Homeಮುಖಪುಟಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

ವಿವಾದಾತ್ಮಕ ಕಾಯ್ದೆಯಾದ 2019 ರ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಇನ್ನೂ ರೂಪಿಸಲಾಗಿಲ್ಲ

- Advertisement -
- Advertisement -

ಪೌರತ್ವ ಕಾಯ್ದೆ-1955 ಮತ್ತು ಪೌರತ್ವ ನಿಯಮಗಳು-2009 ರ ಅಡಿಯಲ್ಲಿ ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಮುಂತಾದ ದೇಶಗಳಿಂದ ಬಂದು ಗುಜರಾತ್‌, ರಾಜಸ್ಥಾನ, ಛತ್ತೀಸಗಡ, ಹರಿಯಾಣ ಮತ್ತು ಪಂಜಾಬ್‌ನ 13 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಹಿಂದೂ, ಸಿಖ್‌, ಜೈನ, ಬೌದ್ಧರು ಸೇರಿದಂತೆ ಮುಸ್ಲಿಮೇತರ ಧರ್ಮೀಯರಿಗೆ ಭಾರತದ ಪೌರತ್ವಕ್ಕಾಗಿ ಕೇಂದ್ರ ಸರ್ಕಾರವು ಶುಕ್ರವಾರ ಅರ್ಜಿ ಆಹ್ವಾನಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2019 ರ ಅಡಿಯಲ್ಲಿ ಕೇಂದ್ರವು ಇನ್ನೂ ನಿಯಮಗಳನ್ನು ರೂಪಿಸದ ಕಾರಣ, ಪೌರತ್ವದ ಅರ್ಜಿಗಳನ್ನು ಸ್ವೀಕರಿಸಲು, ಪರಿಶೀಲಿಸಲು ಮತ್ತು ಅನುಮೋದಿಸಲು ಗುಜರಾತ್, ಚತ್ತೀಸ್‌ಗಡ, ರಾಜಸ್ಥಾನ, ಹರಿಯಾಣ ಮತ್ತು ಪಂಜಾಬ್‌ನ 13 ಜಿಲ್ಲೆಗಳ ಅಧಿಕಾರಿಗಳಿಗೆ ಅಸ್ತಿತ್ವದಲ್ಲಿರುವ ನಿಯಮಗಳ ಅಡಿಯಲ್ಲಿ ಅಧಿಕಾರವನ್ನು ನೀಡುವ ಗೆಜೆಟ್ ಅಧಿಸೂಚನೆಯನ್ನು ಕೇಂದ್ರವು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

ಅಧಿಸೂಚನೆಯು ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾ ರ್ಸಿಗಳು ಮತ್ತು ಕ್ರಿಶ್ಚಿಯನ್ನರನ್ನು ಈ ಅರ್ಜಿಗೆ ಒಳಗೊಳ್ಳುವ ಸಮುದಾಯಗಳೆಂದು ಪಟ್ಟಿ ಮಾಡುತ್ತದೆ ಮತ್ತು ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾಗುತ್ತದೆ ಎಂದು ಹೇಳುತ್ತದೆ.

ಈ ಆದೇಶವನ್ನು ಪೌರತ್ವ ಕಾಯ್ದೆ, 1955 ಮತ್ತು ಪೌರತ್ವ ನಿಯಮಗಳು, 2009 ರ ಅಡಿಯಲ್ಲಿ ನೀಡಲಾಗಿದೆಯೆ ಹೊರತು ಪೌರತ್ವದ ಅಡಿಯಲ್ಲಿ ಅಲ್ಲ.

2019 ರ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಇನ್ನೂ ರೂಪಿಸಲಾಗಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ. ಹಲವಾರು ರಾಜ್ಯಗಳ ಇತರ ಜಿಲ್ಲೆಗಳಿಗೂ ಇದೇ ರೀತಿಯ ಅಧಿಸೂಚನೆಯನ್ನು 2018 ರಲ್ಲಿ ನೀಡಲಾಗಿದೆ.

ಇದನ್ನೂ ಓದಿ: ಕೊರೊನಾ ಇಲ್ಲದಿರುತ್ತಿದ್ದರೆ ಇಷ್ಟೊತ್ತಿಗಾಗಲೇ BJP ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು: ಕಾಂಗ್ರೆಸ್‌

ಅಧಿಸೂಚನೆಯಲ್ಲಿ ಪಟ್ಟಿ ಮಾಡಲಾದ ಜಿಲ್ಲೆಗಳು ಇಂತಿವೆ: ಮೊರ್ಬಿ, ರಾಜ್‌ಕೋಟ್, ಪಠಾನ್ ಮತ್ತು ವಡೋದರಾ (ಗುಜರಾತ್); ದುರ್ಗ್ ಮತ್ತು ಬಲೋದಬಜಾರ್ (ಚತ್ತೀಸ್‌ಗಡ್‌); ಜಲೋರ್, ಉದಯಪುರ, ಪಾಲಿ, ಬಾರ್ಮರ್ ಮತ್ತು ಸಿರೋಹಿ (ರಾಜಸ್ಥಾನ); ಫರಿದಾಬಾದ್ (ಹರಿಯಾಣ); ಮತ್ತು, ಜಲಂಧರ್ (ಪಂಜಾಬ್).

ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ದೆಹಲಿಯಂತಹ ರಾಜ್ಯಗಳ ಕೆಲವು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮತ್ತು ಗೃಹ ಕಾರ್ಯದರ್ಶಿಗಳಿಗೆ 2018 ರಲ್ಲಿ ಸರ್ಕಾರ ಇದೇ ರೀತಿಯ ಅಧಿಕಾರವನ್ನು ನೀಡಿತ್ತು.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಜೈನ, ಸಿಖ್, ಪಾರ್ಸಿ, ಕ್ರಿಶ್ಚಿಯನ್ ಮತ್ತು ಬೌದ್ಧ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರಿಗೆ ಪೌರತ್ವ ನೀಡುವ ಪೌರತ್ವ ಕಾಯ್ದೆಯನ್ನು 2019 ರ ಡಿಸೆಂಬರ್‌ನಲ್ಲಿ ಸಂಸತ್ತು ತಿದ್ದುಪಡಿ ಮಾಡಿತು. ಆದರೆ ಈ ತಿದ್ದುಪಡಿಯಲ್ಲಿ ಮುಸ್ಲಿಮರಿಗೆ ಪೌರತ್ವ ಪಡೆಯಲು ಅವಕಾಶ ಇರಲಿಲ್ಲ. ಪ್ರತಿಪಕ್ಷಗಳು ಈ ಕಾನೂನು ಸಂವಿಧಾನ ವಿರೋಧಿಯಾಗಿದ್ದು, ಧಾರ್ಮಿಕ ನಂಬಿಕೆಯ ಮೇಲೆ ತಾರತಮ್ಯ ಮಾಡುತ್ತದೆ ಎಂಬ ತೀವ್ರ ಟೀಕೆಗಳ ಮಧ್ಯೆಯು ಅಂಗೀಕರಿಸಲಾಯಿತು. ಈ ಕಾನೂನಿನ ವಿರುದ್ದ ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆ ಕೂಡಾ ನಡೆದಿದ್ದು ವಿಶ್ವದ ಗಮನ ಸೆಳೆದಿತ್ತು.

ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...