Homeಮುಖಪುಟಇನ್ನೂ ಬಾರದ ಅಕ್ಕಿ ಬೇಳೆ - ಹುಸಿಯಾದ ಕೇಂದ್ರ ಸರ್ಕಾರದ ಭರವಸೆ

ಇನ್ನೂ ಬಾರದ ಅಕ್ಕಿ ಬೇಳೆ – ಹುಸಿಯಾದ ಕೇಂದ್ರ ಸರ್ಕಾರದ ಭರವಸೆ

ಮಾರ್ಚ್ 26ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಯಡಿ ಐದು ಕೆಜಿ ಅಕ್ಕಿ ಮತ್ತು ಒಂದು ಕಜಿ ಬೇಳೆ ನೀಡುವ ಭರವಸೆ ನೀಡಿದ್ದರು.

- Advertisement -
- Advertisement -

ಏಪ್ರಿಲ್ 15ರ ನಂತರ ತನ್ನ ಪಾಲಿನ ಪಡಿತರ ಮತ್ತು ಬೇಳೆ ನೀಡುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಮೌನಕ್ಕೆ ಜಾರಿದೆ. ದೇಶದ ಪಡಿತರದಾರರು ಸೇರಿದಂತೆ ಎಲ್ಲ ಕುಟುಂಬಗಳಿಗೆ ಐದು ಕೆಜಿ ಅಕ್ಕಿ ಹಾಗೂ ಒಂದು ಕೆಜಿ ಬೇಳೆಯನ್ನು ಉಚಿತವಾಗಿ ವಿತರಿಸುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಏಪ್ರಿಲ್ ತಿಂಗಳು ಕಳೆಯುತ್ತ ಬರುತ್ತಿದ್ದರೂ ಕೇಂದ್ರ ಸರ್ಕಾರ ಬೇಳೆ ಮತ್ತು ಅಕ್ಕಿ ನೀಡುವ ಸುಳಿವೂ ನೀಡುತ್ತಿಲ್ಲ. ಕೇಂದ್ರದ ಇಂತಹ ಕ್ರಮದಿಂದ ಪಡಿತರದಾರರು ಬೇಸರ ವ್ಯಕ್ತಪಡಿಸಿದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಭರವಸೆ ನೀಡಿದ ಮೇಲೆ ಕೇಂದ್ರ ತನ್ನ ಪಾಲಿನ ಪಡಿತರವನ್ನು ನೀಡಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ದೇಶದಲ್ಲಿ 23.6 ಕೋಟಿ ಪಡಿತರ ಚೀಟಿಗಳಿವೆ. ಈ ಕುಟುಂಬಗಳಿಗೆ ವಿತರಿಸಲು ಪ್ರತಿ ತಿಂಗಳು 2,36,000 ಟನ್ ಬೇಳೆ ಬೇಕು ಎಂಬುದನ್ನು ಸರ್ಕಾರದ ಅಂಕಿಅಂಶಗಳೇ ಹೇಳುತ್ತವೆ. ಆದರೆ ಇದುವರೆಗೆ ಎಲ್ಲಾ ರಾಜ್ಯಗಳಿಗೆ ಕೇವಲ 44,932 ಟನ್ ಬೇಳೆ ಬಿಡುಗಡೆ ಮಾಡಿದೆ ಎಂದು ವರದಿಗಳು ತಿಳಿಸಿವೆ.. ಮಾರ್ಚ್ 26ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಯಡಿ ಐದು ಕೆಜಿ ಅಕ್ಕಿ ಮತ್ತು ಒಂದು ಕಜಿ ಬೇಳೆ ನೀಡುವ ಭರವಸೆ ನೀಡಿದ್ದರು. ಸಂಕಷ್ಟದ ಸಮಯದಲ್ಲಿ ಬಡಕುಟುಂಬಗಳಿಗೆ ಪಡಿತರ ನೀಡಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು. ಬೇಳೆ ನೀಡದೇ ಇರುವುದರಿಂದ  ಪಡಿರತರದಾರ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ವಿತರಿಸುವ ಉದ್ದೇಶಕ್ಕಾಗಿ 2020-21ನೇ ಸಾಲಿಗೆ 10 ಸಾವಿರ ಟನ್ ಬೇಳೆ ಅಗತ್ಯವಿದೆ ಎಂದು ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಆದರೆ ರಾಜ್ಯದ ಮನವಿಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ಒಂದು ಬಾರಿಯೂ ಬೇಳೆಯನ್ನು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡಿಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರ ಕೊರೊನಾ ಸಂಕಟದ ಸಮಯದಲ್ಲಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೆ ಮಾತಿಗೆ ತಪ್ಪಿದೆ. ಬೇಳೆ ಮತ್ತು ಅಕ್ಕಿಯ ನಿರೀಕ್ಷೆಯಲ್ಲಿದ್ದ ಬಡಕುಟುಂಬಗಳಿಗೆ ಕೇಂದ್ರದ ಮೌನ ತಣ್ಣೀರು ಎರೆಚಿದಂತಾಗಿದೆ. ಏಪ್ರಿಲ್ 10ರ ಒಳಗೆ ರಾಜ್ಯದ ಪಾಲಿನ ಪಡಿತರ ಪಡೆದಿದ್ದ ಕುಟುಂಬಗಳು ಕೇಂದ್ರದ ಪಡಿತರಕ್ಕಾಗಿ ಕಾದುಕುಳಿತವು. ಇದಕ್ಕೆ ಕೇಂದ್ರದಿಂದ ಯಾವುದೇ ಸ್ಪಂದನೆ ವ್ಯಕ್ತವಾಗಲಿಲ್ಲ.

ಆಹಾರ, ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವೈಬ್‌ಸೈಟ್ ನಲ್ಲಿ ಪ್ರಕಟಿಸಿರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ 1,47,95,472 ಪಡಿತರ ಕುಟುಂಬಗಳಿವೆ.  ಬೆಳಗಾವಿಯಲ್ಲಿ ಹೆಚ್ಚು ಅಂದರೆ 14,30,946 ಪಡಿತರದಾರರು ಇದ್ದರೆ, ಮೈಸೂರಿನಲ್ಲಿ 7,98,187 ಕುಟುಂಬಗಳಿದ್ದು ಎರಡನೇ ಸ್ಥಾನದಲ್ಲಿದೆ. ತುಮಕೂರು ಮೂರನೇ ಸ್ಥಾನದಲ್ಲಿದ್ದು ಇಲ್ಲಿ 7,12,709 ಕುಟುಂಬಗಳಿವೆ. ಬಳ್ಳಾರಿಯಲ್ಲಿ 6,53,403 ಕುಟುಂಬಗಳಿದ್ದು ನಾಲ್ಕನೇ ಸ್ಥಾನದಲ್ಲಿದೆ. ಇಷ್ಟೊಂದು ಕುಟುಂಬಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಎರಡು ತಿಂಗಳ ಅಕ್ಕಿ ಮತ್ತು ಗೋದಿಯನ್ನು ವಿತರಿಸಿದೆ. ಆದರೆ ಕೇಂದ್ರ ಸರ್ಕಾರದ ಪಾಲು ಜನರಿಗೆ ಸಿಗಬೇಕು. ಇದಕ್ಕಾಗಿ ಪಡಿತರ ಕುಟುಂಬಗಳು ಎದುರು ನೋಡುತ್ತಿವೆ.

ಕೇಂದ್ರ ಸರ್ಕಾರವೇ ಸುಪ್ರೀಂಕೋರ್ಟ್‌ಗೆ ತಿಳಿಸಿರುವಂತೆ ಕೊರೊನ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಹಾಗಾಗಿ ಶೇ.96ರಷ್ಟು ವಲಸೆ ಕಾರ್ಮಿಕರು ಪಡಿತರ ಪಡೆಯಲು ಆಗಿಲ್ಲ. ಶೇ. 90ರಷ್ಟು ವಲಸೆ ಕಾರ್ಮಿಕರು ಕೂಲಿಯನ್ನೂ ಪಡೆದಿಲ್ಲ. ಶೇಕಡ 70ರಷ್ಟು ವಲಸೆ ಕಾರ್ಮಿಕರು 200 ರೂಗಿಂತಲೂ ಕಡಿಮೆ ಕೂಲಿಯನ್ನು ಪಡೆದಿದ್ದಾರೆ ಎಂದು ಹಿಂದೂ ಪತ್ರಿಕೆ ವರದಿ ಮಾಡಿದೆ. ಅಂದಹಾಗೆ ರಾಜ್ಯ ಕರ್ನಾಟಕ ಸರ್ಕಾರ ನೀಡಿರುವ ಪಡಿತರ ದಾನ್ಯಗಳನ್ನು ವಲಸೆ ಕುಟುಂಬಗಳು ಪಡೆದಿಲ್ಲ. ಹೀಗಾಗಿ ಆ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜೊತೆಗೆ ವಲಸೆ ಕಾರ್ಮಿಕರನ್ನು ಕಳೆದ ಎರಡು ದಿನಗಳ ಹಿಂದೆ ಅವರ ಸ್ವಂತ ಸ್ಥಳಗಳಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿ ಕಳಿಸಿಕೊಡಲಾಗಿದೆ. ಮನೆಯಲ್ಲಿ ಆಹಾರಧಾನ್ಯಗಳು ಇಲ್ಲ. ಕೂಲಿಯ ಹಣವೂ ಇಲ್ಲದಂತಹ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕ ಕುಟುಂಬಗಳಿದ್ದು ಅವರ ನೆರವಿಗೆ ಸರ್ಕಾರ ಬರಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...