HomeಮುಖಪುಟITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆಯು ಈಗ ITI ವಿದ್ಯಾರ್ಥಿಗಳಿಗೆ ವೈದ್ಯಕೀಯ ಆಮ್ಲಜನಕ ಘಟಕದ ನಿರ್ವಹಣೆ ಮತ್ತು ಘಟಕದಲ್ಲಿ ಆಮ್ಲಜನಕ ಒತ್ತಡ (PSA) ನಿರ್ವಹಣೆಯ ಕುರಿತು ತರಬೇತಿ ನೀಡಲು ಮುಂದಾಗಿದೆ. ದೇಶಾದ್ಯಂತ ಐಐಟಿ ಕಾಲೇಜುಗಳಲ್ಲಿ ಆಮ್ಲಜನಕ ಘಟಕಕ್ಕೆ ಸಂಬಂಧಿಸಿದ ಹೊಸ  ತರಬೇತಿಯನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಮುಂದಾಗಿದೆ.

ಈಗಗಾಲೇ 84 ಜನರಿಗೆ ಆಮ್ಲಜನಕ ಘಟಕದ ತರಬೇತಿಯನ್ನು ನೀಡಲಾಗಿದ್ದು ಅವರು ಸ್ವತಂತ್ರವಾಗಿ ಆಮ್ಲಜನಕ ಘಟಕವನ್ನು ನಡೆಸಲು ಸಶಕ್ತರಾಗಿದ್ದಾರೆ. ಮುಂದೆ ಜಿಲ್ಲಾಮಟ್ಟದಲ್ಲಿ ಹೆಚ್ಚಿನ ಐಟಿಐ ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕ ನಿರ್ವಹಣೆಯ ತರಬೇತಿಯನ್ನು ನೀಡಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಆಮ್ಲಜನಕ ಘಟಕವನ್ನು ತೆರೆಯಲು ಪ್ರೋತ್ಸಾಹಿಸಲಾಗುವುದು ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕ ಘಟಕಗಳನ್ನು ಸುಸ್ಥಿತಿಯಲ್ಲಿ ನೋಡಿಕೊಳ್ಳುವಂತೆ ಸೂಚಿಸಿತ್ತು. ಹಾಗೇ ಸಿಬ್ಬಂದಿಗೆ ಘಟಕದ ನಿರ್ವಹಣೆಯ ತರಬೇತಿಯನ್ನು ಮತ್ತು ಅಗತ್ಯ ಒತ್ತಡವನ್ನು ರಕ್ಷಿಸಿಡುವ ತರಬೇತಿಯನ್ನು ನೀಡುವಂತೆಯೂ ಸೂಚಿಸಿತ್ತು.

ಇದನ್ನೂ ಓದಿ : ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಪ್ರಧಾನ ಮಂತ್ರಿಗಳ ಕಚೇರಿಯು ಇದಕ್ಕೆ ಪೂರಕವಾಗಿ ಏಪ್ರಿಲ್‌ನಲ್ಲಿ 541 ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ PM ಕೇರ್ಸ್‌ ಫಂಡ್‌ ಮೂಲಕ ಹಣವನ್ನು ಮಂಜೂರು ಮಾಡಿತ್ತು. ಹಾಗೆ ಅದಕ್ಕೆ ಹೆಚ್ಚಳವಾಗಿ 162 ಘಟಕಗಳ ಸ್ಥಾಪನೆಗೂ ಹಣ ಮಂಜೂರು ಮಾಡಿತ್ತು. ದೇಶದ ಪ್ರತಿ ಜಿಲ್ಲೆಯ ಜಿಲ್ಲಾಕೇಂದ್ರಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಆಕ್ಸಿಜನ್‌ ಘಟಕವನ್ನು ಸ್ಥಾಪಿಸುವ ಯೋಜನೆ ಇದಾಗಿದೆ.

ಕಳೆದ ತಿಂಗಳು ಮಹರಾಷ್ಟ್ರದ ನಾಸಿಕ್‌ನಲ್ಲಿ ಆಕ್ಸಿಜನ್‌ ಘಟಕದಲ್ಲಿ ಸೋರಿಕೆ ಉಂಟಾದ ಪರಿಣಾಮ 22 ರೋಗಿಗಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟರು. ಇದೇ ತರಹದ ಘಟನೆ ಮಹರಾಷ್ಟ್ರದ ಪ್ರಭಾನಿಯಲ್ಲಿಯೂ ನಡೆದಿತ್ತು. ಜೊತೆಗೆ ಕೊರೋನಾ ಎರಡನೇ ಅಲೆಯ ವೇಳೆ ದೇಶಾದ್ಯಂತ ಮೆಡಿಕಲ್‌ ಆಕ್ಸಿಜನ್‌ ಕೊರತೆ ಉಂಟಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಸಕ್ಷಮ ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ ಮುಂದಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯು ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್‌ ಘಟಕಗಳ ನಿರ್ವಹಣೆಗೆ ಕನಿಷ್ಠ 2-3 ತರಬೇತಿ ಹೊಂದಿದ ಸಿಬ್ಬಂದಿಯನ್ನು ಗುರುತಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಹಾಗೇ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ ಘಟಕದ ಸಿಬ್ಬಂದಿಯನ್ನು ತರಬೇತಿಗೊಳಿಸುವ 5 ಜನ ಮಾಸ್ಟರ್‌ ಟ್ರೈನರ್‌ಗಳನ್ನು ಗುರುತಿಸುವಂತೆ ಕೇಂದ್ರ ಕೌಶಲ್ಯಾಭಿವೃದ್ದಿ ಇಲಾಖೆ  ರಾಜ್ಯಗಳಿಗೆ ತಿಳಿಸಿದೆ.

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆ  IIT ಕಾನ್ಪುರ ಮತ್ತು ನೇವಲ್‌ ಡಾಕ್‌ ವಿಶಾಖಪಟ್ಟಣ ಸಂಸ್ಥೆಗಳ ಸಹಯೋಗದಲ್ಲಿ 84 ಜನರನ್ನು ಮಾಸ್ಟರ್‌ ಟ್ರೈನರ್‌ಗಳನ್ನಾಗಿ ಈಗಾಗಲೇ ತರಬೇತಿಗೊಳಿಸಿದೆ. ರಾಜ್ಯ ಸರ್ಕಾರ ಇವರನ್ನು ತನ್ನ ಸಿಬ್ಬಂದಿಗಳ ತರಬೇತಿಗೆ ಕರೆಸಿಕೊಳ್ಳ ಬಹುದಾಗಿದೆ ಎಂದು ಇಲಾಖೆಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕ್ಸಿಜನ್‌ ಘಟಕವನ್ನು ನಿರ್ವಹಿಸುವ ಸಿಬ್ಬಂದಿಗಳು ಎಲೆಕ್ಟ್ರಿಕ್‌ ಮತ್ತು ತಾಂತ್ರಿಕ ದೋಶಗಳನ್ನು ಸರಿಪಡಿಸಲು ತಿಳಿದಿರುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಿದೆ. ಬೆಡ್‌ ಸೈಡ್‌ ಸಿಲಿಂಡರ್‌, ಚಿಕ್ಕ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ನಿರ್ವಹಣೆ ಮುಂತಾದ ತರಬೇತಿಗಳನ್ನು ಜಿಲ್ಲಾಮಟ್ಟದ ಸಿಬ್ಬಂದಿಗಳಿಗೆ ನೀಡಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಂಸ್ಥೆ ಸೂಚಿಸಿದೆ.


ಇದನ್ನೂ ಓದಿ : ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...