Homeಮುಖಪುಟಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಉತ್ತರ ಪ್ರದೇಶದ 17 ಹಿಂದುಳಿದ ಸಮುದಾಯಗಳನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರ ನಡೆಗೆ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಜೂನ್ 24ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರು ಕಶ್ಯಪ್, ರಾಜ್ಬರ್, ಧೀವಾರ್, ಬಿಂದ್, ಕುಮ್ಹಾರ್, ಕಹರ್, ಕೇವಾಥ್, ನಿಶಾದ್, ಭಾರ್, ಮಾಲ್ಹ, ಪ್ರಜಾಪತಿ, ಭಾತಮ್, ತುಹ್ರ, ಗೋಧಿಯ, ಮಾಂಜಿ ಮತ್ತು ಮಚುವ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಜ್ ಮತ್ತು ಕಮಿಷನರ್‍ಗಳಿಗೆ ಆದೇಶ ಹೊರಡಿಸಿದ್ದರು.

ಇದು ಮುಂಬರುವ 12 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಸೇರಿದಂತೆ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಟ್ಟುಕೊಂಡು ಯೋಗಿ ಆದಿತ್ಯನಾಥ್ ರವರು ಹೆಣೆದ ತಂತ್ರವಾಗಿತ್ತು.

ಈ ವಿಷಯವನ್ನು ಇಂದು ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಬಿಎಸ್‍ಪಿ ಪಕ್ಷದ ನಾಯಕರಾದ ಎಸ್.ಸಿ ಮಿಶ್ರಾರವರು ಚರ್ಚೆಗೆ ತಂದರು. ಆಗ ಇದು ಅಸಾಂವಿಧಾನಿಕವಾದುದು, ಕೇಂದ್ರ ಸರ್ಕಾರಕ್ಕೆ ಮಾತ್ರ ಆ ಅಧಿಕಾರವಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ವಿಚಾರದಲ್ಲಿ ಮುಂದುವರೆಯಬಯಸಿದರೆ ನಿಯಮಗಳ ಪ್ರಕಾರ ಅವರು ಮೊದಲು ಆ ಪ್ರಸ್ತಾಪವನ್ನು ಅವರು ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಬೇಕು. ಆನಂತರ ಅದನ್ನು ನಾವು ಪರಿಗಣಿಸಬೇಕೊ, ಬಿಡಬೇಕೋ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮುಂದುವರಿದು ಅವರು ಉತ್ತರ ಪ್ರದೇಶ ಸರ್ಕಾರ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಬೇಕು. ಒಂದು ಜಾತಿಯಿಂದ ಇನ್ನೊಂದು ಜಾತಿಗೆ ವರ್ಗಾವಣೆ ಮಾಡುವ ಹಕ್ಕಿರುವುದು ಸಂಸತ್ತಿಗೆ ಮಾತ್ರ ಎಂದು ರಾಜ್ಯಸಭೆಯ ನಾಯಕರೂ ಆಗಿರುವ ಗೆಹ್ಲೋಟ್ ಹೇಳಿದ್ದಾರೆ. ಈ ಹಿಂದೆ ಇಂತಹ ಹಲವು ಪ್ರಸ್ತಾಪಗಳು ಬಂದು ಬಹಳಷ್ಟನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭೆಯ ಅಧ್ಯಕ್ಷರಾದ ವೆಂಕಯ್ಯ ನಾಯ್ಡುರವರು ನೀತಿ ನಿಯಮಗಳನ್ನು ಅನುಸರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲಹೆ ನೀಡಿ ಎಂದಿದ್ದಾರೆ. ಇನ್ನು ಬಿಎಸ್‍ಪಿಯ ಮಿಶ್ರಾರವರು ಯೋಗಿ ಆದಿತ್ಯನಾಥ್‍ರವರ ಕ್ರಮವನ್ನು ವಿರೋಧಿಸಿ ಸಂವಿಧಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಅದರಂತೆ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬದಲಾವಣೆ ತರಲು ಸಂಸತ್ತಿಗೆ ಮಾತ್ರ ಅಧಿಕಾರವಿದೆ. ಅದು ಬಿಟ್ಟು ಭಾರತದ ರಾಷ್ಟ್ರಪತಿಗಳಿಗೂ ಸಹ ಆ ಪಟ್ಟಿಯಲ್ಲಿ ಬದಲಾವಣೆ ತರಲು ಅಧಿಕಾರವಿಲ್ಲದಿರುವಾಗ ಯೋಗಿ ಆದಿತ್ಯನಾಥ್‍ರವರ ಕ್ರಮ ಅಸಿಂಧು ಎಂದಿದ್ದಾರೆ.

ನಿಮ್ಮ ಪಕ್ಷ 17 ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಪ್ರಸ್ತಾಪಕ್ಕೆ ನಿಮ್ಮ ಪರವಾಗಿದ್ದರೂ ಕೂಡ ಅದಕ್ಕೆ ಇರುವ ನಿಯಮಾವಳಿಗಳನ್ನು ಪಾಲಿಸಬೇಕು. ಜೊತೆಗೆ ಪರಿಶಿಷ್ಟ ಜಾತಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಸಹ ಪಟ್ಟಿಗನುಗುಣವಾಗಿ ಏರಿಸಬೇಕು ಎಂದಿದ್ದಾರೆ.

ಸಂಸತ್ತಿನ ಅಧಿಕಾರವನ್ನು ಯಾವುದೇ ರಾಜ್ಯ ನಾಶ ಮಾಡಲು ಬಿಡಬಾರದು. ಈ ಕೂಡಲೇ ಕೇಂದ್ರ ಸರ್ಕಾರ ಅಸಾಂವಿಧಾನಿಕವಾದ ಆ ಆದೇಶವನ್ನು ಕೈಬಿಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದು ಜಾತಿಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದಿದ್ದಾರೆ.

2005ರಲ್ಲಿ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು 11 ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವಂತೆ ಆದೇಶವನ್ನು ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳಿಸಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ನಂತರ ಮಾಯವತಿಯವರ ನೇತೃತ್ವದ ಬಿಎಸ್‍ಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ನಿಯಮವನ್ನು ರದ್ದು ಮಾಡಿ ಯಾವುದೇ ಜಾತಿಯನ್ನು ಪಟ್ಟಿಗೆ ಸೇರಿಸುವ ಮುನ್ನ ಅದರ ಕೋಟಾವನ್ನು ಏರಿಸಬೇಕೆಂದು ಆಗ್ರಹಿಸಿದ್ದರು.

ಇನ್ನು 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್‍ರವರು ಹೊಸ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಅದನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆ ಕೋರ್ಟ್‍ನ ವೀಕ್ಷಣೆಗಳ ಆಧಾರದಲ್ಲಿ ಈ ನೀತಿ ತರಲು ಮುಂದಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...