Homeರಾಜಕೀಯಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

ಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

- Advertisement -
- Advertisement -

ಕೇಂದ್ರ ಸರಕಾರ ಯುಜಿಸಿಯನ್ನು ಮುಚ್ಚಿ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತಾನೇ ನೇರವಾಗಿ ನಿಯಂತ್ರಿಸುವ ಹುನ್ನಾರು ನಡೆಸುತ್ತಿರುವ ಸಂದರ್ಭದಲ್ಲೇ ದೇಶದ ಆರು ಶೈಕ್ಷಣಿಕ ಸಂಸ್ಥೆಗಳನ್ನು  Institution of Eminence ಎಂದು ಪಟ್ಟಿ ಮಾಡಿದೆ. ಹೀಗೆ ಪರಿಗಣಿಸಲ್ಪಟ್ಟ ಸಂಸ್ಥೆಗಳಲ್ಲಿ ಮೂರು ಸರಕಾರಿ ವಲಯಕ್ಕೆ ಸೇರಿದ್ದರೆ, ಉಳಿದ ಮೂರು ಖಾಸಗಿ ವಲಯಕ್ಕೆ ಸೇರಿವೆ.
ಮಾನವ ಸಂಪನ್ಮೂಲ ಸಚಿವಾಲಯ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ , ಐಐಟಿ ಬಾಂಬೆ ಮತ್ತು ಐಐಟಿ ದೆಹಲಿ ಸಂಸ್ಥೆಗಳನ್ನು ಸಾರ್ವಜನಿಕ ವಲಯದಿಂದ ಆಯ್ಕೆ ಮಾಡಿದೆ. ಇದಲ್ಲದೆ 1964ರಲ್ಲಿ ಪ್ರಾರಂಭವಾದ ರಾಜಾಸ್ಥಾನದ ಬಿರ್ಲಾ ಇನ್‍ಸ್ಟ್ಯೂಟ್ ಆಫ್ ಟೆಕ್ನಾಲಜಿ , 1953ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮತ್ತು ರಿಲಯನ್ಸ್ ಸಂಸ್ಥೆಯ ಜಿಯೋ ಇನ್‍ಸ್ಟಿಟ್ಯೂಷನ್‍ಗಳನ್ನು ಆಯ್ಕೆ ಮಾಡಲಾಗಿದೆ.
ಹೀಗೆ ಖಾಸಗಿ ವಲಯದಿಂದ ಆಯ್ಕೆಯಾದ BITS Pilani ಸಂಸ್ಥೆ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಈಗಾಗಲೆ ಹಲವು ದಶಕಗಳ ಕಾಲ ಕಾರ್ಯನಿರ್ವಹಿಸಿ ಪ್ರಸಿದ್ಧಿಗೆ ಬಂದಿವೆ. ಆದರೆ ಈ ಎಮಿನೆನ್ಸ್ ಪಟ್ಟಕ್ಕೇರಿದ ಜಿಯೋ ಇನ್‍ಸ್ಟಿಟ್ಯೂಟ್ ಇನ್ನೂ ಅಸ್ತಿತ್ವಕ್ಕೆ ಬಂದೇ ಇಲ್ಲ ಎಂಬುದು ವಿಚಿತ್ರವಾದರೂ ಸತ್ಯ. ಇನ್ನೂ ಹೇಳಬೇಕೆಂದರೆ, ಜಿಯೋ ಇನ್‍ಸ್ಟಿಟ್ಯೂಟ್ ತನ್ನ ಕಾರ್ಪೋರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ  ಅಡಿ ತೆರಿಗೆ ವಿನಾಯಿತಿ ಪಡೆಯಲಿಕ್ಕಾಗಿಯೇ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ತೆರೆದಿದೆ ಎಂಬ ಆರೋಪವಿದೆ. ಹೀಗೆ ‘ಅಸ್ತಿತ್ವದಲ್ಲಿಯೇ ಇಲ್ಲದ ಈ ಸಂಸ್ಥೆಯನ್ನು ಕೇಂದ್ರ ಸರಕಾರ ಭಾರತದ `ಶ್ರೇಷ್ಠ ಸಂಸ್ಥೆ’  ಎಂದು ಪಟ್ಟಿ ಮಾಡುವ ಜರಾರಾದರೂ ಏನಿತ್ತು?’ ಎಂದು ಖಾಸಗಿ ವಲಯದ ಉನ್ನತ ಶಿಕ್ಷಣ ಸಂಸ್ಥೆಗಳೇ ಪ್ರಶ್ನಿಸುತ್ತಿವೆ. ಕೇಂದ್ರ ಚುನಾವಣಾಧಿಕಾರಿಯಾಗಿದ್ದ ಗೋಪಾಲಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಈ ಶೀರ್ಷಿಕೆಯಡಿ ಪಟ್ಟಿ ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಬೇಕು. ಸದರಿ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಈಗಾಗಲೆ ಉನ್ನತ ಸಾಧನೆ ಮಾಡಿರಬೇಕು. ತನ್ನ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಅಂತರ್‍ಶಿಸ್ತೀಯ ವಿಷಯಗಳನ್ನು ಅಳವಡಿಸಿಕೊಂಡಿರಬೇಕು. ಜೊತೆಗೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಮತ್ತು ಬೋಧಕ ಸಿಬ್ಬಂದಿಯನ್ನು ಹೊಂದಿರಬೇಕು. ಇದಲ್ಲದೆ, ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸವಲತ್ತು ಮತ್ತು ಬೋಧನಾ ವಿಧಾನಗಳನ್ನು ಹೊಂದಿರಬೇಕು. ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯಲ್ಲಿ ಈ ಎಲ್ಲ ವಿಶೇಷಣಗಳನ್ನು ಕಂಡುಹಿಡಿದ ಪ್ರಭೃತಿಗಳ ಅಂಬಾನಿ ನಿಷ್ಠೆ ಮೆಚ್ಚಲೇಬೇಕು.
ಈ ಆಯ್ಕೆ ಕುರಿತು ಹರಿದು ಬಂದ ಪ್ರಶ್ನೆಗಳಿಗೆ ಎನ್ ಗೋಪಾಲಸ್ವಾಮಿ ಇದುವರೆಗೂ ಉತ್ತರಿಸಿಲ್ಲ. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು `ದೇಶದ ಶೈಕ್ಷಣಿಕ ವಲಯದಲ್ಲಿ ಖಾಸಗಿ ಬಂಡವಾಳ ಹರಿದು ಬರಬೇಕು. ಆ ಮೂಲಕ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳು ಭಾರತದಲ್ಲಿ ಸ್ಥಾಪನೆಯಾಗುವಂತಾಗಬೇಕು’ ಎಂಬ ಕಾರಣದಿಂದ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ಶ್ರೇಷ್ಠ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂಬ ಸಮಾಜಾಯಿಷಿಯನ್ನು ನೀಡಿದೆ.
ಈ ಹಿಂದೆ ಜಿಯೋ ಮೊಬೈಲ್ ಸಂಸ್ಥೆಯನ್ನು ಆರಂಭಿಸಿ ಅದರ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನಮಂತ್ರಿಯನ್ನೇ ಆಹ್ವಾನಿಸಿ ಜಿಯೋಗೆ ಅವರನ್ನು ಪ್ರಚಾರ ರಾಯಭಾರಿಯಂತೆ ರಿಲಯನ್ಸ್ ಸಂಸ್ಥೆ ಬಳಸಿತ್ತು. ಈಗ ಅಸ್ತಿತ್ವದಲ್ಲಿಯೇ ಇಲ್ಲದ ತನ್ನ ಸಂಸ್ಥೆಗೆ Institution of Eminence ಸ್ಥಾನಮಾನವನ್ನು ಪಡೆದಿರುವುದು ದೇಶದ ರಾಜಕಾರಣಕ್ಕೆ ಹಿಡಿದ ಕನ್ನಡಿಯಂತಿದೆ.

 

– ಅಲ್ಲಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...