Homeಮುಖಪುಟಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಉತ್ತರ ಪ್ರದೇಶದ 17 ಹಿಂದುಳಿದ ಸಮುದಾಯಗಳನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರ ನಡೆಗೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಜೂನ್ 24ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರು ಕಶ್ಯಪ್, ರಾಜ್ಬರ್, ಧೀವಾರ್, ಬಿಂದ್, ಕುಮ್ಹಾರ್, ಕಹರ್, ಕೇವಾಥ್, ನಿಶಾದ್, ಭಾರ್, ಮಾಲ್ಹ, ಪ್ರಜಾಪತಿ, ಭಾತಮ್, ತುಹ್ರ, ಗೋಧಿಯ, ಮಾಂಜಿ ಮತ್ತು ಮಚುವ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಜ್ ಮತ್ತು ಕಮಿಷನರ್‍ಗಳಿಗೆ ಆದೇಶ ಹೊರಡಿಸಿದ್ದರು.

ಇದು ಮುಂಬರುವ 12 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಸೇರಿದಂತೆ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಟ್ಟುಕೊಂಡು ಯೋಗಿ ಆದಿತ್ಯನಾಥ್ ರವರು ಹೆಣೆದ ತಂತ್ರವಾಗಿತ್ತು.

ಈ ವಿಷಯವನ್ನು ಇಂದು ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಬಿಎಸ್‍ಪಿ ಪಕ್ಷದ ನಾಯಕರಾದ ಎಸ್.ಸಿ ಮಿಶ್ರಾರವರು ಚರ್ಚೆಗೆ ತಂದರು. ಆಗ ಇದು ಅಸಾಂವಿಧಾನಿಕವಾದುದು, ಕೇಂದ್ರ ಸರ್ಕಾರಕ್ಕೆ ಮಾತ್ರ ಆ ಅಧಿಕಾರವಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ವಿಚಾರದಲ್ಲಿ ಮುಂದುವರೆಯಬಯಸಿದರೆ ನಿಯಮಗಳ ಪ್ರಕಾರ ಅವರು ಮೊದಲು ಆ ಪ್ರಸ್ತಾಪವನ್ನು ಅವರು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಬೇಕು. ಆನಂತರ ಅದನ್ನು ನಾವು ಪರಿಗಣಿಸಬೇಕೊ, ಬಿಡಬೇಕೋ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮುಂದುವರಿದು ಅವರು ಉತ್ತರ ಪ್ರದೇಶ ಸರ್ಕಾರ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಬೇಕು. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ವರ್ಗಾವಣೆ ಮಾಡುವ ಹಕ್ಕಿರುವುದು ಸಂಸತ್ತಿಗೆ ಮಾತ್ರ ಎಂದು ರಾಜ್ಯಸಭೆಯ ನಾಯಕರೂ ಆಗಿರುವ ಗೆಹ್ಲೋಟ್ ಹೇಳಿದ್ದಾರೆ. ಈ ಹಿಂದೆ ಇಂತಹ ಹಲವು ಪ್ರಸ್ತಾಪಗಳು ಬಂದು ಬಹಳಷ್ಟನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ಅಧ್ಯಕ್ಷರಾದ ವೆಂಕಯ್ಯ ನಾಯ್ಡುರವರು ನೀತಿ ನಿಯಮಗಳನ್ನು ಅನುಸರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲಹೆ ನೀಡಿ ಎಂದಿದ್ದಾರೆ. ಇನ್ನು ಬಿಎಸ್‍ಪಿಯ ಮಿಶ್ರಾರವರು ಯೋಗಿ ಆದಿತ್ಯನಾಥ್‍ರವರ ಕ್ರಮವನ್ನು ವಿರೋಧಿಸಿ ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಅದರಂತೆ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬದಲಾವಣೆ ತರಲು ಸಂಸತ್ತಿಗೆ ಮಾತ್ರ ಅಧಿಕಾರವಿದೆ. ಅದು ಬಿಟ್ಟು ಭಾರತದ ರಾಷ್ಟ್ರಪತಿಗಳಿಗೂ ಸಹ ಆ ಪಟ್ಟಿಯಲ್ಲಿ ಬದಲಾವಣೆ ತರಲು ಅಧಿಕಾರವಿಲ್ಲದಿರುವಾಗ ಯೋಗಿ ಆದಿತ್ಯನಾಥ್‍ರವರ ಕ್ರಮ ಅಸಿಂಧು ಎಂದಿದ್ದಾರೆ.

ನಿಮ್ಮ ಪಕ್ಷ 17 ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಪ್ರಸ್ತಾಪಕ್ಕೆ ನಿಮ್ಮ ಪರವಾಗಿದ್ದರೂ ಕೂಡ ಅದಕ್ಕೆ ಇರುವ ನಿಯಮಾವಳಿಗಳನ್ನು ಪಾಲಿಸಬೇಕು. ಜೊತೆಗೆ ಪರಿಶಿಷ್ಟ ಜಾತಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಸಹ ಪಟ್ಟಿಗನುಗುಣವಾಗಿ ಏರಿಸಬೇಕು ಎಂದಿದ್ದಾರೆ.

ಸಂಸತ್ತಿನ ಅಧಿಕಾರವನ್ನು ಯಾವುದೇ ರಾಜ್ಯ ನಾಶ ಮಾಡಲು ಬಿಡಬಾರದು. ಈ ಕೂಡಲೇ ಕೇಂದ್ರ ಸರ್ಕಾರ ಅಸಾಂವಿಧಾನಿಕವಾದ ಆ ಆದೇಶವನ್ನು ಕೈಬಿಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದು ಜಾತಿಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದಿದ್ದಾರೆ.

2005ರಲ್ಲಿ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು 11 ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವಂತೆ ಆದೇಶವನ್ನು ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳಿಸಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ನಂತರ ಮಾಯವತಿಯವರ ನೇತೃತ್ವದ ಬಿಎಸ್‍ಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ನಿಯಮವನ್ನು ರದ್ದು ಮಾಡಿ ಯಾವುದೇ ಜಾತಿಯನ್ನು ಪಟ್ಟಿಗೆ ಸೇರಿಸುವ ಮುನ್ನ ಅದರ ಕೋಟಾವನ್ನು ಏರಿಸಬೇಕೆಂದು ಆಗ್ರಹಿಸಿದ್ದರು.

ಇನ್ನು 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್‍ರವರು ಹೊಸ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಅದನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆ ಕೋರ್ಟ್‍ನ ವೀಕ್ಷಣೆಗಳ ಆಧಾರದಲ್ಲಿ ಈ ನೀತಿ ತರಲು ಮುಂದಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ...

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು 'ಹತಾಶೆಯ ಸ್ಪಷ್ಟ ಸಂಕೇತ' ಎಂದು ತಿರುಗೇಟು ನೀಡಿದ್ದಾರೆ. ಮೋದಿಯವರು ಈ...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...