು.

ಆ ಬಳಿಕ ಇದೀಗ ಪಾಂಚೋಲಿಯವರ ಹೆಸರು ಮತ್ತೆ ಪ್ರಸ್ತಾಪವಾಗಿರುವುದರಿಂದ ನ್ಯಾಯಮೂರ್ತಿ ನಾಗರತ್ನ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆಂದು ತಿಳಿದುಬಂದಿದೆ. ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಅತಿಯಾದ ಪ್ರಾತಿನಿಧ್ಯವನ್ನು ನಾಗರತ್ನ ಅವರು ಕೇಂದ್ರೀಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ನ್ಯಾಯಮೂರ್ತಿ ಪಾಂಚೋಲಿ ಅವರನ್ನು ನೇಮಿಸಿದರೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ, ಅಂಜಾರಿಯಾ ಮತ್ತು ಪಾಂಚೋಲಿ ಸೇರಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರನ್ನು ಹೊಂದಲಿದೆ. ನ್ಯಾಯಮೂರ್ತಿಗಳಾದ ಪಾರ್ದಿವಾಲಾ ಮತ್ತು ಪಾಂಚೋಲಿ ಇಬ್ಬರೂ 2028ರಲ್ಲಿ ಕ್ರಮವಾಗಿ ಎರಡು ವರ್ಷಗಳ ಅವಧಿಗೆ ಮತ್ತು 2031ರಲ್ಲಿ ಏಳು ತಿಂಗಳ ಅವಧಿಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಳ್ಳಲಿದ್ದಾರೆ.

ಮೇ ತಿಂಗಳವರೆಗೆ, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ, ಎಂ.ಆರ್. ಶಾ ಮತ್ತು ಬೇಲಾ ಎಂ ತ್ರಿವೇದಿ ಸೇರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಇದ್ದರು. ನ್ಯಾಯಮೂರ್ತಿ ಶಾ ಮೇ ತಿಂಗಳಲ್ಲಿ ನಿವೃತ್ತರಾದರೆ, ನ್ಯಾಯಮೂರ್ತಿ ತ್ರಿವೇದಿ ಅವರು ಮೇ 16ರಂದು ನಿವೃತ್ತಿ ಹೊಂದಿದ್ದಾರೆ. ಬಾಂಬೆ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ ತಲಾ ಮೂವರು ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ನಲ್ಲಿದ್ದಾರೆ.

ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದ್ದು, ಸಾಕಷ್ಟು ಪ್ರಾದೇಶಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತಿ ಹೈಕೋರ್ಟ್‌ನ ಅನುಮೋದಿತ ಬಲವನ್ನು ಪರಿಗಣಿಸಲಾಗುತ್ತದೆ. ನ್ಯಾಯಮೂರ್ತಿ ನಾಗರತ್ನ ಅವರ ಕಳವಳಗಳು ಸುಪ್ರೀಂ ಕೋರ್ಟ್‌ನಲ್ಲಿ ಇತರ ಹೈಕೋರ್ಟ್‌ಗಳ ಕಡಿಮೆ ಪ್ರಾತಿನಿಧ್ಯವನ್ನು ಪ್ರತಿಬಿಂಬಿಸುತ್ತವೆ.

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...