Homeಮುಖಪುಟಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ (ರೆಗ್ಯುಲೇಷನ್ಸ್) ಕಾಯ್ದೆ 1995 ರ ಅಡಿಯಲ್ಲಿ ಕಾರ್ಯಕ್ರಮದ ಪ್ರೊಮೋ ನಿಯಮವನ್ನು ಉಲ್ಲಂಘಿಸುತ್ತದೆ ಎಂದಿದ್ದ ದೆಹಲಿ ಹೈಕೋರ್ಟ್ ಆಗಸ್ಟ್ 29 ರಂದು ಕಾರ್ಯಕ್ರಮದ ಮೇಲಿನ ತಡೆಯನ್ನು ವಾಪಾಸು ಪಡೆಯಲು ನಿರಾಕರಿಸಿತ್ತು.

- Advertisement -
- Advertisement -

ದೆಹಲಿ ಹೈಕೋರ್ಟ್ ತಡೆಹಿಡಿದಿದ್ದ ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮ “ಯುಪಿಎಸ್ಸಿ ಜಿಹಾದ್” ಕಾರ್ಯಕ್ರಮ ಪ್ರಸಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕಾರ್ಯಕ್ರಮವು ಯಾವುದೇ ನಿಯಮವನ್ನು ಉಲ್ಲಂಘಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಚಾನೆಲ್‌ಗೆ ನಿರ್ದೇಶನ ನೀಡಿದ್ದು, ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹೇಳಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಸುದರ್ಶನ ಟಿವಿಯ ಸುರೇಶ್ ಚಾವಂಕೆ ಆಗಸ್ಟ್ 25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್‌ಗೆ ಟ್ಯಾಗ್ ಮಾಡಿ ವಿವಾದಾತ್ಮಕ ಪ್ರೋಮೋವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ಭಾರತೀಯ ಅಧಿಕಾರಶಾಹಿಯಲ್ಲಿ ಮುಸ್ಲಿಮರ ನುಸುಳುಕೋರತನ ಎಂದು ಕರೆದು, ಮುಸ್ಲಿಮರು ಪ್ರತಿಷ್ಠಿತ ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರಿ ಸಂಖ್ಯೆಯಲ್ಲಿ ಹೇಗೆ ಉತ್ತೀರ್ಣರಾಗುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಅವರು ಜಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ವಿದ್ಯಾರ್ಥಿಗಳನ್ನು “ಜಿಹಾದಿಸ್ ಆಫ್ ಜಾಮಿಯಾ” ಎಂದು ಉಲ್ಲೇಖಿಸಿ, ‘ಯುಪಿಎಸ್‌ಸಿ ಜಿಹಾದ್’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಕೂಡಾ ಬಳಸಿದ್ದರು.

ಕಾರ್ಯಕ್ರಮದ ಪ್ರೊಮೋ ಪ್ರಸಾರವಾದ ನಂತರ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಹಳೆ ವಿದ್ಯಾರ್ಥಿಗಳು ಚಾನೆಲ್ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಕುರಿತು ವಿಚಾರಣೆ ಮಾಡಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಪೀಠವು ಸುದರ್ಶನ್ ಟಿವಿ ಕಾರ್ಯಕ್ರಮವನ್ನು ಪ್ರಸಾರ ಮಾಡುವುದನ್ನು ತಡೆಹಿಡಿದಿತ್ತು.

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ (ರೆಗ್ಯುಲೇಷನ್ಸ್) ಕಾಯ್ದೆ 1995 ರ ಅಡಿಯಲ್ಲಿ ಕಾರ್ಯಕ್ರಮದ ಪ್ರೊಮೋ ನಿಯಮವನ್ನು ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ಹೇಳಿತ್ತು.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ.

ಹೈಕೋರ್ಟ್ ತನ್ನ ಆದೇಶದಲ್ಲಿ, “ನ್ಯಾಯಾಲಯದ ಗ್ರಹಿಕೆಯ ಆಧಾರದ ಮೇಲೆ ಕಾರ್ಯಕ್ರಮವು ನಿಮಯಗಳನ್ನು ಉಲ್ಲಂಘಿಸುತ್ತದೆಯೇ ಇಲ್ಲವೋ ಎಂಬುದನ್ನು ತೀರ್ಮಾನಿಸಿ ಕಾರ್ಯಕ್ರಮ ಪ್ರಸಾರಕ್ಕೆ ಅನುಮತಿ ನೀಡಬೇಕೆ ಬೇಡವೇ ಎಂಬುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎಂದು ಹೇಳಿತ್ತು.

ನ್ಯಾಯಾಲಯದ ನಿರ್ದೇಶನಗಳಿಗೆ ಅನುಗುಣವಾಗಿ ಸಚಿವಾಲಯವು ಸುದರ್ಶನ್ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚಾವಂಕೆ ಅವರಿಗೆ ನೋಟಿಸ್ ನೀಡಿತ್ತು. ಆದರೆ ಚಾನೆಲ್ ಕಾರ್ಯಕ್ರಮವನ್ನು ಪ್ರಸಾರ ಮಾಡುವ ಮೊದಲು ಸಚಿವಾಲಯವು ಕಾರ್ಯಕ್ರಮವನ್ನು ಸೆನ್ಸಾರ್ ಮಾಡಲು ಸಾಧ್ಯವಿಲ್ಲ ಎಂದು ಚಾನೆಲ್ ವಾದಿಸಿದೆ.

ಯುಪಿಎಸ್‌ಸಿಯಲ್ಲಿ ಆಯ್ಕೆಯಾದ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ 30 ವಿದ್ಯಾರ್ಥಿಗಳಲ್ಲಿ ಸುಮಾರು 50% ಅಭ್ಯರ್ಥಿಗಳು ಮುಸ್ಲಿಮೇತರಾಗಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿ, ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹಾಸ್ಟೆಲ್ ಸೌಲಭ್ಯದೊಂದಿಗೆ ಉಚಿತ ತರಬೇತಿಯನ್ನು ನೀಡುತ್ತದೆ. ಈ ಸೌಲಭ್ಯವು ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಮುಕ್ತವಾಗಿದೆ. ಮಹಿಳಾ ಅಭ್ಯರ್ಥಿಗಳು ಸಹ ಈ ಅವಕಾಶವನ್ನು ಪಡೆಯಲು ಅರ್ಹರಾಗಿದ್ದಾರೆ.

ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ಕೇಂದ್ರ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಜೆಎನ್‌ಯು ಮತ್ತು ಅಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯ ಸೇರಿದಂತೆ 40 ಕೇಂದ್ರೀಯ ವಿಶ್ವವಿದ್ಯಾನಿಲಯಗಳನ್ನು ಹಿಂದಿಕ್ಕಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಪ್ರಥಮ ಸ್ಥಾನ ಪಡೆದಿದೆ.


ಇದನ್ನೂ ಓದಿ: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...