Homeಮುಖಪುಟಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

- Advertisement -
- Advertisement -

ಇಷ್ಟು ದಿನ ಬ್ಯಾಂಕುಗಳ ವಿಲೀನದಲ್ಲಿ ತೊಡಗಿದ್ದ ಕೇಂದ್ರ ಸರ್ಕಾರ ಈಗ ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಾಡಲು ಮುಂದಾಗಿದೆ. ಈ ಕುರಿತು ನೀತಿ ಆಯೋಗವು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದು, ಸರ್ಕಾರಿ ಸಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಯೋಜನೆ ಸಿದ್ದವಾಗುತ್ತಿದೆ ಎನ್ನಲಾಗುತ್ತಿದೆ.

2017 ರಿಂದಲೂ ಕೇಂದ್ರ ಸರ್ಕಾರ ಈ ಬಗ್ಗೆ ಯೋಚಿಸುತ್ತಿದೆ. ಆದರೆ ಬ್ಯಾಂಕ್‌ ನೌಕರರ ವ್ಯಾಪಕ ವಿರೋಧದಿಂದಾಗಿ ಕ್ರಮಕ್ಕೆ ಮುಂದಾಗಿರಲಿಲ್ಲ. ಈಗ ಪ್ರಸ್ತುತ ಇರುವ ಕೊರೊನಾ ಲಾಕ್‌ಡೌನ್‌ನ ಲಾಭ ಪಡೆದು ಖಾಸಗೀಕರಣಗೊಳಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

ಮೊದಲ ಹಂತದಲ್ಲಿ ಪಂಜಾಬ್ ಸಿಂಧ್‌ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕುಗಳನ್ನು ಪ್ರಾಯೋಗಿಕವಾಗಿ ಖಾಸಗೀಕರಣಗೊಳಿಸಲಾಗುತ್ತದೆ. ಹಂತ ಹಂತವಾಗಿ ಇತರೆ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲಾಗುತ್ತದೆ ಎನ್ನಲಾಗಿದೆ.

ಇಷ್ಟು ದಿನ ಸರ್ಕಾರವು ಹಲವು ಬ್ಯಾಂಕುಗಳ ವಿಲೀನಗೊಳಿಸುವ ಕೆಲಸದಲ್ಲಿ ಮಗ್ನವಾಗಿತ್ತು. ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದೊಂದಿಗೆ ಹಾಗೆಯೇ ವಿಜಯ ಬ್ಯಾಂಕು  ಮತ್ತು ಬ್ಯಾಂಕ್‌ ಆಫ್‌ ಬರೋಡವು ದೇನಾ ಬ್ಯಾಂಕ್‌ ಜೊತೆಗೆ ವಿಲೀನವಾಗಿದೆ. ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ 10 ಬ್ಯಾಂಕುಗಳನ್ನು 4 ಬ್ಯಾಂಕುಗಳನ್ನಾಗಿ ವಿಲೀನಗೊಳಿಸಿದ್ದನ್ನು ಅದರ ಮುಂದುವರಿದ ಭಾಗವಾಗಿ ಈಗ ಬ್ಯಾಂಕುಗಳನ್ನೇ ಖಾಸಗೀಯವರಿಗೆ ಧಾರೆಯೆರೆದುಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.

ನೀತಿ ಆಯೋಗವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಸಗಿಯವರು ದೀರ್ಘಕಾಲದ ಬಂಡವಾಳ ಹೂಡಲು ಅವಕಾಶ ಮಾಡಿಕೊಡುವಂತೆ ಹಾಗೂ ಆಯ್ದ ಕೆಲ ಕೈಗಾರಿಕಾ ಸಂಸ್ಥೆಗಳ ಸಮೂಹಗಳಿಗೆ ಸಾಲ ಕೊಡದಂತೆ ತಾಕೀತು ಮಾಡಿ ಖಾಸಗೀಕರಗೊಳಿಸಬೇಕು ಎಂದು ಶಿಫಾರಸ್ಸು ಮಾಡಿದೆ.

ಈ ನಡುವೆ ಭಾರತೀಯ ಮಜ್ದೂರ್‌ ಸಂಘ (ಬಿಎಂಸಿ) ಕೇಂದ್ರ ಸರ್ಕಾರದ ಈ ನಡೆಯನ್ನು ವಿರೋಧಿಸಿ ಜೂನ್‌ 10 ರಾಷ್ಟ್ರವ್ಯಾಪಿ ಧರಣಿಗೆ ಕರೆ ಕೊಟ್ಟಿದೆ. “ಸೇವ್‌ ಪಬ್ಲಿಕ್‌ ಸೆಕ್ಟರ್‌, ಸೇವ್‌ ಇಂಡಿಯಾ” ಎಂಬ ಅಭಿಯಾನವನ್ನು ಆರಂಭಿಸಿದೆ.


ಇದನ್ನೂ ಓದಿ: ಮಿಥುನ್ ಶೇಟ್ ಅಲಿಯಾಸ್ ಚಕ್ರವರ್ತಿ ಸೂಲಿಬೆಲೆ ಲಿಂಗಾಯಿತರಾಗಲು ಹೊರಟಿದ್ದು, ಹಿಂಜರಿದಿದ್ದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಕ್ ಇನ್ ಇಂಡಿಯಾ ಬುಲೆಟ್ ಟ್ರೈನ್ ಮತ್ತು ಸ್ಮಾರ್ಟ್ ಸಿಟಿ ಮಾಡಲಿಕ್ಕೆ ಹಣಕಾಸು ಬೇಕಾಗಿರಬಹುದು ಸರ್ಕಾರಿ ಬ್ಯಾಂಕುಗಳನ್ನು ಖಾಸಗಿಯಾಗಿ ಪರಿವರ್ತಿಸಬೇಕೆಂಬ ನರೇಂದ್ರ ಮೋದಿ ರವರ ಹುಚ್ಚುತನದ ಆಟಕ್ಕೆ
    ದೇಶದ ನಾಗರೀಕರು ಏನನ್ನಬೇಕು ಎನ್ನುವುದು ತಿಳಿಯದಾಗಿದೆ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....