Homeಮುಖಪುಟಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

- Advertisement -
- Advertisement -

ಕೊರೊನಾವನ್ನು ಬಳಸಿಕೊಂಡು ಬಿಜೆಪಿ ಸರ್ಕಾರಗಳನ್ನು ಹಣಿಯಲು ಕಾಂಗ್ರೆಸ್ ಪಕ್ಷವು “ಟೂಲ್ಕಿಟ್” ತಯಾರಿಸಿದೆ ಎಂದು ಬಿಜೆಪಿಯ ನಾಯಕ ಸಂಬಿತ್‌ ಪಾತ್ರ ಟ್ವೀಟ್ ಮಾಡಿದ್ದರು. ಆದರೆ ಈ ಟ್ವೀಟ್‌ಗೆ ‘ತಿರುಚಲ್ಪಟ್ಟ ವಿಷಯ’(ಮ್ಯಾನಿಪ್ಯುಲೇಟೆಡ್ ಮೀಡಿಯಾ) ಎಂದು ಟ್ವಿಟರ್‌ ಅಧೀಕೃತವಾಗಿ ಟ್ಯಾಗ್‌ ಮಾಡಿ, ಅವರು ಹಂಚಿರುವ ಮಾಹಿತಿ ಸುಳ್ಳು ಎಂದು ಸೂಚಿಸಿದೆ. ಇದು ಬಿಜೆಪಿಗೆ ಭಾರಿ ಮುಖಭಂಗ ಉಂಟು ಮಾಡಿದ್ದು, ಇದೀಗ ಕೇಂದ್ರ ಸರ್ಕಾರವು ಆ ಟ್ಯಾಗ್‌ ಅನ್ನು ತೆಗೆಯುವಂತೆ ಟ್ವಿಟರ್‌ ಅನ್ನು ಕೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಂಬಿತ್‌ ಪಾತ್ರ ಅವರ ಟ್ವೀಟ್‌ಗೆ ಹಾಕಿರುವ ‘ಟ್ಯಾಗ್‌’ ಪೂರ್ವಾಗ್ರಹದಿಂದ ಕೂಡಿದ್ದು, ಸ್ಪಷ್ಟ ಅತಿಕ್ರಮಣ ಮತ್ತು ಅನಗತ್ಯವಾಗಿದೆ ಎಂದು ಹೇಳಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಟ್ವಿಟರ್‌‌ನ ಜಾಗತಿಕ ತಂಡದೊಂದಿಗೆ, ಕಠಿಣವಾದ ಸಂವಹನ ನಡೆಸಿದ್ದು, ‘ತಿರುಚಲ್ಪಟ್ಟ ವಿಷಯ’ ಎಂಬ ಟ್ಯಾಗ್‌ ಹಾಕಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಮೇ 18 ರಂದು ಸಂಬಿತ್ ಪತ್ರಾ ಮಾಡಿದ್ದ ಟ್ವೀಟ್‌ ಅನ್ನು ಹಲವಾರು ಬಿಜೆಪಿ ನಾಯಕರು ಹಂಚಿಕೊಂಡಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಹಣಿಯಲು, ಕೊರೊನಾವನ್ನು ಬಳಸುವಂತೆ ಕಾಂಗ್ರೆಸ್ “ಟೂಲ್ಕಿಟ್” ತಯಾರಿಸಿದೆ ಎಂದು ಹೇಳುವ ಸ್ಕ್ರೀನ್‌‌ಶಾರ್ಟ್‌ಗಳನ್ನು ಟ್ವೀಟ್ ಮಾಡಿದ್ದರು.

 

ಆದರೆ ಈ ಸ್ಕ್ರೀನ್‌ಶಾಟ್‌ ನಕಲಿ ಹಾಗೂ ಪಕ್ಷದ ಲೆಟರ್‌‌‌ಹೆಡ್‌ ಅನ್ನು ನಕಲಿಸಿ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಅದೇ ದಿನ ಛತ್ತೀಸ್‌ಗಡ ಮತ್ತು ರಾಜಸ್ಥಾನದಲ್ಲಿ ಎಫ್‌ಐಆರ್ ದಾಖಲಿಸಿತ್ತು.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಅಷ್ಟೇ ಅಲ್ಲದೆ, ಸಂಬಿತ್ ಪತ್ರ ಮತ್ತು ಇತರ ಬಿಜೆಪಿ ನಾಯಕರ ಟ್ವೀಟ್‌ಗಳನ್ನು ತೆಗೆದುಹಾಕಿ, ಸಮಾಜದಲ್ಲಿ ತಪ್ಪು ಮಾಹಿತಿ ಮತ್ತು ಅಶಾಂತಿಯನ್ನು ಹರಡಿದ್ದಕ್ಕಾಗಿ ಅವರ ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಪಕ್ಷವು ನಿನ್ನೆ ಟ್ವಿಟರ್‌ಗೆ ಪತ್ರ ಬರೆದಿದೆ.

ಇದಾಗಿ ಸಂಜೆ, ಸಂಬಿತ್‌ ಪತ್ರಾ ಅವರ ಟ್ವೀಟ್ ಕೆಳಗೆ “ಮ್ಯಾನಿಪ್ಯುಲೇಟೆಡ್ ಮೀಡಿಯಾ” ಟ್ಯಾಗ್ ಕಾಣಿಸಿಕೊಂಡಿದೆ.

ಟ್ವಿಟರ್‌ನ ಈ ಕ್ರಮವನ್ನು “ಪೂರ್ವ ನಿರ್ಣಯ, ಪೂರ್ವಾಗ್ರಹ ಮತ್ತು ತನಿಖೆಯನ್ನು ಒಂದು ಕಡೆಗೆ ಮಾಡುವ ಉದ್ದೇಶಪೂರ್ವಕ ಪ್ರಯತ್ನ” ಎಂದು ಸರ್ಕಾರ ದೂಷಿಸಿದೆ.

“ಟೂಲ್ಕಿಟ್” ನ ನಿಖರತೆಯನ್ನು ಪ್ರಶ್ನಿಸಿ ಈಗಾಗಲೇ ದೂರು ನೀಡಲಾಗಿದೆ ಮತ್ತು ಅದು ತನಿಖೆಯಲ್ಲಿದೆ. ಈ ವಿಷಯದ ಕುರಿತು ಸತ್ಯತೆಯನ್ನು ತನಿಖೆಯು ನಿರ್ಧರಿಸುತ್ತದೆಯೆ ಹೊರತು ಟ್ವಿಟ್ಟರ್ ಅಲ್ಲ. ಟ್ವಿಟರ್ ತನಿಖಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಬಾರದು. ಈ ವಿಷಯವು ತನಿಖೆಯಲ್ಲಿದ್ದಾಗ ಟ್ವಿಟರ್ ತನ್ನ ತೀರ್ಪನ್ನು ರವಾನಿಸಬಾರು” ಎಂದು ಸರ್ಕಾರ ಹೇಳಿದ್ದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...