HomeಮುಖಪುಟITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆಯು ಈಗ ITI ವಿದ್ಯಾರ್ಥಿಗಳಿಗೆ ವೈದ್ಯಕೀಯ ಆಮ್ಲಜನಕ ಘಟಕದ ನಿರ್ವಹಣೆ ಮತ್ತು ಘಟಕದಲ್ಲಿ ಆಮ್ಲಜನಕ ಒತ್ತಡ (PSA) ನಿರ್ವಹಣೆಯ ಕುರಿತು ತರಬೇತಿ ನೀಡಲು ಮುಂದಾಗಿದೆ. ದೇಶಾದ್ಯಂತ ಐಐಟಿ ಕಾಲೇಜುಗಳಲ್ಲಿ ಆಮ್ಲಜನಕ ಘಟಕಕ್ಕೆ ಸಂಬಂಧಿಸಿದ ಹೊಸ  ತರಬೇತಿಯನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಮುಂದಾಗಿದೆ.

ಈಗಗಾಲೇ 84 ಜನರಿಗೆ ಆಮ್ಲಜನಕ ಘಟಕದ ತರಬೇತಿಯನ್ನು ನೀಡಲಾಗಿದ್ದು ಅವರು ಸ್ವತಂತ್ರವಾಗಿ ಆಮ್ಲಜನಕ ಘಟಕವನ್ನು ನಡೆಸಲು ಸಶಕ್ತರಾಗಿದ್ದಾರೆ. ಮುಂದೆ ಜಿಲ್ಲಾಮಟ್ಟದಲ್ಲಿ ಹೆಚ್ಚಿನ ಐಟಿಐ ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕ ನಿರ್ವಹಣೆಯ ತರಬೇತಿಯನ್ನು ನೀಡಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಆಮ್ಲಜನಕ ಘಟಕವನ್ನು ತೆರೆಯಲು ಪ್ರೋತ್ಸಾಹಿಸಲಾಗುವುದು ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕ ಘಟಕಗಳನ್ನು ಸುಸ್ಥಿತಿಯಲ್ಲಿ ನೋಡಿಕೊಳ್ಳುವಂತೆ ಸೂಚಿಸಿತ್ತು. ಹಾಗೇ ಸಿಬ್ಬಂದಿಗೆ ಘಟಕದ ನಿರ್ವಹಣೆಯ ತರಬೇತಿಯನ್ನು ಮತ್ತು ಅಗತ್ಯ ಒತ್ತಡವನ್ನು ರಕ್ಷಿಸಿಡುವ ತರಬೇತಿಯನ್ನು ನೀಡುವಂತೆಯೂ ಸೂಚಿಸಿತ್ತು.

ಇದನ್ನೂ ಓದಿ : ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಪ್ರಧಾನ ಮಂತ್ರಿಗಳ ಕಚೇರಿಯು ಇದಕ್ಕೆ ಪೂರಕವಾಗಿ ಏಪ್ರಿಲ್‌ನಲ್ಲಿ 541 ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ PM ಕೇರ್ಸ್‌ ಫಂಡ್‌ ಮೂಲಕ ಹಣವನ್ನು ಮಂಜೂರು ಮಾಡಿತ್ತು. ಹಾಗೆ ಅದಕ್ಕೆ ಹೆಚ್ಚಳವಾಗಿ 162 ಘಟಕಗಳ ಸ್ಥಾಪನೆಗೂ ಹಣ ಮಂಜೂರು ಮಾಡಿತ್ತು. ದೇಶದ ಪ್ರತಿ ಜಿಲ್ಲೆಯ ಜಿಲ್ಲಾಕೇಂದ್ರಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಆಕ್ಸಿಜನ್‌ ಘಟಕವನ್ನು ಸ್ಥಾಪಿಸುವ ಯೋಜನೆ ಇದಾಗಿದೆ.

ಕಳೆದ ತಿಂಗಳು ಮಹರಾಷ್ಟ್ರದ ನಾಸಿಕ್‌ನಲ್ಲಿ ಆಕ್ಸಿಜನ್‌ ಘಟಕದಲ್ಲಿ ಸೋರಿಕೆ ಉಂಟಾದ ಪರಿಣಾಮ 22 ರೋಗಿಗಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟರು. ಇದೇ ತರಹದ ಘಟನೆ ಮಹರಾಷ್ಟ್ರದ ಪ್ರಭಾನಿಯಲ್ಲಿಯೂ ನಡೆದಿತ್ತು. ಜೊತೆಗೆ ಕೊರೋನಾ ಎರಡನೇ ಅಲೆಯ ವೇಳೆ ದೇಶಾದ್ಯಂತ ಮೆಡಿಕಲ್‌ ಆಕ್ಸಿಜನ್‌ ಕೊರತೆ ಉಂಟಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಸಕ್ಷಮ ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ ಮುಂದಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯು ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್‌ ಘಟಕಗಳ ನಿರ್ವಹಣೆಗೆ ಕನಿಷ್ಠ 2-3 ತರಬೇತಿ ಹೊಂದಿದ ಸಿಬ್ಬಂದಿಯನ್ನು ಗುರುತಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಹಾಗೇ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ ಘಟಕದ ಸಿಬ್ಬಂದಿಯನ್ನು ತರಬೇತಿಗೊಳಿಸುವ 5 ಜನ ಮಾಸ್ಟರ್‌ ಟ್ರೈನರ್‌ಗಳನ್ನು ಗುರುತಿಸುವಂತೆ ಕೇಂದ್ರ ಕೌಶಲ್ಯಾಭಿವೃದ್ದಿ ಇಲಾಖೆ  ರಾಜ್ಯಗಳಿಗೆ ತಿಳಿಸಿದೆ.

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆ  IIT ಕಾನ್ಪುರ ಮತ್ತು ನೇವಲ್‌ ಡಾಕ್‌ ವಿಶಾಖಪಟ್ಟಣ ಸಂಸ್ಥೆಗಳ ಸಹಯೋಗದಲ್ಲಿ 84 ಜನರನ್ನು ಮಾಸ್ಟರ್‌ ಟ್ರೈನರ್‌ಗಳನ್ನಾಗಿ ಈಗಾಗಲೇ ತರಬೇತಿಗೊಳಿಸಿದೆ. ರಾಜ್ಯ ಸರ್ಕಾರ ಇವರನ್ನು ತನ್ನ ಸಿಬ್ಬಂದಿಗಳ ತರಬೇತಿಗೆ ಕರೆಸಿಕೊಳ್ಳ ಬಹುದಾಗಿದೆ ಎಂದು ಇಲಾಖೆಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕ್ಸಿಜನ್‌ ಘಟಕವನ್ನು ನಿರ್ವಹಿಸುವ ಸಿಬ್ಬಂದಿಗಳು ಎಲೆಕ್ಟ್ರಿಕ್‌ ಮತ್ತು ತಾಂತ್ರಿಕ ದೋಶಗಳನ್ನು ಸರಿಪಡಿಸಲು ತಿಳಿದಿರುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಿದೆ. ಬೆಡ್‌ ಸೈಡ್‌ ಸಿಲಿಂಡರ್‌, ಚಿಕ್ಕ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ನಿರ್ವಹಣೆ ಮುಂತಾದ ತರಬೇತಿಗಳನ್ನು ಜಿಲ್ಲಾಮಟ್ಟದ ಸಿಬ್ಬಂದಿಗಳಿಗೆ ನೀಡಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಂಸ್ಥೆ ಸೂಚಿಸಿದೆ.


ಇದನ್ನೂ ಓದಿ : ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಸಿಬಿಐ, ಜಾರಿ ನಿರ್ದೇಶನಾಲಯವನ್ನು ಮುಚ್ಚಬೇಕು: ಇಂಡಿಯಾ ಮೈತ್ರಿ ಕೂಟದ ಮುಂದೆ ಅಖಿಲೇಶ್ ಯಾದವ್ ಪ್ರಸ್ತಾಪ

0
ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಇಲಾಖೆಗಳು ಅಗತ್ಯವಿಲ್ಲ, ಅವುಗಳನ್ನು ಮುಚ್ಚಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದು, ಈ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರ ಮುಂದೆ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ. ಸಿಬಿಐ ಮತ್ತು...