Homeಮುಖಪುಟಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ 'ಡಾರ್ಕ್ ಪ್ಯಾಟರ್ನ್ಸ್' ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ ‘ಡಾರ್ಕ್ ಪ್ಯಾಟರ್ನ್ಸ್’ ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

- Advertisement -
- Advertisement -

ಗ್ರಾಹಕ ರಕ್ಷಣಾ ನಿಯಮಗಳನ್ನು ಅನುಸರಿಸಲು ಬೇಕಾಗಿ ಡಾರ್ಕ್ ಪ್ಯಾಟರ್ನ್‌ಗಳನ್ನು ವಿಶ್ಲೇಷಿಸಲು ಮತ್ತು ತೊಡೆದುಹಾಕಲು ಸ್ವಯಂ-ಆಡಿಟ್‌ಗಳನ್ನು ನಡೆಸುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಎಲ್ಲಾ ಇ-ಕಾಮರ್ಸ್ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಇ-ಕಾಮರ್ಸ್ ಸಂಬಂಧಪಟ್ಟವರ ಜೊತೆಗೆ ನಡೆದ ಸಭೆಯ ನಂತರ ಸಚಿವರು ಈ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ. ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ವರದಿಯಾದ ಡಾರ್ಕ್ ಪ್ಯಾಟರ್ನ್‌ಗಳ ಕುರಿತು ಗ್ರಾಹಕರ ದೂರುಗಳಲ್ಲಿ ತೀವ್ರ ಹೆಚ್ಚಳ ಕಂಡುಬಂದಿದ್ದು, ಹಾಗಾಗಿ ಸಚಿವರು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಇದನ್ನೂ ಓದಿ – ಡಾರ್ಕ್ ಪ್ಯಾಟರ್ನ್ಸ್ ಎಂಬ ಆಧುನಿಕ ಕಾಲದ ಆಧುನಿಕ ಶೋಷಣೆ!

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಬಳಸುವ ದಾರಿ ತಪ್ಪಿಸುವ ಅಭ್ಯಾಸಗಳನ್ನು ಪರಿಹರಿಸಲು ಹೆಚ್ಚು ಪರಿಣಾಮಕಾರಿ ತಂತ್ರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಈ ಸಭೆ ಹೊಂದಿದೆ. ಈ ಸಮಸ್ಯೆಗಳ ಬಗ್ಗೆ ಇ-ಕಾಮರ್ಸ್ ಕಂಪನಿಗಳಿಗೆ ಶಿಕ್ಷಣ ನೀಡಲು ಜಂಟಿ ಕಾರ್ಯ ಸಮೂಹದ ರಚನೆಯನ್ನು ಜೋಶಿ ಪ್ರಸ್ತಾಪಿಸಿದ್ದಾರೆ. 

“ಡಾರ್ಕ್ ಪ್ಯಾಟರ್ನ್” ಎಂದರೆ ಬಳಕೆದಾರರನ್ನು ದಾರಿತಪ್ಪಿಸುವ ಅಥವಾ ಅವರನ್ನು ಅನಪೇಕ್ಷಿತ ಆಯ್ಕೆಗಳನ್ನು ಮಾಡುವಂತೆ ಒತ್ತಾಯಿಸುವ ಬಳಕೆದಾರ ಇಂಟರ್ಫೇಸ್‌ಗಳಲ್ಲಿ (ವೆಬ್ ಪುಟಗಳಂತಹ) ಬಳಸಲಾಗುವ ವಂಚನೆ ಮಾಡುವ ವಿನ್ಯಾಸ ತಂತ್ರವಾಗಿದೆ. ಈ ಅಭ್ಯಾಸವು ಗ್ರಾಹಕರ ಸ್ವಾಯತ್ತತೆ, ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಒಟ್ಟಾರೆ ಆಯ್ಕೆಯನ್ನು ದುರ್ಬಲಗೊಳಿಸುತ್ತದೆ.

ಡಾರ್ಕ್ ಪ್ಯಾಟರ್ನ್‌ಗಳಿಗೆ ಕೆಲವು ಉದಾಹರಣೆಗಳೆಂದರೆ, ಗ್ರಾಹಕರು ವಹಿವಾಟುಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾಗಿಸುವುದು ಅಥವಾ ರದ್ದುಗೊಳಿಸಲು ಕಷ್ಟಕರವಾಗಿಸುವುದು, ಮುಗಿಯದ ಸ್ಕ್ರೋಲಿಂಗ್, ಆಟೋಪ್ಲೇ ವೀಡಿಯೊಗಳು ಅಥವಾ ನಿರಂತರ ನೋಟಿಫಿಕೇಷನ್‌ಗಳಂತಹ ವೈಶಿಷ್ಟ್ಯಗಳನ್ನು ಬಳಸುವುದು ಸೇರಿವೆ. ಸರ್ಕಾರವು 13 ನಿರ್ದಿಷ್ಟ ಡಾರ್ಕ್ ಪ್ಯಾಟರ್ನ್‌ಗಳನ್ನು ಗುರುತಿಸಿದೆ.

ಮೋಸಗೊಳಿಸುವ ಆನ್‌ಲೈನ್ ಅಭ್ಯಾಸಗಳನ್ನು ನಿರ್ಮೂಲನೆ ಮಾಡುವ ಕುರಿತು ಮಾತನಾಡಲು ಗ್ರಾಹಕ ವ್ಯವಹಾರಗಳ ಇಲಾಖೆ ಬುಧವಾರ ಪ್ರಮುಖ ಇ-ಕಾಮರ್ಸ್ ಕಂಪನಿಗಳಾದ ಅಮೆಜಾನ್, ಸ್ವಿಗ್ಗಿ, ಫ್ಲಿಪ್‌ಕಾರ್ಟ್, ಜೊಮಾಟೊ, ಮೇಕ್‌ಮೈಟ್ರಿಪ್, ಮೆಟಾ, ವಾಟ್ಸಾಪ್, ಓಲಾ ಮತ್ತು ಆಪಲ್ ಸೇರಿದಂತೆ ಎಲ್ಲಾ ಪಾಲುದಾರರ ಪ್ರತಿನಿಧಿಗಳ ಸಭೆಯನ್ನು ಕರೆದಿದೆ.

ಡಾರ್ಕ್ ಪ್ಯಾಟರ್ನ್‌ಗಳನ್ನು ಪರಿಹರಿಸಲು ಸರ್ಕಾರ ಈಗಾಗಲೇ ವಿವರವಾದ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಿದೆ. ಎಲ್ಲಾ ಕಂಪನಿಗಳು ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು ಮತ್ತು ಅವುಗಳನ್ನು ತಮ್ಮ ಆಂತರಿಕ ಆಡಳಿತ ಮತ್ತು ಗ್ರಾಹಕ ರಕ್ಷಣಾ ಕಾರ್ಯವಿಧಾನಗಳಲ್ಲಿ ಸಂಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೆ, ಟ್ಯಾಕ್ಸಿ ಮತ್ತು ಬೈಕ್ ಸೇವೆಯ ಕಂಪನಿಗಳಾದ ಉಬರ್ ಮತ್ತು ರಾಪಿಡೊಗಳು, ವೇಗವಾಗಿ ಸೇವೆ ಬೇಕೆಂದರೆ ಮುಂಚಿತವಾಗಿ ಟಿಪ್ ಪಾವತಿಸಲು ಬಳಕೆದಾರರ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ನೀಡಿತ್ತು.

ಇಂತಹ ಅಭ್ಯಾಸಗಳನ್ನು “ಅನ್ಯಾಯ ವ್ಯಾಪಾರ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದನ್ನು ನಿಲ್ಲಿಸಬೇಕು ಎಂದು ಜೋಶಿ ಹೇಳಿದ್ದರು. ಟಿಪ್ಪಿಂಗ್ ಐಚ್ಛಿಕವಾಗಿರಬೇಕು, ಗ್ರಾಹಕರು ತಮ್ಮ ಸೇವಾ ಅನುಭವದ ಆಧಾರದ ಮೇಲೆ ಈ ಮೊತ್ತವನ್ನು ನಿರ್ಧರಿಸುತ್ತಾರೆ ಎಂದು ಅವರು ಒತ್ತಿ ಹೇಳಿದ್ದರು.

ಎಡ್‌ಟೆಕ್, ಟ್ರಾವೆಲ್, ಏರ್‌ಲೈನ್ಸ್, ಇಕಾಮರ್ಸ್, ಕ್ವಿಕ್ ಕಾಮರ್ಸ್, ಆನ್‌ಲೈನ್ ಬ್ಯಾಂಕಿಂಗ್ ಮತ್ತು ಪಾವತಿಗಳು, ಟ್ಯಾಕ್ಸಿ ಅಪ್ಲಿಕೇಶನ್‌ಗಳು ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅತಿ ಹೆಚ್ಚು ಡಾರ್ಕ್ ಪ್ಯಾಟರ್ನ್‌ಗಳನ್ನು ಅಭ್ಯಾಸ ಮಾಡಿಕೊಂಡಿವೆ ಎಂದು ಗ್ರಾಹಕರ ಜಾಗೃತಿ ಮೂಡಿಸುವ ಲೋಕಲ್‌ಸರ್ಕಲ್ಸ್ ಹೇಳಿದೆ. ಈ ವೇಳೆ 392 ಜಿಲ್ಲೆಗಳಲ್ಲಿ ಆನ್‌ಲೈನ್ ಸಮೀಕ್ಷೆ ನಡೆಸಿ 2.30 ಲಕ್ಷ ಗ್ರಾಹಕರೊಂದಿಗೆ ಲೋಕಲ್‌ಸರ್ಕಲ್ಸ್‌ ಸಮಾಲೋಚನೆ ನಡೆಸಿತ್ತು.  ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...