Homeರಾಜಕೀಯಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

ಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

- Advertisement -
- Advertisement -

ಕೇಂದ್ರ ಸರಕಾರ ಯುಜಿಸಿಯನ್ನು ಮುಚ್ಚಿ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತಾನೇ ನೇರವಾಗಿ ನಿಯಂತ್ರಿಸುವ ಹುನ್ನಾರು ನಡೆಸುತ್ತಿರುವ ಸಂದರ್ಭದಲ್ಲೇ ದೇಶದ ಆರು ಶೈಕ್ಷಣಿಕ ಸಂಸ್ಥೆಗಳನ್ನು  Institution of Eminence ಎಂದು ಪಟ್ಟಿ ಮಾಡಿದೆ. ಹೀಗೆ ಪರಿಗಣಿಸಲ್ಪಟ್ಟ ಸಂಸ್ಥೆಗಳಲ್ಲಿ ಮೂರು ಸರಕಾರಿ ವಲಯಕ್ಕೆ ಸೇರಿದ್ದರೆ, ಉಳಿದ ಮೂರು ಖಾಸಗಿ ವಲಯಕ್ಕೆ ಸೇರಿವೆ.
ಮಾನವ ಸಂಪನ್ಮೂಲ ಸಚಿವಾಲಯ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ , ಐಐಟಿ ಬಾಂಬೆ ಮತ್ತು ಐಐಟಿ ದೆಹಲಿ ಸಂಸ್ಥೆಗಳನ್ನು ಸಾರ್ವಜನಿಕ ವಲಯದಿಂದ ಆಯ್ಕೆ ಮಾಡಿದೆ. ಇದಲ್ಲದೆ 1964ರಲ್ಲಿ ಪ್ರಾರಂಭವಾದ ರಾಜಾಸ್ಥಾನದ ಬಿರ್ಲಾ ಇನ್‍ಸ್ಟ್ಯೂಟ್ ಆಫ್ ಟೆಕ್ನಾಲಜಿ , 1953ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮತ್ತು ರಿಲಯನ್ಸ್ ಸಂಸ್ಥೆಯ ಜಿಯೋ ಇನ್‍ಸ್ಟಿಟ್ಯೂಷನ್‍ಗಳನ್ನು ಆಯ್ಕೆ ಮಾಡಲಾಗಿದೆ.
ಹೀಗೆ ಖಾಸಗಿ ವಲಯದಿಂದ ಆಯ್ಕೆಯಾದ BITS Pilani ಸಂಸ್ಥೆ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಈಗಾಗಲೆ ಹಲವು ದಶಕಗಳ ಕಾಲ ಕಾರ್ಯನಿರ್ವಹಿಸಿ ಪ್ರಸಿದ್ಧಿಗೆ ಬಂದಿವೆ. ಆದರೆ ಈ ಎಮಿನೆನ್ಸ್ ಪಟ್ಟಕ್ಕೇರಿದ ಜಿಯೋ ಇನ್‍ಸ್ಟಿಟ್ಯೂಟ್ ಇನ್ನೂ ಅಸ್ತಿತ್ವಕ್ಕೆ ಬಂದೇ ಇಲ್ಲ ಎಂಬುದು ವಿಚಿತ್ರವಾದರೂ ಸತ್ಯ. ಇನ್ನೂ ಹೇಳಬೇಕೆಂದರೆ, ಜಿಯೋ ಇನ್‍ಸ್ಟಿಟ್ಯೂಟ್ ತನ್ನ ಕಾರ್ಪೋರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ  ಅಡಿ ತೆರಿಗೆ ವಿನಾಯಿತಿ ಪಡೆಯಲಿಕ್ಕಾಗಿಯೇ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ತೆರೆದಿದೆ ಎಂಬ ಆರೋಪವಿದೆ. ಹೀಗೆ ‘ಅಸ್ತಿತ್ವದಲ್ಲಿಯೇ ಇಲ್ಲದ ಈ ಸಂಸ್ಥೆಯನ್ನು ಕೇಂದ್ರ ಸರಕಾರ ಭಾರತದ `ಶ್ರೇಷ್ಠ ಸಂಸ್ಥೆ’  ಎಂದು ಪಟ್ಟಿ ಮಾಡುವ ಜರಾರಾದರೂ ಏನಿತ್ತು?’ ಎಂದು ಖಾಸಗಿ ವಲಯದ ಉನ್ನತ ಶಿಕ್ಷಣ ಸಂಸ್ಥೆಗಳೇ ಪ್ರಶ್ನಿಸುತ್ತಿವೆ. ಕೇಂದ್ರ ಚುನಾವಣಾಧಿಕಾರಿಯಾಗಿದ್ದ ಗೋಪಾಲಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಈ ಶೀರ್ಷಿಕೆಯಡಿ ಪಟ್ಟಿ ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಬೇಕು. ಸದರಿ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಈಗಾಗಲೆ ಉನ್ನತ ಸಾಧನೆ ಮಾಡಿರಬೇಕು. ತನ್ನ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಅಂತರ್‍ಶಿಸ್ತೀಯ ವಿಷಯಗಳನ್ನು ಅಳವಡಿಸಿಕೊಂಡಿರಬೇಕು. ಜೊತೆಗೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಮತ್ತು ಬೋಧಕ ಸಿಬ್ಬಂದಿಯನ್ನು ಹೊಂದಿರಬೇಕು. ಇದಲ್ಲದೆ, ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸವಲತ್ತು ಮತ್ತು ಬೋಧನಾ ವಿಧಾನಗಳನ್ನು ಹೊಂದಿರಬೇಕು. ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯಲ್ಲಿ ಈ ಎಲ್ಲ ವಿಶೇಷಣಗಳನ್ನು ಕಂಡುಹಿಡಿದ ಪ್ರಭೃತಿಗಳ ಅಂಬಾನಿ ನಿಷ್ಠೆ ಮೆಚ್ಚಲೇಬೇಕು.
ಈ ಆಯ್ಕೆ ಕುರಿತು ಹರಿದು ಬಂದ ಪ್ರಶ್ನೆಗಳಿಗೆ ಎನ್ ಗೋಪಾಲಸ್ವಾಮಿ ಇದುವರೆಗೂ ಉತ್ತರಿಸಿಲ್ಲ. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು `ದೇಶದ ಶೈಕ್ಷಣಿಕ ವಲಯದಲ್ಲಿ ಖಾಸಗಿ ಬಂಡವಾಳ ಹರಿದು ಬರಬೇಕು. ಆ ಮೂಲಕ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳು ಭಾರತದಲ್ಲಿ ಸ್ಥಾಪನೆಯಾಗುವಂತಾಗಬೇಕು’ ಎಂಬ ಕಾರಣದಿಂದ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ಶ್ರೇಷ್ಠ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂಬ ಸಮಾಜಾಯಿಷಿಯನ್ನು ನೀಡಿದೆ.
ಈ ಹಿಂದೆ ಜಿಯೋ ಮೊಬೈಲ್ ಸಂಸ್ಥೆಯನ್ನು ಆರಂಭಿಸಿ ಅದರ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನಮಂತ್ರಿಯನ್ನೇ ಆಹ್ವಾನಿಸಿ ಜಿಯೋಗೆ ಅವರನ್ನು ಪ್ರಚಾರ ರಾಯಭಾರಿಯಂತೆ ರಿಲಯನ್ಸ್ ಸಂಸ್ಥೆ ಬಳಸಿತ್ತು. ಈಗ ಅಸ್ತಿತ್ವದಲ್ಲಿಯೇ ಇಲ್ಲದ ತನ್ನ ಸಂಸ್ಥೆಗೆ Institution of Eminence ಸ್ಥಾನಮಾನವನ್ನು ಪಡೆದಿರುವುದು ದೇಶದ ರಾಜಕಾರಣಕ್ಕೆ ಹಿಡಿದ ಕನ್ನಡಿಯಂತಿದೆ.

 

– ಅಲ್ಲಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....