Homeಮುಖಪುಟದೇಶಬಿಟ್ಟು ಓಡಿಹೋದ 'ಮೋದಿ'ಗಳನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ನಡ್ಡಾಗೆ ಕಾಂಗ್ರೆಸ್ ತಿರುಗೇಟು

ದೇಶಬಿಟ್ಟು ಓಡಿಹೋದ ‘ಮೋದಿ’ಗಳನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ನಡ್ಡಾಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ರಾಹುಲ್ ಗಾಂಧಿ ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸಿದ್ದಾರೆ ಎಂಬ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರ ಆರೋಪವನ್ನು ತಳ್ಳಿ ಹಾಕಿರುವ ಕಾಂಗ್ರೆಸ್, ”ದೇಶ ಬಿಟ್ಟು ಓಡಿಹೋದ ನೀರವ್ ಮೋದಿ ಮತ್ತು ಲಲಿತ್ ಮೋದಿಯಂತಹವರನ್ನು ಆಡಳಿತ ಪಕ್ಷವು ರಕ್ಷಿಸುತ್ತಿದೆ ಮತ್ತು ಸರ್ಕಾರ ”ಜಾತಿ ರಾಜಕೀಯ”ದಲ್ಲಿ ತೊಡಗಿದೆ ಎಂದು ಆರೋಪಿಸಿದೆ.

“ಮೋದಿ ಉಪನಾಮ” ಟೀಕೆಗಳ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯವರಿಗೆ ಶಿಕ್ಷೆ ಪ್ರಕಟವಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಹೋರಾಟ ತೀವ್ರತೆ ಪಡೆದುಕೊಂಡಿದೆ.

ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಜ, ”ಮೋದಿ ಸರ್ಕಾರ ಜಂಟಿ ಸಂಸದೀಯ ಸಮಿತಿ ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನೀರವ್ ಮೋದಿ, ಲಲಿತ್ ಮೋದಿ, ಮೆಹುಲ್ ಚೋಕ್ಸಿ- PNB ಮತ್ತು ಸಾರ್ವಜನಿಕ ಹಣ ದೋಚಿ ಓಡಿಹೋದರು! ಓಬಿಸಿ ವರ್ಗದವರು ಓಡಿ ಹೋಗಲಿಲ್ಲ, ಆಗ ಅವರಿಗೆ ಹೇಗೆ ಅವಮಾನವಾಯಿತು?, ನಿಮ್ಮ ”ಬೆಸ್ಟ್ ಫ್ರೆಂಡ್” SBI/LIC ಗೆ ನಷ್ಟವನ್ನುಂಟು ಮಾಡಿದ್ದಾನೆ! ಒಂದು “ಕಳ್ಳತನ”ದಲ್ಲಿ ಸಹಕಾರ. ಮತ್ತೆ ಜಾತಿ ರಾಜಕಾರಣದ ಬಳಕೆ! ನಾಚಿಕೆಗೇಡು!!” ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಸಂವಾದ ನಡೆಸಿದ ಕಾಂಗ್ರೆಸ್ ಅಧ್ಯಕ್ಷರು, ”ಜನರ ಹಣದಿಂದ ಓಡಿಹೋದವರು ಯಾರು ಎಂಬುದಕ್ಕೆ ನಮ್ಮ ಪಕ್ಷ ಉತ್ತರ ಹುಡುಕುತ್ತಿದೆ. ಆದರೆ ಬಿಜೆಪಿ ಈ ಮುಖ್ಯ ವಿಷಯದಿಂದ ಗಮನವನ್ನು ಸೆಳೆಯಲು ಪ್ರಯತ್ನಿಸುತ್ತಿದೆ” ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

”ಅವರು ಹಿಂದುಳಿದ ವರ್ಗಗಳಿಗೆ ಅವಮಾನ ಮಾಡುವ ಮಾತುಗಳನ್ನಾಡುತ್ತಿದ್ದಾರೆ. ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಅಲ್ಪಸಂಖ್ಯಾತರ ಪರವಾಗಿ ಕಾಂಗ್ರೆಸ್ ಯಾವಾಗಲೂ ನಿಂತಿದೆ ಮತ್ತು ಹೋರಾಟ ಮಾಡಿದೆ. ಮನುವನ್ನು ನಂಬುವ ಈ ಜನರು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಾರೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ನಡ್ಡಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರು ಸತ್ಯಗಳನ್ನು ತಿರುಚುತ್ತಿದ್ದಾರೆ ಮತ್ತು “ಮಾನನಷ್ಟ ರಾಜಕೀಯ” ದಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.

”ಜಾತಿಯ ಹೆಸರಿನಲ್ಲಿ ಅವರು ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಸತ್ಯ ಹೊರಬರಬೇಕಿತ್ತು ಮತ್ತು ಈಗ ಅದು ಹೊರಬಂದಿದೆ. ನಡ್ಡಾ ಜೀ, ನಿಮ್ಮ ಪ್ರಾಮಾಣಿಕತೆಗೆ ಧನ್ಯವಾದಗಳು. ಈಗ ದಯವಿಟ್ಟು ಅದಾನಿಯವರ ಮೇಲೂ ಸ್ವಲ್ಪ ಪ್ರಾಮಾಣಿಕತೆಯನ್ನು ತೋರಿಸಿ” ಎಂದು ಜೈರಾಮ್ ರಮೇಶ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಗುಜರಾತ್ ನ್ಯಾಯಾಲಯವನ್ನು ಕಾಂಗ್ರೆಸ್ ಪ್ರಶ್ನಿಸಿದ್ದಕ್ಕೆ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಭೂಪೇಂದರ್ ಯಾದವ್ ವಿರುದ್ಧವೂ ರಾಮೇಶ್ ವಾಗ್ದಾಳಿ ನಡೆಸಿದರು.

“ಭೂಪೇಂದ್ರ ಯಾದವ್ ಅವರು ಪರಿಸರ ಮತ್ತು ಅರಣ್ಯ ಕಾನೂನುಗಳನ್ನು ಭಯ ಅಥವಾ ಪರವಾಗಿಲ್ಲದೇ ಜಾರಿಗೆ ತರಲು ಹೆಚ್ಚು ಸಮಯ ತಗೆದುಕೊಳ್ಳುತ್ತಾರೆ. ಅದರ ಬದಲಿಗೆ, ಅವರು ಈಗ ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಸಮರ್ಥಿಸುವಲ್ಲಿ ನಿರತರಾಗಿದ್ದಾರೆ. ಈ ಇಬ್ಬರು ಸಾವಿರಾರು ಕೋಟಿ ಸಾರ್ವಜನಿಕ ಹಣವನ್ನು ಕದ್ದಿದ್ದಾರೆ ಮತ್ತು ಭಾರತದಲ್ಲಿ ವಿದೇಶಕ್ಕೆ ಓಡಿಹೋಗಿದ್ದಾರೆ” ಎಂದು ರಮೇಶ್ ಹೇಳಿದರು.

ನಡ್ಡಾ ಹೇಳಿಕೆ: 

ರಾಹುಲ್ ಗಾಂಧಿ ಅವರು ಸತ್ಯಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಕಪೋಲಕಲ್ಪಿತ ಆರೋಪಗಳನ್ನು ಮಾಡುವ ಅಭ್ಯಾಸವನ್ನು ಹೊಂದಿದ್ದಾರೆ ಮತ್ತು ಕಾಂಗ್ರೆಸ್ ನಾಯಕರಿಗೆ ‘ಅಹಂಕಾರ ಜಾಸ್ತಿ ಇದೆ ಆದರೆ, ಸ್ವಲ್ಪ ತಿಳುವಳಿಕೆ’ ಇದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಆರೋಪಿಸಿದ್ದರು.

‘2019ರಲ್ಲಿ ಅವರು ಅಮೇಥಿಯಲ್ಲಿ ಸೋತಾಗ ಮತ್ತು ರಾಷ್ಟ್ರೀಯವಾಗಿ ಕಾಂಗ್ರೆಸ್ ಅನ್ನು ಸೋಲಿಸಿದ್ದಕ್ಕಿಂತ ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಜನರ ‘ಶಿಕ್ಷೆ’ ಹೆಚ್ಚು ಕಠಿಣವಾಗಲಿದೆ. ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸುವ ಮೂಲಕ ರಾಹುಲ್ ಗಾಂಧಿ ಅವರು ಜಾತಿವಾದಿ ಮನಸ್ಥಿತಿಯನ್ನು ತೋರಿಸಿದ್ದಾರೆ ಎಂದು ದೂರಿದ್ದರು

ಅವರು ಪದೇ ಪದೇ ಒಬಿಸಿಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಸಮುದಾಯದ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳಿಗಾಗಿ ಸೂರತ್ ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿದೆ ಎಂದು ನಡ್ಡಾ ಹೇಳಿದ್ದರು.

2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಸೂರತ್ ನ್ಯಾಯಾಲಯವು ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 ಅಡಿಯಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವರ್ಮಾ ಅವರ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....