Homeಎಕಾನಮಿ6 ವಾರದಲ್ಲಿ 26ನೇ ಬಾರಿ ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರ್ಕಾರ: ಐತಿಹಾಸಿಕ ಗರಿಷ್ಠ ದರ

6 ವಾರದಲ್ಲಿ 26ನೇ ಬಾರಿ ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರ್ಕಾರ: ಐತಿಹಾಸಿಕ ಗರಿಷ್ಠ ದರ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಮತ್ತೊಂದೆಡೆ ಮಾರಣಾಂತಿಕ ಕೊರೋನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾಗಿ ಜನ ಸಾಮಾನ್ಯರ ಬದುಕು ಜರ್ಜರಿತವಾಗಿದೆ.

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೋಮವಾರ ಮತ್ತೊಮ್ಮೆ ಡೀಸೆಲ್ ಬೆಲೆಯನ್ನು ಏರಿಸುವ ಮೂಲಕ ಕಳೆದ 6 ವಾರದಲ್ಲಿ 26ನೇ ಭಾರಿ ಡೀಸೆಲ್ ಬೆಲೆ ಏರಿಸಿ ಕೇಂದ್ರ ಸರ್ಕಾರ ಐತಿಹಾಸಿಕ ದಾಖಲೆ ಬರೆದಿದೆ. ಈ ಮೂಲಕ ಭಾರತದಲ್ಲಿ ತೈಲದ ಬೆಲೆ ಈವರೆಗಿನ ಐತಿಹಾಸಿಕ ದಾಖಲೆ ಮಟ್ಟಕ್ಕೆ ಏರಿಕೆಯಾದಂತಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಮತ್ತೊಂದೆಡೆ ಮಾರಣಾಂತಿಕ ಕೊರೋನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾಗಿ ಜನ ಸಾಮಾನ್ಯರ ಬದುಕು ಜರ್ಜರಿತವಾಗಿದೆ.

ಈ ನಡುವೆ ವಿರೋಧ ಪಕ್ಷಗಳು ಸತತವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯ ವಿರುದ್ಧ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಆದರೂ, ಇದ್ಯಾವುದನ್ನೂ ಪರಿಗಣಿಸದ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಏರಿಸುತ್ತಲೇ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ದರ ಹೆಚ್ಚಳವಾದಾಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ದರ ಕಡಿಮೆಯಾದಾಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ.

ಆದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಂತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಈ ಮೂಲಕ ಕೊರೋನಾ ಕಾಟದಿಂದಾಗಿ ಬಸವಳಿದಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಳೆದ ತಿಂಗಳು ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು.

ಈಗ ಕಳೆದೊಂದು ವಾರದಲ್ಲಿ ಮೂರು ಭಾರೀ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಮೊದಲು ಐದು ದಿನಗಳ ಹಿಂದೆ (ಜುಲೈ 7ರಂದು) ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ನಂತರ ನಿನ್ನೆ (ಜುಲೈ 12ರಂದು) ಮತ್ತೆ 16 ಪೈಸೆ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಇಂದು ಪ್ರತಿ ಲೀಟರ್ ಡೀಸೆಲ್ ಗೆ 11 ಪೈಸೆ ಹೆಚ್ಚಳ ಮಾಡಲಾಗಿದೆ.

ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಪ್ರತಿ ಲೀಟರ್ ಡೀಸೆಲ್ ಗೆ 11.53 ರೂಪಾಯಿ ಹೆಚ್ಚಳವಾದಂತಾಗಿದೆ.

ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಈ ರೀತಿ ಇವೆ

ಭೂಪಾಲ್- ಪೆಟ್ರೋಲ್ 88.08 ರೂ., ಡೀಸೆಲ್ 80.39 ರೂ.
ಮುಂಬೈ- ಪೆಟ್ರೋಲ್ 87.19 ರೂ., ಡೀಸೆಲ್ 79.28 ರೂ.
ಚೆನ್ನೈ- ಪೆಟ್ರೋಲ್ 83.63 ರೂ., ಡೀಸೆಲ್ 78.12 ರೂ.
ಪಾಟ್ನಾ- ಪೆಟ್ರೋಲ್ 83.31ರೂ., ಡೀಸೆಲ್ 77.88 ರೂ.
ಬೆಂಗಳೂರು- ಪೆಟ್ರೋಲ್ 83.02 ರೂ., ಡೀಸೆಲ್ 76. 60 ರೂ.
ಕೋಲ್ಕತ್ತಾ- ಪೆಟ್ರೋಲ್ 82.10 ರೂ., ಡೀಸೆಲ್ 76.16 ರೂ.
ಲಕ್ನೋ- ಪೆಟ್ರೋಲ್ 80.98 ರೂ., ಡೀಸೆಲ್ 72.92 ರೂ.
ದೆಹಲಿ- ಪೆಟ್ರೋಲ್ 80.43 ರೂ., ಡೀಸೆಲ್ 81.05 ರೂ.
ರಾಂಚಿ- ಪೆಟ್ರೋಲ್ 80.29 ರೂ., ಡೀಸೆಲ್ 76.95 ರೂ.


ಇದನ್ನೂ ಓದಿ: ಸೂಕ್ಷ್ಮತೆ ಇಲ್ಲದ ಕೇಂದ್ರ ಸರ್ಕಾರ ಬಿಕ್ಕಟ್ಟಿನ ಸಮುಯದಲ್ಲೂ ತೈಲ ಬೆಲೆ ಹೆಚ್ಚಿಸಿದೆ: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...