Homeಮುಖಪುಟ’ಮೋದಿಯೊಂದಿಗೆ ಯುವಶಕ್ತಿ’ ಹ್ಯಾಶ್‌ಟ್ಯಾಗ್‌ ಟ್ರೆಂಡ್‌‌ ಮಾಡುವಂತೆ ವಿವಿಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!

’ಮೋದಿಯೊಂದಿಗೆ ಯುವಶಕ್ತಿ’ ಹ್ಯಾಶ್‌ಟ್ಯಾಗ್‌ ಟ್ರೆಂಡ್‌‌ ಮಾಡುವಂತೆ ವಿವಿಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!

- Advertisement -
- Advertisement -

ಕೇಂದ್ರ ಸರ್ಕಾರ ದೇಶದ ಎಲ್ಲಾ ವಿಶ್ವವಿದ್ಯಾನಿಯಗಳಿಗೆ ’ಮೋದಿಯೊಂದಿಗೆ ಯುವಶಕ್ತಿ’ (#YuvaShaktiWithModi) ಸೇರಿದಂತೆ ಹಲವು ಹ್ಯಾಶ್‌ಟ್ಯಾಗ್‌‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯಗೊಳಿಸಲು ಪತ್ರ ಬರೆದು ಒತ್ತಾಯಿಸಿದ್ದು ಇದೀಗ ಬೆಳಕಿಗೆ ಬಂದಿದೆ.

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಸೋಮವಾರ ಆಯೋಜಿಸಿದ್ದ 2021 ರ ರಾಷ್ಟ್ರೀಯ ಯುವ ಸಂಸತ್ತಿನ ಉತ್ಸವಕ್ಕೆ, ಸಾಮಾಜಿಕ ಜಾಲತಾಣದಲ್ಲಿ ’ಮೋದಿಯೊಂದಿಗೆ ಯುವಶಕ್ತಿ’(#YuvaShaktiWithModi) ಹ್ಯಾಶ್‌ಟ್ಯಾಗ್‌ ಜೊತೆಗೆ, ’ಯುವಾಹ್’(#YUVAAH) ’ಉತ್ಸವ್‌‌ ನಯೇ ಭಾರತ್ ‌ಕ’(#UtsahNayeBharatKa) ಮತ್ತು #NYF2021 ಹ್ಯಾಶ್‌ಟ್ಯಾಗ್‌ಗಳನ್ನು ಜನಪ್ರಿಯಗೊಳಿಸಲು ದೇಶದ ಎಲ್ಲಾ ವಿಶ್ವವಿದ್ಯಾನಿಲಯಕ್ಕೆ ಪತ್ರ ಬರೆದು ಒತ್ತಾಯಿಸಿದ್ದವು.

ಇದನ್ನೂ ಓದಿ: ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಯುವ ಸಂಸತ್‌ ಸೋಮವಾರ(ಇಂದು) ನಡೆದಿದ್ದು ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಬಗ್ಗೆ ದೇಶದ ಎಲ್ಲಾ ವಿವಿಗಳ ಉಪಕುಲಪತಿಗಳಿಗೆ ಹಾಗೂ ಎಲ್ಲಾ ಕಾಲೇಜಿನ ಪ್ರಾಂಶುಪಾಲರಿಗೆ ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ವು ಪತ್ರ ಬರೆದಿತ್ತು. ಪತ್ರದಲ್ಲಿ, ರಾಷ್ಟ್ರೀಯ ಯುವ ಸಂಸತ್‌ ಉತ್ಸವದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರರ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ಕೇಳಿಕೊಂಡಿತ್ತು.

ಕಾರ್ಯಕ್ರಮದಲ್ಲಿ ಸ್ಪೀಕರ್, ರಾಜ್ಯಸಭೆಯ ಉಪಾಧ್ಯಕ್ಷರು, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಸಚಿವರು, ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿತ್ತು. ಜೊತೆಗೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ #YuvaShaktiWithModi ಸೇರಿದಂತೆ ಹಲವು ಹ್ಯಾಶ್‌ಟ್ಯಾಗ್‌‌ಗಳನ್ನು ಜನಪ್ರಿಯಗೊಳಿಸುವಂತೆ ಕೂಡಾ ಹೇಳಲಾಗಿತ್ತು.

ಯುವಸಂಸತ್‌ ಇಂದು ನಡೆದಿದ್ದು, ದೇಶದಾದ್ಯಂತ ಹಲವು ರಾಜ್ಯಗಳ ವಿದ್ಯಾರ್ಥಿಗಳು ಮಾತನಾಡಿದರು.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...