Homeಮುಖಪುಟಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ (ರೆಗ್ಯುಲೇಷನ್ಸ್) ಕಾಯ್ದೆ 1995 ರ ಅಡಿಯಲ್ಲಿ ಕಾರ್ಯಕ್ರಮದ ಪ್ರೊಮೋ ನಿಯಮವನ್ನು ಉಲ್ಲಂಘಿಸುತ್ತದೆ ಎಂದಿದ್ದ ದೆಹಲಿ ಹೈಕೋರ್ಟ್ ಆಗಸ್ಟ್ 29 ರಂದು ಕಾರ್ಯಕ್ರಮದ ಮೇಲಿನ ತಡೆಯನ್ನು ವಾಪಾಸು ಪಡೆಯಲು ನಿರಾಕರಿಸಿತ್ತು.

- Advertisement -
- Advertisement -

ದೆಹಲಿ ಹೈಕೋರ್ಟ್ ತಡೆಹಿಡಿದಿದ್ದ ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮ “ಯುಪಿಎಸ್ಸಿ ಜಿಹಾದ್” ಕಾರ್ಯಕ್ರಮ ಪ್ರಸಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕಾರ್ಯಕ್ರಮವು ಯಾವುದೇ ನಿಯಮವನ್ನು ಉಲ್ಲಂಘಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಚಾನೆಲ್‌ಗೆ ನಿರ್ದೇಶನ ನೀಡಿದ್ದು, ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹೇಳಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಸುದರ್ಶನ ಟಿವಿಯ ಸುರೇಶ್ ಚಾವಂಕೆ ಆಗಸ್ಟ್ 25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್‌ಗೆ ಟ್ಯಾಗ್ ಮಾಡಿ ವಿವಾದಾತ್ಮಕ ಪ್ರೋಮೋವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ಭಾರತೀಯ ಅಧಿಕಾರಶಾಹಿಯಲ್ಲಿ ಮುಸ್ಲಿಮರ ನುಸುಳುಕೋರತನ ಎಂದು ಕರೆದು, ಮುಸ್ಲಿಮರು ಪ್ರತಿಷ್ಠಿತ ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರಿ ಸಂಖ್ಯೆಯಲ್ಲಿ ಹೇಗೆ ಉತ್ತೀರ್ಣರಾಗುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಅವರು ಜಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ವಿದ್ಯಾರ್ಥಿಗಳನ್ನು “ಜಿಹಾದಿಸ್ ಆಫ್ ಜಾಮಿಯಾ” ಎಂದು ಉಲ್ಲೇಖಿಸಿ, ‘ಯುಪಿಎಸ್‌ಸಿ ಜಿಹಾದ್’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಕೂಡಾ ಬಳಸಿದ್ದರು.

ಕಾರ್ಯಕ್ರಮದ ಪ್ರೊಮೋ ಪ್ರಸಾರವಾದ ನಂತರ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಹಳೆ ವಿದ್ಯಾರ್ಥಿಗಳು ಚಾನೆಲ್ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಕುರಿತು ವಿಚಾರಣೆ ಮಾಡಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಪೀಠವು ಸುದರ್ಶನ್ ಟಿವಿ ಕಾರ್ಯಕ್ರಮವನ್ನು ಪ್ರಸಾರ ಮಾಡುವುದನ್ನು ತಡೆಹಿಡಿದಿತ್ತು.

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ (ರೆಗ್ಯುಲೇಷನ್ಸ್) ಕಾಯ್ದೆ 1995 ರ ಅಡಿಯಲ್ಲಿ ಕಾರ್ಯಕ್ರಮದ ಪ್ರೊಮೋ ನಿಯಮವನ್ನು ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ಹೇಳಿತ್ತು.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ.

ಹೈಕೋರ್ಟ್ ತನ್ನ ಆದೇಶದಲ್ಲಿ, “ನ್ಯಾಯಾಲಯದ ಗ್ರಹಿಕೆಯ ಆಧಾರದ ಮೇಲೆ ಕಾರ್ಯಕ್ರಮವು ನಿಮಯಗಳನ್ನು ಉಲ್ಲಂಘಿಸುತ್ತದೆಯೇ ಇಲ್ಲವೋ ಎಂಬುದನ್ನು ತೀರ್ಮಾನಿಸಿ ಕಾರ್ಯಕ್ರಮ ಪ್ರಸಾರಕ್ಕೆ ಅನುಮತಿ ನೀಡಬೇಕೆ ಬೇಡವೇ ಎಂಬುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎಂದು ಹೇಳಿತ್ತು.

ನ್ಯಾಯಾಲಯದ ನಿರ್ದೇಶನಗಳಿಗೆ ಅನುಗುಣವಾಗಿ ಸಚಿವಾಲಯವು ಸುದರ್ಶನ್ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚಾವಂಕೆ ಅವರಿಗೆ ನೋಟಿಸ್ ನೀಡಿತ್ತು. ಆದರೆ ಚಾನೆಲ್ ಕಾರ್ಯಕ್ರಮವನ್ನು ಪ್ರಸಾರ ಮಾಡುವ ಮೊದಲು ಸಚಿವಾಲಯವು ಕಾರ್ಯಕ್ರಮವನ್ನು ಸೆನ್ಸಾರ್ ಮಾಡಲು ಸಾಧ್ಯವಿಲ್ಲ ಎಂದು ಚಾನೆಲ್ ವಾದಿಸಿದೆ.

ಯುಪಿಎಸ್‌ಸಿಯಲ್ಲಿ ಆಯ್ಕೆಯಾದ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ 30 ವಿದ್ಯಾರ್ಥಿಗಳಲ್ಲಿ ಸುಮಾರು 50% ಅಭ್ಯರ್ಥಿಗಳು ಮುಸ್ಲಿಮೇತರಾಗಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿ, ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹಾಸ್ಟೆಲ್ ಸೌಲಭ್ಯದೊಂದಿಗೆ ಉಚಿತ ತರಬೇತಿಯನ್ನು ನೀಡುತ್ತದೆ. ಈ ಸೌಲಭ್ಯವು ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಮುಕ್ತವಾಗಿದೆ. ಮಹಿಳಾ ಅಭ್ಯರ್ಥಿಗಳು ಸಹ ಈ ಅವಕಾಶವನ್ನು ಪಡೆಯಲು ಅರ್ಹರಾಗಿದ್ದಾರೆ.

ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ಕೇಂದ್ರ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಜೆಎನ್‌ಯು ಮತ್ತು ಅಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯ ಸೇರಿದಂತೆ 40 ಕೇಂದ್ರೀಯ ವಿಶ್ವವಿದ್ಯಾನಿಲಯಗಳನ್ನು ಹಿಂದಿಕ್ಕಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಪ್ರಥಮ ಸ್ಥಾನ ಪಡೆದಿದೆ.


ಇದನ್ನೂ ಓದಿ: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...