Homeಮುಖಪುಟಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಉತ್ತರ ಪ್ರದೇಶದ 17 ಹಿಂದುಳಿದ ಸಮುದಾಯಗಳನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರ ನಡೆಗೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಜೂನ್ 24ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರು ಕಶ್ಯಪ್, ರಾಜ್ಬರ್, ಧೀವಾರ್, ಬಿಂದ್, ಕುಮ್ಹಾರ್, ಕಹರ್, ಕೇವಾಥ್, ನಿಶಾದ್, ಭಾರ್, ಮಾಲ್ಹ, ಪ್ರಜಾಪತಿ, ಭಾತಮ್, ತುಹ್ರ, ಗೋಧಿಯ, ಮಾಂಜಿ ಮತ್ತು ಮಚುವ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಜ್ ಮತ್ತು ಕಮಿಷನರ್‍ಗಳಿಗೆ ಆದೇಶ ಹೊರಡಿಸಿದ್ದರು.

ಇದು ಮುಂಬರುವ 12 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಸೇರಿದಂತೆ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಟ್ಟುಕೊಂಡು ಯೋಗಿ ಆದಿತ್ಯನಾಥ್ ರವರು ಹೆಣೆದ ತಂತ್ರವಾಗಿತ್ತು.

ಈ ವಿಷಯವನ್ನು ಇಂದು ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಬಿಎಸ್‍ಪಿ ಪಕ್ಷದ ನಾಯಕರಾದ ಎಸ್.ಸಿ ಮಿಶ್ರಾರವರು ಚರ್ಚೆಗೆ ತಂದರು. ಆಗ ಇದು ಅಸಾಂವಿಧಾನಿಕವಾದುದು, ಕೇಂದ್ರ ಸರ್ಕಾರಕ್ಕೆ ಮಾತ್ರ ಆ ಅಧಿಕಾರವಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ವಿಚಾರದಲ್ಲಿ ಮುಂದುವರೆಯಬಯಸಿದರೆ ನಿಯಮಗಳ ಪ್ರಕಾರ ಅವರು ಮೊದಲು ಆ ಪ್ರಸ್ತಾಪವನ್ನು ಅವರು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಬೇಕು. ಆನಂತರ ಅದನ್ನು ನಾವು ಪರಿಗಣಿಸಬೇಕೊ, ಬಿಡಬೇಕೋ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮುಂದುವರಿದು ಅವರು ಉತ್ತರ ಪ್ರದೇಶ ಸರ್ಕಾರ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಬೇಕು. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ವರ್ಗಾವಣೆ ಮಾಡುವ ಹಕ್ಕಿರುವುದು ಸಂಸತ್ತಿಗೆ ಮಾತ್ರ ಎಂದು ರಾಜ್ಯಸಭೆಯ ನಾಯಕರೂ ಆಗಿರುವ ಗೆಹ್ಲೋಟ್ ಹೇಳಿದ್ದಾರೆ. ಈ ಹಿಂದೆ ಇಂತಹ ಹಲವು ಪ್ರಸ್ತಾಪಗಳು ಬಂದು ಬಹಳಷ್ಟನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ಅಧ್ಯಕ್ಷರಾದ ವೆಂಕಯ್ಯ ನಾಯ್ಡುರವರು ನೀತಿ ನಿಯಮಗಳನ್ನು ಅನುಸರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲಹೆ ನೀಡಿ ಎಂದಿದ್ದಾರೆ. ಇನ್ನು ಬಿಎಸ್‍ಪಿಯ ಮಿಶ್ರಾರವರು ಯೋಗಿ ಆದಿತ್ಯನಾಥ್‍ರವರ ಕ್ರಮವನ್ನು ವಿರೋಧಿಸಿ ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಅದರಂತೆ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬದಲಾವಣೆ ತರಲು ಸಂಸತ್ತಿಗೆ ಮಾತ್ರ ಅಧಿಕಾರವಿದೆ. ಅದು ಬಿಟ್ಟು ಭಾರತದ ರಾಷ್ಟ್ರಪತಿಗಳಿಗೂ ಸಹ ಆ ಪಟ್ಟಿಯಲ್ಲಿ ಬದಲಾವಣೆ ತರಲು ಅಧಿಕಾರವಿಲ್ಲದಿರುವಾಗ ಯೋಗಿ ಆದಿತ್ಯನಾಥ್‍ರವರ ಕ್ರಮ ಅಸಿಂಧು ಎಂದಿದ್ದಾರೆ.

ನಿಮ್ಮ ಪಕ್ಷ 17 ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಪ್ರಸ್ತಾಪಕ್ಕೆ ನಿಮ್ಮ ಪರವಾಗಿದ್ದರೂ ಕೂಡ ಅದಕ್ಕೆ ಇರುವ ನಿಯಮಾವಳಿಗಳನ್ನು ಪಾಲಿಸಬೇಕು. ಜೊತೆಗೆ ಪರಿಶಿಷ್ಟ ಜಾತಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಸಹ ಪಟ್ಟಿಗನುಗುಣವಾಗಿ ಏರಿಸಬೇಕು ಎಂದಿದ್ದಾರೆ.

ಸಂಸತ್ತಿನ ಅಧಿಕಾರವನ್ನು ಯಾವುದೇ ರಾಜ್ಯ ನಾಶ ಮಾಡಲು ಬಿಡಬಾರದು. ಈ ಕೂಡಲೇ ಕೇಂದ್ರ ಸರ್ಕಾರ ಅಸಾಂವಿಧಾನಿಕವಾದ ಆ ಆದೇಶವನ್ನು ಕೈಬಿಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದು ಜಾತಿಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದಿದ್ದಾರೆ.

2005ರಲ್ಲಿ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು 11 ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವಂತೆ ಆದೇಶವನ್ನು ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳಿಸಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ನಂತರ ಮಾಯವತಿಯವರ ನೇತೃತ್ವದ ಬಿಎಸ್‍ಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ನಿಯಮವನ್ನು ರದ್ದು ಮಾಡಿ ಯಾವುದೇ ಜಾತಿಯನ್ನು ಪಟ್ಟಿಗೆ ಸೇರಿಸುವ ಮುನ್ನ ಅದರ ಕೋಟಾವನ್ನು ಏರಿಸಬೇಕೆಂದು ಆಗ್ರಹಿಸಿದ್ದರು.

ಇನ್ನು 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್‍ರವರು ಹೊಸ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಅದನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆ ಕೋರ್ಟ್‍ನ ವೀಕ್ಷಣೆಗಳ ಆಧಾರದಲ್ಲಿ ಈ ನೀತಿ ತರಲು ಮುಂದಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...