Homeಮುಖಪುಟಕೊರೊನಾ ವಿರುದ್ಧ ಹೋರಾಡುವ ಸ್ಪಷ್ಟ ಕಲ್ಪನೆ ಕೇಂದ್ರಕ್ಕಿಲ್ಲ: ಸೋನಿಯಾ

ಕೊರೊನಾ ವಿರುದ್ಧ ಹೋರಾಡುವ ಸ್ಪಷ್ಟ ಕಲ್ಪನೆ ಕೇಂದ್ರಕ್ಕಿಲ್ಲ: ಸೋನಿಯಾ

ಎಲ್ಲರೂ ಒಟ್ಟಾಗಿ ಕರೋನವೈರಸ್ ವಿರುದ್ಧ ಹೋರಾಡಬೇಕಾದ ಸಮಯದಲ್ಲಿ ಬಿಜೆಪಿ ದ್ವೇಷ ಮತ್ತು ಕೋಮು ಪಕ್ಷಪಾತದ ವೈರಸ್ ಅನ್ನು ಹರಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ವೈದ್ಯರು, ದಾದಿಯರು, ಅರೆವೈದ್ಯರು, ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಮತ್ತು ಅಗತ್ಯ ಸೇವಾ ಪೂರೈಕೆದಾರರು, ಎನ್‌ಜಿಒಗಳು ಮತ್ತು ಲಕ್ಷಾಂತರ ನಾಗರಿಕರು ಭಾರತದಾದ್ಯಂತದ ಅತ್ಯಂತ ನಿರ್ಗತಿಕರಿಗೆ ಪರಿಹಾರವನ್ನು ನೀಡುತ್ತಿದ್ದಾರೆ. ಅವರ ಸಮರ್ಪಣೆ ಮತ್ತು ದೃಢನಿಶ್ಚಯ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಫೂರ್ತಿ ನೀಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಕೆಲವು ಯಶಸ್ಸಿನ ಕಥೆಗಳಿವೆ ಮತ್ತು ನಾವು ಅವರನ್ನು ಶ್ಲಾಘಿಸಬೇಕು. ಸಾಕಷ್ಟು ವೈಯಕ್ತಿಕ ರಕ್ಷಣಾ ಸಾಧನಗಳ ಕೊರತೆಯ ನಡುವೆಯೂ #COVID19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಪ್ರತಿಯೊಬ್ಬ ಭಾರತೀಯನಿಗೂ ನಾವು ನಮಸ್ಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

ಕೊರೊನ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿರ್ವಹಿಸಬೇಕೆಂಬ ಸ್ಪಷ್ಟ ಕಲ್ಪನೆ ಇಲ್ಲ. ಈವರೆಗಿನ ನಿಭಾಯಿಸಿರುವುದು ಪಾರ್ಶ್ವ ಮತ್ತು ಶೋಚನೀಯ ಮಾರ್ಗವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಸೊನಿಯಾ ಗಾಂಧಿ ಆರೋಪಿಸಿದ್ದಾರೆ.

ಕಾಂಗ್ರೆಸ್ ವರ್ಕಿಂಗ್ ಸಮಿತಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸೋನಿಯಾಗಾಂಧಿ ಕೋವಿಡ್-19 ಸೋಂಕು ಹೆಚ್ಚುತ್ತಿದೆ ಮತ್ತು ದೇಶದ ಜನರನ್ನು ತೀವ್ರವಾಗಿ ಬಾಧಿಸುತ್ತಿದೆ. ಅಷ್ಟೇ ಏಕೆ ವೇಗವಾಗಿ ಹರಡುತ್ತಿದೆ. ಆದರೆ ಸರ್ಕಾರ ಪರಿಸ್ಥಿತಿಯನ್ನು ಪಾರ್ಶ್ವ ರೀತಿಯಲ್ಲಿ ನಿಭಾಯಿಸಿದೆ ಎಂದು ಟೀಕಿಸಿದ್ದಾರೆ.

ಎಲ್ಲರೂ ಒಟ್ಟಾಗಿ ಕರೋನವೈರಸ್ ವಿರುದ್ಧ ಹೋರಾಡಬೇಕಾದ ಸಮಯದಲ್ಲಿ ಬಿಜೆಪಿ ದ್ವೇಷ ಮತ್ತು ಕೋಮು ಪಕ್ಷಪಾತದ ವೈರಸ್ ಅನ್ನು ಹರಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮಾರ್ಚ್ 23 ರಿಂದ ಲಾಕ್ ಡೌನ್ ಆರಂಭವಾದ ದಿನದಿಂದಲೂ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಕಷ್ಟು ಪತ್ರಗಳನ್ನು ಬರೆದಿದ್ದೇನೆ. ಪರಿಸ್ಥಿತಿಯನ್ನು ನಿಭಾಯಿಸಲು ರಚನಾತ್ಮಕ ಸಹಕಾರ ಅಗತ್ಯ ಎಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದಿದ್ದಾರೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಜನವಿಭಾಗಗಳು ಮತ್ತು ವಿವಿಧ ಮೂಲಗಳಿಂದ ನಾವು ಸಲಹೆಗಳನ್ನು ಪಡೆದಿದ್ದೇವೆ. ಕೋವಿಡ್-19 ನಿಯಂತ್ರಣಕ್ಕೆ ಬೇಕಾದ ಸಲಹೆಗಳು ಬಂದಿವೆ. ಅವುಗಳನ್ನು ಕೇಂದ್ರ ಸರ್ಕಾರಕ್ಕೂ ತಿಳಿಸಿದ್ದೇವೆ. ಈ ಸಲಹೆಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳಿಂದ ಹೊರತರಲು ಸಹಕಾರಿಯಾಗಲಿವೆ ಎಂದು ಹೇಳಿದ್ದಾರೆ.

ಆದರೆ ಕೇಂದ್ರ ಸರ್ಕಾರ ಕೇವಲ ಪಾರ್ಶ್ವ ಮತ್ತು ಸ್ಪಷ್ಟಕಲ್ಪನೆ ಇಲ್ಲದೆ ಕೆಲಸ ಮಾಡುತ್ತಿದೆ. ಸದ್ಯದ ಪರಿಸ್ಥಿಯನ್ನು ನಿಭಾಯಿಸಲು ದೊಡ್ಡ ಹೃದಯವಂತಿಕೆ ಬೇಕಾಗಿದೆ. ಕೊರೊನ ಸೋಂಕು ಪರೀಕ್ಷೆಗಳನ್ನು ತೀವ್ರಗೊಳಿಸಬೇಕು. ವೈಯಕ್ತಿಕ ರಕ್ಷಣಾ ಉಪಕರಣಗಳ ಕಿಟ್ ಗಳನ್ನು ಕೊಡಬೇಕು. ಆದರೆ ಈಗ ವಿತರಿಸಿರುವ ಪಿಪಿಇ ಕಿಟ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಆಪಾದಿಸಿದರು.

ಲಾಕ್‌ಡೌನ್ ಸಮಯದಲ್ಲಿ ಕೋಟ್ಯಂತರ ಉದ್ಯೋಗಗಳು ಕಳೆದುಹೋಗಿವೆ ಎಂಬುದು ಬಹಳ ಗಂಭೀರ ವಿಷಯ. ನಿರುದ್ಯೋಗ ಇನ್ನೂ ಹೆಚ್ಚಾಗಲಿದೆ. ಸೋನಿಯಾ ಗಾಂಧಿಯವರು ಈ ಬಿಕ್ಕಟ್ಟಿನ ಸಮಯದಲ್ಲಿ ಪ್ರತಿ ಕುಟುಂಬಕ್ಕೆ ರೂ.7,500 ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ರಾಜಸ್ತಾನದ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಉದ್ಯೋಗ, ಹಣ ಮತ್ತು ಅನೇಕ ಸಂದರ್ಭಗಳಲ್ಲಿ ಆಹಾರವಿಲ್ಲದೆ ಇತರ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರ ಸಮಸ್ಯೆಯ ಬಗ್ಗೆ ಸೋನಿಯಾ ಗಾಂಧಿಯವರು ಮಾತನಾಡಿದರು. ಸರ್ಕಾರವು ಅವರಿಗೆ ಆಹಾರ ಭದ್ರತೆ ಮತ್ತು ಆರ್ಥಿಕ ಸುರಕ್ಷತಾ ಜಾಲವನ್ನು ಒದಗಿಸಬೇಕೆಂದು ಅವರು ಒತ್ತಾಯಿಸಿದರು. ಸರ್ಕಾರ ಇದನ್ನು ಸಹಾನುಭೂತಿ ಮತ್ತು ದೊಡ್ಡ ಹೃದಯದಿಂದ ಪರಿಹರಿಸಬೇಕಾಗಿದೆ ಎಂದು ಗೆಹ್ಲೋಟ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಪ್ರಜ್ಞಾವಂತರ ಮಾತುಗಳನ್ನು ಕೇಳುವುದಿಲ್ಲ. ಅವರ ಮೆದುಳಿನಲ್ಲಿ ಇರುವುದು ಲಾಕ್ ಡೌನ್ ಮತ್ತು ಸೀಲ್ ಡೌನ್ ಮಾತ್ರ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...