Homeಮುಖಪುಟಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಉತ್ತರ ಪ್ರದೇಶದ 17 ಹಿಂದುಳಿದ ಸಮುದಾಯಗಳನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರ ನಡೆಗೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಜೂನ್ 24ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರು ಕಶ್ಯಪ್, ರಾಜ್ಬರ್, ಧೀವಾರ್, ಬಿಂದ್, ಕುಮ್ಹಾರ್, ಕಹರ್, ಕೇವಾಥ್, ನಿಶಾದ್, ಭಾರ್, ಮಾಲ್ಹ, ಪ್ರಜಾಪತಿ, ಭಾತಮ್, ತುಹ್ರ, ಗೋಧಿಯ, ಮಾಂಜಿ ಮತ್ತು ಮಚುವ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಜ್ ಮತ್ತು ಕಮಿಷನರ್‍ಗಳಿಗೆ ಆದೇಶ ಹೊರಡಿಸಿದ್ದರು.

ಇದು ಮುಂಬರುವ 12 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಸೇರಿದಂತೆ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಟ್ಟುಕೊಂಡು ಯೋಗಿ ಆದಿತ್ಯನಾಥ್ ರವರು ಹೆಣೆದ ತಂತ್ರವಾಗಿತ್ತು.

ಈ ವಿಷಯವನ್ನು ಇಂದು ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಬಿಎಸ್‍ಪಿ ಪಕ್ಷದ ನಾಯಕರಾದ ಎಸ್.ಸಿ ಮಿಶ್ರಾರವರು ಚರ್ಚೆಗೆ ತಂದರು. ಆಗ ಇದು ಅಸಾಂವಿಧಾನಿಕವಾದುದು, ಕೇಂದ್ರ ಸರ್ಕಾರಕ್ಕೆ ಮಾತ್ರ ಆ ಅಧಿಕಾರವಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ವಿಚಾರದಲ್ಲಿ ಮುಂದುವರೆಯಬಯಸಿದರೆ ನಿಯಮಗಳ ಪ್ರಕಾರ ಅವರು ಮೊದಲು ಆ ಪ್ರಸ್ತಾಪವನ್ನು ಅವರು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಬೇಕು. ಆನಂತರ ಅದನ್ನು ನಾವು ಪರಿಗಣಿಸಬೇಕೊ, ಬಿಡಬೇಕೋ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮುಂದುವರಿದು ಅವರು ಉತ್ತರ ಪ್ರದೇಶ ಸರ್ಕಾರ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಬೇಕು. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ವರ್ಗಾವಣೆ ಮಾಡುವ ಹಕ್ಕಿರುವುದು ಸಂಸತ್ತಿಗೆ ಮಾತ್ರ ಎಂದು ರಾಜ್ಯಸಭೆಯ ನಾಯಕರೂ ಆಗಿರುವ ಗೆಹ್ಲೋಟ್ ಹೇಳಿದ್ದಾರೆ. ಈ ಹಿಂದೆ ಇಂತಹ ಹಲವು ಪ್ರಸ್ತಾಪಗಳು ಬಂದು ಬಹಳಷ್ಟನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ಅಧ್ಯಕ್ಷರಾದ ವೆಂಕಯ್ಯ ನಾಯ್ಡುರವರು ನೀತಿ ನಿಯಮಗಳನ್ನು ಅನುಸರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲಹೆ ನೀಡಿ ಎಂದಿದ್ದಾರೆ. ಇನ್ನು ಬಿಎಸ್‍ಪಿಯ ಮಿಶ್ರಾರವರು ಯೋಗಿ ಆದಿತ್ಯನಾಥ್‍ರವರ ಕ್ರಮವನ್ನು ವಿರೋಧಿಸಿ ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಅದರಂತೆ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬದಲಾವಣೆ ತರಲು ಸಂಸತ್ತಿಗೆ ಮಾತ್ರ ಅಧಿಕಾರವಿದೆ. ಅದು ಬಿಟ್ಟು ಭಾರತದ ರಾಷ್ಟ್ರಪತಿಗಳಿಗೂ ಸಹ ಆ ಪಟ್ಟಿಯಲ್ಲಿ ಬದಲಾವಣೆ ತರಲು ಅಧಿಕಾರವಿಲ್ಲದಿರುವಾಗ ಯೋಗಿ ಆದಿತ್ಯನಾಥ್‍ರವರ ಕ್ರಮ ಅಸಿಂಧು ಎಂದಿದ್ದಾರೆ.

ನಿಮ್ಮ ಪಕ್ಷ 17 ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಪ್ರಸ್ತಾಪಕ್ಕೆ ನಿಮ್ಮ ಪರವಾಗಿದ್ದರೂ ಕೂಡ ಅದಕ್ಕೆ ಇರುವ ನಿಯಮಾವಳಿಗಳನ್ನು ಪಾಲಿಸಬೇಕು. ಜೊತೆಗೆ ಪರಿಶಿಷ್ಟ ಜಾತಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಸಹ ಪಟ್ಟಿಗನುಗುಣವಾಗಿ ಏರಿಸಬೇಕು ಎಂದಿದ್ದಾರೆ.

ಸಂಸತ್ತಿನ ಅಧಿಕಾರವನ್ನು ಯಾವುದೇ ರಾಜ್ಯ ನಾಶ ಮಾಡಲು ಬಿಡಬಾರದು. ಈ ಕೂಡಲೇ ಕೇಂದ್ರ ಸರ್ಕಾರ ಅಸಾಂವಿಧಾನಿಕವಾದ ಆ ಆದೇಶವನ್ನು ಕೈಬಿಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದು ಜಾತಿಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದಿದ್ದಾರೆ.

2005ರಲ್ಲಿ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು 11 ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವಂತೆ ಆದೇಶವನ್ನು ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳಿಸಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ನಂತರ ಮಾಯವತಿಯವರ ನೇತೃತ್ವದ ಬಿಎಸ್‍ಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ನಿಯಮವನ್ನು ರದ್ದು ಮಾಡಿ ಯಾವುದೇ ಜಾತಿಯನ್ನು ಪಟ್ಟಿಗೆ ಸೇರಿಸುವ ಮುನ್ನ ಅದರ ಕೋಟಾವನ್ನು ಏರಿಸಬೇಕೆಂದು ಆಗ್ರಹಿಸಿದ್ದರು.

ಇನ್ನು 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್‍ರವರು ಹೊಸ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಅದನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆ ಕೋರ್ಟ್‍ನ ವೀಕ್ಷಣೆಗಳ ಆಧಾರದಲ್ಲಿ ಈ ನೀತಿ ತರಲು ಮುಂದಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...