Homeಮುಖಪುಟದೇಶಬಿಟ್ಟು ಓಡಿಹೋದ 'ಮೋದಿ'ಗಳನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ನಡ್ಡಾಗೆ ಕಾಂಗ್ರೆಸ್ ತಿರುಗೇಟು

ದೇಶಬಿಟ್ಟು ಓಡಿಹೋದ ‘ಮೋದಿ’ಗಳನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ನಡ್ಡಾಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ರಾಹುಲ್ ಗಾಂಧಿ ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸಿದ್ದಾರೆ ಎಂಬ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರ ಆರೋಪವನ್ನು ತಳ್ಳಿ ಹಾಕಿರುವ ಕಾಂಗ್ರೆಸ್, ”ದೇಶ ಬಿಟ್ಟು ಓಡಿಹೋದ ನೀರವ್ ಮೋದಿ ಮತ್ತು ಲಲಿತ್ ಮೋದಿಯಂತಹವರನ್ನು ಆಡಳಿತ ಪಕ್ಷವು ರಕ್ಷಿಸುತ್ತಿದೆ ಮತ್ತು ಸರ್ಕಾರ ”ಜಾತಿ ರಾಜಕೀಯ”ದಲ್ಲಿ ತೊಡಗಿದೆ ಎಂದು ಆರೋಪಿಸಿದೆ.

“ಮೋದಿ ಉಪನಾಮ” ಟೀಕೆಗಳ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯವರಿಗೆ ಶಿಕ್ಷೆ ಪ್ರಕಟವಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಹೋರಾಟ ತೀವ್ರತೆ ಪಡೆದುಕೊಂಡಿದೆ.

ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಜ, ”ಮೋದಿ ಸರ್ಕಾರ ಜಂಟಿ ಸಂಸದೀಯ ಸಮಿತಿ ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನೀರವ್ ಮೋದಿ, ಲಲಿತ್ ಮೋದಿ, ಮೆಹುಲ್ ಚೋಕ್ಸಿ- PNB ಮತ್ತು ಸಾರ್ವಜನಿಕ ಹಣ ದೋಚಿ ಓಡಿಹೋದರು! ಓಬಿಸಿ ವರ್ಗದವರು ಓಡಿ ಹೋಗಲಿಲ್ಲ, ಆಗ ಅವರಿಗೆ ಹೇಗೆ ಅವಮಾನವಾಯಿತು?, ನಿಮ್ಮ ”ಬೆಸ್ಟ್ ಫ್ರೆಂಡ್” SBI/LIC ಗೆ ನಷ್ಟವನ್ನುಂಟು ಮಾಡಿದ್ದಾನೆ! ಒಂದು “ಕಳ್ಳತನ”ದಲ್ಲಿ ಸಹಕಾರ. ಮತ್ತೆ ಜಾತಿ ರಾಜಕಾರಣದ ಬಳಕೆ! ನಾಚಿಕೆಗೇಡು!!” ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಸಂವಾದ ನಡೆಸಿದ ಕಾಂಗ್ರೆಸ್ ಅಧ್ಯಕ್ಷರು, ”ಜನರ ಹಣದಿಂದ ಓಡಿಹೋದವರು ಯಾರು ಎಂಬುದಕ್ಕೆ ನಮ್ಮ ಪಕ್ಷ ಉತ್ತರ ಹುಡುಕುತ್ತಿದೆ. ಆದರೆ ಬಿಜೆಪಿ ಈ ಮುಖ್ಯ ವಿಷಯದಿಂದ ಗಮನವನ್ನು ಸೆಳೆಯಲು ಪ್ರಯತ್ನಿಸುತ್ತಿದೆ” ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

”ಅವರು ಹಿಂದುಳಿದ ವರ್ಗಗಳಿಗೆ ಅವಮಾನ ಮಾಡುವ ಮಾತುಗಳನ್ನಾಡುತ್ತಿದ್ದಾರೆ. ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಅಲ್ಪಸಂಖ್ಯಾತರ ಪರವಾಗಿ ಕಾಂಗ್ರೆಸ್ ಯಾವಾಗಲೂ ನಿಂತಿದೆ ಮತ್ತು ಹೋರಾಟ ಮಾಡಿದೆ. ಮನುವನ್ನು ನಂಬುವ ಈ ಜನರು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಾರೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ನಡ್ಡಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರು ಸತ್ಯಗಳನ್ನು ತಿರುಚುತ್ತಿದ್ದಾರೆ ಮತ್ತು “ಮಾನನಷ್ಟ ರಾಜಕೀಯ” ದಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.

”ಜಾತಿಯ ಹೆಸರಿನಲ್ಲಿ ಅವರು ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಸತ್ಯ ಹೊರಬರಬೇಕಿತ್ತು ಮತ್ತು ಈಗ ಅದು ಹೊರಬಂದಿದೆ. ನಡ್ಡಾ ಜೀ, ನಿಮ್ಮ ಪ್ರಾಮಾಣಿಕತೆಗೆ ಧನ್ಯವಾದಗಳು. ಈಗ ದಯವಿಟ್ಟು ಅದಾನಿಯವರ ಮೇಲೂ ಸ್ವಲ್ಪ ಪ್ರಾಮಾಣಿಕತೆಯನ್ನು ತೋರಿಸಿ” ಎಂದು ಜೈರಾಮ್ ರಮೇಶ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಗುಜರಾತ್ ನ್ಯಾಯಾಲಯವನ್ನು ಕಾಂಗ್ರೆಸ್ ಪ್ರಶ್ನಿಸಿದ್ದಕ್ಕೆ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಭೂಪೇಂದರ್ ಯಾದವ್ ವಿರುದ್ಧವೂ ರಾಮೇಶ್ ವಾಗ್ದಾಳಿ ನಡೆಸಿದರು.

“ಭೂಪೇಂದ್ರ ಯಾದವ್ ಅವರು ಪರಿಸರ ಮತ್ತು ಅರಣ್ಯ ಕಾನೂನುಗಳನ್ನು ಭಯ ಅಥವಾ ಪರವಾಗಿಲ್ಲದೇ ಜಾರಿಗೆ ತರಲು ಹೆಚ್ಚು ಸಮಯ ತಗೆದುಕೊಳ್ಳುತ್ತಾರೆ. ಅದರ ಬದಲಿಗೆ, ಅವರು ಈಗ ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಸಮರ್ಥಿಸುವಲ್ಲಿ ನಿರತರಾಗಿದ್ದಾರೆ. ಈ ಇಬ್ಬರು ಸಾವಿರಾರು ಕೋಟಿ ಸಾರ್ವಜನಿಕ ಹಣವನ್ನು ಕದ್ದಿದ್ದಾರೆ ಮತ್ತು ಭಾರತದಲ್ಲಿ ವಿದೇಶಕ್ಕೆ ಓಡಿಹೋಗಿದ್ದಾರೆ” ಎಂದು ರಮೇಶ್ ಹೇಳಿದರು.

ನಡ್ಡಾ ಹೇಳಿಕೆ: 

ರಾಹುಲ್ ಗಾಂಧಿ ಅವರು ಸತ್ಯಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಕಪೋಲಕಲ್ಪಿತ ಆರೋಪಗಳನ್ನು ಮಾಡುವ ಅಭ್ಯಾಸವನ್ನು ಹೊಂದಿದ್ದಾರೆ ಮತ್ತು ಕಾಂಗ್ರೆಸ್ ನಾಯಕರಿಗೆ ‘ಅಹಂಕಾರ ಜಾಸ್ತಿ ಇದೆ ಆದರೆ, ಸ್ವಲ್ಪ ತಿಳುವಳಿಕೆ’ ಇದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಆರೋಪಿಸಿದ್ದರು.

‘2019ರಲ್ಲಿ ಅವರು ಅಮೇಥಿಯಲ್ಲಿ ಸೋತಾಗ ಮತ್ತು ರಾಷ್ಟ್ರೀಯವಾಗಿ ಕಾಂಗ್ರೆಸ್ ಅನ್ನು ಸೋಲಿಸಿದ್ದಕ್ಕಿಂತ ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಜನರ ‘ಶಿಕ್ಷೆ’ ಹೆಚ್ಚು ಕಠಿಣವಾಗಲಿದೆ. ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸುವ ಮೂಲಕ ರಾಹುಲ್ ಗಾಂಧಿ ಅವರು ಜಾತಿವಾದಿ ಮನಸ್ಥಿತಿಯನ್ನು ತೋರಿಸಿದ್ದಾರೆ ಎಂದು ದೂರಿದ್ದರು

ಅವರು ಪದೇ ಪದೇ ಒಬಿಸಿಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಸಮುದಾಯದ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳಿಗಾಗಿ ಸೂರತ್ ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿದೆ ಎಂದು ನಡ್ಡಾ ಹೇಳಿದ್ದರು.

2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಸೂರತ್ ನ್ಯಾಯಾಲಯವು ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 ಅಡಿಯಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವರ್ಮಾ ಅವರ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...