Homeಮುಖಪುಟಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ 'ಡಾರ್ಕ್ ಪ್ಯಾಟರ್ನ್ಸ್' ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ ‘ಡಾರ್ಕ್ ಪ್ಯಾಟರ್ನ್ಸ್’ ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

- Advertisement -
- Advertisement -

ಗ್ರಾಹಕ ರಕ್ಷಣಾ ನಿಯಮಗಳನ್ನು ಅನುಸರಿಸಲು ಬೇಕಾಗಿ ಡಾರ್ಕ್ ಪ್ಯಾಟರ್ನ್‌ಗಳನ್ನು ವಿಶ್ಲೇಷಿಸಲು ಮತ್ತು ತೊಡೆದುಹಾಕಲು ಸ್ವಯಂ-ಆಡಿಟ್‌ಗಳನ್ನು ನಡೆಸುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಎಲ್ಲಾ ಇ-ಕಾಮರ್ಸ್ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಇ-ಕಾಮರ್ಸ್ ಸಂಬಂಧಪಟ್ಟವರ ಜೊತೆಗೆ ನಡೆದ ಸಭೆಯ ನಂತರ ಸಚಿವರು ಈ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ. ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ವರದಿಯಾದ ಡಾರ್ಕ್ ಪ್ಯಾಟರ್ನ್‌ಗಳ ಕುರಿತು ಗ್ರಾಹಕರ ದೂರುಗಳಲ್ಲಿ ತೀವ್ರ ಹೆಚ್ಚಳ ಕಂಡುಬಂದಿದ್ದು, ಹಾಗಾಗಿ ಸಚಿವರು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಇದನ್ನೂ ಓದಿ – ಡಾರ್ಕ್ ಪ್ಯಾಟರ್ನ್ಸ್ ಎಂಬ ಆಧುನಿಕ ಕಾಲದ ಆಧುನಿಕ ಶೋಷಣೆ!

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಬಳಸುವ ದಾರಿ ತಪ್ಪಿಸುವ ಅಭ್ಯಾಸಗಳನ್ನು ಪರಿಹರಿಸಲು ಹೆಚ್ಚು ಪರಿಣಾಮಕಾರಿ ತಂತ್ರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಈ ಸಭೆ ಹೊಂದಿದೆ. ಈ ಸಮಸ್ಯೆಗಳ ಬಗ್ಗೆ ಇ-ಕಾಮರ್ಸ್ ಕಂಪನಿಗಳಿಗೆ ಶಿಕ್ಷಣ ನೀಡಲು ಜಂಟಿ ಕಾರ್ಯ ಸಮೂಹದ ರಚನೆಯನ್ನು ಜೋಶಿ ಪ್ರಸ್ತಾಪಿಸಿದ್ದಾರೆ. 

“ಡಾರ್ಕ್ ಪ್ಯಾಟರ್ನ್” ಎಂದರೆ ಬಳಕೆದಾರರನ್ನು ದಾರಿತಪ್ಪಿಸುವ ಅಥವಾ ಅವರನ್ನು ಅನಪೇಕ್ಷಿತ ಆಯ್ಕೆಗಳನ್ನು ಮಾಡುವಂತೆ ಒತ್ತಾಯಿಸುವ ಬಳಕೆದಾರ ಇಂಟರ್ಫೇಸ್‌ಗಳಲ್ಲಿ (ವೆಬ್ ಪುಟಗಳಂತಹ) ಬಳಸಲಾಗುವ ವಂಚನೆ ಮಾಡುವ ವಿನ್ಯಾಸ ತಂತ್ರವಾಗಿದೆ. ಈ ಅಭ್ಯಾಸವು ಗ್ರಾಹಕರ ಸ್ವಾಯತ್ತತೆ, ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಒಟ್ಟಾರೆ ಆಯ್ಕೆಯನ್ನು ದುರ್ಬಲಗೊಳಿಸುತ್ತದೆ.

ಡಾರ್ಕ್ ಪ್ಯಾಟರ್ನ್‌ಗಳಿಗೆ ಕೆಲವು ಉದಾಹರಣೆಗಳೆಂದರೆ, ಗ್ರಾಹಕರು ವಹಿವಾಟುಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾಗಿಸುವುದು ಅಥವಾ ರದ್ದುಗೊಳಿಸಲು ಕಷ್ಟಕರವಾಗಿಸುವುದು, ಮುಗಿಯದ ಸ್ಕ್ರೋಲಿಂಗ್, ಆಟೋಪ್ಲೇ ವೀಡಿಯೊಗಳು ಅಥವಾ ನಿರಂತರ ನೋಟಿಫಿಕೇಷನ್‌ಗಳಂತಹ ವೈಶಿಷ್ಟ್ಯಗಳನ್ನು ಬಳಸುವುದು ಸೇರಿವೆ. ಸರ್ಕಾರವು 13 ನಿರ್ದಿಷ್ಟ ಡಾರ್ಕ್ ಪ್ಯಾಟರ್ನ್‌ಗಳನ್ನು ಗುರುತಿಸಿದೆ.

ಮೋಸಗೊಳಿಸುವ ಆನ್‌ಲೈನ್ ಅಭ್ಯಾಸಗಳನ್ನು ನಿರ್ಮೂಲನೆ ಮಾಡುವ ಕುರಿತು ಮಾತನಾಡಲು ಗ್ರಾಹಕ ವ್ಯವಹಾರಗಳ ಇಲಾಖೆ ಬುಧವಾರ ಪ್ರಮುಖ ಇ-ಕಾಮರ್ಸ್ ಕಂಪನಿಗಳಾದ ಅಮೆಜಾನ್, ಸ್ವಿಗ್ಗಿ, ಫ್ಲಿಪ್‌ಕಾರ್ಟ್, ಜೊಮಾಟೊ, ಮೇಕ್‌ಮೈಟ್ರಿಪ್, ಮೆಟಾ, ವಾಟ್ಸಾಪ್, ಓಲಾ ಮತ್ತು ಆಪಲ್ ಸೇರಿದಂತೆ ಎಲ್ಲಾ ಪಾಲುದಾರರ ಪ್ರತಿನಿಧಿಗಳ ಸಭೆಯನ್ನು ಕರೆದಿದೆ.

ಡಾರ್ಕ್ ಪ್ಯಾಟರ್ನ್‌ಗಳನ್ನು ಪರಿಹರಿಸಲು ಸರ್ಕಾರ ಈಗಾಗಲೇ ವಿವರವಾದ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಿದೆ. ಎಲ್ಲಾ ಕಂಪನಿಗಳು ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು ಮತ್ತು ಅವುಗಳನ್ನು ತಮ್ಮ ಆಂತರಿಕ ಆಡಳಿತ ಮತ್ತು ಗ್ರಾಹಕ ರಕ್ಷಣಾ ಕಾರ್ಯವಿಧಾನಗಳಲ್ಲಿ ಸಂಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೆ, ಟ್ಯಾಕ್ಸಿ ಮತ್ತು ಬೈಕ್ ಸೇವೆಯ ಕಂಪನಿಗಳಾದ ಉಬರ್ ಮತ್ತು ರಾಪಿಡೊಗಳು, ವೇಗವಾಗಿ ಸೇವೆ ಬೇಕೆಂದರೆ ಮುಂಚಿತವಾಗಿ ಟಿಪ್ ಪಾವತಿಸಲು ಬಳಕೆದಾರರ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ನೀಡಿತ್ತು.

ಇಂತಹ ಅಭ್ಯಾಸಗಳನ್ನು “ಅನ್ಯಾಯ ವ್ಯಾಪಾರ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದನ್ನು ನಿಲ್ಲಿಸಬೇಕು ಎಂದು ಜೋಶಿ ಹೇಳಿದ್ದರು. ಟಿಪ್ಪಿಂಗ್ ಐಚ್ಛಿಕವಾಗಿರಬೇಕು, ಗ್ರಾಹಕರು ತಮ್ಮ ಸೇವಾ ಅನುಭವದ ಆಧಾರದ ಮೇಲೆ ಈ ಮೊತ್ತವನ್ನು ನಿರ್ಧರಿಸುತ್ತಾರೆ ಎಂದು ಅವರು ಒತ್ತಿ ಹೇಳಿದ್ದರು.

ಎಡ್‌ಟೆಕ್, ಟ್ರಾವೆಲ್, ಏರ್‌ಲೈನ್ಸ್, ಇಕಾಮರ್ಸ್, ಕ್ವಿಕ್ ಕಾಮರ್ಸ್, ಆನ್‌ಲೈನ್ ಬ್ಯಾಂಕಿಂಗ್ ಮತ್ತು ಪಾವತಿಗಳು, ಟ್ಯಾಕ್ಸಿ ಅಪ್ಲಿಕೇಶನ್‌ಗಳು ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅತಿ ಹೆಚ್ಚು ಡಾರ್ಕ್ ಪ್ಯಾಟರ್ನ್‌ಗಳನ್ನು ಅಭ್ಯಾಸ ಮಾಡಿಕೊಂಡಿವೆ ಎಂದು ಗ್ರಾಹಕರ ಜಾಗೃತಿ ಮೂಡಿಸುವ ಲೋಕಲ್‌ಸರ್ಕಲ್ಸ್ ಹೇಳಿದೆ. ಈ ವೇಳೆ 392 ಜಿಲ್ಲೆಗಳಲ್ಲಿ ಆನ್‌ಲೈನ್ ಸಮೀಕ್ಷೆ ನಡೆಸಿ 2.30 ಲಕ್ಷ ಗ್ರಾಹಕರೊಂದಿಗೆ ಲೋಕಲ್‌ಸರ್ಕಲ್ಸ್‌ ಸಮಾಲೋಚನೆ ನಡೆಸಿತ್ತು.  ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...