Homeಮುಖಪುಟಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ...

ಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ ಸಿಎಂ ಸ್ಟಾಲಿನ್

- Advertisement -
- Advertisement -

ಕೀಲಡಿ ಉತ್ಖನನ ವರದಿಯನ್ನು ಕೇಂದ್ರ ಸರ್ಕಾರ ಪ್ರಕಟಿಸದಿರುವುದು ತಮಿಳು ಸಂಸ್ಕೃತಿಯ ಮೇಲಿನ ದೌರ್ಜನ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ಹೇಳಿದ್ದಾರೆ. ಕೇಂದ್ರ ಸರ್ಕಾರವು ತಮಿಳು ನಾಗರಿಕತೆಯ ಶ್ರೇಷ್ಠತೆ ಮತ್ತು ಪ್ರಾಚೀನತೆಯನ್ನು ಗುರುತಿಸುವವರೆಗೆ ತಮ್ಮ ಪಕ್ಷವು ವಿಶ್ರಮಿಸುವುದಿಲ್ಲ ಎಂದು ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತಿಗೆ ಬರೆದ ಪತ್ರದಲ್ಲಿ ಸ್ಟಾಲಿನ್ ಹೇಳಿದ್ದಾರೆ. ಕೀಲಡಿ ವರದಿ ಪ್ರಕಟಿಸದ

ಮೇ 23 ರಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಪುರಾತತ್ವಶಾಸ್ತ್ರಜ್ಞ ಅಮರನಾಥ್ ರಾಮಕೃಷ್ಣ ಅವರಿಗೆ ಇಬ್ಬರು ತಜ್ಞರು ಸೂಚಿಸಿದ ತಿದ್ದುಪಡಿಗಳನ್ನು ಮಾಡಿದ ನಂತರ ಕೀಲಡಿ ಉತ್ಖನನದ ಕುರಿತಾದ ತಮ್ಮ ವರದಿಯನ್ನು ಮರುಸಲ್ಲಿಸುವಂತೆ ಸೂಚಿಸಿತ್ತು.

ಅದಾಗ್ಯೂ, ರಾಮಕೃಷ್ಣ ಅವರು ವರದಿಯನ್ನು ಪರಿಷ್ಕರಿಸಲು ನಿರಾಕರಿಸಿದ್ದಾರೆ ಎಂದು ಮೇ 27 ರಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕೀಲಡಿ ಪುರಾತತ್ವ ಸ್ಥಳದ ಬಗ್ಗೆ ವಿವರಗಳನ್ನು ದಾಖಲಿಸುವಲ್ಲಿ ಬಳಸಲಾದ ಸಂಶೋಧನೆಗಳು ಮತ್ತು ವಿಧಾನವನ್ನು ಅವರು ಸಮರ್ಥಿಸಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿತ್ತು.

“ತಮಿಳರು ಮತ್ತು ತಮಿಳು ಭಾಷೆಯನ್ನು ನಿರಂತರವಾಗಿ ದ್ವೇಷದಿಂದ ನೋಡುವ ಬಿಜೆಪಿ ಸರ್ಕಾರ, ಕೀಲಡಿಯಲ್ಲಿ ನಡೆದ ಸಂಶೋಧನೆಗಳನ್ನು ನಿಗ್ರಹಿಸಲು ಮತ್ತು ಹೂತುಹಾಕಲು ಪ್ರಯತ್ನಿಸುತ್ತಿದೆ” ಎಂದು ಸ್ಟಾಲಿನ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಪತ್ರದಲ್ಲಿ ಅವರು ವಿರೋಧ ಪಕ್ಷವಾದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಈ ವಿಷಯದ ಬಗ್ಗೆ “ಮೌನವಾಗಿರುವುದಕ್ಕೆ” ಟೀಕಿಸಿದ್ದಾರೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಬಿಜೆಪಿಯ ಮಿತ್ರಪಕ್ಷವಾಗಿದೆ.

ಡಿಎಂಕೆ ಸರ್ಕಾರ ಯಾವಾಗಲೂ ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಕೆಲಸ ಮಾಡಿದೆ ಎಂದು ಸ್ಟಾಲಿನ್ ಹೇಳಿದ್ದು, ಉತ್ಖನನದ ಸಂಶೋಧನೆಗಳಿಗಾಗಿ ವಸ್ತುಸಂಗ್ರಹಾಲಯವನ್ನು ಸಹ ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ, “ಬಿಜೆಪಿಯ ರಾಜ್ಯ ಘಟಕವು ಪಕ್ಷದ ಹೈಕಮಾಂಡ್ ಅನ್ನು ಸಮಾಧಾನಪಡಿಸಲು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಪ್ರೀತಿಯನ್ನು ತ್ಯಜಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕೀಲಡಿ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. 2014 ಮತ್ತು 2016 ರ ನಡುವೆ ಕೀಲಡಿಯಲ್ಲಿ ಎರಡು ಉತ್ಖನನ ಹಂತಗಳನ್ನು ಮುನ್ನಡೆಸಿದ್ದ ಪುರಾತತ್ವಶಾಸ್ತ್ರಜ್ಞ ರಾಮಕೃಷ್ಣ ಅವರು, ಸಂಗಂ ಯುಗದಲ್ಲಿ ತಮಿಳುನಾಡಿನಲ್ಲಿ ನಗರ ನಾಗರಿಕತೆಯನ್ನು ಸೂಚಿಸುವ 5,500 ಕ್ಕೂ ಹೆಚ್ಚು ಕಲಾಕೃತಿಗಳನ್ನು ಪತ್ತೆಹಚ್ಚಿದ್ದರು.

ಸಂಗಂ ಯುಗವು ದಕ್ಷಿಣ ಭಾರತದ ಇತಿಹಾಸದಲ್ಲಿ ಒಂದು ಮಹತ್ವದ ಅವಧಿಯಾಗಿದ್ದು, ಕ್ರಿಸ್ತಪೂರ್ವ 3ನೇ ಶತಮಾನದಿಂದ ಕ್ರಿಸ್ತಶಕ 3ನೇ ಶತಮಾನದವರೆಗೆ ಇದು ವ್ಯಾಪಿಸಿದೆ. ಈ ಅವಧಿಯು ಮುಖ್ಯವಾಗಿ ತಮಿಳು ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹೆಸರುವಾಸಿಯಾಗಿದೆ, ಇದನ್ನು ಸಂಗಂ ಸಾಹಿತ್ಯದ ಮೂಲಕ ದಾಖಲಿಸಲಾಗಿದೆ. ಸಂಗಂ ಯುಗವನ್ನು ಮೂರು ಪ್ರಮುಖ ರಾಜವಂಶಗಳಾದ ಚೋಳರು, ಚೇರರು ಮತ್ತು ಪಾಂಡ್ಯರು ಆಳಿದರು, ಅವರಲ್ಲಿ ಪಾಂಡ್ಯರು ಮಧುರೆಯಲ್ಲಿ ಸಂಗಂ ಎಂಬ ಸಾಹಿತ್ಯಿಕ ಕೂಟಗಳನ್ನು ಆಯೋಜಿಸಿದ್ದರು ಎಂದು ಇತಿಹಾಸ ಹೇಳುತ್ತವೆ.

2017 ರಲ್ಲಿ, ಭಾರತದ ಪುರಾತತ್ವ ಸಮೀಕ್ಷೆಯು ರಾಮಕೃಷ್ಣ ಅವರನ್ನು ಅಸ್ಸಾಂಗೆ ವರ್ಗಾಯಿಸಿತು. ಆ ಸಮಯದಲ್ಲಿ ರಾಜಕೀಯ ಪಕ್ಷಗಳು ಈ ಕ್ರಮವನ್ನು “ಅಸಾಮಾನ್ಯ” ಎಂದು ಬಣ್ಣಿಸಿದ್ದವು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಆವಿಷ್ಕಾರವು ವ್ಯಾಪಕ ಗಮನ ಸೆಳೆದಿತ್ತು ಮತ್ತು ರಾಮಕೃಷ್ಣ ಅವರ ವರ್ಗಾವಣೆಯನ್ನು ಉತ್ಖನನದ ಮಹತ್ವವನ್ನು ಕಡಿಮೆ ಮಾಡುವ ಪ್ರಯತ್ನವೆಂದು ಪರಿಗಣಿಸಲಾಗಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಉತ್ಖನನದ ಮೂರನೇ ಹಂತವನ್ನು ನಡೆಸಿತು. ಆದರೆ 2017 ರಲ್ಲಿ ಯಾವುದೇ ಮಹತ್ವದ ಸಂಶೋಧನೆಗಳು ಹೊರಹೊಮ್ಮಿಲ್ಲ ಎಂದು ಘೋಷಿಸಿ ಉತ್ಖನನವನ್ನು ಸ್ಥಗಿತಗೊಳಿಸಿತು. ಈ ನಿರ್ಧಾರವನ್ನು ತಮಿಳುನಾಡಿನ ರಾಜಕಾರಣಿಗಳು ಟೀಕಿಸಿದ್ದು, ಕೇಂದ್ರ ಸರ್ಕಾರವು ಪ್ರಾಚೀನ ತಮಿಳು ನಾಗರಿಕತೆಯ ಪುರಾವೆಗಳನ್ನು ನಿಗ್ರಹಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಆದಾಗ್ಯೂ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಮಧ್ಯಪ್ರವೇಶಿಸಿ ತಮಿಳುನಾಡು ರಾಜ್ಯ ಪುರಾತತ್ವ ಇಲಾಖೆಯನ್ನು ಉತ್ಖನನವನ್ನು ವಹಿಸಿಕೊಳ್ಳುವಂತೆ ಕೇಳಿತು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಹನ್ನೊಂದನೇ ಹಂತದ ಉತ್ಖನನವು ಜೂನ್‌ನಲ್ಲಿ ನಡೆಯಲಿದೆ. 2014 ರಿಂದೀಚೆಗೆ ಕೀಲಡಿಯಿಂದ ಸುಮಾರು 20 ಸಾವಿರ ಕಲಾಕೃತಿಗಳನ್ನು ಪತ್ತೆಹಚ್ಚಲಾಗಿದೆ.

2023 ರಲ್ಲಿ ಸಲ್ಲಿಸಿದ ವರದಿಯಲ್ಲಿ, 23 ಕಲಾಕೃತಿಗಳು ಸುಮಾರು ಕ್ರಿ.ಶ. 300 ರ ಹಿಂದಿನವು ಎಂದು ನಿರ್ಧರಿಸಲಾಗಿದೆ ಎಂದು ಈಗ ಪ್ರಾಚೀನ ವಸ್ತುಗಳ ನಿರ್ದೇಶಕರಾಗಿರುವ ರಾಮಕೃಷ್ಣ ಅವರು ಹೇಳಿದ್ದರೆ. ಈ ಮಾಹಿತಿಯನ್ನು ಬಳಸಿಕೊಂಡು ಅವರು ಕೀಲಡಿ ಸ್ಥಳದ ಕಾಲಾನುಕ್ರಮದ ಅವಧಿಯನ್ನು ಕ್ರಿಸ್ತಪೂರ್ವ ಎಂಟನೇ ಶತಮಾನ ಮತ್ತು ಕ್ರಿಸ್ತಪೂರ್ವ ಮೂರನೇ ಶತಮಾನದ ನಡುವೆ ಪ್ರತಿಪಾದಿಸಿದ್ದಾರೆ. ಕೀಲಡಿ ವರದಿ ಪ್ರಕಟಿಸದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...