Homeಕರೋನಾ ತಲ್ಲಣಕೊರೊನಾ ಬಗ್ಗೆ ಸಲಹೆ; ಮನಮೋಹನ್ ಸಿಂಗ್‌ ಅವರನ್ನು ಟ್ರೋಲ್ ಮಾಡಿದ ಕೇಂದ್ರ ಸರ್ಕಾರ!

ಕೊರೊನಾ ಬಗ್ಗೆ ಸಲಹೆ; ಮನಮೋಹನ್ ಸಿಂಗ್‌ ಅವರನ್ನು ಟ್ರೋಲ್ ಮಾಡಿದ ಕೇಂದ್ರ ಸರ್ಕಾರ!

ಕೇಂದ್ರದ ವ್ಯಂಗ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಕೊರೊನಾ ಬಿಕ್ಕಟ್ಟಿನ ವಿರುದ್ಧ ಹೋರಾಡುವ ಬಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಐದು ಅಂಶಗಳ ಸಲಹೆಯಿರುವ ಪತ್ರ ಬರೆದಿದ್ದರು. ಈ ಪತ್ರಕ್ಕೆ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಸೋಮವಾರ ಪ್ರತಿಕ್ರಿಯಿಸಿದ್ದು, ನಿಮ್ಮ ಸಲಹೆಯನ್ನು ಕಾಂಗ್ರೆಸ್‌ನ ನಾಯಕರು ಅನುಸರಿಸಿದರೆ ಇತಿಹಾಸವು ನಿಮಗೆ ಋಣಿ ಆಗಿರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಮನಮೋಹನ್ ಸಿಂಗ್ ಅವರು ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆ ನೀಡಿ ತಾವು ಬರೆದಿರುವ ಪತ್ರವನ್ನು ಆರೋಗ್ಯ ಸಚಿವ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಟ್ವೀಟ್‌ನಲ್ಲಿ ಅವರು, “ಇಂತಹ ಅಸಾಧಾರಣ ಕಾಲದಲ್ಲಿ ನೀವು ಹೇಳಿರುವ ರಚನಾತ್ಮಕ ಸಹಕಾರ ಮತ್ತು ಮೌಲ್ಯಯುತ ಸಲಹೆಯನ್ನು ನಿಮ್ಮ ಪಕ್ಷವಾದ ಕಾಂಗ್ರೆಸ್‌ನ ನಾಯಕರು ಅನುಸರಿಸಿದರೆ ಇತಿಹಾಸವು ನಿಮಗೆ ಋಣಿಯಾಗಿರುತ್ತದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರು ಚುನಾವಣೆ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ, ಆಡಳಿತದ ಬಗ್ಗೆ ಅಲ್ಲ: ಸಿದ್ದರಾಮಯ್ಯ ಆಕ್ರೋಶ

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಎರಡು ಪುಟಗಳ ಪತ್ರವನ್ನು ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಹರ್ಷ್ ವರ್ಧನ್‌, ಅವರ ಸಲಹೆಯನ್ನು ಅವರ ಪಕ್ಷ ಅನುಸರಿಸಲು ಕೇಳಿಕೊಳ್ಳುವಂತೆ ಕೇಳಿಕೊಂಡಿದ್ದಾರೆ.

ಪತ್ರದಲ್ಲಿ ರಾಹುಲ್ ಗಾಂಧಿಯನ್ನು ಪರೋಕ್ಷವಾಗಿ ಸೂಚಿಸಿ ಅವರು ವ್ಯಂಗ್ಯವಾಡಿದ್ದಾರೆ. ಅಲ್ಲದೆ ಮನಮೋಹನ್ ಸಿಂಗ್ ಅವರು ಲಸಿಕೆ ಕಂಡು ಹಿಡಿದ ವಿಜ್ಞಾನಿಗಳು ಮತ್ತು ತಯಾರಕರಿಗೆ ಕೃತಜ್ಞತೆಯನ್ನು ಹೇಳದೆ ಇರುವುದಕ್ಕೆ ಪತ್ರದಲ್ಲಿ ಅಘಾತ ವ್ಯಕ್ತಪಡಿಸಿದ್ದಾರೆ.

ಮನಮೋಹನ್ ಸಿಂಗ್ ಅವರ ಪತ್ರಕ್ಕೆ ಆರೋಗ್ಯ ಸಚಿವ ಹರ್ಷ್‌ವರ್ಧನ್‌ ನೀಡಿರುವ ವ್ಯಂಗ್ಯ ಪ್ರತಿಕ್ರಿಯೆಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ಗೌರವ್ ದೋಗ್ರ ಅವರು, “ನಾಚಿಕೆಗೇಡು ಮತ್ತು ಭಾವಶೂನ್ಯ ಪ್ರತಿಕ್ರಿಯೆ. ಡಾ. ಸಿಂಗ್ ನೀಡಿದ ಬೌದ್ಧಿಕ ಸಲಹೆಯನ್ನು ವಿರೋಧಿಸುವುದನ್ನು ಬಿಟ್ಟು, ಕೊರೊನಾ ಭೀತಿಯಿಂದ ಹೊರಬರುವ ಒಂದು ತಂತ್ರವನ್ನು ಮಾಡಲು ಸಾಧ್ಯವಾದರೆ ಇತಿಹಾಸವು ನಿಮಗೆ ಋಣಿಯಾಗಿರುತ್ತದೆ. ನೀವು ನಿಮ್ಮ ಅರೆಕಾಲಿಕ ವೃತ್ತಿಯಿಂದ ಹೊರಬಂದು ಆರೋಗ್ಯ ಸಚಿವರಂತೆ ವರ್ತಿಸಬಹುದೆಂದು ಹಾರೈಸುತ್ತೇನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕೋವಿಡ್ ಬಿಕ್ಕಟ್ಟಿಗೆ ಪ್ರಧಾನಿಯೇ ಕಾರಣ: ‘ಮೋದಿ ರಾಜೀನಾಮೆ ನೀಡಿ’ ಟ್ವಿಟರ್‌ ಟ್ರೆಂಡಿಂಗ್‌

ಅಭಿಜಿತ್ ಅವರು, “ನೀವು ಯಾರು? ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಸಾಮರ್ಥ್ಯ ಇಲ್ಲ ಎಂದು ನಮಗೆ ತಿಳಿದಿದೆ. ನೀವು ನಿಮ್ಮ ಕೆಲಸದ ಬಗ್ಗೆ ಗಮನಹರಿಸಿ ಸರ್. ಟ್ರೋಲ್‌ ಮಾಡುವುದನ್ನು ಸರ್‌ ಗೋಯಲ್ ಮತ್ತು ಮೇಡಮ್ ಇರಾನಿ ನೋಡಿಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

ಶಿವಂ ಅವರು, “ಈ ಸರ್ಕಾರದ ಸಮಸ್ಯೆ ದುರಹಂಕಾರ ಮತ್ತು ಪ್ರತಿ ಟೀಕೆಗಳನ್ನು ಎದುರಿಸುವ ಮನೋಭಾವ ಹಾಗೂ ವಿಮರ್ಶಕನನ್ನು ಅಪಖ್ಯಾತಿಗೊಳಿಸುವ ಮನೋಭಾವ. ಆದ್ದರಿಂದಲೇ ಆರ್ಥಿಕ ಮತ್ತು ಆರೋಗ್ಯದ ವಿಷಯಗಳಲ್ಲಿ ದೇಶವು ಇಂತಹ ವಿನಾಶಕಾರಿ ಸಮಯವನ್ನು ಎದುರಿಸುತ್ತಿರುವುದರಲ್ಲಿ ಆಶ್ಚರ್ಯವಿಲ್ಲ. ನರೇಂದ್ರ ಮೋದಿ ಯಾವುದೇ ಹೊಣೆಗಾರಿಕೆ ಇಲ್ಲದೆ ಅಧಿಕಾರವನ್ನು ಬಯಸುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ದೆಹಲಿಯಲ್ಲಿ ಇಂದಿನಿಂದ ಒಂದು ವಾರ ಕರ್ಫ್ಯೂ

ವಿಡಿಯೋ ನೋಡಿ: ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...