Homeಎಕಾನಮಿ6 ವಾರದಲ್ಲಿ 26ನೇ ಬಾರಿ ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರ್ಕಾರ: ಐತಿಹಾಸಿಕ ಗರಿಷ್ಠ ದರ

6 ವಾರದಲ್ಲಿ 26ನೇ ಬಾರಿ ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರ್ಕಾರ: ಐತಿಹಾಸಿಕ ಗರಿಷ್ಠ ದರ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಮತ್ತೊಂದೆಡೆ ಮಾರಣಾಂತಿಕ ಕೊರೋನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾಗಿ ಜನ ಸಾಮಾನ್ಯರ ಬದುಕು ಜರ್ಜರಿತವಾಗಿದೆ.

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೋಮವಾರ ಮತ್ತೊಮ್ಮೆ ಡೀಸೆಲ್ ಬೆಲೆಯನ್ನು ಏರಿಸುವ ಮೂಲಕ ಕಳೆದ 6 ವಾರದಲ್ಲಿ 26ನೇ ಭಾರಿ ಡೀಸೆಲ್ ಬೆಲೆ ಏರಿಸಿ ಕೇಂದ್ರ ಸರ್ಕಾರ ಐತಿಹಾಸಿಕ ದಾಖಲೆ ಬರೆದಿದೆ. ಈ ಮೂಲಕ ಭಾರತದಲ್ಲಿ ತೈಲದ ಬೆಲೆ ಈವರೆಗಿನ ಐತಿಹಾಸಿಕ ದಾಖಲೆ ಮಟ್ಟಕ್ಕೆ ಏರಿಕೆಯಾದಂತಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಮತ್ತೊಂದೆಡೆ ಮಾರಣಾಂತಿಕ ಕೊರೋನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾಗಿ ಜನ ಸಾಮಾನ್ಯರ ಬದುಕು ಜರ್ಜರಿತವಾಗಿದೆ.

ಈ ನಡುವೆ ವಿರೋಧ ಪಕ್ಷಗಳು ಸತತವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯ ವಿರುದ್ಧ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಆದರೂ, ಇದ್ಯಾವುದನ್ನೂ ಪರಿಗಣಿಸದ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಏರಿಸುತ್ತಲೇ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ದರ ಹೆಚ್ಚಳವಾದಾಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ದರ ಕಡಿಮೆಯಾದಾಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ.

ಆದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಂತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಈ ಮೂಲಕ ಕೊರೋನಾ ಕಾಟದಿಂದಾಗಿ ಬಸವಳಿದಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಳೆದ ತಿಂಗಳು ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು.

ಈಗ ಕಳೆದೊಂದು ವಾರದಲ್ಲಿ ಮೂರು ಭಾರೀ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಮೊದಲು ಐದು ದಿನಗಳ ಹಿಂದೆ (ಜುಲೈ 7ರಂದು) ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ನಂತರ ನಿನ್ನೆ (ಜುಲೈ 12ರಂದು) ಮತ್ತೆ 16 ಪೈಸೆ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಇಂದು ಪ್ರತಿ ಲೀಟರ್ ಡೀಸೆಲ್ ಗೆ 11 ಪೈಸೆ ಹೆಚ್ಚಳ ಮಾಡಲಾಗಿದೆ.

ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಪ್ರತಿ ಲೀಟರ್ ಡೀಸೆಲ್ ಗೆ 11.53 ರೂಪಾಯಿ ಹೆಚ್ಚಳವಾದಂತಾಗಿದೆ.

ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಈ ರೀತಿ ಇವೆ

ಭೂಪಾಲ್- ಪೆಟ್ರೋಲ್ 88.08 ರೂ., ಡೀಸೆಲ್ 80.39 ರೂ.
ಮುಂಬೈ- ಪೆಟ್ರೋಲ್ 87.19 ರೂ., ಡೀಸೆಲ್ 79.28 ರೂ.
ಚೆನ್ನೈ- ಪೆಟ್ರೋಲ್ 83.63 ರೂ., ಡೀಸೆಲ್ 78.12 ರೂ.
ಪಾಟ್ನಾ- ಪೆಟ್ರೋಲ್ 83.31ರೂ., ಡೀಸೆಲ್ 77.88 ರೂ.
ಬೆಂಗಳೂರು- ಪೆಟ್ರೋಲ್ 83.02 ರೂ., ಡೀಸೆಲ್ 76. 60 ರೂ.
ಕೋಲ್ಕತ್ತಾ- ಪೆಟ್ರೋಲ್ 82.10 ರೂ., ಡೀಸೆಲ್ 76.16 ರೂ.
ಲಕ್ನೋ- ಪೆಟ್ರೋಲ್ 80.98 ರೂ., ಡೀಸೆಲ್ 72.92 ರೂ.
ದೆಹಲಿ- ಪೆಟ್ರೋಲ್ 80.43 ರೂ., ಡೀಸೆಲ್ 81.05 ರೂ.
ರಾಂಚಿ- ಪೆಟ್ರೋಲ್ 80.29 ರೂ., ಡೀಸೆಲ್ 76.95 ರೂ.


ಇದನ್ನೂ ಓದಿ: ಸೂಕ್ಷ್ಮತೆ ಇಲ್ಲದ ಕೇಂದ್ರ ಸರ್ಕಾರ ಬಿಕ್ಕಟ್ಟಿನ ಸಮುಯದಲ್ಲೂ ತೈಲ ಬೆಲೆ ಹೆಚ್ಚಿಸಿದೆ: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...