HomeಮುಖಪುಟITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆಯು ಈಗ ITI ವಿದ್ಯಾರ್ಥಿಗಳಿಗೆ ವೈದ್ಯಕೀಯ ಆಮ್ಲಜನಕ ಘಟಕದ ನಿರ್ವಹಣೆ ಮತ್ತು ಘಟಕದಲ್ಲಿ ಆಮ್ಲಜನಕ ಒತ್ತಡ (PSA) ನಿರ್ವಹಣೆಯ ಕುರಿತು ತರಬೇತಿ ನೀಡಲು ಮುಂದಾಗಿದೆ. ದೇಶಾದ್ಯಂತ ಐಐಟಿ ಕಾಲೇಜುಗಳಲ್ಲಿ ಆಮ್ಲಜನಕ ಘಟಕಕ್ಕೆ ಸಂಬಂಧಿಸಿದ ಹೊಸ  ತರಬೇತಿಯನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಮುಂದಾಗಿದೆ.

ಈಗಗಾಲೇ 84 ಜನರಿಗೆ ಆಮ್ಲಜನಕ ಘಟಕದ ತರಬೇತಿಯನ್ನು ನೀಡಲಾಗಿದ್ದು ಅವರು ಸ್ವತಂತ್ರವಾಗಿ ಆಮ್ಲಜನಕ ಘಟಕವನ್ನು ನಡೆಸಲು ಸಶಕ್ತರಾಗಿದ್ದಾರೆ. ಮುಂದೆ ಜಿಲ್ಲಾಮಟ್ಟದಲ್ಲಿ ಹೆಚ್ಚಿನ ಐಟಿಐ ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕ ನಿರ್ವಹಣೆಯ ತರಬೇತಿಯನ್ನು ನೀಡಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಆಮ್ಲಜನಕ ಘಟಕವನ್ನು ತೆರೆಯಲು ಪ್ರೋತ್ಸಾಹಿಸಲಾಗುವುದು ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕ ಘಟಕಗಳನ್ನು ಸುಸ್ಥಿತಿಯಲ್ಲಿ ನೋಡಿಕೊಳ್ಳುವಂತೆ ಸೂಚಿಸಿತ್ತು. ಹಾಗೇ ಸಿಬ್ಬಂದಿಗೆ ಘಟಕದ ನಿರ್ವಹಣೆಯ ತರಬೇತಿಯನ್ನು ಮತ್ತು ಅಗತ್ಯ ಒತ್ತಡವನ್ನು ರಕ್ಷಿಸಿಡುವ ತರಬೇತಿಯನ್ನು ನೀಡುವಂತೆಯೂ ಸೂಚಿಸಿತ್ತು.

ಇದನ್ನೂ ಓದಿ : ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಪ್ರಧಾನ ಮಂತ್ರಿಗಳ ಕಚೇರಿಯು ಇದಕ್ಕೆ ಪೂರಕವಾಗಿ ಏಪ್ರಿಲ್‌ನಲ್ಲಿ 541 ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ PM ಕೇರ್ಸ್‌ ಫಂಡ್‌ ಮೂಲಕ ಹಣವನ್ನು ಮಂಜೂರು ಮಾಡಿತ್ತು. ಹಾಗೆ ಅದಕ್ಕೆ ಹೆಚ್ಚಳವಾಗಿ 162 ಘಟಕಗಳ ಸ್ಥಾಪನೆಗೂ ಹಣ ಮಂಜೂರು ಮಾಡಿತ್ತು. ದೇಶದ ಪ್ರತಿ ಜಿಲ್ಲೆಯ ಜಿಲ್ಲಾಕೇಂದ್ರಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಆಕ್ಸಿಜನ್‌ ಘಟಕವನ್ನು ಸ್ಥಾಪಿಸುವ ಯೋಜನೆ ಇದಾಗಿದೆ.

ಕಳೆದ ತಿಂಗಳು ಮಹರಾಷ್ಟ್ರದ ನಾಸಿಕ್‌ನಲ್ಲಿ ಆಕ್ಸಿಜನ್‌ ಘಟಕದಲ್ಲಿ ಸೋರಿಕೆ ಉಂಟಾದ ಪರಿಣಾಮ 22 ರೋಗಿಗಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟರು. ಇದೇ ತರಹದ ಘಟನೆ ಮಹರಾಷ್ಟ್ರದ ಪ್ರಭಾನಿಯಲ್ಲಿಯೂ ನಡೆದಿತ್ತು. ಜೊತೆಗೆ ಕೊರೋನಾ ಎರಡನೇ ಅಲೆಯ ವೇಳೆ ದೇಶಾದ್ಯಂತ ಮೆಡಿಕಲ್‌ ಆಕ್ಸಿಜನ್‌ ಕೊರತೆ ಉಂಟಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಸಕ್ಷಮ ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ ಮುಂದಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯು ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್‌ ಘಟಕಗಳ ನಿರ್ವಹಣೆಗೆ ಕನಿಷ್ಠ 2-3 ತರಬೇತಿ ಹೊಂದಿದ ಸಿಬ್ಬಂದಿಯನ್ನು ಗುರುತಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಹಾಗೇ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ ಘಟಕದ ಸಿಬ್ಬಂದಿಯನ್ನು ತರಬೇತಿಗೊಳಿಸುವ 5 ಜನ ಮಾಸ್ಟರ್‌ ಟ್ರೈನರ್‌ಗಳನ್ನು ಗುರುತಿಸುವಂತೆ ಕೇಂದ್ರ ಕೌಶಲ್ಯಾಭಿವೃದ್ದಿ ಇಲಾಖೆ  ರಾಜ್ಯಗಳಿಗೆ ತಿಳಿಸಿದೆ.

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆ  IIT ಕಾನ್ಪುರ ಮತ್ತು ನೇವಲ್‌ ಡಾಕ್‌ ವಿಶಾಖಪಟ್ಟಣ ಸಂಸ್ಥೆಗಳ ಸಹಯೋಗದಲ್ಲಿ 84 ಜನರನ್ನು ಮಾಸ್ಟರ್‌ ಟ್ರೈನರ್‌ಗಳನ್ನಾಗಿ ಈಗಾಗಲೇ ತರಬೇತಿಗೊಳಿಸಿದೆ. ರಾಜ್ಯ ಸರ್ಕಾರ ಇವರನ್ನು ತನ್ನ ಸಿಬ್ಬಂದಿಗಳ ತರಬೇತಿಗೆ ಕರೆಸಿಕೊಳ್ಳ ಬಹುದಾಗಿದೆ ಎಂದು ಇಲಾಖೆಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕ್ಸಿಜನ್‌ ಘಟಕವನ್ನು ನಿರ್ವಹಿಸುವ ಸಿಬ್ಬಂದಿಗಳು ಎಲೆಕ್ಟ್ರಿಕ್‌ ಮತ್ತು ತಾಂತ್ರಿಕ ದೋಶಗಳನ್ನು ಸರಿಪಡಿಸಲು ತಿಳಿದಿರುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಿದೆ. ಬೆಡ್‌ ಸೈಡ್‌ ಸಿಲಿಂಡರ್‌, ಚಿಕ್ಕ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ನಿರ್ವಹಣೆ ಮುಂತಾದ ತರಬೇತಿಗಳನ್ನು ಜಿಲ್ಲಾಮಟ್ಟದ ಸಿಬ್ಬಂದಿಗಳಿಗೆ ನೀಡಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಂಸ್ಥೆ ಸೂಚಿಸಿದೆ.


ಇದನ್ನೂ ಓದಿ : ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...