Homeಮುಖಪುಟಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

- Advertisement -
- Advertisement -

ಇಷ್ಟು ದಿನ ಬ್ಯಾಂಕುಗಳ ವಿಲೀನದಲ್ಲಿ ತೊಡಗಿದ್ದ ಕೇಂದ್ರ ಸರ್ಕಾರ ಈಗ ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಾಡಲು ಮುಂದಾಗಿದೆ. ಈ ಕುರಿತು ನೀತಿ ಆಯೋಗವು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದು, ಸರ್ಕಾರಿ ಸಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಯೋಜನೆ ಸಿದ್ದವಾಗುತ್ತಿದೆ ಎನ್ನಲಾಗುತ್ತಿದೆ.

2017 ರಿಂದಲೂ ಕೇಂದ್ರ ಸರ್ಕಾರ ಈ ಬಗ್ಗೆ ಯೋಚಿಸುತ್ತಿದೆ. ಆದರೆ ಬ್ಯಾಂಕ್‌ ನೌಕರರ ವ್ಯಾಪಕ ವಿರೋಧದಿಂದಾಗಿ ಕ್ರಮಕ್ಕೆ ಮುಂದಾಗಿರಲಿಲ್ಲ. ಈಗ ಪ್ರಸ್ತುತ ಇರುವ ಕೊರೊನಾ ಲಾಕ್‌ಡೌನ್‌ನ ಲಾಭ ಪಡೆದು ಖಾಸಗೀಕರಣಗೊಳಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

ಮೊದಲ ಹಂತದಲ್ಲಿ ಪಂಜಾಬ್ ಸಿಂಧ್‌ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕುಗಳನ್ನು ಪ್ರಾಯೋಗಿಕವಾಗಿ ಖಾಸಗೀಕರಣಗೊಳಿಸಲಾಗುತ್ತದೆ. ಹಂತ ಹಂತವಾಗಿ ಇತರೆ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲಾಗುತ್ತದೆ ಎನ್ನಲಾಗಿದೆ.

ಇಷ್ಟು ದಿನ ಸರ್ಕಾರವು ಹಲವು ಬ್ಯಾಂಕುಗಳ ವಿಲೀನಗೊಳಿಸುವ ಕೆಲಸದಲ್ಲಿ ಮಗ್ನವಾಗಿತ್ತು. ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದೊಂದಿಗೆ ಹಾಗೆಯೇ ವಿಜಯ ಬ್ಯಾಂಕು  ಮತ್ತು ಬ್ಯಾಂಕ್‌ ಆಫ್‌ ಬರೋಡವು ದೇನಾ ಬ್ಯಾಂಕ್‌ ಜೊತೆಗೆ ವಿಲೀನವಾಗಿದೆ. ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ 10 ಬ್ಯಾಂಕುಗಳನ್ನು 4 ಬ್ಯಾಂಕುಗಳನ್ನಾಗಿ ವಿಲೀನಗೊಳಿಸಿದ್ದನ್ನು ಅದರ ಮುಂದುವರಿದ ಭಾಗವಾಗಿ ಈಗ ಬ್ಯಾಂಕುಗಳನ್ನೇ ಖಾಸಗೀಯವರಿಗೆ ಧಾರೆಯೆರೆದುಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.

ನೀತಿ ಆಯೋಗವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಸಗಿಯವರು ದೀರ್ಘಕಾಲದ ಬಂಡವಾಳ ಹೂಡಲು ಅವಕಾಶ ಮಾಡಿಕೊಡುವಂತೆ ಹಾಗೂ ಆಯ್ದ ಕೆಲ ಕೈಗಾರಿಕಾ ಸಂಸ್ಥೆಗಳ ಸಮೂಹಗಳಿಗೆ ಸಾಲ ಕೊಡದಂತೆ ತಾಕೀತು ಮಾಡಿ ಖಾಸಗೀಕರಗೊಳಿಸಬೇಕು ಎಂದು ಶಿಫಾರಸ್ಸು ಮಾಡಿದೆ.

ಈ ನಡುವೆ ಭಾರತೀಯ ಮಜ್ದೂರ್‌ ಸಂಘ (ಬಿಎಂಸಿ) ಕೇಂದ್ರ ಸರ್ಕಾರದ ಈ ನಡೆಯನ್ನು ವಿರೋಧಿಸಿ ಜೂನ್‌ 10 ರಾಷ್ಟ್ರವ್ಯಾಪಿ ಧರಣಿಗೆ ಕರೆ ಕೊಟ್ಟಿದೆ. “ಸೇವ್‌ ಪಬ್ಲಿಕ್‌ ಸೆಕ್ಟರ್‌, ಸೇವ್‌ ಇಂಡಿಯಾ” ಎಂಬ ಅಭಿಯಾನವನ್ನು ಆರಂಭಿಸಿದೆ.


ಇದನ್ನೂ ಓದಿ: ಮಿಥುನ್ ಶೇಟ್ ಅಲಿಯಾಸ್ ಚಕ್ರವರ್ತಿ ಸೂಲಿಬೆಲೆ ಲಿಂಗಾಯಿತರಾಗಲು ಹೊರಟಿದ್ದು, ಹಿಂಜರಿದಿದ್ದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಕ್ ಇನ್ ಇಂಡಿಯಾ ಬುಲೆಟ್ ಟ್ರೈನ್ ಮತ್ತು ಸ್ಮಾರ್ಟ್ ಸಿಟಿ ಮಾಡಲಿಕ್ಕೆ ಹಣಕಾಸು ಬೇಕಾಗಿರಬಹುದು ಸರ್ಕಾರಿ ಬ್ಯಾಂಕುಗಳನ್ನು ಖಾಸಗಿಯಾಗಿ ಪರಿವರ್ತಿಸಬೇಕೆಂಬ ನರೇಂದ್ರ ಮೋದಿ ರವರ ಹುಚ್ಚುತನದ ಆಟಕ್ಕೆ
    ದೇಶದ ನಾಗರೀಕರು ಏನನ್ನಬೇಕು ಎನ್ನುವುದು ತಿಳಿಯದಾಗಿದೆ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...