Homeಮುಖಪುಟಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಗೆ ಕೇಂದ್ರ ಸರ್ಕಾರದಿಂದ ಕತ್ತರಿ

ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಗೆ ಕೇಂದ್ರ ಸರ್ಕಾರದಿಂದ ಕತ್ತರಿ

ಕಳೆದ ನಾಲ್ಕು ತಿಂಗಳಿಂದ ನೇರ ಲಾಭ ವರ್ಗಾವಣೆ ಯೋಜನೆ (ಡಿಬಿಟಿ) ಅಡಿಯಲ್ಲಿ ಗ್ರಾಹಕರಿಗೆ ಯಾವುದೇ ಸಬ್ಸಿಡಿ ನೀಡಿಲ್ಲ.

- Advertisement -
- Advertisement -

ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಸಂಪೂರ್ಣ ಸ್ಥಗಿತಗೊಳಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗುತ್ತಿರುವುದರಿಂದ ಅಡುಗೆ ಅನಿಲ ಖರೀದಿಯಲ್ಲಿ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ರದ್ದುಗೊಳಿಸಿರುವುದಾಗಿ ಸರ್ಕಾರ ಹೇಳಿದೆ.

ಅಷ್ಟೇ ಅಲ್ಲದೆ ‌ಅಡುಗೆ ಅನಿಲದ ಬೆಲೆಯನ್ನು ಸಿಲಿಂಡರ್‌ಗೆ  100 ರೂಪಾಯಿ ಹೆಚ್ಚಿಸಲಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 2019 ರ ಜುಲೈನಲ್ಲಿ ಸುಮಾರು  494.35 ರೂಪಾಯಿ ಇದ್ದದ್ದು ಈ ವರ್ಷದ ಜುಲೈನಲ್ಲಿ 594 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ಇನ್ನು ಆರ್ಥಿಕ ಕುಸಿತದಲ್ಲಿರುವ ಕೇಂದ್ರ ಸರ್ಕಾರ ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮತ್ತು ಸಬ್ಸಿಡಿ ಸ್ಥಗಿತದಿಂದಾಗಿ ಸರ್ಕಾರಕ್ಕೆ 18,000 ಕೋಟಿ ರೂಪಾಯಿಯಿಂದ 22,000 ಕೋಟಿ ರೂಪಾಯಿ ಉಳಿತಾಯವಾಗುತ್ತದೆ ಎಂದಿದೆ.

ಆದರೆ ಸರ್ಕಾರವು ಕೊರೊನಾ ಸಂಕಷ್ಟದ ಸಮಯದಲ್ಲಿ ಪ್ರಧಾನ್ ಮಂತ್ರಿ ಉಜ್ವಲಾ ಯೋಜನೆಯ ಸುಮಾರು 8 ಕೋಟಿ ಗ್ರಾಹಕರಿಗೆ ಉಚಿತ ಸಿಲಿಂಡರ್‌ಗಳನ್ನು ನೀಡುವುದಾಗಿ ಘೋಷಿಸಿತ್ತು. ಹಾಗಾಗಿ ಅಂತಹ ಕುಟುಂಬಗಳಿಗೆ ಖರೀದಿಸಿದ ಹಣವನ್ನು ಅವರ ಖಾತೆಗಳಿಗೆ ಜಮೆ ಮಾಡುವುದಾಗಿ ಹೇಳಿದೆ. ಆದರೆ, ಯಾವ ರೀತಿಯ ಮಾನದಂಡದ ಮೇಲೆ ಹಣ ವಾಪಸ್‌ ನೀಡುತ್ತದೆ ಎಂಬುದೇ ಗೊಂದಲವಾಗಿದೆ.

ಸಬ್ಸಿಡಿ ನಿಲ್ಲಿಸುವುದಾಗಿ ಈಗ ತಿಳಿಸಿದ್ದರೂ ಸಹ ಕಳೆದ ನಾಲ್ಕು ತಿಂಗಳಿಂದ ನೇರ ಲಾಭ ವರ್ಗಾವಣೆ ಯೋಜನೆ (ಡಿಬಿಟಿ) ಅಡಿಯಲ್ಲಿ ಗ್ರಾಹಕರಿಗೆ ಯಾವುದೇ ಸಬ್ಸಿಡಿ ನೀಡಿಲ್ಲ. ಹೀಗಾಗಿ ಖಾತೆಗಳಿಗೆ ನಗದು ವರ್ಗಾವಣೆ ಮಾಡದಿರುವ ಬಗ್ಗೆ ಗ್ರಾಹಕರು ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.  ಭಾರತದಲ್ಲಿ ಸುಮಾರು 27.76 ಕೋಟಿ ಎಲ್‌ಪಿಜಿ ಗ್ರಾಹಕರು ಇದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧದ ಗಂಭೀರ ಪ್ರಕರಣಗಳನ್ನು ಹಿಂಪಡೆದ ಸರ್ಕಾರ: ಹಲವರಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...