Homeಮುಖಪುಟಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ...

ಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ ಸಿಎಂ ಸ್ಟಾಲಿನ್

- Advertisement -
- Advertisement -

ಕೀಲಡಿ ಉತ್ಖನನ ವರದಿಯನ್ನು ಕೇಂದ್ರ ಸರ್ಕಾರ ಪ್ರಕಟಿಸದಿರುವುದು ತಮಿಳು ಸಂಸ್ಕೃತಿಯ ಮೇಲಿನ ದೌರ್ಜನ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ಹೇಳಿದ್ದಾರೆ. ಕೇಂದ್ರ ಸರ್ಕಾರವು ತಮಿಳು ನಾಗರಿಕತೆಯ ಶ್ರೇಷ್ಠತೆ ಮತ್ತು ಪ್ರಾಚೀನತೆಯನ್ನು ಗುರುತಿಸುವವರೆಗೆ ತಮ್ಮ ಪಕ್ಷವು ವಿಶ್ರಮಿಸುವುದಿಲ್ಲ ಎಂದು ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತಿಗೆ ಬರೆದ ಪತ್ರದಲ್ಲಿ ಸ್ಟಾಲಿನ್ ಹೇಳಿದ್ದಾರೆ. ಕೀಲಡಿ ವರದಿ ಪ್ರಕಟಿಸದ

ಮೇ 23 ರಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಪುರಾತತ್ವಶಾಸ್ತ್ರಜ್ಞ ಅಮರನಾಥ್ ರಾಮಕೃಷ್ಣ ಅವರಿಗೆ ಇಬ್ಬರು ತಜ್ಞರು ಸೂಚಿಸಿದ ತಿದ್ದುಪಡಿಗಳನ್ನು ಮಾಡಿದ ನಂತರ ಕೀಲಡಿ ಉತ್ಖನನದ ಕುರಿತಾದ ತಮ್ಮ ವರದಿಯನ್ನು ಮರುಸಲ್ಲಿಸುವಂತೆ ಸೂಚಿಸಿತ್ತು.

ಅದಾಗ್ಯೂ, ರಾಮಕೃಷ್ಣ ಅವರು ವರದಿಯನ್ನು ಪರಿಷ್ಕರಿಸಲು ನಿರಾಕರಿಸಿದ್ದಾರೆ ಎಂದು ಮೇ 27 ರಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕೀಲಡಿ ಪುರಾತತ್ವ ಸ್ಥಳದ ಬಗ್ಗೆ ವಿವರಗಳನ್ನು ದಾಖಲಿಸುವಲ್ಲಿ ಬಳಸಲಾದ ಸಂಶೋಧನೆಗಳು ಮತ್ತು ವಿಧಾನವನ್ನು ಅವರು ಸಮರ್ಥಿಸಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿತ್ತು.

“ತಮಿಳರು ಮತ್ತು ತಮಿಳು ಭಾಷೆಯನ್ನು ನಿರಂತರವಾಗಿ ದ್ವೇಷದಿಂದ ನೋಡುವ ಬಿಜೆಪಿ ಸರ್ಕಾರ, ಕೀಲಡಿಯಲ್ಲಿ ನಡೆದ ಸಂಶೋಧನೆಗಳನ್ನು ನಿಗ್ರಹಿಸಲು ಮತ್ತು ಹೂತುಹಾಕಲು ಪ್ರಯತ್ನಿಸುತ್ತಿದೆ” ಎಂದು ಸ್ಟಾಲಿನ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಪತ್ರದಲ್ಲಿ ಅವರು ವಿರೋಧ ಪಕ್ಷವಾದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಈ ವಿಷಯದ ಬಗ್ಗೆ “ಮೌನವಾಗಿರುವುದಕ್ಕೆ” ಟೀಕಿಸಿದ್ದಾರೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಬಿಜೆಪಿಯ ಮಿತ್ರಪಕ್ಷವಾಗಿದೆ.

ಡಿಎಂಕೆ ಸರ್ಕಾರ ಯಾವಾಗಲೂ ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಕೆಲಸ ಮಾಡಿದೆ ಎಂದು ಸ್ಟಾಲಿನ್ ಹೇಳಿದ್ದು, ಉತ್ಖನನದ ಸಂಶೋಧನೆಗಳಿಗಾಗಿ ವಸ್ತುಸಂಗ್ರಹಾಲಯವನ್ನು ಸಹ ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ, “ಬಿಜೆಪಿಯ ರಾಜ್ಯ ಘಟಕವು ಪಕ್ಷದ ಹೈಕಮಾಂಡ್ ಅನ್ನು ಸಮಾಧಾನಪಡಿಸಲು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಪ್ರೀತಿಯನ್ನು ತ್ಯಜಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕೀಲಡಿ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. 2014 ಮತ್ತು 2016 ರ ನಡುವೆ ಕೀಲಡಿಯಲ್ಲಿ ಎರಡು ಉತ್ಖನನ ಹಂತಗಳನ್ನು ಮುನ್ನಡೆಸಿದ್ದ ಪುರಾತತ್ವಶಾಸ್ತ್ರಜ್ಞ ರಾಮಕೃಷ್ಣ ಅವರು, ಸಂಗಂ ಯುಗದಲ್ಲಿ ತಮಿಳುನಾಡಿನಲ್ಲಿ ನಗರ ನಾಗರಿಕತೆಯನ್ನು ಸೂಚಿಸುವ 5,500 ಕ್ಕೂ ಹೆಚ್ಚು ಕಲಾಕೃತಿಗಳನ್ನು ಪತ್ತೆಹಚ್ಚಿದ್ದರು.

ಸಂಗಂ ಯುಗವು ದಕ್ಷಿಣ ಭಾರತದ ಇತಿಹಾಸದಲ್ಲಿ ಒಂದು ಮಹತ್ವದ ಅವಧಿಯಾಗಿದ್ದು, ಕ್ರಿಸ್ತಪೂರ್ವ 3ನೇ ಶತಮಾನದಿಂದ ಕ್ರಿಸ್ತಶಕ 3ನೇ ಶತಮಾನದವರೆಗೆ ಇದು ವ್ಯಾಪಿಸಿದೆ. ಈ ಅವಧಿಯು ಮುಖ್ಯವಾಗಿ ತಮಿಳು ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹೆಸರುವಾಸಿಯಾಗಿದೆ, ಇದನ್ನು ಸಂಗಂ ಸಾಹಿತ್ಯದ ಮೂಲಕ ದಾಖಲಿಸಲಾಗಿದೆ. ಸಂಗಂ ಯುಗವನ್ನು ಮೂರು ಪ್ರಮುಖ ರಾಜವಂಶಗಳಾದ ಚೋಳರು, ಚೇರರು ಮತ್ತು ಪಾಂಡ್ಯರು ಆಳಿದರು, ಅವರಲ್ಲಿ ಪಾಂಡ್ಯರು ಮಧುರೆಯಲ್ಲಿ ಸಂಗಂ ಎಂಬ ಸಾಹಿತ್ಯಿಕ ಕೂಟಗಳನ್ನು ಆಯೋಜಿಸಿದ್ದರು ಎಂದು ಇತಿಹಾಸ ಹೇಳುತ್ತವೆ.

2017 ರಲ್ಲಿ, ಭಾರತದ ಪುರಾತತ್ವ ಸಮೀಕ್ಷೆಯು ರಾಮಕೃಷ್ಣ ಅವರನ್ನು ಅಸ್ಸಾಂಗೆ ವರ್ಗಾಯಿಸಿತು. ಆ ಸಮಯದಲ್ಲಿ ರಾಜಕೀಯ ಪಕ್ಷಗಳು ಈ ಕ್ರಮವನ್ನು “ಅಸಾಮಾನ್ಯ” ಎಂದು ಬಣ್ಣಿಸಿದ್ದವು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಆವಿಷ್ಕಾರವು ವ್ಯಾಪಕ ಗಮನ ಸೆಳೆದಿತ್ತು ಮತ್ತು ರಾಮಕೃಷ್ಣ ಅವರ ವರ್ಗಾವಣೆಯನ್ನು ಉತ್ಖನನದ ಮಹತ್ವವನ್ನು ಕಡಿಮೆ ಮಾಡುವ ಪ್ರಯತ್ನವೆಂದು ಪರಿಗಣಿಸಲಾಗಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಉತ್ಖನನದ ಮೂರನೇ ಹಂತವನ್ನು ನಡೆಸಿತು. ಆದರೆ 2017 ರಲ್ಲಿ ಯಾವುದೇ ಮಹತ್ವದ ಸಂಶೋಧನೆಗಳು ಹೊರಹೊಮ್ಮಿಲ್ಲ ಎಂದು ಘೋಷಿಸಿ ಉತ್ಖನನವನ್ನು ಸ್ಥಗಿತಗೊಳಿಸಿತು. ಈ ನಿರ್ಧಾರವನ್ನು ತಮಿಳುನಾಡಿನ ರಾಜಕಾರಣಿಗಳು ಟೀಕಿಸಿದ್ದು, ಕೇಂದ್ರ ಸರ್ಕಾರವು ಪ್ರಾಚೀನ ತಮಿಳು ನಾಗರಿಕತೆಯ ಪುರಾವೆಗಳನ್ನು ನಿಗ್ರಹಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಆದಾಗ್ಯೂ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಮಧ್ಯಪ್ರವೇಶಿಸಿ ತಮಿಳುನಾಡು ರಾಜ್ಯ ಪುರಾತತ್ವ ಇಲಾಖೆಯನ್ನು ಉತ್ಖನನವನ್ನು ವಹಿಸಿಕೊಳ್ಳುವಂತೆ ಕೇಳಿತು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಹನ್ನೊಂದನೇ ಹಂತದ ಉತ್ಖನನವು ಜೂನ್‌ನಲ್ಲಿ ನಡೆಯಲಿದೆ. 2014 ರಿಂದೀಚೆಗೆ ಕೀಲಡಿಯಿಂದ ಸುಮಾರು 20 ಸಾವಿರ ಕಲಾಕೃತಿಗಳನ್ನು ಪತ್ತೆಹಚ್ಚಲಾಗಿದೆ.

2023 ರಲ್ಲಿ ಸಲ್ಲಿಸಿದ ವರದಿಯಲ್ಲಿ, 23 ಕಲಾಕೃತಿಗಳು ಸುಮಾರು ಕ್ರಿ.ಶ. 300 ರ ಹಿಂದಿನವು ಎಂದು ನಿರ್ಧರಿಸಲಾಗಿದೆ ಎಂದು ಈಗ ಪ್ರಾಚೀನ ವಸ್ತುಗಳ ನಿರ್ದೇಶಕರಾಗಿರುವ ರಾಮಕೃಷ್ಣ ಅವರು ಹೇಳಿದ್ದರೆ. ಈ ಮಾಹಿತಿಯನ್ನು ಬಳಸಿಕೊಂಡು ಅವರು ಕೀಲಡಿ ಸ್ಥಳದ ಕಾಲಾನುಕ್ರಮದ ಅವಧಿಯನ್ನು ಕ್ರಿಸ್ತಪೂರ್ವ ಎಂಟನೇ ಶತಮಾನ ಮತ್ತು ಕ್ರಿಸ್ತಪೂರ್ವ ಮೂರನೇ ಶತಮಾನದ ನಡುವೆ ಪ್ರತಿಪಾದಿಸಿದ್ದಾರೆ. ಕೀಲಡಿ ವರದಿ ಪ್ರಕಟಿಸದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...