Homeಮುಖಪುಟಇನ್ನೂ ಬಾರದ ಅಕ್ಕಿ ಬೇಳೆ - ಹುಸಿಯಾದ ಕೇಂದ್ರ ಸರ್ಕಾರದ ಭರವಸೆ

ಇನ್ನೂ ಬಾರದ ಅಕ್ಕಿ ಬೇಳೆ – ಹುಸಿಯಾದ ಕೇಂದ್ರ ಸರ್ಕಾರದ ಭರವಸೆ

ಮಾರ್ಚ್ 26ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಯಡಿ ಐದು ಕೆಜಿ ಅಕ್ಕಿ ಮತ್ತು ಒಂದು ಕಜಿ ಬೇಳೆ ನೀಡುವ ಭರವಸೆ ನೀಡಿದ್ದರು.

- Advertisement -
- Advertisement -

ಏಪ್ರಿಲ್ 15ರ ನಂತರ ತನ್ನ ಪಾಲಿನ ಪಡಿತರ ಮತ್ತು ಬೇಳೆ ನೀಡುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಮೌನಕ್ಕೆ ಜಾರಿದೆ. ದೇಶದ ಪಡಿತರದಾರರು ಸೇರಿದಂತೆ ಎಲ್ಲ ಕುಟುಂಬಗಳಿಗೆ ಐದು ಕೆಜಿ ಅಕ್ಕಿ ಹಾಗೂ ಒಂದು ಕೆಜಿ ಬೇಳೆಯನ್ನು ಉಚಿತವಾಗಿ ವಿತರಿಸುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಏಪ್ರಿಲ್ ತಿಂಗಳು ಕಳೆಯುತ್ತ ಬರುತ್ತಿದ್ದರೂ ಕೇಂದ್ರ ಸರ್ಕಾರ ಬೇಳೆ ಮತ್ತು ಅಕ್ಕಿ ನೀಡುವ ಸುಳಿವೂ ನೀಡುತ್ತಿಲ್ಲ. ಕೇಂದ್ರದ ಇಂತಹ ಕ್ರಮದಿಂದ ಪಡಿತರದಾರರು ಬೇಸರ ವ್ಯಕ್ತಪಡಿಸಿದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಭರವಸೆ ನೀಡಿದ ಮೇಲೆ ಕೇಂದ್ರ ತನ್ನ ಪಾಲಿನ ಪಡಿತರವನ್ನು ನೀಡಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ದೇಶದಲ್ಲಿ 23.6 ಕೋಟಿ ಪಡಿತರ ಚೀಟಿಗಳಿವೆ. ಈ ಕುಟುಂಬಗಳಿಗೆ ವಿತರಿಸಲು ಪ್ರತಿ ತಿಂಗಳು 2,36,000 ಟನ್ ಬೇಳೆ ಬೇಕು ಎಂಬುದನ್ನು ಸರ್ಕಾರದ ಅಂಕಿಅಂಶಗಳೇ ಹೇಳುತ್ತವೆ. ಆದರೆ ಇದುವರೆಗೆ ಎಲ್ಲಾ ರಾಜ್ಯಗಳಿಗೆ ಕೇವಲ 44,932 ಟನ್ ಬೇಳೆ ಬಿಡುಗಡೆ ಮಾಡಿದೆ ಎಂದು ವರದಿಗಳು ತಿಳಿಸಿವೆ.. ಮಾರ್ಚ್ 26ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಯಡಿ ಐದು ಕೆಜಿ ಅಕ್ಕಿ ಮತ್ತು ಒಂದು ಕಜಿ ಬೇಳೆ ನೀಡುವ ಭರವಸೆ ನೀಡಿದ್ದರು. ಸಂಕಷ್ಟದ ಸಮಯದಲ್ಲಿ ಬಡಕುಟುಂಬಗಳಿಗೆ ಪಡಿತರ ನೀಡಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು. ಬೇಳೆ ನೀಡದೇ ಇರುವುದರಿಂದ  ಪಡಿರತರದಾರ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ವಿತರಿಸುವ ಉದ್ದೇಶಕ್ಕಾಗಿ 2020-21ನೇ ಸಾಲಿಗೆ 10 ಸಾವಿರ ಟನ್ ಬೇಳೆ ಅಗತ್ಯವಿದೆ ಎಂದು ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಆದರೆ ರಾಜ್ಯದ ಮನವಿಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ಒಂದು ಬಾರಿಯೂ ಬೇಳೆಯನ್ನು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡಿಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರ ಕೊರೊನಾ ಸಂಕಟದ ಸಮಯದಲ್ಲಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೆ ಮಾತಿಗೆ ತಪ್ಪಿದೆ. ಬೇಳೆ ಮತ್ತು ಅಕ್ಕಿಯ ನಿರೀಕ್ಷೆಯಲ್ಲಿದ್ದ ಬಡಕುಟುಂಬಗಳಿಗೆ ಕೇಂದ್ರದ ಮೌನ ತಣ್ಣೀರು ಎರೆಚಿದಂತಾಗಿದೆ. ಏಪ್ರಿಲ್ 10ರ ಒಳಗೆ ರಾಜ್ಯದ ಪಾಲಿನ ಪಡಿತರ ಪಡೆದಿದ್ದ ಕುಟುಂಬಗಳು ಕೇಂದ್ರದ ಪಡಿತರಕ್ಕಾಗಿ ಕಾದುಕುಳಿತವು. ಇದಕ್ಕೆ ಕೇಂದ್ರದಿಂದ ಯಾವುದೇ ಸ್ಪಂದನೆ ವ್ಯಕ್ತವಾಗಲಿಲ್ಲ.

ಆಹಾರ, ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವೈಬ್‌ಸೈಟ್ ನಲ್ಲಿ ಪ್ರಕಟಿಸಿರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ 1,47,95,472 ಪಡಿತರ ಕುಟುಂಬಗಳಿವೆ.  ಬೆಳಗಾವಿಯಲ್ಲಿ ಹೆಚ್ಚು ಅಂದರೆ 14,30,946 ಪಡಿತರದಾರರು ಇದ್ದರೆ, ಮೈಸೂರಿನಲ್ಲಿ 7,98,187 ಕುಟುಂಬಗಳಿದ್ದು ಎರಡನೇ ಸ್ಥಾನದಲ್ಲಿದೆ. ತುಮಕೂರು ಮೂರನೇ ಸ್ಥಾನದಲ್ಲಿದ್ದು ಇಲ್ಲಿ 7,12,709 ಕುಟುಂಬಗಳಿವೆ. ಬಳ್ಳಾರಿಯಲ್ಲಿ 6,53,403 ಕುಟುಂಬಗಳಿದ್ದು ನಾಲ್ಕನೇ ಸ್ಥಾನದಲ್ಲಿದೆ. ಇಷ್ಟೊಂದು ಕುಟುಂಬಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಎರಡು ತಿಂಗಳ ಅಕ್ಕಿ ಮತ್ತು ಗೋದಿಯನ್ನು ವಿತರಿಸಿದೆ. ಆದರೆ ಕೇಂದ್ರ ಸರ್ಕಾರದ ಪಾಲು ಜನರಿಗೆ ಸಿಗಬೇಕು. ಇದಕ್ಕಾಗಿ ಪಡಿತರ ಕುಟುಂಬಗಳು ಎದುರು ನೋಡುತ್ತಿವೆ.

ಕೇಂದ್ರ ಸರ್ಕಾರವೇ ಸುಪ್ರೀಂಕೋರ್ಟ್‌ಗೆ ತಿಳಿಸಿರುವಂತೆ ಕೊರೊನ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಹಾಗಾಗಿ ಶೇ.96ರಷ್ಟು ವಲಸೆ ಕಾರ್ಮಿಕರು ಪಡಿತರ ಪಡೆಯಲು ಆಗಿಲ್ಲ. ಶೇ. 90ರಷ್ಟು ವಲಸೆ ಕಾರ್ಮಿಕರು ಕೂಲಿಯನ್ನೂ ಪಡೆದಿಲ್ಲ. ಶೇಕಡ 70ರಷ್ಟು ವಲಸೆ ಕಾರ್ಮಿಕರು 200 ರೂಗಿಂತಲೂ ಕಡಿಮೆ ಕೂಲಿಯನ್ನು ಪಡೆದಿದ್ದಾರೆ ಎಂದು ಹಿಂದೂ ಪತ್ರಿಕೆ ವರದಿ ಮಾಡಿದೆ. ಅಂದಹಾಗೆ ರಾಜ್ಯ ಕರ್ನಾಟಕ ಸರ್ಕಾರ ನೀಡಿರುವ ಪಡಿತರ ದಾನ್ಯಗಳನ್ನು ವಲಸೆ ಕುಟುಂಬಗಳು ಪಡೆದಿಲ್ಲ. ಹೀಗಾಗಿ ಆ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜೊತೆಗೆ ವಲಸೆ ಕಾರ್ಮಿಕರನ್ನು ಕಳೆದ ಎರಡು ದಿನಗಳ ಹಿಂದೆ ಅವರ ಸ್ವಂತ ಸ್ಥಳಗಳಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿ ಕಳಿಸಿಕೊಡಲಾಗಿದೆ. ಮನೆಯಲ್ಲಿ ಆಹಾರಧಾನ್ಯಗಳು ಇಲ್ಲ. ಕೂಲಿಯ ಹಣವೂ ಇಲ್ಲದಂತಹ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕ ಕುಟುಂಬಗಳಿದ್ದು ಅವರ ನೆರವಿಗೆ ಸರ್ಕಾರ ಬರಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....