Homeಮುಖಪುಟಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ...

ಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ ಸಿಎಂ ಸ್ಟಾಲಿನ್

- Advertisement -
- Advertisement -

ಕೀಲಡಿ ಉತ್ಖನನ ವರದಿಯನ್ನು ಕೇಂದ್ರ ಸರ್ಕಾರ ಪ್ರಕಟಿಸದಿರುವುದು ತಮಿಳು ಸಂಸ್ಕೃತಿಯ ಮೇಲಿನ ದೌರ್ಜನ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ಹೇಳಿದ್ದಾರೆ. ಕೇಂದ್ರ ಸರ್ಕಾರವು ತಮಿಳು ನಾಗರಿಕತೆಯ ಶ್ರೇಷ್ಠತೆ ಮತ್ತು ಪ್ರಾಚೀನತೆಯನ್ನು ಗುರುತಿಸುವವರೆಗೆ ತಮ್ಮ ಪಕ್ಷವು ವಿಶ್ರಮಿಸುವುದಿಲ್ಲ ಎಂದು ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತಿಗೆ ಬರೆದ ಪತ್ರದಲ್ಲಿ ಸ್ಟಾಲಿನ್ ಹೇಳಿದ್ದಾರೆ. ಕೀಲಡಿ ವರದಿ ಪ್ರಕಟಿಸದ

ಮೇ 23 ರಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಪುರಾತತ್ವಶಾಸ್ತ್ರಜ್ಞ ಅಮರನಾಥ್ ರಾಮಕೃಷ್ಣ ಅವರಿಗೆ ಇಬ್ಬರು ತಜ್ಞರು ಸೂಚಿಸಿದ ತಿದ್ದುಪಡಿಗಳನ್ನು ಮಾಡಿದ ನಂತರ ಕೀಲಡಿ ಉತ್ಖನನದ ಕುರಿತಾದ ತಮ್ಮ ವರದಿಯನ್ನು ಮರುಸಲ್ಲಿಸುವಂತೆ ಸೂಚಿಸಿತ್ತು.

ಅದಾಗ್ಯೂ, ರಾಮಕೃಷ್ಣ ಅವರು ವರದಿಯನ್ನು ಪರಿಷ್ಕರಿಸಲು ನಿರಾಕರಿಸಿದ್ದಾರೆ ಎಂದು ಮೇ 27 ರಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕೀಲಡಿ ಪುರಾತತ್ವ ಸ್ಥಳದ ಬಗ್ಗೆ ವಿವರಗಳನ್ನು ದಾಖಲಿಸುವಲ್ಲಿ ಬಳಸಲಾದ ಸಂಶೋಧನೆಗಳು ಮತ್ತು ವಿಧಾನವನ್ನು ಅವರು ಸಮರ್ಥಿಸಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿತ್ತು.

“ತಮಿಳರು ಮತ್ತು ತಮಿಳು ಭಾಷೆಯನ್ನು ನಿರಂತರವಾಗಿ ದ್ವೇಷದಿಂದ ನೋಡುವ ಬಿಜೆಪಿ ಸರ್ಕಾರ, ಕೀಲಡಿಯಲ್ಲಿ ನಡೆದ ಸಂಶೋಧನೆಗಳನ್ನು ನಿಗ್ರಹಿಸಲು ಮತ್ತು ಹೂತುಹಾಕಲು ಪ್ರಯತ್ನಿಸುತ್ತಿದೆ” ಎಂದು ಸ್ಟಾಲಿನ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಪತ್ರದಲ್ಲಿ ಅವರು ವಿರೋಧ ಪಕ್ಷವಾದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಈ ವಿಷಯದ ಬಗ್ಗೆ “ಮೌನವಾಗಿರುವುದಕ್ಕೆ” ಟೀಕಿಸಿದ್ದಾರೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಬಿಜೆಪಿಯ ಮಿತ್ರಪಕ್ಷವಾಗಿದೆ.

ಡಿಎಂಕೆ ಸರ್ಕಾರ ಯಾವಾಗಲೂ ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಕೆಲಸ ಮಾಡಿದೆ ಎಂದು ಸ್ಟಾಲಿನ್ ಹೇಳಿದ್ದು, ಉತ್ಖನನದ ಸಂಶೋಧನೆಗಳಿಗಾಗಿ ವಸ್ತುಸಂಗ್ರಹಾಲಯವನ್ನು ಸಹ ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ, “ಬಿಜೆಪಿಯ ರಾಜ್ಯ ಘಟಕವು ಪಕ್ಷದ ಹೈಕಮಾಂಡ್ ಅನ್ನು ಸಮಾಧಾನಪಡಿಸಲು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಪ್ರೀತಿಯನ್ನು ತ್ಯಜಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕೀಲಡಿ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. 2014 ಮತ್ತು 2016 ರ ನಡುವೆ ಕೀಲಡಿಯಲ್ಲಿ ಎರಡು ಉತ್ಖನನ ಹಂತಗಳನ್ನು ಮುನ್ನಡೆಸಿದ್ದ ಪುರಾತತ್ವಶಾಸ್ತ್ರಜ್ಞ ರಾಮಕೃಷ್ಣ ಅವರು, ಸಂಗಂ ಯುಗದಲ್ಲಿ ತಮಿಳುನಾಡಿನಲ್ಲಿ ನಗರ ನಾಗರಿಕತೆಯನ್ನು ಸೂಚಿಸುವ 5,500 ಕ್ಕೂ ಹೆಚ್ಚು ಕಲಾಕೃತಿಗಳನ್ನು ಪತ್ತೆಹಚ್ಚಿದ್ದರು.

ಸಂಗಂ ಯುಗವು ದಕ್ಷಿಣ ಭಾರತದ ಇತಿಹಾಸದಲ್ಲಿ ಒಂದು ಮಹತ್ವದ ಅವಧಿಯಾಗಿದ್ದು, ಕ್ರಿಸ್ತಪೂರ್ವ 3ನೇ ಶತಮಾನದಿಂದ ಕ್ರಿಸ್ತಶಕ 3ನೇ ಶತಮಾನದವರೆಗೆ ಇದು ವ್ಯಾಪಿಸಿದೆ. ಈ ಅವಧಿಯು ಮುಖ್ಯವಾಗಿ ತಮಿಳು ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹೆಸರುವಾಸಿಯಾಗಿದೆ, ಇದನ್ನು ಸಂಗಂ ಸಾಹಿತ್ಯದ ಮೂಲಕ ದಾಖಲಿಸಲಾಗಿದೆ. ಸಂಗಂ ಯುಗವನ್ನು ಮೂರು ಪ್ರಮುಖ ರಾಜವಂಶಗಳಾದ ಚೋಳರು, ಚೇರರು ಮತ್ತು ಪಾಂಡ್ಯರು ಆಳಿದರು, ಅವರಲ್ಲಿ ಪಾಂಡ್ಯರು ಮಧುರೆಯಲ್ಲಿ ಸಂಗಂ ಎಂಬ ಸಾಹಿತ್ಯಿಕ ಕೂಟಗಳನ್ನು ಆಯೋಜಿಸಿದ್ದರು ಎಂದು ಇತಿಹಾಸ ಹೇಳುತ್ತವೆ.

2017 ರಲ್ಲಿ, ಭಾರತದ ಪುರಾತತ್ವ ಸಮೀಕ್ಷೆಯು ರಾಮಕೃಷ್ಣ ಅವರನ್ನು ಅಸ್ಸಾಂಗೆ ವರ್ಗಾಯಿಸಿತು. ಆ ಸಮಯದಲ್ಲಿ ರಾಜಕೀಯ ಪಕ್ಷಗಳು ಈ ಕ್ರಮವನ್ನು “ಅಸಾಮಾನ್ಯ” ಎಂದು ಬಣ್ಣಿಸಿದ್ದವು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಆವಿಷ್ಕಾರವು ವ್ಯಾಪಕ ಗಮನ ಸೆಳೆದಿತ್ತು ಮತ್ತು ರಾಮಕೃಷ್ಣ ಅವರ ವರ್ಗಾವಣೆಯನ್ನು ಉತ್ಖನನದ ಮಹತ್ವವನ್ನು ಕಡಿಮೆ ಮಾಡುವ ಪ್ರಯತ್ನವೆಂದು ಪರಿಗಣಿಸಲಾಗಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಉತ್ಖನನದ ಮೂರನೇ ಹಂತವನ್ನು ನಡೆಸಿತು. ಆದರೆ 2017 ರಲ್ಲಿ ಯಾವುದೇ ಮಹತ್ವದ ಸಂಶೋಧನೆಗಳು ಹೊರಹೊಮ್ಮಿಲ್ಲ ಎಂದು ಘೋಷಿಸಿ ಉತ್ಖನನವನ್ನು ಸ್ಥಗಿತಗೊಳಿಸಿತು. ಈ ನಿರ್ಧಾರವನ್ನು ತಮಿಳುನಾಡಿನ ರಾಜಕಾರಣಿಗಳು ಟೀಕಿಸಿದ್ದು, ಕೇಂದ್ರ ಸರ್ಕಾರವು ಪ್ರಾಚೀನ ತಮಿಳು ನಾಗರಿಕತೆಯ ಪುರಾವೆಗಳನ್ನು ನಿಗ್ರಹಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಆದಾಗ್ಯೂ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಮಧ್ಯಪ್ರವೇಶಿಸಿ ತಮಿಳುನಾಡು ರಾಜ್ಯ ಪುರಾತತ್ವ ಇಲಾಖೆಯನ್ನು ಉತ್ಖನನವನ್ನು ವಹಿಸಿಕೊಳ್ಳುವಂತೆ ಕೇಳಿತು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಹನ್ನೊಂದನೇ ಹಂತದ ಉತ್ಖನನವು ಜೂನ್‌ನಲ್ಲಿ ನಡೆಯಲಿದೆ. 2014 ರಿಂದೀಚೆಗೆ ಕೀಲಡಿಯಿಂದ ಸುಮಾರು 20 ಸಾವಿರ ಕಲಾಕೃತಿಗಳನ್ನು ಪತ್ತೆಹಚ್ಚಲಾಗಿದೆ.

2023 ರಲ್ಲಿ ಸಲ್ಲಿಸಿದ ವರದಿಯಲ್ಲಿ, 23 ಕಲಾಕೃತಿಗಳು ಸುಮಾರು ಕ್ರಿ.ಶ. 300 ರ ಹಿಂದಿನವು ಎಂದು ನಿರ್ಧರಿಸಲಾಗಿದೆ ಎಂದು ಈಗ ಪ್ರಾಚೀನ ವಸ್ತುಗಳ ನಿರ್ದೇಶಕರಾಗಿರುವ ರಾಮಕೃಷ್ಣ ಅವರು ಹೇಳಿದ್ದರೆ. ಈ ಮಾಹಿತಿಯನ್ನು ಬಳಸಿಕೊಂಡು ಅವರು ಕೀಲಡಿ ಸ್ಥಳದ ಕಾಲಾನುಕ್ರಮದ ಅವಧಿಯನ್ನು ಕ್ರಿಸ್ತಪೂರ್ವ ಎಂಟನೇ ಶತಮಾನ ಮತ್ತು ಕ್ರಿಸ್ತಪೂರ್ವ ಮೂರನೇ ಶತಮಾನದ ನಡುವೆ ಪ್ರತಿಪಾದಿಸಿದ್ದಾರೆ. ಕೀಲಡಿ ವರದಿ ಪ್ರಕಟಿಸದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...