Homeಮುಖಪುಟಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಉತ್ತರ ಪ್ರದೇಶದ 17 ಹಿಂದುಳಿದ ಸಮುದಾಯಗಳನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರ ನಡೆಗೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಜೂನ್ 24ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರು ಕಶ್ಯಪ್, ರಾಜ್ಬರ್, ಧೀವಾರ್, ಬಿಂದ್, ಕುಮ್ಹಾರ್, ಕಹರ್, ಕೇವಾಥ್, ನಿಶಾದ್, ಭಾರ್, ಮಾಲ್ಹ, ಪ್ರಜಾಪತಿ, ಭಾತಮ್, ತುಹ್ರ, ಗೋಧಿಯ, ಮಾಂಜಿ ಮತ್ತು ಮಚುವ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಜ್ ಮತ್ತು ಕಮಿಷನರ್‍ಗಳಿಗೆ ಆದೇಶ ಹೊರಡಿಸಿದ್ದರು.

ಇದು ಮುಂಬರುವ 12 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಸೇರಿದಂತೆ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಟ್ಟುಕೊಂಡು ಯೋಗಿ ಆದಿತ್ಯನಾಥ್ ರವರು ಹೆಣೆದ ತಂತ್ರವಾಗಿತ್ತು.

ಈ ವಿಷಯವನ್ನು ಇಂದು ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಬಿಎಸ್‍ಪಿ ಪಕ್ಷದ ನಾಯಕರಾದ ಎಸ್.ಸಿ ಮಿಶ್ರಾರವರು ಚರ್ಚೆಗೆ ತಂದರು. ಆಗ ಇದು ಅಸಾಂವಿಧಾನಿಕವಾದುದು, ಕೇಂದ್ರ ಸರ್ಕಾರಕ್ಕೆ ಮಾತ್ರ ಆ ಅಧಿಕಾರವಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ವಿಚಾರದಲ್ಲಿ ಮುಂದುವರೆಯಬಯಸಿದರೆ ನಿಯಮಗಳ ಪ್ರಕಾರ ಅವರು ಮೊದಲು ಆ ಪ್ರಸ್ತಾಪವನ್ನು ಅವರು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಬೇಕು. ಆನಂತರ ಅದನ್ನು ನಾವು ಪರಿಗಣಿಸಬೇಕೊ, ಬಿಡಬೇಕೋ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮುಂದುವರಿದು ಅವರು ಉತ್ತರ ಪ್ರದೇಶ ಸರ್ಕಾರ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಬೇಕು. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ವರ್ಗಾವಣೆ ಮಾಡುವ ಹಕ್ಕಿರುವುದು ಸಂಸತ್ತಿಗೆ ಮಾತ್ರ ಎಂದು ರಾಜ್ಯಸಭೆಯ ನಾಯಕರೂ ಆಗಿರುವ ಗೆಹ್ಲೋಟ್ ಹೇಳಿದ್ದಾರೆ. ಈ ಹಿಂದೆ ಇಂತಹ ಹಲವು ಪ್ರಸ್ತಾಪಗಳು ಬಂದು ಬಹಳಷ್ಟನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ಅಧ್ಯಕ್ಷರಾದ ವೆಂಕಯ್ಯ ನಾಯ್ಡುರವರು ನೀತಿ ನಿಯಮಗಳನ್ನು ಅನುಸರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲಹೆ ನೀಡಿ ಎಂದಿದ್ದಾರೆ. ಇನ್ನು ಬಿಎಸ್‍ಪಿಯ ಮಿಶ್ರಾರವರು ಯೋಗಿ ಆದಿತ್ಯನಾಥ್‍ರವರ ಕ್ರಮವನ್ನು ವಿರೋಧಿಸಿ ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಅದರಂತೆ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬದಲಾವಣೆ ತರಲು ಸಂಸತ್ತಿಗೆ ಮಾತ್ರ ಅಧಿಕಾರವಿದೆ. ಅದು ಬಿಟ್ಟು ಭಾರತದ ರಾಷ್ಟ್ರಪತಿಗಳಿಗೂ ಸಹ ಆ ಪಟ್ಟಿಯಲ್ಲಿ ಬದಲಾವಣೆ ತರಲು ಅಧಿಕಾರವಿಲ್ಲದಿರುವಾಗ ಯೋಗಿ ಆದಿತ್ಯನಾಥ್‍ರವರ ಕ್ರಮ ಅಸಿಂಧು ಎಂದಿದ್ದಾರೆ.

ನಿಮ್ಮ ಪಕ್ಷ 17 ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಪ್ರಸ್ತಾಪಕ್ಕೆ ನಿಮ್ಮ ಪರವಾಗಿದ್ದರೂ ಕೂಡ ಅದಕ್ಕೆ ಇರುವ ನಿಯಮಾವಳಿಗಳನ್ನು ಪಾಲಿಸಬೇಕು. ಜೊತೆಗೆ ಪರಿಶಿಷ್ಟ ಜಾತಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಸಹ ಪಟ್ಟಿಗನುಗುಣವಾಗಿ ಏರಿಸಬೇಕು ಎಂದಿದ್ದಾರೆ.

ಸಂಸತ್ತಿನ ಅಧಿಕಾರವನ್ನು ಯಾವುದೇ ರಾಜ್ಯ ನಾಶ ಮಾಡಲು ಬಿಡಬಾರದು. ಈ ಕೂಡಲೇ ಕೇಂದ್ರ ಸರ್ಕಾರ ಅಸಾಂವಿಧಾನಿಕವಾದ ಆ ಆದೇಶವನ್ನು ಕೈಬಿಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದು ಜಾತಿಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದಿದ್ದಾರೆ.

2005ರಲ್ಲಿ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು 11 ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವಂತೆ ಆದೇಶವನ್ನು ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳಿಸಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ನಂತರ ಮಾಯವತಿಯವರ ನೇತೃತ್ವದ ಬಿಎಸ್‍ಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ನಿಯಮವನ್ನು ರದ್ದು ಮಾಡಿ ಯಾವುದೇ ಜಾತಿಯನ್ನು ಪಟ್ಟಿಗೆ ಸೇರಿಸುವ ಮುನ್ನ ಅದರ ಕೋಟಾವನ್ನು ಏರಿಸಬೇಕೆಂದು ಆಗ್ರಹಿಸಿದ್ದರು.

ಇನ್ನು 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್‍ರವರು ಹೊಸ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಅದನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆ ಕೋರ್ಟ್‍ನ ವೀಕ್ಷಣೆಗಳ ಆಧಾರದಲ್ಲಿ ಈ ನೀತಿ ತರಲು ಮುಂದಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...