Homeಮುಖಪುಟಕೊರೊನಾ ವಿರುದ್ಧ ಹೋರಾಡುವ ಸ್ಪಷ್ಟ ಕಲ್ಪನೆ ಕೇಂದ್ರಕ್ಕಿಲ್ಲ: ಸೋನಿಯಾ

ಕೊರೊನಾ ವಿರುದ್ಧ ಹೋರಾಡುವ ಸ್ಪಷ್ಟ ಕಲ್ಪನೆ ಕೇಂದ್ರಕ್ಕಿಲ್ಲ: ಸೋನಿಯಾ

ಎಲ್ಲರೂ ಒಟ್ಟಾಗಿ ಕರೋನವೈರಸ್ ವಿರುದ್ಧ ಹೋರಾಡಬೇಕಾದ ಸಮಯದಲ್ಲಿ ಬಿಜೆಪಿ ದ್ವೇಷ ಮತ್ತು ಕೋಮು ಪಕ್ಷಪಾತದ ವೈರಸ್ ಅನ್ನು ಹರಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ವೈದ್ಯರು, ದಾದಿಯರು, ಅರೆವೈದ್ಯರು, ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಮತ್ತು ಅಗತ್ಯ ಸೇವಾ ಪೂರೈಕೆದಾರರು, ಎನ್‌ಜಿಒಗಳು ಮತ್ತು ಲಕ್ಷಾಂತರ ನಾಗರಿಕರು ಭಾರತದಾದ್ಯಂತದ ಅತ್ಯಂತ ನಿರ್ಗತಿಕರಿಗೆ ಪರಿಹಾರವನ್ನು ನೀಡುತ್ತಿದ್ದಾರೆ. ಅವರ ಸಮರ್ಪಣೆ ಮತ್ತು ದೃಢನಿಶ್ಚಯ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಫೂರ್ತಿ ನೀಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಕೆಲವು ಯಶಸ್ಸಿನ ಕಥೆಗಳಿವೆ ಮತ್ತು ನಾವು ಅವರನ್ನು ಶ್ಲಾಘಿಸಬೇಕು. ಸಾಕಷ್ಟು ವೈಯಕ್ತಿಕ ರಕ್ಷಣಾ ಸಾಧನಗಳ ಕೊರತೆಯ ನಡುವೆಯೂ #COVID19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಪ್ರತಿಯೊಬ್ಬ ಭಾರತೀಯನಿಗೂ ನಾವು ನಮಸ್ಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

ಕೊರೊನ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿರ್ವಹಿಸಬೇಕೆಂಬ ಸ್ಪಷ್ಟ ಕಲ್ಪನೆ ಇಲ್ಲ. ಈವರೆಗಿನ ನಿಭಾಯಿಸಿರುವುದು ಪಾರ್ಶ್ವ ಮತ್ತು ಶೋಚನೀಯ ಮಾರ್ಗವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಸೊನಿಯಾ ಗಾಂಧಿ ಆರೋಪಿಸಿದ್ದಾರೆ.

ಕಾಂಗ್ರೆಸ್ ವರ್ಕಿಂಗ್ ಸಮಿತಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸೋನಿಯಾಗಾಂಧಿ ಕೋವಿಡ್-19 ಸೋಂಕು ಹೆಚ್ಚುತ್ತಿದೆ ಮತ್ತು ದೇಶದ ಜನರನ್ನು ತೀವ್ರವಾಗಿ ಬಾಧಿಸುತ್ತಿದೆ. ಅಷ್ಟೇ ಏಕೆ ವೇಗವಾಗಿ ಹರಡುತ್ತಿದೆ. ಆದರೆ ಸರ್ಕಾರ ಪರಿಸ್ಥಿತಿಯನ್ನು ಪಾರ್ಶ್ವ ರೀತಿಯಲ್ಲಿ ನಿಭಾಯಿಸಿದೆ ಎಂದು ಟೀಕಿಸಿದ್ದಾರೆ.

ಎಲ್ಲರೂ ಒಟ್ಟಾಗಿ ಕರೋನವೈರಸ್ ವಿರುದ್ಧ ಹೋರಾಡಬೇಕಾದ ಸಮಯದಲ್ಲಿ ಬಿಜೆಪಿ ದ್ವೇಷ ಮತ್ತು ಕೋಮು ಪಕ್ಷಪಾತದ ವೈರಸ್ ಅನ್ನು ಹರಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮಾರ್ಚ್ 23 ರಿಂದ ಲಾಕ್ ಡೌನ್ ಆರಂಭವಾದ ದಿನದಿಂದಲೂ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಕಷ್ಟು ಪತ್ರಗಳನ್ನು ಬರೆದಿದ್ದೇನೆ. ಪರಿಸ್ಥಿತಿಯನ್ನು ನಿಭಾಯಿಸಲು ರಚನಾತ್ಮಕ ಸಹಕಾರ ಅಗತ್ಯ ಎಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದಿದ್ದಾರೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಜನವಿಭಾಗಗಳು ಮತ್ತು ವಿವಿಧ ಮೂಲಗಳಿಂದ ನಾವು ಸಲಹೆಗಳನ್ನು ಪಡೆದಿದ್ದೇವೆ. ಕೋವಿಡ್-19 ನಿಯಂತ್ರಣಕ್ಕೆ ಬೇಕಾದ ಸಲಹೆಗಳು ಬಂದಿವೆ. ಅವುಗಳನ್ನು ಕೇಂದ್ರ ಸರ್ಕಾರಕ್ಕೂ ತಿಳಿಸಿದ್ದೇವೆ. ಈ ಸಲಹೆಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳಿಂದ ಹೊರತರಲು ಸಹಕಾರಿಯಾಗಲಿವೆ ಎಂದು ಹೇಳಿದ್ದಾರೆ.

ಆದರೆ ಕೇಂದ್ರ ಸರ್ಕಾರ ಕೇವಲ ಪಾರ್ಶ್ವ ಮತ್ತು ಸ್ಪಷ್ಟಕಲ್ಪನೆ ಇಲ್ಲದೆ ಕೆಲಸ ಮಾಡುತ್ತಿದೆ. ಸದ್ಯದ ಪರಿಸ್ಥಿಯನ್ನು ನಿಭಾಯಿಸಲು ದೊಡ್ಡ ಹೃದಯವಂತಿಕೆ ಬೇಕಾಗಿದೆ. ಕೊರೊನ ಸೋಂಕು ಪರೀಕ್ಷೆಗಳನ್ನು ತೀವ್ರಗೊಳಿಸಬೇಕು. ವೈಯಕ್ತಿಕ ರಕ್ಷಣಾ ಉಪಕರಣಗಳ ಕಿಟ್ ಗಳನ್ನು ಕೊಡಬೇಕು. ಆದರೆ ಈಗ ವಿತರಿಸಿರುವ ಪಿಪಿಇ ಕಿಟ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಆಪಾದಿಸಿದರು.

ಲಾಕ್‌ಡೌನ್ ಸಮಯದಲ್ಲಿ ಕೋಟ್ಯಂತರ ಉದ್ಯೋಗಗಳು ಕಳೆದುಹೋಗಿವೆ ಎಂಬುದು ಬಹಳ ಗಂಭೀರ ವಿಷಯ. ನಿರುದ್ಯೋಗ ಇನ್ನೂ ಹೆಚ್ಚಾಗಲಿದೆ. ಸೋನಿಯಾ ಗಾಂಧಿಯವರು ಈ ಬಿಕ್ಕಟ್ಟಿನ ಸಮಯದಲ್ಲಿ ಪ್ರತಿ ಕುಟುಂಬಕ್ಕೆ ರೂ.7,500 ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ರಾಜಸ್ತಾನದ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಉದ್ಯೋಗ, ಹಣ ಮತ್ತು ಅನೇಕ ಸಂದರ್ಭಗಳಲ್ಲಿ ಆಹಾರವಿಲ್ಲದೆ ಇತರ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರ ಸಮಸ್ಯೆಯ ಬಗ್ಗೆ ಸೋನಿಯಾ ಗಾಂಧಿಯವರು ಮಾತನಾಡಿದರು. ಸರ್ಕಾರವು ಅವರಿಗೆ ಆಹಾರ ಭದ್ರತೆ ಮತ್ತು ಆರ್ಥಿಕ ಸುರಕ್ಷತಾ ಜಾಲವನ್ನು ಒದಗಿಸಬೇಕೆಂದು ಅವರು ಒತ್ತಾಯಿಸಿದರು. ಸರ್ಕಾರ ಇದನ್ನು ಸಹಾನುಭೂತಿ ಮತ್ತು ದೊಡ್ಡ ಹೃದಯದಿಂದ ಪರಿಹರಿಸಬೇಕಾಗಿದೆ ಎಂದು ಗೆಹ್ಲೋಟ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಪ್ರಜ್ಞಾವಂತರ ಮಾತುಗಳನ್ನು ಕೇಳುವುದಿಲ್ಲ. ಅವರ ಮೆದುಳಿನಲ್ಲಿ ಇರುವುದು ಲಾಕ್ ಡೌನ್ ಮತ್ತು ಸೀಲ್ ಡೌನ್ ಮಾತ್ರ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...