Homeಮುಖಪುಟಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಉತ್ತರ ಪ್ರದೇಶದ 17 ಹಿಂದುಳಿದ ಸಮುದಾಯಗಳನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರ ನಡೆಗೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಜೂನ್ 24ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರು ಕಶ್ಯಪ್, ರಾಜ್ಬರ್, ಧೀವಾರ್, ಬಿಂದ್, ಕುಮ್ಹಾರ್, ಕಹರ್, ಕೇವಾಥ್, ನಿಶಾದ್, ಭಾರ್, ಮಾಲ್ಹ, ಪ್ರಜಾಪತಿ, ಭಾತಮ್, ತುಹ್ರ, ಗೋಧಿಯ, ಮಾಂಜಿ ಮತ್ತು ಮಚುವ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಜ್ ಮತ್ತು ಕಮಿಷನರ್‍ಗಳಿಗೆ ಆದೇಶ ಹೊರಡಿಸಿದ್ದರು.

ಇದು ಮುಂಬರುವ 12 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಸೇರಿದಂತೆ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಟ್ಟುಕೊಂಡು ಯೋಗಿ ಆದಿತ್ಯನಾಥ್ ರವರು ಹೆಣೆದ ತಂತ್ರವಾಗಿತ್ತು.

ಈ ವಿಷಯವನ್ನು ಇಂದು ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಬಿಎಸ್‍ಪಿ ಪಕ್ಷದ ನಾಯಕರಾದ ಎಸ್.ಸಿ ಮಿಶ್ರಾರವರು ಚರ್ಚೆಗೆ ತಂದರು. ಆಗ ಇದು ಅಸಾಂವಿಧಾನಿಕವಾದುದು, ಕೇಂದ್ರ ಸರ್ಕಾರಕ್ಕೆ ಮಾತ್ರ ಆ ಅಧಿಕಾರವಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ವಿಚಾರದಲ್ಲಿ ಮುಂದುವರೆಯಬಯಸಿದರೆ ನಿಯಮಗಳ ಪ್ರಕಾರ ಅವರು ಮೊದಲು ಆ ಪ್ರಸ್ತಾಪವನ್ನು ಅವರು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಬೇಕು. ಆನಂತರ ಅದನ್ನು ನಾವು ಪರಿಗಣಿಸಬೇಕೊ, ಬಿಡಬೇಕೋ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮುಂದುವರಿದು ಅವರು ಉತ್ತರ ಪ್ರದೇಶ ಸರ್ಕಾರ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಬೇಕು. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ವರ್ಗಾವಣೆ ಮಾಡುವ ಹಕ್ಕಿರುವುದು ಸಂಸತ್ತಿಗೆ ಮಾತ್ರ ಎಂದು ರಾಜ್ಯಸಭೆಯ ನಾಯಕರೂ ಆಗಿರುವ ಗೆಹ್ಲೋಟ್ ಹೇಳಿದ್ದಾರೆ. ಈ ಹಿಂದೆ ಇಂತಹ ಹಲವು ಪ್ರಸ್ತಾಪಗಳು ಬಂದು ಬಹಳಷ್ಟನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ಅಧ್ಯಕ್ಷರಾದ ವೆಂಕಯ್ಯ ನಾಯ್ಡುರವರು ನೀತಿ ನಿಯಮಗಳನ್ನು ಅನುಸರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲಹೆ ನೀಡಿ ಎಂದಿದ್ದಾರೆ. ಇನ್ನು ಬಿಎಸ್‍ಪಿಯ ಮಿಶ್ರಾರವರು ಯೋಗಿ ಆದಿತ್ಯನಾಥ್‍ರವರ ಕ್ರಮವನ್ನು ವಿರೋಧಿಸಿ ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಅದರಂತೆ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬದಲಾವಣೆ ತರಲು ಸಂಸತ್ತಿಗೆ ಮಾತ್ರ ಅಧಿಕಾರವಿದೆ. ಅದು ಬಿಟ್ಟು ಭಾರತದ ರಾಷ್ಟ್ರಪತಿಗಳಿಗೂ ಸಹ ಆ ಪಟ್ಟಿಯಲ್ಲಿ ಬದಲಾವಣೆ ತರಲು ಅಧಿಕಾರವಿಲ್ಲದಿರುವಾಗ ಯೋಗಿ ಆದಿತ್ಯನಾಥ್‍ರವರ ಕ್ರಮ ಅಸಿಂಧು ಎಂದಿದ್ದಾರೆ.

ನಿಮ್ಮ ಪಕ್ಷ 17 ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಪ್ರಸ್ತಾಪಕ್ಕೆ ನಿಮ್ಮ ಪರವಾಗಿದ್ದರೂ ಕೂಡ ಅದಕ್ಕೆ ಇರುವ ನಿಯಮಾವಳಿಗಳನ್ನು ಪಾಲಿಸಬೇಕು. ಜೊತೆಗೆ ಪರಿಶಿಷ್ಟ ಜಾತಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಸಹ ಪಟ್ಟಿಗನುಗುಣವಾಗಿ ಏರಿಸಬೇಕು ಎಂದಿದ್ದಾರೆ.

ಸಂಸತ್ತಿನ ಅಧಿಕಾರವನ್ನು ಯಾವುದೇ ರಾಜ್ಯ ನಾಶ ಮಾಡಲು ಬಿಡಬಾರದು. ಈ ಕೂಡಲೇ ಕೇಂದ್ರ ಸರ್ಕಾರ ಅಸಾಂವಿಧಾನಿಕವಾದ ಆ ಆದೇಶವನ್ನು ಕೈಬಿಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದು ಜಾತಿಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದಿದ್ದಾರೆ.

2005ರಲ್ಲಿ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು 11 ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವಂತೆ ಆದೇಶವನ್ನು ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳಿಸಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ನಂತರ ಮಾಯವತಿಯವರ ನೇತೃತ್ವದ ಬಿಎಸ್‍ಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ನಿಯಮವನ್ನು ರದ್ದು ಮಾಡಿ ಯಾವುದೇ ಜಾತಿಯನ್ನು ಪಟ್ಟಿಗೆ ಸೇರಿಸುವ ಮುನ್ನ ಅದರ ಕೋಟಾವನ್ನು ಏರಿಸಬೇಕೆಂದು ಆಗ್ರಹಿಸಿದ್ದರು.

ಇನ್ನು 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್‍ರವರು ಹೊಸ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಅದನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆ ಕೋರ್ಟ್‍ನ ವೀಕ್ಷಣೆಗಳ ಆಧಾರದಲ್ಲಿ ಈ ನೀತಿ ತರಲು ಮುಂದಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...