Homeಕರ್ನಾಟಕಕೇಂದ್ರ ಸರ್ಕಾರ ಖದೀಮ ಶ್ರೀಮಂತರ ಪರ ನಿಂತಿದೆ: ಕಾರ್ಮಿಕ ದಿನದಂದು ರಾಷ್ಟ್ರಪತಿಗೆ ಪತ್ರ

ಕೇಂದ್ರ ಸರ್ಕಾರ ಖದೀಮ ಶ್ರೀಮಂತರ ಪರ ನಿಂತಿದೆ: ಕಾರ್ಮಿಕ ದಿನದಂದು ರಾಷ್ಟ್ರಪತಿಗೆ ಪತ್ರ

ಪತ್ರದಲ್ಲಿ ಹೋರಾಟಗಾರರು ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಕಾರ್ಮಿಕರ ನೆರವಗೆ ನಿಲ್ಲಬೇಕಾಗಿದ್ದ ಸರ್ಕಾರ ಖದೀಮರಾದ ಶ್ರೀಮಂತರ 68,607 ಕೋಟಿಯಷ್ಟು ಹಣವನ್ನು ಮನ್ನಾ ಮಾಡಿ ನಿರ್ಲಜ್ಜತೆ ಮರೆದಿದೆ ಎಂದು ಬರೆಯಲಾಗಿದೆ

- Advertisement -
- Advertisement -

ಕೊರೊನಾದಿಂದ ಕಷ್ಟಪಡುತ್ತಿರುವ ಕಾರ್ಮಿಕ ಹಾಗೂ ರೈತರ ಸಂಕಷ್ಟಗಳಿಗೆ ನೆರವಾಗದೆ ಶ್ರೀಮಂತರ ಹಿತಾಸಕ್ತಿ ಕಾಪಾಡುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಕಾರ್ಮಿಕರ ದಿನವಾದ ಇಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಸಾಮಾಜಿಕ ಹೋರಾಟಗಾರರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಹೋರಾಟಗಾರರು ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಕಾರ್ಮಿಕರ ನೆರವಗೆ ನಿಲ್ಲಬೇಕಾಗಿದ್ದ ಸರ್ಕಾರ ಖದೀಮರಾದ ಶ್ರೀಮಂತರ 68,607 ಕೋಟಿಯಷ್ಟು ಹಣವನ್ನು ಮನ್ನಾ ಮಾಡಿ ನಿರ್ಲಜ್ಜತೆ ಮರೆದಿದೆ ಎಂದು ಹೇಳಿದ್ದಾರೆ.

“ಕೊರೊನಾದ ಸಂಕಟಮಯ ಸಂದರ್ಭದಲ್ಲಿಯೂ ಕಾರ್ಮಿಕರ ದಿನವನ್ನು ಆಚರಿಸುವುದು ಹಿಂದೆಂಗಿಂತಲೂ ಹೆಚ್ಚು ಪ್ರಸ್ತುತವಾಗಿದೆ. ದೇಶದಲ್ಲಿ ಕೋಟ್ಯಾಂತರ ಕಾರ್ಮಿಕರು ಅಕ್ಷರಶಃ ತುತ್ತು ಅನ್ನವಿಲ್ಲದೆ ಬೀದಿಗೆ ಎಸೆಯಲ್ಪಟ್ಟಿದ್ದಾರೆ. ಲಾಕ್ ಡೌನ್ ಕಾರ್ಮಿಕರನ್ನು ನಿರ್ಗತಿಕರನ್ನಾಗಿಸಿದೆ. ಇಂತಹ ಪರಿಸ್ಥಿತಿಯಲ್ಲಿ ದುಡಿಯುವ ಜನತೆಯ ಸಂಕಷ್ಟಕ್ಕೆ ಸರಕಾರ ನೆರವಾಗಬೇಕಿತ್ತು. ಆದರೆ ಖದೀಮರಾದ ಉದ್ದಿಮೆದಾರರ ಹಿತಾಸಕ್ತಿ ಕಾಪಾಡುತ್ತಿರುವುದು ಅಕ್ಷಮ್ಯ. ರೈತರ ಸಾಲದಲ್ಲಿ ನಯಾಪೈಸೆಯೂ ಮನ್ನಾ ಮಾಡದ ಸರಕಾರ ಕೋಟ್ಯಾಂತರ ಸಾಲ ಮುಳುಗಿಸಿ ದೇಶ ಬಿಟ್ಟು ಕಳ್ಳತನದಿಂದ ಓಡಿಹೋದ ಮೆಹುಲ್‌ ಚೋಕ್ಸಿ, ನೀರವ ಮೋದಿ, ವಿಜಯ ಮಲ್ಯ ಮುಂತಾದವರಲ್ಲದೆ ರಾಮದೇವ ಬಾಬಾದಂಥ 50 ಕ್ಕೂ ಹೆಚ್ಚು ಉಧ್ಯಮಿಗಳ ಸುಮಾರು 68,607 ಕೋಟಿ ಸಾಲವನ್ನು ಮನ್ನಾ ಮಾಡಿ ನಿರ್ಲಜ್ಜತೆ ಮೆರೆಯುತ್ತಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಕೊರೊನಾ ಸಂಕಷ್ಟ ಸಮಯದಲ್ಲಿ ಕಾರ್ಮಿಕರಿಗೆ ಸಂಬಳ ನೀಡುವಂತೆ ಉದ್ದಿಮೆದಾರರಿಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದಿರುವುದು ನಾಚಿಕೆಗೇಡು ನಿರ್ಧಾರ ಎಂದು ಪತ್ರದಲ್ಲಿ ಬರೆಯಲಾಗಿದೆ. 

“ಅರ್ಥಿಕ ಸಂಕಷ್ಟವಿದೆ ಎಂಬ ನೆಪವೊಡ್ಡಿ ನೌಕರರ ತುಟ್ಟಭತ್ಯೆ ಕಡಿತ ಮಾಡುವ ಸರಕಾರ ಆಗರ್ಭ ಶ್ರೀಮಂತ ಕಳ್ಳರ ಸಾಲ ಮಾಫ್ ಮಾಡುತ್ತದೆ. ಇನ್ನೊಂದೆಡೆ ಖಾಸಗಿ ಉದ್ದಿಮೆದಾರರು ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಮಿಕರಿಗೆ ಸಂಬಳ ನೀಡಲೇಬೇಕೆಂದು ಒತ್ತಾಯಿಸಲಾಗದೆಂದು ಕಾರ್ಮಿಕ ಸಚಿವಾಲಯದ ಸಂಸದೀಯ ಸಮಿತಿ ಕೈ ಬಿಟ್ಟಿದೆ. ಇದು ತೀರಾ ನಾಚಿಕೆಗೇಡು ನಿರ್ಧಾರವಲ್ಲವೆ?. ಪ್ರಾಕೃತಿಕ ವಿಕೋಪ, ಉಗ್ರವಾದ ಜನವಿರೋಧಿ ಸರಕಾರ, ರೈತರ ಸರಣಿ ಆತ್ಮಹತ್ಯೆಗಳು, ಕಾರ್ಮಿಕರ ದಾರುಣ ಸಾವು, ಮಧ್ಯಮ ವರ್ಗದವರ ಅತಂತ್ರ ಸ್ಥಿತಿ ಮಾನವ ಸಮುದಾಯನ್ನು ವಿನಾಶಗೈಯಲು ಶಪಥ ಮಾಡಿವೆ” ಎಂದು ಪತ್ರದಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಮಹಾವಲಸೆ: ವಲಸೆ ಕಾರ್ಮಿಕರ ನಡು ಮುರಿದ ಮೋದಿ


“ಸರಕಾರದ ಬಂದವಾಳಶಾಹಿ ಪರ ನೀತಿಯನ್ನು ಅಂಬೇಡ್ಕರ್ ಮತ್ತು ಗಾಂಧೀಜಿಯ ಭಾವಚಿತ್ರವನ್ನಿಟ್ಟು ನಮನ ಸಲ್ಲಿಸುವ ಮೂಲಕ ಕಾರ್ಮಿಕರ ದಿನವಾದ ಇಂದು ಸಮಸ್ತ ಜನತೆ ಖಂಡಿಸುತ್ತದೆ, ಜನತೆಯಿಂದ ಆಯ್ಕೆಯಾದ ಸರಕಾರ ಸಮಸ್ತ ಜನತೆಯ ಹಿತಾಸಕ್ತಿ ಕಾಪಾಡುವುದು ಬಿಟ್ಟು ಕೆಲವೇ ಶ್ರೀಮಂತರ ಪರ ನಿಲ್ಲುತ್ತಿರುವುದು ವರ್ತಮಾನದ ಬಹು ದೊಡ್ಡ ದುರಂತ.”

ಇನ್ನಾದರೂ ಬಂಡವಾಳಿಗರ ಪರ ವಹಿಸುವುದು ಬಿಟ್ಟು ದುಡಿಯುವವರ ಹೊಟ್ಟೆಗೆ ಕನಿಷ್ಟ ಅನ್ನ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ, ಅಲ್ಲದೆ ಹಸಿವಿನ ಬೆಂಕಿ ಆಳುವ ಸರಕಾರಗಳನ್ನು ಆಪೋಷನ ತೆಗೆದುಕೊಳ್ಳದೆ ಇರದು ಎಂಬ ಎಚ್ಚರಿಕೆಯನ್ನು ಪತ್ರವೂ ನೀಡಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ಜೊತೆಗೆ ಹಿರಿಯ ಸಾಹಿತಿ ದೇವನೂರ ಮಹಾದೇವ, ಭಾಷಾ ತಜ್ಞರಾದ ಪದ್ಮಶ್ರೀ ಗಣೇಶ ದೇವಿ, ಮಾಜಿ ಸಚಿವರಾದ ಡಾ. ಶರಣ ಪ್ರಕಾಶ ಪಾಟಿಲ, ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ, ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು, ಹಿರಿಯ ಸಾಹಿತಿಗಳಾದ ಪ್ರೊ.ಆರ್.ಕೆ.ಹುಡಗಿ, ವಿಚಾರವಾದಿಗಳಾದ ಡಾ.ಸಿದ್ದನಗೌಡ ಪಾಟಿಲ, ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ಮಾಜಿ ಶಾಸಕರಾದ ಮೈಕಲ್ ಫರ್ನಾಂಡಿಸ್, ಮಾಜಿ ಶಾಸಕರಾದ ಡಾ. ಸುನೀಲಂ, ಸಾಮಾಜಿಕ ಮುಖಂಡರಾದ ಸಿ.ಬಿ. ಪಾಟೀಲ, ಕೃಷಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ, ಸಾಹಿತಿಗಳಾದ ಡಾ. ಕಾಶೀನಾಥ ಅಂಬಲಗೆ, ಸಾಮಾಜಿಕ ಮುಖಂಡರಾದ ಮಾರುತಿ ಗೋಖಲೆ, ಸಾಹಿತಿಗಳಾದ ಡಾ. ಪ್ರಭು ಖಾನಪೂರೆ, ಸಾಮಾಜಿಕ ಮುಖಂಡರುಗಳಾದ ದತ್ತಾತ್ರಯ ಇಕ್ಕಳಕಿ, ಅಬ್ದುಲ್ ಹಮೀದ್, ಮೆಹರಾಜ್ ಪಟೇಲ ಸೇರಿದಂತೆ ಹಲವಾರು ಜನರು ಸಹಮತಿ ಸೂಚಿಸಿ ಪತ್ರಕ್ಕೆ ತಮ್ಮ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಹಸಿವಿನ ಸಾವುಗಳು ಮತ್ತು ತುಂಬಿ ತುಳುಕುತ್ತಿರುವ ಗೋದಾಮುಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dear Sir,

    I do NOT know how should I express my opinion about this article, whether this has been written without the knowledge of the financial system and legal process.

    First of all, I want to enlighten the author and the news paper that the ‘write off’ means not ‘waive off’. The RBI has written off the loans (not waive off) and it is as per the normal procedure and does not mean anything else.

    Still the defualters owe the principal with interest and they have to pay to the bank and the process to collect that money is on. Apart from these all other legal processes are also on and are in aggressive mode against the defaulters. This has been clarified by all chartered accountants and financial experts.

    Please do not misguide the society and public and create gullible situation.

    Thanks,
    Venu

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...