HomeಮುಖಪುಟITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆಯು ಈಗ ITI ವಿದ್ಯಾರ್ಥಿಗಳಿಗೆ ವೈದ್ಯಕೀಯ ಆಮ್ಲಜನಕ ಘಟಕದ ನಿರ್ವಹಣೆ ಮತ್ತು ಘಟಕದಲ್ಲಿ ಆಮ್ಲಜನಕ ಒತ್ತಡ (PSA) ನಿರ್ವಹಣೆಯ ಕುರಿತು ತರಬೇತಿ ನೀಡಲು ಮುಂದಾಗಿದೆ. ದೇಶಾದ್ಯಂತ ಐಐಟಿ ಕಾಲೇಜುಗಳಲ್ಲಿ ಆಮ್ಲಜನಕ ಘಟಕಕ್ಕೆ ಸಂಬಂಧಿಸಿದ ಹೊಸ  ತರಬೇತಿಯನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಮುಂದಾಗಿದೆ.

ಈಗಗಾಲೇ 84 ಜನರಿಗೆ ಆಮ್ಲಜನಕ ಘಟಕದ ತರಬೇತಿಯನ್ನು ನೀಡಲಾಗಿದ್ದು ಅವರು ಸ್ವತಂತ್ರವಾಗಿ ಆಮ್ಲಜನಕ ಘಟಕವನ್ನು ನಡೆಸಲು ಸಶಕ್ತರಾಗಿದ್ದಾರೆ. ಮುಂದೆ ಜಿಲ್ಲಾಮಟ್ಟದಲ್ಲಿ ಹೆಚ್ಚಿನ ಐಟಿಐ ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕ ನಿರ್ವಹಣೆಯ ತರಬೇತಿಯನ್ನು ನೀಡಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಆಮ್ಲಜನಕ ಘಟಕವನ್ನು ತೆರೆಯಲು ಪ್ರೋತ್ಸಾಹಿಸಲಾಗುವುದು ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕ ಘಟಕಗಳನ್ನು ಸುಸ್ಥಿತಿಯಲ್ಲಿ ನೋಡಿಕೊಳ್ಳುವಂತೆ ಸೂಚಿಸಿತ್ತು. ಹಾಗೇ ಸಿಬ್ಬಂದಿಗೆ ಘಟಕದ ನಿರ್ವಹಣೆಯ ತರಬೇತಿಯನ್ನು ಮತ್ತು ಅಗತ್ಯ ಒತ್ತಡವನ್ನು ರಕ್ಷಿಸಿಡುವ ತರಬೇತಿಯನ್ನು ನೀಡುವಂತೆಯೂ ಸೂಚಿಸಿತ್ತು.

ಇದನ್ನೂ ಓದಿ : ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಪ್ರಧಾನ ಮಂತ್ರಿಗಳ ಕಚೇರಿಯು ಇದಕ್ಕೆ ಪೂರಕವಾಗಿ ಏಪ್ರಿಲ್‌ನಲ್ಲಿ 541 ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ PM ಕೇರ್ಸ್‌ ಫಂಡ್‌ ಮೂಲಕ ಹಣವನ್ನು ಮಂಜೂರು ಮಾಡಿತ್ತು. ಹಾಗೆ ಅದಕ್ಕೆ ಹೆಚ್ಚಳವಾಗಿ 162 ಘಟಕಗಳ ಸ್ಥಾಪನೆಗೂ ಹಣ ಮಂಜೂರು ಮಾಡಿತ್ತು. ದೇಶದ ಪ್ರತಿ ಜಿಲ್ಲೆಯ ಜಿಲ್ಲಾಕೇಂದ್ರಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಆಕ್ಸಿಜನ್‌ ಘಟಕವನ್ನು ಸ್ಥಾಪಿಸುವ ಯೋಜನೆ ಇದಾಗಿದೆ.

ಕಳೆದ ತಿಂಗಳು ಮಹರಾಷ್ಟ್ರದ ನಾಸಿಕ್‌ನಲ್ಲಿ ಆಕ್ಸಿಜನ್‌ ಘಟಕದಲ್ಲಿ ಸೋರಿಕೆ ಉಂಟಾದ ಪರಿಣಾಮ 22 ರೋಗಿಗಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟರು. ಇದೇ ತರಹದ ಘಟನೆ ಮಹರಾಷ್ಟ್ರದ ಪ್ರಭಾನಿಯಲ್ಲಿಯೂ ನಡೆದಿತ್ತು. ಜೊತೆಗೆ ಕೊರೋನಾ ಎರಡನೇ ಅಲೆಯ ವೇಳೆ ದೇಶಾದ್ಯಂತ ಮೆಡಿಕಲ್‌ ಆಕ್ಸಿಜನ್‌ ಕೊರತೆ ಉಂಟಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಸಕ್ಷಮ ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ ಮುಂದಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯು ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್‌ ಘಟಕಗಳ ನಿರ್ವಹಣೆಗೆ ಕನಿಷ್ಠ 2-3 ತರಬೇತಿ ಹೊಂದಿದ ಸಿಬ್ಬಂದಿಯನ್ನು ಗುರುತಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಹಾಗೇ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ ಘಟಕದ ಸಿಬ್ಬಂದಿಯನ್ನು ತರಬೇತಿಗೊಳಿಸುವ 5 ಜನ ಮಾಸ್ಟರ್‌ ಟ್ರೈನರ್‌ಗಳನ್ನು ಗುರುತಿಸುವಂತೆ ಕೇಂದ್ರ ಕೌಶಲ್ಯಾಭಿವೃದ್ದಿ ಇಲಾಖೆ  ರಾಜ್ಯಗಳಿಗೆ ತಿಳಿಸಿದೆ.

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆ  IIT ಕಾನ್ಪುರ ಮತ್ತು ನೇವಲ್‌ ಡಾಕ್‌ ವಿಶಾಖಪಟ್ಟಣ ಸಂಸ್ಥೆಗಳ ಸಹಯೋಗದಲ್ಲಿ 84 ಜನರನ್ನು ಮಾಸ್ಟರ್‌ ಟ್ರೈನರ್‌ಗಳನ್ನಾಗಿ ಈಗಾಗಲೇ ತರಬೇತಿಗೊಳಿಸಿದೆ. ರಾಜ್ಯ ಸರ್ಕಾರ ಇವರನ್ನು ತನ್ನ ಸಿಬ್ಬಂದಿಗಳ ತರಬೇತಿಗೆ ಕರೆಸಿಕೊಳ್ಳ ಬಹುದಾಗಿದೆ ಎಂದು ಇಲಾಖೆಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕ್ಸಿಜನ್‌ ಘಟಕವನ್ನು ನಿರ್ವಹಿಸುವ ಸಿಬ್ಬಂದಿಗಳು ಎಲೆಕ್ಟ್ರಿಕ್‌ ಮತ್ತು ತಾಂತ್ರಿಕ ದೋಶಗಳನ್ನು ಸರಿಪಡಿಸಲು ತಿಳಿದಿರುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಿದೆ. ಬೆಡ್‌ ಸೈಡ್‌ ಸಿಲಿಂಡರ್‌, ಚಿಕ್ಕ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ನಿರ್ವಹಣೆ ಮುಂತಾದ ತರಬೇತಿಗಳನ್ನು ಜಿಲ್ಲಾಮಟ್ಟದ ಸಿಬ್ಬಂದಿಗಳಿಗೆ ನೀಡಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಂಸ್ಥೆ ಸೂಚಿಸಿದೆ.


ಇದನ್ನೂ ಓದಿ : ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...