Homeಮುಖಪುಟಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಉತ್ತರ ಪ್ರದೇಶದ 17 ಹಿಂದುಳಿದ ಸಮುದಾಯಗಳನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರ ನಡೆಗೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಜೂನ್ 24ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರು ಕಶ್ಯಪ್, ರಾಜ್ಬರ್, ಧೀವಾರ್, ಬಿಂದ್, ಕುಮ್ಹಾರ್, ಕಹರ್, ಕೇವಾಥ್, ನಿಶಾದ್, ಭಾರ್, ಮಾಲ್ಹ, ಪ್ರಜಾಪತಿ, ಭಾತಮ್, ತುಹ್ರ, ಗೋಧಿಯ, ಮಾಂಜಿ ಮತ್ತು ಮಚುವ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಜ್ ಮತ್ತು ಕಮಿಷನರ್‍ಗಳಿಗೆ ಆದೇಶ ಹೊರಡಿಸಿದ್ದರು.

ಇದು ಮುಂಬರುವ 12 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಸೇರಿದಂತೆ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಟ್ಟುಕೊಂಡು ಯೋಗಿ ಆದಿತ್ಯನಾಥ್ ರವರು ಹೆಣೆದ ತಂತ್ರವಾಗಿತ್ತು.

ಈ ವಿಷಯವನ್ನು ಇಂದು ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಬಿಎಸ್‍ಪಿ ಪಕ್ಷದ ನಾಯಕರಾದ ಎಸ್.ಸಿ ಮಿಶ್ರಾರವರು ಚರ್ಚೆಗೆ ತಂದರು. ಆಗ ಇದು ಅಸಾಂವಿಧಾನಿಕವಾದುದು, ಕೇಂದ್ರ ಸರ್ಕಾರಕ್ಕೆ ಮಾತ್ರ ಆ ಅಧಿಕಾರವಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ವಿಚಾರದಲ್ಲಿ ಮುಂದುವರೆಯಬಯಸಿದರೆ ನಿಯಮಗಳ ಪ್ರಕಾರ ಅವರು ಮೊದಲು ಆ ಪ್ರಸ್ತಾಪವನ್ನು ಅವರು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಬೇಕು. ಆನಂತರ ಅದನ್ನು ನಾವು ಪರಿಗಣಿಸಬೇಕೊ, ಬಿಡಬೇಕೋ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮುಂದುವರಿದು ಅವರು ಉತ್ತರ ಪ್ರದೇಶ ಸರ್ಕಾರ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಬೇಕು. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ವರ್ಗಾವಣೆ ಮಾಡುವ ಹಕ್ಕಿರುವುದು ಸಂಸತ್ತಿಗೆ ಮಾತ್ರ ಎಂದು ರಾಜ್ಯಸಭೆಯ ನಾಯಕರೂ ಆಗಿರುವ ಗೆಹ್ಲೋಟ್ ಹೇಳಿದ್ದಾರೆ. ಈ ಹಿಂದೆ ಇಂತಹ ಹಲವು ಪ್ರಸ್ತಾಪಗಳು ಬಂದು ಬಹಳಷ್ಟನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ಅಧ್ಯಕ್ಷರಾದ ವೆಂಕಯ್ಯ ನಾಯ್ಡುರವರು ನೀತಿ ನಿಯಮಗಳನ್ನು ಅನುಸರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲಹೆ ನೀಡಿ ಎಂದಿದ್ದಾರೆ. ಇನ್ನು ಬಿಎಸ್‍ಪಿಯ ಮಿಶ್ರಾರವರು ಯೋಗಿ ಆದಿತ್ಯನಾಥ್‍ರವರ ಕ್ರಮವನ್ನು ವಿರೋಧಿಸಿ ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಅದರಂತೆ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬದಲಾವಣೆ ತರಲು ಸಂಸತ್ತಿಗೆ ಮಾತ್ರ ಅಧಿಕಾರವಿದೆ. ಅದು ಬಿಟ್ಟು ಭಾರತದ ರಾಷ್ಟ್ರಪತಿಗಳಿಗೂ ಸಹ ಆ ಪಟ್ಟಿಯಲ್ಲಿ ಬದಲಾವಣೆ ತರಲು ಅಧಿಕಾರವಿಲ್ಲದಿರುವಾಗ ಯೋಗಿ ಆದಿತ್ಯನಾಥ್‍ರವರ ಕ್ರಮ ಅಸಿಂಧು ಎಂದಿದ್ದಾರೆ.

ನಿಮ್ಮ ಪಕ್ಷ 17 ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಪ್ರಸ್ತಾಪಕ್ಕೆ ನಿಮ್ಮ ಪರವಾಗಿದ್ದರೂ ಕೂಡ ಅದಕ್ಕೆ ಇರುವ ನಿಯಮಾವಳಿಗಳನ್ನು ಪಾಲಿಸಬೇಕು. ಜೊತೆಗೆ ಪರಿಶಿಷ್ಟ ಜಾತಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಸಹ ಪಟ್ಟಿಗನುಗುಣವಾಗಿ ಏರಿಸಬೇಕು ಎಂದಿದ್ದಾರೆ.

ಸಂಸತ್ತಿನ ಅಧಿಕಾರವನ್ನು ಯಾವುದೇ ರಾಜ್ಯ ನಾಶ ಮಾಡಲು ಬಿಡಬಾರದು. ಈ ಕೂಡಲೇ ಕೇಂದ್ರ ಸರ್ಕಾರ ಅಸಾಂವಿಧಾನಿಕವಾದ ಆ ಆದೇಶವನ್ನು ಕೈಬಿಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದು ಜಾತಿಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದಿದ್ದಾರೆ.

2005ರಲ್ಲಿ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು 11 ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವಂತೆ ಆದೇಶವನ್ನು ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳಿಸಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ನಂತರ ಮಾಯವತಿಯವರ ನೇತೃತ್ವದ ಬಿಎಸ್‍ಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ನಿಯಮವನ್ನು ರದ್ದು ಮಾಡಿ ಯಾವುದೇ ಜಾತಿಯನ್ನು ಪಟ್ಟಿಗೆ ಸೇರಿಸುವ ಮುನ್ನ ಅದರ ಕೋಟಾವನ್ನು ಏರಿಸಬೇಕೆಂದು ಆಗ್ರಹಿಸಿದ್ದರು.

ಇನ್ನು 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್‍ರವರು ಹೊಸ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಅದನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆ ಕೋರ್ಟ್‍ನ ವೀಕ್ಷಣೆಗಳ ಆಧಾರದಲ್ಲಿ ಈ ನೀತಿ ತರಲು ಮುಂದಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...