Homeರಾಜಕೀಯಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

ಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

- Advertisement -
- Advertisement -

ಕೇಂದ್ರ ಸರಕಾರ ಯುಜಿಸಿಯನ್ನು ಮುಚ್ಚಿ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತಾನೇ ನೇರವಾಗಿ ನಿಯಂತ್ರಿಸುವ ಹುನ್ನಾರು ನಡೆಸುತ್ತಿರುವ ಸಂದರ್ಭದಲ್ಲೇ ದೇಶದ ಆರು ಶೈಕ್ಷಣಿಕ ಸಂಸ್ಥೆಗಳನ್ನು  Institution of Eminence ಎಂದು ಪಟ್ಟಿ ಮಾಡಿದೆ. ಹೀಗೆ ಪರಿಗಣಿಸಲ್ಪಟ್ಟ ಸಂಸ್ಥೆಗಳಲ್ಲಿ ಮೂರು ಸರಕಾರಿ ವಲಯಕ್ಕೆ ಸೇರಿದ್ದರೆ, ಉಳಿದ ಮೂರು ಖಾಸಗಿ ವಲಯಕ್ಕೆ ಸೇರಿವೆ.
ಮಾನವ ಸಂಪನ್ಮೂಲ ಸಚಿವಾಲಯ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ , ಐಐಟಿ ಬಾಂಬೆ ಮತ್ತು ಐಐಟಿ ದೆಹಲಿ ಸಂಸ್ಥೆಗಳನ್ನು ಸಾರ್ವಜನಿಕ ವಲಯದಿಂದ ಆಯ್ಕೆ ಮಾಡಿದೆ. ಇದಲ್ಲದೆ 1964ರಲ್ಲಿ ಪ್ರಾರಂಭವಾದ ರಾಜಾಸ್ಥಾನದ ಬಿರ್ಲಾ ಇನ್‍ಸ್ಟ್ಯೂಟ್ ಆಫ್ ಟೆಕ್ನಾಲಜಿ , 1953ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮತ್ತು ರಿಲಯನ್ಸ್ ಸಂಸ್ಥೆಯ ಜಿಯೋ ಇನ್‍ಸ್ಟಿಟ್ಯೂಷನ್‍ಗಳನ್ನು ಆಯ್ಕೆ ಮಾಡಲಾಗಿದೆ.
ಹೀಗೆ ಖಾಸಗಿ ವಲಯದಿಂದ ಆಯ್ಕೆಯಾದ BITS Pilani ಸಂಸ್ಥೆ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಈಗಾಗಲೆ ಹಲವು ದಶಕಗಳ ಕಾಲ ಕಾರ್ಯನಿರ್ವಹಿಸಿ ಪ್ರಸಿದ್ಧಿಗೆ ಬಂದಿವೆ. ಆದರೆ ಈ ಎಮಿನೆನ್ಸ್ ಪಟ್ಟಕ್ಕೇರಿದ ಜಿಯೋ ಇನ್‍ಸ್ಟಿಟ್ಯೂಟ್ ಇನ್ನೂ ಅಸ್ತಿತ್ವಕ್ಕೆ ಬಂದೇ ಇಲ್ಲ ಎಂಬುದು ವಿಚಿತ್ರವಾದರೂ ಸತ್ಯ. ಇನ್ನೂ ಹೇಳಬೇಕೆಂದರೆ, ಜಿಯೋ ಇನ್‍ಸ್ಟಿಟ್ಯೂಟ್ ತನ್ನ ಕಾರ್ಪೋರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ  ಅಡಿ ತೆರಿಗೆ ವಿನಾಯಿತಿ ಪಡೆಯಲಿಕ್ಕಾಗಿಯೇ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ತೆರೆದಿದೆ ಎಂಬ ಆರೋಪವಿದೆ. ಹೀಗೆ ‘ಅಸ್ತಿತ್ವದಲ್ಲಿಯೇ ಇಲ್ಲದ ಈ ಸಂಸ್ಥೆಯನ್ನು ಕೇಂದ್ರ ಸರಕಾರ ಭಾರತದ `ಶ್ರೇಷ್ಠ ಸಂಸ್ಥೆ’  ಎಂದು ಪಟ್ಟಿ ಮಾಡುವ ಜರಾರಾದರೂ ಏನಿತ್ತು?’ ಎಂದು ಖಾಸಗಿ ವಲಯದ ಉನ್ನತ ಶಿಕ್ಷಣ ಸಂಸ್ಥೆಗಳೇ ಪ್ರಶ್ನಿಸುತ್ತಿವೆ. ಕೇಂದ್ರ ಚುನಾವಣಾಧಿಕಾರಿಯಾಗಿದ್ದ ಗೋಪಾಲಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಈ ಶೀರ್ಷಿಕೆಯಡಿ ಪಟ್ಟಿ ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಬೇಕು. ಸದರಿ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಈಗಾಗಲೆ ಉನ್ನತ ಸಾಧನೆ ಮಾಡಿರಬೇಕು. ತನ್ನ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಅಂತರ್‍ಶಿಸ್ತೀಯ ವಿಷಯಗಳನ್ನು ಅಳವಡಿಸಿಕೊಂಡಿರಬೇಕು. ಜೊತೆಗೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಮತ್ತು ಬೋಧಕ ಸಿಬ್ಬಂದಿಯನ್ನು ಹೊಂದಿರಬೇಕು. ಇದಲ್ಲದೆ, ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸವಲತ್ತು ಮತ್ತು ಬೋಧನಾ ವಿಧಾನಗಳನ್ನು ಹೊಂದಿರಬೇಕು. ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯಲ್ಲಿ ಈ ಎಲ್ಲ ವಿಶೇಷಣಗಳನ್ನು ಕಂಡುಹಿಡಿದ ಪ್ರಭೃತಿಗಳ ಅಂಬಾನಿ ನಿಷ್ಠೆ ಮೆಚ್ಚಲೇಬೇಕು.
ಈ ಆಯ್ಕೆ ಕುರಿತು ಹರಿದು ಬಂದ ಪ್ರಶ್ನೆಗಳಿಗೆ ಎನ್ ಗೋಪಾಲಸ್ವಾಮಿ ಇದುವರೆಗೂ ಉತ್ತರಿಸಿಲ್ಲ. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು `ದೇಶದ ಶೈಕ್ಷಣಿಕ ವಲಯದಲ್ಲಿ ಖಾಸಗಿ ಬಂಡವಾಳ ಹರಿದು ಬರಬೇಕು. ಆ ಮೂಲಕ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳು ಭಾರತದಲ್ಲಿ ಸ್ಥಾಪನೆಯಾಗುವಂತಾಗಬೇಕು’ ಎಂಬ ಕಾರಣದಿಂದ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ಶ್ರೇಷ್ಠ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂಬ ಸಮಾಜಾಯಿಷಿಯನ್ನು ನೀಡಿದೆ.
ಈ ಹಿಂದೆ ಜಿಯೋ ಮೊಬೈಲ್ ಸಂಸ್ಥೆಯನ್ನು ಆರಂಭಿಸಿ ಅದರ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನಮಂತ್ರಿಯನ್ನೇ ಆಹ್ವಾನಿಸಿ ಜಿಯೋಗೆ ಅವರನ್ನು ಪ್ರಚಾರ ರಾಯಭಾರಿಯಂತೆ ರಿಲಯನ್ಸ್ ಸಂಸ್ಥೆ ಬಳಸಿತ್ತು. ಈಗ ಅಸ್ತಿತ್ವದಲ್ಲಿಯೇ ಇಲ್ಲದ ತನ್ನ ಸಂಸ್ಥೆಗೆ Institution of Eminence ಸ್ಥಾನಮಾನವನ್ನು ಪಡೆದಿರುವುದು ದೇಶದ ರಾಜಕಾರಣಕ್ಕೆ ಹಿಡಿದ ಕನ್ನಡಿಯಂತಿದೆ.

 

– ಅಲ್ಲಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...