Homeಮುಖಪುಟದೇಶಬಿಟ್ಟು ಓಡಿಹೋದ 'ಮೋದಿ'ಗಳನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ನಡ್ಡಾಗೆ ಕಾಂಗ್ರೆಸ್ ತಿರುಗೇಟು

ದೇಶಬಿಟ್ಟು ಓಡಿಹೋದ ‘ಮೋದಿ’ಗಳನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ನಡ್ಡಾಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ರಾಹುಲ್ ಗಾಂಧಿ ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸಿದ್ದಾರೆ ಎಂಬ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರ ಆರೋಪವನ್ನು ತಳ್ಳಿ ಹಾಕಿರುವ ಕಾಂಗ್ರೆಸ್, ”ದೇಶ ಬಿಟ್ಟು ಓಡಿಹೋದ ನೀರವ್ ಮೋದಿ ಮತ್ತು ಲಲಿತ್ ಮೋದಿಯಂತಹವರನ್ನು ಆಡಳಿತ ಪಕ್ಷವು ರಕ್ಷಿಸುತ್ತಿದೆ ಮತ್ತು ಸರ್ಕಾರ ”ಜಾತಿ ರಾಜಕೀಯ”ದಲ್ಲಿ ತೊಡಗಿದೆ ಎಂದು ಆರೋಪಿಸಿದೆ.

“ಮೋದಿ ಉಪನಾಮ” ಟೀಕೆಗಳ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯವರಿಗೆ ಶಿಕ್ಷೆ ಪ್ರಕಟವಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಹೋರಾಟ ತೀವ್ರತೆ ಪಡೆದುಕೊಂಡಿದೆ.

ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಜ, ”ಮೋದಿ ಸರ್ಕಾರ ಜಂಟಿ ಸಂಸದೀಯ ಸಮಿತಿ ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನೀರವ್ ಮೋದಿ, ಲಲಿತ್ ಮೋದಿ, ಮೆಹುಲ್ ಚೋಕ್ಸಿ- PNB ಮತ್ತು ಸಾರ್ವಜನಿಕ ಹಣ ದೋಚಿ ಓಡಿಹೋದರು! ಓಬಿಸಿ ವರ್ಗದವರು ಓಡಿ ಹೋಗಲಿಲ್ಲ, ಆಗ ಅವರಿಗೆ ಹೇಗೆ ಅವಮಾನವಾಯಿತು?, ನಿಮ್ಮ ”ಬೆಸ್ಟ್ ಫ್ರೆಂಡ್” SBI/LIC ಗೆ ನಷ್ಟವನ್ನುಂಟು ಮಾಡಿದ್ದಾನೆ! ಒಂದು “ಕಳ್ಳತನ”ದಲ್ಲಿ ಸಹಕಾರ. ಮತ್ತೆ ಜಾತಿ ರಾಜಕಾರಣದ ಬಳಕೆ! ನಾಚಿಕೆಗೇಡು!!” ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಸಂವಾದ ನಡೆಸಿದ ಕಾಂಗ್ರೆಸ್ ಅಧ್ಯಕ್ಷರು, ”ಜನರ ಹಣದಿಂದ ಓಡಿಹೋದವರು ಯಾರು ಎಂಬುದಕ್ಕೆ ನಮ್ಮ ಪಕ್ಷ ಉತ್ತರ ಹುಡುಕುತ್ತಿದೆ. ಆದರೆ ಬಿಜೆಪಿ ಈ ಮುಖ್ಯ ವಿಷಯದಿಂದ ಗಮನವನ್ನು ಸೆಳೆಯಲು ಪ್ರಯತ್ನಿಸುತ್ತಿದೆ” ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

”ಅವರು ಹಿಂದುಳಿದ ವರ್ಗಗಳಿಗೆ ಅವಮಾನ ಮಾಡುವ ಮಾತುಗಳನ್ನಾಡುತ್ತಿದ್ದಾರೆ. ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಅಲ್ಪಸಂಖ್ಯಾತರ ಪರವಾಗಿ ಕಾಂಗ್ರೆಸ್ ಯಾವಾಗಲೂ ನಿಂತಿದೆ ಮತ್ತು ಹೋರಾಟ ಮಾಡಿದೆ. ಮನುವನ್ನು ನಂಬುವ ಈ ಜನರು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಾರೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ನಡ್ಡಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರು ಸತ್ಯಗಳನ್ನು ತಿರುಚುತ್ತಿದ್ದಾರೆ ಮತ್ತು “ಮಾನನಷ್ಟ ರಾಜಕೀಯ” ದಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.

”ಜಾತಿಯ ಹೆಸರಿನಲ್ಲಿ ಅವರು ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಸತ್ಯ ಹೊರಬರಬೇಕಿತ್ತು ಮತ್ತು ಈಗ ಅದು ಹೊರಬಂದಿದೆ. ನಡ್ಡಾ ಜೀ, ನಿಮ್ಮ ಪ್ರಾಮಾಣಿಕತೆಗೆ ಧನ್ಯವಾದಗಳು. ಈಗ ದಯವಿಟ್ಟು ಅದಾನಿಯವರ ಮೇಲೂ ಸ್ವಲ್ಪ ಪ್ರಾಮಾಣಿಕತೆಯನ್ನು ತೋರಿಸಿ” ಎಂದು ಜೈರಾಮ್ ರಮೇಶ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಗುಜರಾತ್ ನ್ಯಾಯಾಲಯವನ್ನು ಕಾಂಗ್ರೆಸ್ ಪ್ರಶ್ನಿಸಿದ್ದಕ್ಕೆ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಭೂಪೇಂದರ್ ಯಾದವ್ ವಿರುದ್ಧವೂ ರಾಮೇಶ್ ವಾಗ್ದಾಳಿ ನಡೆಸಿದರು.

“ಭೂಪೇಂದ್ರ ಯಾದವ್ ಅವರು ಪರಿಸರ ಮತ್ತು ಅರಣ್ಯ ಕಾನೂನುಗಳನ್ನು ಭಯ ಅಥವಾ ಪರವಾಗಿಲ್ಲದೇ ಜಾರಿಗೆ ತರಲು ಹೆಚ್ಚು ಸಮಯ ತಗೆದುಕೊಳ್ಳುತ್ತಾರೆ. ಅದರ ಬದಲಿಗೆ, ಅವರು ಈಗ ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಸಮರ್ಥಿಸುವಲ್ಲಿ ನಿರತರಾಗಿದ್ದಾರೆ. ಈ ಇಬ್ಬರು ಸಾವಿರಾರು ಕೋಟಿ ಸಾರ್ವಜನಿಕ ಹಣವನ್ನು ಕದ್ದಿದ್ದಾರೆ ಮತ್ತು ಭಾರತದಲ್ಲಿ ವಿದೇಶಕ್ಕೆ ಓಡಿಹೋಗಿದ್ದಾರೆ” ಎಂದು ರಮೇಶ್ ಹೇಳಿದರು.

ನಡ್ಡಾ ಹೇಳಿಕೆ: 

ರಾಹುಲ್ ಗಾಂಧಿ ಅವರು ಸತ್ಯಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಕಪೋಲಕಲ್ಪಿತ ಆರೋಪಗಳನ್ನು ಮಾಡುವ ಅಭ್ಯಾಸವನ್ನು ಹೊಂದಿದ್ದಾರೆ ಮತ್ತು ಕಾಂಗ್ರೆಸ್ ನಾಯಕರಿಗೆ ‘ಅಹಂಕಾರ ಜಾಸ್ತಿ ಇದೆ ಆದರೆ, ಸ್ವಲ್ಪ ತಿಳುವಳಿಕೆ’ ಇದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಆರೋಪಿಸಿದ್ದರು.

‘2019ರಲ್ಲಿ ಅವರು ಅಮೇಥಿಯಲ್ಲಿ ಸೋತಾಗ ಮತ್ತು ರಾಷ್ಟ್ರೀಯವಾಗಿ ಕಾಂಗ್ರೆಸ್ ಅನ್ನು ಸೋಲಿಸಿದ್ದಕ್ಕಿಂತ ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಜನರ ‘ಶಿಕ್ಷೆ’ ಹೆಚ್ಚು ಕಠಿಣವಾಗಲಿದೆ. ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸುವ ಮೂಲಕ ರಾಹುಲ್ ಗಾಂಧಿ ಅವರು ಜಾತಿವಾದಿ ಮನಸ್ಥಿತಿಯನ್ನು ತೋರಿಸಿದ್ದಾರೆ ಎಂದು ದೂರಿದ್ದರು

ಅವರು ಪದೇ ಪದೇ ಒಬಿಸಿಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಸಮುದಾಯದ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳಿಗಾಗಿ ಸೂರತ್ ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿದೆ ಎಂದು ನಡ್ಡಾ ಹೇಳಿದ್ದರು.

2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಸೂರತ್ ನ್ಯಾಯಾಲಯವು ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 ಅಡಿಯಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವರ್ಮಾ ಅವರ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...