Homeಮುಖಪುಟಕೊರೊನಾ ವಿರುದ್ಧ ಹೋರಾಡುವ ಸ್ಪಷ್ಟ ಕಲ್ಪನೆ ಕೇಂದ್ರಕ್ಕಿಲ್ಲ: ಸೋನಿಯಾ

ಕೊರೊನಾ ವಿರುದ್ಧ ಹೋರಾಡುವ ಸ್ಪಷ್ಟ ಕಲ್ಪನೆ ಕೇಂದ್ರಕ್ಕಿಲ್ಲ: ಸೋನಿಯಾ

ಎಲ್ಲರೂ ಒಟ್ಟಾಗಿ ಕರೋನವೈರಸ್ ವಿರುದ್ಧ ಹೋರಾಡಬೇಕಾದ ಸಮಯದಲ್ಲಿ ಬಿಜೆಪಿ ದ್ವೇಷ ಮತ್ತು ಕೋಮು ಪಕ್ಷಪಾತದ ವೈರಸ್ ಅನ್ನು ಹರಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ವೈದ್ಯರು, ದಾದಿಯರು, ಅರೆವೈದ್ಯರು, ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಮತ್ತು ಅಗತ್ಯ ಸೇವಾ ಪೂರೈಕೆದಾರರು, ಎನ್‌ಜಿಒಗಳು ಮತ್ತು ಲಕ್ಷಾಂತರ ನಾಗರಿಕರು ಭಾರತದಾದ್ಯಂತದ ಅತ್ಯಂತ ನಿರ್ಗತಿಕರಿಗೆ ಪರಿಹಾರವನ್ನು ನೀಡುತ್ತಿದ್ದಾರೆ. ಅವರ ಸಮರ್ಪಣೆ ಮತ್ತು ದೃಢನಿಶ್ಚಯ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಫೂರ್ತಿ ನೀಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಕೆಲವು ಯಶಸ್ಸಿನ ಕಥೆಗಳಿವೆ ಮತ್ತು ನಾವು ಅವರನ್ನು ಶ್ಲಾಘಿಸಬೇಕು. ಸಾಕಷ್ಟು ವೈಯಕ್ತಿಕ ರಕ್ಷಣಾ ಸಾಧನಗಳ ಕೊರತೆಯ ನಡುವೆಯೂ #COVID19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಪ್ರತಿಯೊಬ್ಬ ಭಾರತೀಯನಿಗೂ ನಾವು ನಮಸ್ಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

ಕೊರೊನ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿರ್ವಹಿಸಬೇಕೆಂಬ ಸ್ಪಷ್ಟ ಕಲ್ಪನೆ ಇಲ್ಲ. ಈವರೆಗಿನ ನಿಭಾಯಿಸಿರುವುದು ಪಾರ್ಶ್ವ ಮತ್ತು ಶೋಚನೀಯ ಮಾರ್ಗವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಸೊನಿಯಾ ಗಾಂಧಿ ಆರೋಪಿಸಿದ್ದಾರೆ.

ಕಾಂಗ್ರೆಸ್ ವರ್ಕಿಂಗ್ ಸಮಿತಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸೋನಿಯಾಗಾಂಧಿ ಕೋವಿಡ್-19 ಸೋಂಕು ಹೆಚ್ಚುತ್ತಿದೆ ಮತ್ತು ದೇಶದ ಜನರನ್ನು ತೀವ್ರವಾಗಿ ಬಾಧಿಸುತ್ತಿದೆ. ಅಷ್ಟೇ ಏಕೆ ವೇಗವಾಗಿ ಹರಡುತ್ತಿದೆ. ಆದರೆ ಸರ್ಕಾರ ಪರಿಸ್ಥಿತಿಯನ್ನು ಪಾರ್ಶ್ವ ರೀತಿಯಲ್ಲಿ ನಿಭಾಯಿಸಿದೆ ಎಂದು ಟೀಕಿಸಿದ್ದಾರೆ.

ಎಲ್ಲರೂ ಒಟ್ಟಾಗಿ ಕರೋನವೈರಸ್ ವಿರುದ್ಧ ಹೋರಾಡಬೇಕಾದ ಸಮಯದಲ್ಲಿ ಬಿಜೆಪಿ ದ್ವೇಷ ಮತ್ತು ಕೋಮು ಪಕ್ಷಪಾತದ ವೈರಸ್ ಅನ್ನು ಹರಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮಾರ್ಚ್ 23 ರಿಂದ ಲಾಕ್ ಡೌನ್ ಆರಂಭವಾದ ದಿನದಿಂದಲೂ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಕಷ್ಟು ಪತ್ರಗಳನ್ನು ಬರೆದಿದ್ದೇನೆ. ಪರಿಸ್ಥಿತಿಯನ್ನು ನಿಭಾಯಿಸಲು ರಚನಾತ್ಮಕ ಸಹಕಾರ ಅಗತ್ಯ ಎಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದಿದ್ದಾರೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಜನವಿಭಾಗಗಳು ಮತ್ತು ವಿವಿಧ ಮೂಲಗಳಿಂದ ನಾವು ಸಲಹೆಗಳನ್ನು ಪಡೆದಿದ್ದೇವೆ. ಕೋವಿಡ್-19 ನಿಯಂತ್ರಣಕ್ಕೆ ಬೇಕಾದ ಸಲಹೆಗಳು ಬಂದಿವೆ. ಅವುಗಳನ್ನು ಕೇಂದ್ರ ಸರ್ಕಾರಕ್ಕೂ ತಿಳಿಸಿದ್ದೇವೆ. ಈ ಸಲಹೆಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳಿಂದ ಹೊರತರಲು ಸಹಕಾರಿಯಾಗಲಿವೆ ಎಂದು ಹೇಳಿದ್ದಾರೆ.

ಆದರೆ ಕೇಂದ್ರ ಸರ್ಕಾರ ಕೇವಲ ಪಾರ್ಶ್ವ ಮತ್ತು ಸ್ಪಷ್ಟಕಲ್ಪನೆ ಇಲ್ಲದೆ ಕೆಲಸ ಮಾಡುತ್ತಿದೆ. ಸದ್ಯದ ಪರಿಸ್ಥಿಯನ್ನು ನಿಭಾಯಿಸಲು ದೊಡ್ಡ ಹೃದಯವಂತಿಕೆ ಬೇಕಾಗಿದೆ. ಕೊರೊನ ಸೋಂಕು ಪರೀಕ್ಷೆಗಳನ್ನು ತೀವ್ರಗೊಳಿಸಬೇಕು. ವೈಯಕ್ತಿಕ ರಕ್ಷಣಾ ಉಪಕರಣಗಳ ಕಿಟ್ ಗಳನ್ನು ಕೊಡಬೇಕು. ಆದರೆ ಈಗ ವಿತರಿಸಿರುವ ಪಿಪಿಇ ಕಿಟ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಆಪಾದಿಸಿದರು.

ಲಾಕ್‌ಡೌನ್ ಸಮಯದಲ್ಲಿ ಕೋಟ್ಯಂತರ ಉದ್ಯೋಗಗಳು ಕಳೆದುಹೋಗಿವೆ ಎಂಬುದು ಬಹಳ ಗಂಭೀರ ವಿಷಯ. ನಿರುದ್ಯೋಗ ಇನ್ನೂ ಹೆಚ್ಚಾಗಲಿದೆ. ಸೋನಿಯಾ ಗಾಂಧಿಯವರು ಈ ಬಿಕ್ಕಟ್ಟಿನ ಸಮಯದಲ್ಲಿ ಪ್ರತಿ ಕುಟುಂಬಕ್ಕೆ ರೂ.7,500 ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ರಾಜಸ್ತಾನದ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಉದ್ಯೋಗ, ಹಣ ಮತ್ತು ಅನೇಕ ಸಂದರ್ಭಗಳಲ್ಲಿ ಆಹಾರವಿಲ್ಲದೆ ಇತರ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರ ಸಮಸ್ಯೆಯ ಬಗ್ಗೆ ಸೋನಿಯಾ ಗಾಂಧಿಯವರು ಮಾತನಾಡಿದರು. ಸರ್ಕಾರವು ಅವರಿಗೆ ಆಹಾರ ಭದ್ರತೆ ಮತ್ತು ಆರ್ಥಿಕ ಸುರಕ್ಷತಾ ಜಾಲವನ್ನು ಒದಗಿಸಬೇಕೆಂದು ಅವರು ಒತ್ತಾಯಿಸಿದರು. ಸರ್ಕಾರ ಇದನ್ನು ಸಹಾನುಭೂತಿ ಮತ್ತು ದೊಡ್ಡ ಹೃದಯದಿಂದ ಪರಿಹರಿಸಬೇಕಾಗಿದೆ ಎಂದು ಗೆಹ್ಲೋಟ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಪ್ರಜ್ಞಾವಂತರ ಮಾತುಗಳನ್ನು ಕೇಳುವುದಿಲ್ಲ. ಅವರ ಮೆದುಳಿನಲ್ಲಿ ಇರುವುದು ಲಾಕ್ ಡೌನ್ ಮತ್ತು ಸೀಲ್ ಡೌನ್ ಮಾತ್ರ.

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...