Homeಕರ್ನಾಟಕಕೇಂದ್ರ ಸರ್ಕಾರ ಖದೀಮ ಶ್ರೀಮಂತರ ಪರ ನಿಂತಿದೆ: ಕಾರ್ಮಿಕ ದಿನದಂದು ರಾಷ್ಟ್ರಪತಿಗೆ ಪತ್ರ

ಕೇಂದ್ರ ಸರ್ಕಾರ ಖದೀಮ ಶ್ರೀಮಂತರ ಪರ ನಿಂತಿದೆ: ಕಾರ್ಮಿಕ ದಿನದಂದು ರಾಷ್ಟ್ರಪತಿಗೆ ಪತ್ರ

ಪತ್ರದಲ್ಲಿ ಹೋರಾಟಗಾರರು ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಕಾರ್ಮಿಕರ ನೆರವಗೆ ನಿಲ್ಲಬೇಕಾಗಿದ್ದ ಸರ್ಕಾರ ಖದೀಮರಾದ ಶ್ರೀಮಂತರ 68,607 ಕೋಟಿಯಷ್ಟು ಹಣವನ್ನು ಮನ್ನಾ ಮಾಡಿ ನಿರ್ಲಜ್ಜತೆ ಮರೆದಿದೆ ಎಂದು ಬರೆಯಲಾಗಿದೆ

- Advertisement -
- Advertisement -

ಕೊರೊನಾದಿಂದ ಕಷ್ಟಪಡುತ್ತಿರುವ ಕಾರ್ಮಿಕ ಹಾಗೂ ರೈತರ ಸಂಕಷ್ಟಗಳಿಗೆ ನೆರವಾಗದೆ ಶ್ರೀಮಂತರ ಹಿತಾಸಕ್ತಿ ಕಾಪಾಡುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಕಾರ್ಮಿಕರ ದಿನವಾದ ಇಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಸಾಮಾಜಿಕ ಹೋರಾಟಗಾರರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಹೋರಾಟಗಾರರು ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಕಾರ್ಮಿಕರ ನೆರವಗೆ ನಿಲ್ಲಬೇಕಾಗಿದ್ದ ಸರ್ಕಾರ ಖದೀಮರಾದ ಶ್ರೀಮಂತರ 68,607 ಕೋಟಿಯಷ್ಟು ಹಣವನ್ನು ಮನ್ನಾ ಮಾಡಿ ನಿರ್ಲಜ್ಜತೆ ಮರೆದಿದೆ ಎಂದು ಹೇಳಿದ್ದಾರೆ.

“ಕೊರೊನಾದ ಸಂಕಟಮಯ ಸಂದರ್ಭದಲ್ಲಿಯೂ ಕಾರ್ಮಿಕರ ದಿನವನ್ನು ಆಚರಿಸುವುದು ಹಿಂದೆಂಗಿಂತಲೂ ಹೆಚ್ಚು ಪ್ರಸ್ತುತವಾಗಿದೆ. ದೇಶದಲ್ಲಿ ಕೋಟ್ಯಾಂತರ ಕಾರ್ಮಿಕರು ಅಕ್ಷರಶಃ ತುತ್ತು ಅನ್ನವಿಲ್ಲದೆ ಬೀದಿಗೆ ಎಸೆಯಲ್ಪಟ್ಟಿದ್ದಾರೆ. ಲಾಕ್ ಡೌನ್ ಕಾರ್ಮಿಕರನ್ನು ನಿರ್ಗತಿಕರನ್ನಾಗಿಸಿದೆ. ಇಂತಹ ಪರಿಸ್ಥಿತಿಯಲ್ಲಿ ದುಡಿಯುವ ಜನತೆಯ ಸಂಕಷ್ಟಕ್ಕೆ ಸರಕಾರ ನೆರವಾಗಬೇಕಿತ್ತು. ಆದರೆ ಖದೀಮರಾದ ಉದ್ದಿಮೆದಾರರ ಹಿತಾಸಕ್ತಿ ಕಾಪಾಡುತ್ತಿರುವುದು ಅಕ್ಷಮ್ಯ. ರೈತರ ಸಾಲದಲ್ಲಿ ನಯಾಪೈಸೆಯೂ ಮನ್ನಾ ಮಾಡದ ಸರಕಾರ ಕೋಟ್ಯಾಂತರ ಸಾಲ ಮುಳುಗಿಸಿ ದೇಶ ಬಿಟ್ಟು ಕಳ್ಳತನದಿಂದ ಓಡಿಹೋದ ಮೆಹುಲ್‌ ಚೋಕ್ಸಿ, ನೀರವ ಮೋದಿ, ವಿಜಯ ಮಲ್ಯ ಮುಂತಾದವರಲ್ಲದೆ ರಾಮದೇವ ಬಾಬಾದಂಥ 50 ಕ್ಕೂ ಹೆಚ್ಚು ಉಧ್ಯಮಿಗಳ ಸುಮಾರು 68,607 ಕೋಟಿ ಸಾಲವನ್ನು ಮನ್ನಾ ಮಾಡಿ ನಿರ್ಲಜ್ಜತೆ ಮೆರೆಯುತ್ತಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಕೊರೊನಾ ಸಂಕಷ್ಟ ಸಮಯದಲ್ಲಿ ಕಾರ್ಮಿಕರಿಗೆ ಸಂಬಳ ನೀಡುವಂತೆ ಉದ್ದಿಮೆದಾರರಿಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದಿರುವುದು ನಾಚಿಕೆಗೇಡು ನಿರ್ಧಾರ ಎಂದು ಪತ್ರದಲ್ಲಿ ಬರೆಯಲಾಗಿದೆ. 

“ಅರ್ಥಿಕ ಸಂಕಷ್ಟವಿದೆ ಎಂಬ ನೆಪವೊಡ್ಡಿ ನೌಕರರ ತುಟ್ಟಭತ್ಯೆ ಕಡಿತ ಮಾಡುವ ಸರಕಾರ ಆಗರ್ಭ ಶ್ರೀಮಂತ ಕಳ್ಳರ ಸಾಲ ಮಾಫ್ ಮಾಡುತ್ತದೆ. ಇನ್ನೊಂದೆಡೆ ಖಾಸಗಿ ಉದ್ದಿಮೆದಾರರು ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಮಿಕರಿಗೆ ಸಂಬಳ ನೀಡಲೇಬೇಕೆಂದು ಒತ್ತಾಯಿಸಲಾಗದೆಂದು ಕಾರ್ಮಿಕ ಸಚಿವಾಲಯದ ಸಂಸದೀಯ ಸಮಿತಿ ಕೈ ಬಿಟ್ಟಿದೆ. ಇದು ತೀರಾ ನಾಚಿಕೆಗೇಡು ನಿರ್ಧಾರವಲ್ಲವೆ?. ಪ್ರಾಕೃತಿಕ ವಿಕೋಪ, ಉಗ್ರವಾದ ಜನವಿರೋಧಿ ಸರಕಾರ, ರೈತರ ಸರಣಿ ಆತ್ಮಹತ್ಯೆಗಳು, ಕಾರ್ಮಿಕರ ದಾರುಣ ಸಾವು, ಮಧ್ಯಮ ವರ್ಗದವರ ಅತಂತ್ರ ಸ್ಥಿತಿ ಮಾನವ ಸಮುದಾಯನ್ನು ವಿನಾಶಗೈಯಲು ಶಪಥ ಮಾಡಿವೆ” ಎಂದು ಪತ್ರದಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಮಹಾವಲಸೆ: ವಲಸೆ ಕಾರ್ಮಿಕರ ನಡು ಮುರಿದ ಮೋದಿ


“ಸರಕಾರದ ಬಂದವಾಳಶಾಹಿ ಪರ ನೀತಿಯನ್ನು ಅಂಬೇಡ್ಕರ್ ಮತ್ತು ಗಾಂಧೀಜಿಯ ಭಾವಚಿತ್ರವನ್ನಿಟ್ಟು ನಮನ ಸಲ್ಲಿಸುವ ಮೂಲಕ ಕಾರ್ಮಿಕರ ದಿನವಾದ ಇಂದು ಸಮಸ್ತ ಜನತೆ ಖಂಡಿಸುತ್ತದೆ, ಜನತೆಯಿಂದ ಆಯ್ಕೆಯಾದ ಸರಕಾರ ಸಮಸ್ತ ಜನತೆಯ ಹಿತಾಸಕ್ತಿ ಕಾಪಾಡುವುದು ಬಿಟ್ಟು ಕೆಲವೇ ಶ್ರೀಮಂತರ ಪರ ನಿಲ್ಲುತ್ತಿರುವುದು ವರ್ತಮಾನದ ಬಹು ದೊಡ್ಡ ದುರಂತ.”

ಇನ್ನಾದರೂ ಬಂಡವಾಳಿಗರ ಪರ ವಹಿಸುವುದು ಬಿಟ್ಟು ದುಡಿಯುವವರ ಹೊಟ್ಟೆಗೆ ಕನಿಷ್ಟ ಅನ್ನ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ, ಅಲ್ಲದೆ ಹಸಿವಿನ ಬೆಂಕಿ ಆಳುವ ಸರಕಾರಗಳನ್ನು ಆಪೋಷನ ತೆಗೆದುಕೊಳ್ಳದೆ ಇರದು ಎಂಬ ಎಚ್ಚರಿಕೆಯನ್ನು ಪತ್ರವೂ ನೀಡಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ಜೊತೆಗೆ ಹಿರಿಯ ಸಾಹಿತಿ ದೇವನೂರ ಮಹಾದೇವ, ಭಾಷಾ ತಜ್ಞರಾದ ಪದ್ಮಶ್ರೀ ಗಣೇಶ ದೇವಿ, ಮಾಜಿ ಸಚಿವರಾದ ಡಾ. ಶರಣ ಪ್ರಕಾಶ ಪಾಟಿಲ, ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ, ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು, ಹಿರಿಯ ಸಾಹಿತಿಗಳಾದ ಪ್ರೊ.ಆರ್.ಕೆ.ಹುಡಗಿ, ವಿಚಾರವಾದಿಗಳಾದ ಡಾ.ಸಿದ್ದನಗೌಡ ಪಾಟಿಲ, ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ಮಾಜಿ ಶಾಸಕರಾದ ಮೈಕಲ್ ಫರ್ನಾಂಡಿಸ್, ಮಾಜಿ ಶಾಸಕರಾದ ಡಾ. ಸುನೀಲಂ, ಸಾಮಾಜಿಕ ಮುಖಂಡರಾದ ಸಿ.ಬಿ. ಪಾಟೀಲ, ಕೃಷಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ, ಸಾಹಿತಿಗಳಾದ ಡಾ. ಕಾಶೀನಾಥ ಅಂಬಲಗೆ, ಸಾಮಾಜಿಕ ಮುಖಂಡರಾದ ಮಾರುತಿ ಗೋಖಲೆ, ಸಾಹಿತಿಗಳಾದ ಡಾ. ಪ್ರಭು ಖಾನಪೂರೆ, ಸಾಮಾಜಿಕ ಮುಖಂಡರುಗಳಾದ ದತ್ತಾತ್ರಯ ಇಕ್ಕಳಕಿ, ಅಬ್ದುಲ್ ಹಮೀದ್, ಮೆಹರಾಜ್ ಪಟೇಲ ಸೇರಿದಂತೆ ಹಲವಾರು ಜನರು ಸಹಮತಿ ಸೂಚಿಸಿ ಪತ್ರಕ್ಕೆ ತಮ್ಮ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಹಸಿವಿನ ಸಾವುಗಳು ಮತ್ತು ತುಂಬಿ ತುಳುಕುತ್ತಿರುವ ಗೋದಾಮುಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dear Sir,

    I do NOT know how should I express my opinion about this article, whether this has been written without the knowledge of the financial system and legal process.

    First of all, I want to enlighten the author and the news paper that the ‘write off’ means not ‘waive off’. The RBI has written off the loans (not waive off) and it is as per the normal procedure and does not mean anything else.

    Still the defualters owe the principal with interest and they have to pay to the bank and the process to collect that money is on. Apart from these all other legal processes are also on and are in aggressive mode against the defaulters. This has been clarified by all chartered accountants and financial experts.

    Please do not misguide the society and public and create gullible situation.

    Thanks,
    Venu

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...