Homeಮುಖಪುಟಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

- Advertisement -
- Advertisement -

ಕೊರೊನಾವನ್ನು ಬಳಸಿಕೊಂಡು ಬಿಜೆಪಿ ಸರ್ಕಾರಗಳನ್ನು ಹಣಿಯಲು ಕಾಂಗ್ರೆಸ್ ಪಕ್ಷವು “ಟೂಲ್ಕಿಟ್” ತಯಾರಿಸಿದೆ ಎಂದು ಬಿಜೆಪಿಯ ನಾಯಕ ಸಂಬಿತ್‌ ಪಾತ್ರ ಟ್ವೀಟ್ ಮಾಡಿದ್ದರು. ಆದರೆ ಈ ಟ್ವೀಟ್‌ಗೆ ‘ತಿರುಚಲ್ಪಟ್ಟ ವಿಷಯ’(ಮ್ಯಾನಿಪ್ಯುಲೇಟೆಡ್ ಮೀಡಿಯಾ) ಎಂದು ಟ್ವಿಟರ್‌ ಅಧೀಕೃತವಾಗಿ ಟ್ಯಾಗ್‌ ಮಾಡಿ, ಅವರು ಹಂಚಿರುವ ಮಾಹಿತಿ ಸುಳ್ಳು ಎಂದು ಸೂಚಿಸಿದೆ. ಇದು ಬಿಜೆಪಿಗೆ ಭಾರಿ ಮುಖಭಂಗ ಉಂಟು ಮಾಡಿದ್ದು, ಇದೀಗ ಕೇಂದ್ರ ಸರ್ಕಾರವು ಆ ಟ್ಯಾಗ್‌ ಅನ್ನು ತೆಗೆಯುವಂತೆ ಟ್ವಿಟರ್‌ ಅನ್ನು ಕೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಂಬಿತ್‌ ಪಾತ್ರ ಅವರ ಟ್ವೀಟ್‌ಗೆ ಹಾಕಿರುವ ‘ಟ್ಯಾಗ್‌’ ಪೂರ್ವಾಗ್ರಹದಿಂದ ಕೂಡಿದ್ದು, ಸ್ಪಷ್ಟ ಅತಿಕ್ರಮಣ ಮತ್ತು ಅನಗತ್ಯವಾಗಿದೆ ಎಂದು ಹೇಳಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಟ್ವಿಟರ್‌‌ನ ಜಾಗತಿಕ ತಂಡದೊಂದಿಗೆ, ಕಠಿಣವಾದ ಸಂವಹನ ನಡೆಸಿದ್ದು, ‘ತಿರುಚಲ್ಪಟ್ಟ ವಿಷಯ’ ಎಂಬ ಟ್ಯಾಗ್‌ ಹಾಕಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಮೇ 18 ರಂದು ಸಂಬಿತ್ ಪತ್ರಾ ಮಾಡಿದ್ದ ಟ್ವೀಟ್‌ ಅನ್ನು ಹಲವಾರು ಬಿಜೆಪಿ ನಾಯಕರು ಹಂಚಿಕೊಂಡಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಹಣಿಯಲು, ಕೊರೊನಾವನ್ನು ಬಳಸುವಂತೆ ಕಾಂಗ್ರೆಸ್ “ಟೂಲ್ಕಿಟ್” ತಯಾರಿಸಿದೆ ಎಂದು ಹೇಳುವ ಸ್ಕ್ರೀನ್‌‌ಶಾರ್ಟ್‌ಗಳನ್ನು ಟ್ವೀಟ್ ಮಾಡಿದ್ದರು.

 

ಆದರೆ ಈ ಸ್ಕ್ರೀನ್‌ಶಾಟ್‌ ನಕಲಿ ಹಾಗೂ ಪಕ್ಷದ ಲೆಟರ್‌‌‌ಹೆಡ್‌ ಅನ್ನು ನಕಲಿಸಿ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಅದೇ ದಿನ ಛತ್ತೀಸ್‌ಗಡ ಮತ್ತು ರಾಜಸ್ಥಾನದಲ್ಲಿ ಎಫ್‌ಐಆರ್ ದಾಖಲಿಸಿತ್ತು.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಅಷ್ಟೇ ಅಲ್ಲದೆ, ಸಂಬಿತ್ ಪತ್ರ ಮತ್ತು ಇತರ ಬಿಜೆಪಿ ನಾಯಕರ ಟ್ವೀಟ್‌ಗಳನ್ನು ತೆಗೆದುಹಾಕಿ, ಸಮಾಜದಲ್ಲಿ ತಪ್ಪು ಮಾಹಿತಿ ಮತ್ತು ಅಶಾಂತಿಯನ್ನು ಹರಡಿದ್ದಕ್ಕಾಗಿ ಅವರ ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಪಕ್ಷವು ನಿನ್ನೆ ಟ್ವಿಟರ್‌ಗೆ ಪತ್ರ ಬರೆದಿದೆ.

ಇದಾಗಿ ಸಂಜೆ, ಸಂಬಿತ್‌ ಪತ್ರಾ ಅವರ ಟ್ವೀಟ್ ಕೆಳಗೆ “ಮ್ಯಾನಿಪ್ಯುಲೇಟೆಡ್ ಮೀಡಿಯಾ” ಟ್ಯಾಗ್ ಕಾಣಿಸಿಕೊಂಡಿದೆ.

ಟ್ವಿಟರ್‌ನ ಈ ಕ್ರಮವನ್ನು “ಪೂರ್ವ ನಿರ್ಣಯ, ಪೂರ್ವಾಗ್ರಹ ಮತ್ತು ತನಿಖೆಯನ್ನು ಒಂದು ಕಡೆಗೆ ಮಾಡುವ ಉದ್ದೇಶಪೂರ್ವಕ ಪ್ರಯತ್ನ” ಎಂದು ಸರ್ಕಾರ ದೂಷಿಸಿದೆ.

“ಟೂಲ್ಕಿಟ್” ನ ನಿಖರತೆಯನ್ನು ಪ್ರಶ್ನಿಸಿ ಈಗಾಗಲೇ ದೂರು ನೀಡಲಾಗಿದೆ ಮತ್ತು ಅದು ತನಿಖೆಯಲ್ಲಿದೆ. ಈ ವಿಷಯದ ಕುರಿತು ಸತ್ಯತೆಯನ್ನು ತನಿಖೆಯು ನಿರ್ಧರಿಸುತ್ತದೆಯೆ ಹೊರತು ಟ್ವಿಟ್ಟರ್ ಅಲ್ಲ. ಟ್ವಿಟರ್ ತನಿಖಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಬಾರದು. ಈ ವಿಷಯವು ತನಿಖೆಯಲ್ಲಿದ್ದಾಗ ಟ್ವಿಟರ್ ತನ್ನ ತೀರ್ಪನ್ನು ರವಾನಿಸಬಾರು” ಎಂದು ಸರ್ಕಾರ ಹೇಳಿದ್ದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...