Homeಮುಖಪುಟಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ 'ಡಾರ್ಕ್ ಪ್ಯಾಟರ್ನ್ಸ್' ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ ‘ಡಾರ್ಕ್ ಪ್ಯಾಟರ್ನ್ಸ್’ ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

- Advertisement -
- Advertisement -

ಗ್ರಾಹಕ ರಕ್ಷಣಾ ನಿಯಮಗಳನ್ನು ಅನುಸರಿಸಲು ಬೇಕಾಗಿ ಡಾರ್ಕ್ ಪ್ಯಾಟರ್ನ್‌ಗಳನ್ನು ವಿಶ್ಲೇಷಿಸಲು ಮತ್ತು ತೊಡೆದುಹಾಕಲು ಸ್ವಯಂ-ಆಡಿಟ್‌ಗಳನ್ನು ನಡೆಸುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಎಲ್ಲಾ ಇ-ಕಾಮರ್ಸ್ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಇ-ಕಾಮರ್ಸ್ ಸಂಬಂಧಪಟ್ಟವರ ಜೊತೆಗೆ ನಡೆದ ಸಭೆಯ ನಂತರ ಸಚಿವರು ಈ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ. ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ವರದಿಯಾದ ಡಾರ್ಕ್ ಪ್ಯಾಟರ್ನ್‌ಗಳ ಕುರಿತು ಗ್ರಾಹಕರ ದೂರುಗಳಲ್ಲಿ ತೀವ್ರ ಹೆಚ್ಚಳ ಕಂಡುಬಂದಿದ್ದು, ಹಾಗಾಗಿ ಸಚಿವರು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಇದನ್ನೂ ಓದಿ – ಡಾರ್ಕ್ ಪ್ಯಾಟರ್ನ್ಸ್ ಎಂಬ ಆಧುನಿಕ ಕಾಲದ ಆಧುನಿಕ ಶೋಷಣೆ!

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಬಳಸುವ ದಾರಿ ತಪ್ಪಿಸುವ ಅಭ್ಯಾಸಗಳನ್ನು ಪರಿಹರಿಸಲು ಹೆಚ್ಚು ಪರಿಣಾಮಕಾರಿ ತಂತ್ರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಈ ಸಭೆ ಹೊಂದಿದೆ. ಈ ಸಮಸ್ಯೆಗಳ ಬಗ್ಗೆ ಇ-ಕಾಮರ್ಸ್ ಕಂಪನಿಗಳಿಗೆ ಶಿಕ್ಷಣ ನೀಡಲು ಜಂಟಿ ಕಾರ್ಯ ಸಮೂಹದ ರಚನೆಯನ್ನು ಜೋಶಿ ಪ್ರಸ್ತಾಪಿಸಿದ್ದಾರೆ. 

“ಡಾರ್ಕ್ ಪ್ಯಾಟರ್ನ್” ಎಂದರೆ ಬಳಕೆದಾರರನ್ನು ದಾರಿತಪ್ಪಿಸುವ ಅಥವಾ ಅವರನ್ನು ಅನಪೇಕ್ಷಿತ ಆಯ್ಕೆಗಳನ್ನು ಮಾಡುವಂತೆ ಒತ್ತಾಯಿಸುವ ಬಳಕೆದಾರ ಇಂಟರ್ಫೇಸ್‌ಗಳಲ್ಲಿ (ವೆಬ್ ಪುಟಗಳಂತಹ) ಬಳಸಲಾಗುವ ವಂಚನೆ ಮಾಡುವ ವಿನ್ಯಾಸ ತಂತ್ರವಾಗಿದೆ. ಈ ಅಭ್ಯಾಸವು ಗ್ರಾಹಕರ ಸ್ವಾಯತ್ತತೆ, ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಒಟ್ಟಾರೆ ಆಯ್ಕೆಯನ್ನು ದುರ್ಬಲಗೊಳಿಸುತ್ತದೆ.

ಡಾರ್ಕ್ ಪ್ಯಾಟರ್ನ್‌ಗಳಿಗೆ ಕೆಲವು ಉದಾಹರಣೆಗಳೆಂದರೆ, ಗ್ರಾಹಕರು ವಹಿವಾಟುಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾಗಿಸುವುದು ಅಥವಾ ರದ್ದುಗೊಳಿಸಲು ಕಷ್ಟಕರವಾಗಿಸುವುದು, ಮುಗಿಯದ ಸ್ಕ್ರೋಲಿಂಗ್, ಆಟೋಪ್ಲೇ ವೀಡಿಯೊಗಳು ಅಥವಾ ನಿರಂತರ ನೋಟಿಫಿಕೇಷನ್‌ಗಳಂತಹ ವೈಶಿಷ್ಟ್ಯಗಳನ್ನು ಬಳಸುವುದು ಸೇರಿವೆ. ಸರ್ಕಾರವು 13 ನಿರ್ದಿಷ್ಟ ಡಾರ್ಕ್ ಪ್ಯಾಟರ್ನ್‌ಗಳನ್ನು ಗುರುತಿಸಿದೆ.

ಮೋಸಗೊಳಿಸುವ ಆನ್‌ಲೈನ್ ಅಭ್ಯಾಸಗಳನ್ನು ನಿರ್ಮೂಲನೆ ಮಾಡುವ ಕುರಿತು ಮಾತನಾಡಲು ಗ್ರಾಹಕ ವ್ಯವಹಾರಗಳ ಇಲಾಖೆ ಬುಧವಾರ ಪ್ರಮುಖ ಇ-ಕಾಮರ್ಸ್ ಕಂಪನಿಗಳಾದ ಅಮೆಜಾನ್, ಸ್ವಿಗ್ಗಿ, ಫ್ಲಿಪ್‌ಕಾರ್ಟ್, ಜೊಮಾಟೊ, ಮೇಕ್‌ಮೈಟ್ರಿಪ್, ಮೆಟಾ, ವಾಟ್ಸಾಪ್, ಓಲಾ ಮತ್ತು ಆಪಲ್ ಸೇರಿದಂತೆ ಎಲ್ಲಾ ಪಾಲುದಾರರ ಪ್ರತಿನಿಧಿಗಳ ಸಭೆಯನ್ನು ಕರೆದಿದೆ.

ಡಾರ್ಕ್ ಪ್ಯಾಟರ್ನ್‌ಗಳನ್ನು ಪರಿಹರಿಸಲು ಸರ್ಕಾರ ಈಗಾಗಲೇ ವಿವರವಾದ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಿದೆ. ಎಲ್ಲಾ ಕಂಪನಿಗಳು ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು ಮತ್ತು ಅವುಗಳನ್ನು ತಮ್ಮ ಆಂತರಿಕ ಆಡಳಿತ ಮತ್ತು ಗ್ರಾಹಕ ರಕ್ಷಣಾ ಕಾರ್ಯವಿಧಾನಗಳಲ್ಲಿ ಸಂಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೆ, ಟ್ಯಾಕ್ಸಿ ಮತ್ತು ಬೈಕ್ ಸೇವೆಯ ಕಂಪನಿಗಳಾದ ಉಬರ್ ಮತ್ತು ರಾಪಿಡೊಗಳು, ವೇಗವಾಗಿ ಸೇವೆ ಬೇಕೆಂದರೆ ಮುಂಚಿತವಾಗಿ ಟಿಪ್ ಪಾವತಿಸಲು ಬಳಕೆದಾರರ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ನೀಡಿತ್ತು.

ಇಂತಹ ಅಭ್ಯಾಸಗಳನ್ನು “ಅನ್ಯಾಯ ವ್ಯಾಪಾರ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದನ್ನು ನಿಲ್ಲಿಸಬೇಕು ಎಂದು ಜೋಶಿ ಹೇಳಿದ್ದರು. ಟಿಪ್ಪಿಂಗ್ ಐಚ್ಛಿಕವಾಗಿರಬೇಕು, ಗ್ರಾಹಕರು ತಮ್ಮ ಸೇವಾ ಅನುಭವದ ಆಧಾರದ ಮೇಲೆ ಈ ಮೊತ್ತವನ್ನು ನಿರ್ಧರಿಸುತ್ತಾರೆ ಎಂದು ಅವರು ಒತ್ತಿ ಹೇಳಿದ್ದರು.

ಎಡ್‌ಟೆಕ್, ಟ್ರಾವೆಲ್, ಏರ್‌ಲೈನ್ಸ್, ಇಕಾಮರ್ಸ್, ಕ್ವಿಕ್ ಕಾಮರ್ಸ್, ಆನ್‌ಲೈನ್ ಬ್ಯಾಂಕಿಂಗ್ ಮತ್ತು ಪಾವತಿಗಳು, ಟ್ಯಾಕ್ಸಿ ಅಪ್ಲಿಕೇಶನ್‌ಗಳು ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅತಿ ಹೆಚ್ಚು ಡಾರ್ಕ್ ಪ್ಯಾಟರ್ನ್‌ಗಳನ್ನು ಅಭ್ಯಾಸ ಮಾಡಿಕೊಂಡಿವೆ ಎಂದು ಗ್ರಾಹಕರ ಜಾಗೃತಿ ಮೂಡಿಸುವ ಲೋಕಲ್‌ಸರ್ಕಲ್ಸ್ ಹೇಳಿದೆ. ಈ ವೇಳೆ 392 ಜಿಲ್ಲೆಗಳಲ್ಲಿ ಆನ್‌ಲೈನ್ ಸಮೀಕ್ಷೆ ನಡೆಸಿ 2.30 ಲಕ್ಷ ಗ್ರಾಹಕರೊಂದಿಗೆ ಲೋಕಲ್‌ಸರ್ಕಲ್ಸ್‌ ಸಮಾಲೋಚನೆ ನಡೆಸಿತ್ತು.  ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...