HomeಮುಖಪುಟMNREGA ಮೊತ್ತ ಮೂರುಪಟ್ಟು ಹೆಚ್ಚಾಗದೆ ಗ್ರಾಮ ಭಾರತ ಕೋವಿಡ್ ಬಿಕ್ಕಟ್ಟಿನಿಂದ ಪಾರಾಗದು..

MNREGA ಮೊತ್ತ ಮೂರುಪಟ್ಟು ಹೆಚ್ಚಾಗದೆ ಗ್ರಾಮ ಭಾರತ ಕೋವಿಡ್ ಬಿಕ್ಕಟ್ಟಿನಿಂದ ಪಾರಾಗದು..

- Advertisement -
- Advertisement -

20 ಲಕ್ಷ ಕೋಟಿ ಕೋವಿಡ್ ಪ್ಯಾಕೇಜಿನ ಬಡಾಯಿಯಲ್ಲಿ ಸಂತ್ರಸ್ತ ಜನರಿಗೆ ನೇರವಾಗಿ ದಕ್ಕುವುದು ಕೇವಲ 76,000 ಕೋಟಿ ಮಾತ್ರವೆಂದು ಈಗಾಗಲೇ ಹಲವಾರು ಸ್ವತಂತ್ರ ಅಧ್ಯಯನಗಳು ಸ್ಪಷ್ಟಪಡಿಸಿವೆ. ಹೀಗಾಗಿ ಈ ಕೋವಿಡ್ ಪ್ಯಾಕೇಜು ಜನರ ಬದುಕನ್ನು ಮತ್ತು ದೇಶದ ಆರ್ಥಿಕ ಪರಿಸ್ಥಿತಿಯನ್ನು ಸರಿದಾರಿಗೆ ತರಲು ಕಿಂಚಿತ್ತೂ ಸಹಾಯ ಮಾಡುವುದಿಲ್ಲವೆಂದು ಮೋದಿ ಮಿತ್ರರಾದ ಹಲವಾರು ಅಂತರರಾಷ್ಟ್ರೀಯ ರೇಟಿಂಗ್ ಸಂಸ್ಥೆಗಳೇ ಹೇಳುತ್ತಿವೆ.

ಅಷ್ಟೆಲ್ಲಾ ಹತಾಶೆಯ ನಡುವೆಯೂ MNREGA ಗೆ ಮೊದಲು ನೀಡಿದ್ದ 61,500 ಕೋಟಿ ಹಾಗು ಪ್ಯಾಕೇಜಿನ ಭಾಗವಾಗಿ ಹೆಚ್ಚುವರಿಯಾಗಿ ಒದಗಿಸಲಾದ 40,000, -ಒಟ್ಟು 1,05,000 ಕೋಟಿ- ಗ್ರಾಮ ಭಾರತವನ್ನು ಉದ್ಧಾರ ಮಾಡಲು ಸಾಕಾಗುವುದೆಂದು ಸರ್ಕಾರ ಹೇಳಿದ್ದನ್ನು ಬಹುಪಾಲು ಭಾರತ ಒಪ್ಪಿಕೊಂಡಿತ್ತು

ಆದರೆ ವಾಸ್ತವವೆಂದರೆ ಕೋವಿಡ್ ನ ಆರ್ಥಿಕ ಪರಿಣಾಮಗಳಿಂದ ಹಾಲಿ ಗ್ರಾಮೀಣ ಬಿಕ್ಕಟ್ಟು ಯಾವ ಪರಿಯಲ್ಲಿ ಉಲ್ಬಣಗೊಂಡಿದೆ ಎಂದರೆ ಭಾರತದ ಗ್ರಾಮಗಳನ್ನು ಉದ್ಧಾರವಾಗುವುದಿರಲಿ, ಇರುವಂತೆ ಉಳಿಸಿಕೊಳ್ಳಬೇಕೆಂದರೂ ಈಗ MNREGA ಒದಗಿಸಿರುವ ಸಂಪನ್ಮೂಲದ ಕನಿಷ್ಠ ಪಕ್ಷ ಮೂರೂ ಪಟ್ಟು ಸಂಪನ್ಮೂಲದ ಅತ್ಯಗತ್ಯವಿದೆಯೆಂದು CGBA ಯ ಮಂಪಿ ಬೋಸ್ ಮತ್ತು TERI ಶಂತನು ರಾಯ್ ಅವರ ಜಂಟಿ ಅಧ್ಯಯನವೊಂದು ತಿಳಿಸುತ್ತದೆ.

MNREGA ಬೇಡಿಕೆಯನ್ನಾಧರಿಸಿದ ಯೋಜನೆಯಾಗಿದ್ದು, ಗ್ರಾಮಗಳಲ್ಲಿ ಕೆಲಸ ಮಾಡಲು ನೋಂದಾಯಿಸಿಕೊಳ್ಳುವ ಪ್ರತಿಮನೆಗೆ ವರ್ಷದಲ್ಲಿ ಕನಿಷ್ಠ 100 ದಿನಗಳ ಕೆಲಸವನ್ನು ಕಡ್ಡಾಯವಾಗಿ ಒದಗಿಸಬೇಕು. ಕಳೆದ 15 ವರ್ಷಗಳಲ್ಲಿ ಈ ಯೋಜನೆಯಿಂದಾಗಿ ಹಳ್ಳಿಗಾಡಿನಲ್ಲಿ ಭೂರಹಿತ ಕೂಲಿಗಳ ಬದುಕು ಮತ್ತು ಸ್ವಾಭಿಮಾನದ ಒಂದಷ್ಟು ರಕ್ಷಣೆಯಾದರೂ ಆಗಿದೆ. ಗ್ರಾಮೀಣ ಬಡಜನರ ಅಸಹಾಯಕತೆಯನ್ನು ದುರುಪಯೋಗ ಮಾಡಿಕೊಂಡು ಗ್ರಾಮಭಾರತದಲ್ಲಿ ನಡೆಯುತ್ತಿದ್ದ ಜೀತ-ಕಡಿಮೆ ಕೂಲಿಗಳ ಶೋಷಣೆ ಸ್ವಲ್ಪಮಟ್ಟಿಗಾದರೂ ಕಡಿಮೆಯಾಗಿತ್ತು. ಹಾಗೆಯೇ ಗ್ರಾಮಕೂಲಿ ದರವನ್ನು ಸ್ವಲ್ಪ ಮಟ್ಟಿಗೆ ಹೆಚ್ಚಾಗುವಂತೆ ಮಾಡಿತ್ತು.

ಆದರೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಡೀ MNREGA ಪರಿಕಲ್ಪನೆಯನ್ನೇ ಪರೋಕ್ಷವಾಗಿ ರದ್ದುಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿದೆ.

ಉದಾಹರಣೆಗೆ : 2019-20ರ ಪರಿಷ್ಕೃತ ಬಜೆಟ್ಟಿನ ಪ್ರಕಾರ MNREGA ಯೋಜನೆಗೆ 71,000 ಕೋಟಿ ವೆಚ್ಚ ದಾಖಲಾಗಿದ್ದರು 2020-21 ರ ಬಜೆಟ್ಟಿನಲ್ಲಿ ಮೋದಿ ಸರ್ಕಾರ ಒದಗಿಸಿದ್ದು ಕೇವಲ 61,000 ಕೋಟಿ ಮಾತ್ರ. ಅಂದರೆ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಬೇಡಿಕೆಯು ಹೆಚ್ಚಿದೆಯೆಂದು ತಿಳಿದುಬಂದಿದ್ದರು ಕೂಡ ಉದ್ದೇಶಪೂರ್ವಕವಾಗಿ 10,000 ಕೋಟಿ ಯಷ್ಟು ಕಡಿಮೆ ಮಾಡಲಾಗಿದೆ.

– ಇದರಿಂದಾಗಿ 2019-20ರ ಸಾಲಿನಲ್ಲಿ 5.78 ಕೋಟಿ ಕುಟುಂಬಗಳು ಕೆಲಸಕ್ಕೆ ಅರ್ಜಿ ಹಾಕಿಕೊಂಡಿದ್ದರು ಕೆಲಸ ಕೊಟ್ಟಿದ್ದು ಮಾತ್ರ ಕೇವಲ 5.12 ಕೋಟಿ ಕುಟುಂಬಗಳಿಗೆ ಮಾತ್ರ.

– 2017-19ರ ಅವಧಿಯಲ್ಲಿ ಈ ಸಂಪನ್ಮೂಲ ಬೇಡಿಕೆಯಿದ್ದರೂ, ದುಡಿಯುವ ಕೈಗಳಿದ್ದರೂ ದೇಶದ ಯಾವ ರಾಜ್ಯಗಳಲ್ಲಿಯೂ 100 ದಿನಗಳ ಕೆಲಸವನ್ನು ಒದಗಿಸಲಾಗಿಲ್ಲ. 19 ಪ್ರಮುಖ ರಾಜ್ಯಗಳ ಪೈಕಿ 14 ರಾಜ್ಯಗಳಲ್ಲಿ 50 ದಿನಗಳ ಕೆಲಸವನ್ನೂ ಸಹ ಒದಗಿಸಲಾಗಿಲ್ಲ. ಇದರಲ್ಲಿ ಗುಜರಾತ್ ರಾಜ್ಯದದ್ದು ಎಲ್ಲಾ ರಾಜ್ಯಗಳಿಗಿಂತಲೂ ನಿಕೃಷ್ಟ ಪರಿಸ್ಥಿತಿ.

– ದೇಶದ ಬಹುಪಾಲು ಪ್ರಮುಖ ರಾಜ್ಯಗಳಲ್ಲಿ MNREGA ಕೂಲಿ ದರವು ಆಯಾ ರಾಜ್ಯಗಳು ನಿಗದಿ ಮಾಡಿರುವ ಕನಿಷ್ಠ ಕೂಲಿಗಿಂತ ಕಡಿಮೆ ಇದೆ.

ಉದಾಹರಣೆಗೆ ಉತ್ತರಪ್ರದೇಶದಲ್ಲಿ ರಾಜ್ಯ ಸರ್ಕಾರ ನಿಗದಿ ಮಾಡಿರುವ ಕನಿಷ್ಠ ಕೂಲಿ ದರ 318 ರು. ಗಳಾಗಿದ್ದರೂ ಆ ರಾಜ್ಯದಲ್ಲಿ ಕೊಡುತ್ತಿರುವ MNREGA ಕೂಲಿ ದರ ಮಾತ್ರ ಕೇವಲ 182 ರೂ.

ಅದೇ ರೀತಿ ಕರ್ನಾಟಕದಲ್ಲಿ ಘೋಷಿತ ಕನಿಷ್ಠ ಕೂಲಿ ರೂ. 350 ಆಗಿದ್ದರೂ MNREGA ಕೂಲಿ 246 ರೂ . ಮಾತ್ರ.

ಇದು ಕೋವಿಡ್ ಪೂರ್ವ ಪರಿಸ್ಥಿತಿ. ಈಗ..?

ಕೇಂದ್ರ ಸರ್ಕಾರವು ಮೊನ್ನೆ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಪ್ರಮಾಣಪತ್ರದ ಪ್ರಕಾರವೇ ಅಂದಾಜು 1 ಕೋಟಿ ಯಷ್ಟು ವಲಸೆ ಕಾರ್ಮಿಕರು ಹಳ್ಳಿಗಳಿಗೆ ಮರಳಿದ್ದಾರೆ. ಹಾಗು ಎಲ್ಲಾ ಬಗೆಯ ಆದಾಯ, ಉಳಿತಾಯವೂ ಕಳೆದುಕೊಂಡು ಕಂಗೆಟ್ಟಿದ್ದಾರೆ. ಹಾಗೂ ಅವರಲ್ಲಿ ಬಹುಪಾಲು ಜನ ಈ ಸದ್ಯಕ್ಕೆ ನಗರಗಳಿಗೆ ಮರಳುವ ಪರಿಸ್ಥಿತಿಯಲ್ಲೂ -ಮನಸ್ಥಿತಿಯಲ್ಲೂ ಇಲ್ಲ. ನಗರಗಳೂ ಕೂಡಾ ಈ ಸದ್ಯಕ್ಕೆ ಅವರಿಗೆ ಕೆಲಸ ಕೊಡುವ ಪರಿಸ್ಥಿತಿಯಲ್ಲಿ ಇಲ್ಲ. ಹಾಗು ನಗರಗಳಲ್ಲಾಗಲಿ ಅಥವಾ ಗ್ರಾಮಗಳಲ್ಲಾಗಲಿ ಖಾಸಗಿ ಬಂಡವಾಳವು ಈ ಹೆಚ್ಚುವರಿ ಶ್ರಮಜೀವಿಗಳಿಗೆ ಜೀವನೋಪಾಯಗಳನ್ನು ಒದಗಿಸುವ ಪರಿಸ್ಥಿತಿಯಲ್ಲಿ ಇಲ್ಲ.

ಹೀಗಾಗಿ ಇಂದು ಭಾರತದ ಗ್ರಾಮಗಳು ಈ ಹೆಚ್ಚುವರಿ ಕೋವಿಡ್ ಭಾರವನ್ನು ತಡೆದುಕೊಳ್ಳಬೇಕೆಂದರೆ ಕಡ್ಡಾಯವಾಗಿ ಸರ್ಕಾರವೇ ಉದ್ಯೋಗ ಸೃಷ್ಟಿ ಮಾಡುವ ಯೋಜನೆಗಳ ಮೇಲೆ ವೆಚ್ಚವನ್ನು ಮಾಡಬೇಕಿದೆ.

ಹೀಗಾಗಿ ಸರ್ಕಾರವು ಕೋವಿಡ್ ಸಂದರ್ಭದಲ್ಲಿ ಹೆಚ್ಚುವರಿ ಜನರಿಗಾಗಿ ಮತ್ತು ಹೆಚ್ಚುವರಿ ದಿನಗಳಿಗಾಗಿ ಅಂದರೆ ಕನಿಷ್ಠ ಮುಂದಿನ 200 ದಿನಗಳಿಗಾಗಿ ಘನತೆಯಿಂದ ಬದುಕಲು ಕನಿಷ್ಠ ಕೊಲಿ ಯನ್ನು ಒದಗಿಸುವಂತೆ MNREGA ವನ್ನು ಸಜ್ಜುಗೊಳಿಸಬೇಕಿದೆ.

ಈ ನಿಟ್ಟಿನಲ್ಲಿ CGBA ಯ ಮಂಪಿ ಬೋಸ್ ಮತ್ತು TERI ಶಂತನು ರಾಯ್ ಅವರು ಇಂದಿನ ಪರಿಸ್ಥಿತಿಯಲ್ಲಿ MNREGA ಯೋಜನೆಯ ಮೂಲಕ ಗ್ರಾಮಭಾರತವನ್ನು ಉಳಿಸಲು ಮತ್ತು ಬೆಳೆಸಲು ಎಷ್ಟು ಹಣ ಬೇಕಾಗಬಹುದೆಂದು ಅಂದಾಜು ಮಾಡಿದ್ದಾರೆ.

ಆ ಅಧ್ಯಯನದ ಪ್ರಕಾರ:

– ಈಗ ಕೊಡಲಾಗುತ್ತಿರುವ ಕೂಲಿ ದರದಲ್ಲೇ ಕನಿಷ್ಠ 100 ದಿನಗಳ ಕೆಲಸವನ್ನು ಒದಗಿಸಬೇಕೆಂದರೂ 1,05, 242 ಕೋಟಿ ರೂ . ಬೇಕಾಗುತ್ತದೆ. ಎಂದರೆ ಈಗ MNREGA ಗೆ ಕೋವಿಡ್ ಪ್ಯಾಕೇಜನ್ನು ಒಳಗೊಂಡು ಒದಗಿಸಲಾಗಿರುವ ಮೊತ್ತಕ್ಕಿಂತ 4000 ಕೋಟಿ ಹೆಚ್ಚು ಹಣ ಬೇಕಾಗುತ್ತದೆ.

– ಅಥವಾ ಇಂದಿನ ಬಿಕ್ಕಟ್ಟನ್ನು ಗಮನದಲ್ಲಿರಿಸಿಕೊಂಡು ಕೆಲಸ ಕೇಳುವ ಎಲ್ಲಾ ಕುಟುಂಬಗಳಿಗೂ ಆಯಾ ರಾಜ್ಯಗಳು ನಿಗದಿ ಮಾಡಿರುವ ಕನಿಷ್ಠ ಕೂಲಿ ದರವನ್ನು ನೀಡುವುದಾದರೆ ಈ ವರ್ಷ MNREGA ಯೋಜನೆಗೆ 1,56, 871 ಕೋಟಿ ಯನ್ನು ಒದಗಿಸಬೇಕಾಗುತ್ತದೆ. ಅಂದರೆ ಈಗ ಒದಗಿಸಿರುವುದಕ್ಕಿಂತ 55,371 ಕೋಟಿ ಹಣ ಹೆಚ್ಚಿಗೆ ಬೇಕಾಗುತ್ತದೆ.

– ಒಂದು ವೇಳೆ ಕೋವಿಡ್ ಬಿಕ್ಕಟ್ಟಿನ ದೀರ್ಘಾವಧಿ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು MNREGA ಯೋಜನೆಯನ್ನು 200 ದಿನಗಳಿಗೆ ವಿಸ್ತರಿಸಿ ಈಗ ಕೊಡುತ್ತಿರುವ ಸರಾಸರಿ MNREGA ಕೂಲಿಯನ್ನೇ ಕೊಡುವುದಾದರೆ ಈ ವರ್ಷ 2,10,483 ಕೋಟಿ ಅಗತ್ಯ ಬೀಳುತ್ತದೆ.

– MNREGA ಯೋಜನೆಯನ್ನು 200 ವಿಸ್ತರಿಸಿ ಆಯಾ ರಾಜ್ಯಗಳಲ್ಲಿ ನಿಗದಿ ಪಡಿಸಿರುವ ಹೆಚ್ಚುವರಿ ಕನಿಷ್ಠ ಕೂಲಿಯನ್ನು ಕೊಡುವುದಾದರೆ 3,13,741 ಕೋಟಿ ಬೇಕಾಗುತ್ತದೆ.

ಅಂದರೆ ಈಗ ಒಟ್ಟಾರೆಯಾಗಿ ಒದಗಿಸಿರುವುದಕ್ಕಿಂತ 2,08,741 ಕೋಟಿ ರೂ.ಗಳು ಮಾತ್ರ.

ಈ ಮೊತ್ತವು ನಮ್ಮ ಜಿಡಿಪಿಯ ಕೇವಲ ಶೇ. 1.41 ಭಾಗ ಮಾತ್ರ ಆಗುತ್ತದೆ. ಆದರೆ ಮೋದಿ ಸರ್ಕಾರ ಹೆಚ್ಚುವರಿಯಾಗಿ ಕೊಟ್ಟಿರುವುದು ಜಿಡಿಪಿಯ ಕೇವಲ ಶೇ. 0.26 ಮಾತ್ರ. ಆದರೂ ಪ್ರಚಾರ ಮಾತ್ರ ಜಿಡಿಪಿಯ ಶೇ. 10 ರಷ್ಟು..

ಈ ದೇಶದ 5000 ದೊಡ್ಡ ಉದ್ದಿಮೆಪತಿಗಳು ತಮ್ಮ ಲಾಭದ ದರ ಕಡಿಮೆಯಾಗುತ್ತಿದೆ ಎಂದು ಗೊಣಗಾಡಿದ್ದಕ್ಕೆ ಕಳೆದ ಸೆಪ್ಟೆಂಬರ್ ನಲ್ಲಿ ಕಾರ್ಪೊರೇಟ್ ತೆರಿಗೆಯನ್ನು ಶೇ. 10 ರಷ್ಟು ಇಳಿಸಿ 1.46,000 ಕೋಟಿ ವರ್ಗಾವಣೆ ಮಾಡಿದ್ದು ಇದೆ ಮೋದಿ ಸರ್ಕಾರ…

ಅದು ಸಾಧ್ಯವಾಗಬಹುದಾದಲ್ಲಿ ಈ ದೇಶದ 80 ಕೋಟಿ ಯಷ್ಟಿರುವ ರೈತಾಪಿ ಮತ್ತು ಗ್ರಾಮೀಣ ಬಡಜನ ಕೋವಿಡ್ ಆಘಾತದಿಂದ ಬದುಕುಳಿಯಲು ಬೇಕಾಗಿರುವ 2,08,741 ಕೋಟಿ ರೂ ಅನ್ನು ಭಾರತ ಸರ್ಕಾರ ಕೊಡಲಾಗದೆ?

ಖಂಡಿತಾ ಸಾಧ್ಯ..

ಕೋವಿಡ್ ಅವಧಿಯಲ್ಲಿ ಅನಗತ್ಯವಾಗಿ ಹೆಚ್ಚಿಸಿರುವ ಪೆಟ್ರೋಲಿಯಂ ಉತ್ಪನ್ನಗಳ ಬೆಳೆಯಿಂದ ಭಾರತ ಸರ್ಕಾರ ಈ ವರ್ಷ 4 ಲಕ್ಷ ಕೋಟಿ ರೂ ಗಳನ್ನೂ ಸಂಗ್ರಹಿಸಲಿದೆ. ರೈತರ ಬದುಕಿಗೆ ಬೇಕಿರುವುದು ಅದರ ಅರ್ಧ ಭಾಗ ಅಷ್ಟೇ..

ಈ ದೇಶದ ಕೇವಲ 100 ದೊಡ್ಡ ಉದ್ದಿಮೆಪತಿಗಳ ಬಳಿ ಈ ದೇಶದ ರೈತ-ಕಾರ್ಮಿಕರ ಶ್ರಮವನ್ನು ಲೂಟಿ ಮಾಡಿ ಸಂಪಾದಿಸಿರುವ 25 ಲಕ್ಷ ಕೋಟಿ ರೂ.ಗಳಷ್ಟು ಸಂಪತ್ತಿದೆ. ಅದರ ಮೇಲೆ ಕೇವಲ ಶೇ. 1 ರಷ್ಟು ಸೆಸ್ ಹಾಕಿದರೂ ಗ್ರಾಮಭಾರತದ ಉಸಿರಿಗೆ ಬೇಕಿರುವ ಮೊತ್ತಕ್ಕಿಂತ ಹೆಚ್ಚಿಗೆ ಸಂಪನ್ಮೂಲವೇ ದೊರಕುತ್ತದೆ.

ಆದರೆ ಅದಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ…ಅದು ಮೋದಿಗಿದೆಯೇ?


ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ವೇತನ ಪಾವತಿಸದ ಕಂಪೆನಿಗಳ ವಿರುದ್ಧ ಯಾವುದೇ ಕ್ರಮವಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...