Homeರಾಜಕೀಯಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

ಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

- Advertisement -
- Advertisement -

ಕೇಂದ್ರ ಸರಕಾರ ಯುಜಿಸಿಯನ್ನು ಮುಚ್ಚಿ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತಾನೇ ನೇರವಾಗಿ ನಿಯಂತ್ರಿಸುವ ಹುನ್ನಾರು ನಡೆಸುತ್ತಿರುವ ಸಂದರ್ಭದಲ್ಲೇ ದೇಶದ ಆರು ಶೈಕ್ಷಣಿಕ ಸಂಸ್ಥೆಗಳನ್ನು  Institution of Eminence ಎಂದು ಪಟ್ಟಿ ಮಾಡಿದೆ. ಹೀಗೆ ಪರಿಗಣಿಸಲ್ಪಟ್ಟ ಸಂಸ್ಥೆಗಳಲ್ಲಿ ಮೂರು ಸರಕಾರಿ ವಲಯಕ್ಕೆ ಸೇರಿದ್ದರೆ, ಉಳಿದ ಮೂರು ಖಾಸಗಿ ವಲಯಕ್ಕೆ ಸೇರಿವೆ.
ಮಾನವ ಸಂಪನ್ಮೂಲ ಸಚಿವಾಲಯ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ , ಐಐಟಿ ಬಾಂಬೆ ಮತ್ತು ಐಐಟಿ ದೆಹಲಿ ಸಂಸ್ಥೆಗಳನ್ನು ಸಾರ್ವಜನಿಕ ವಲಯದಿಂದ ಆಯ್ಕೆ ಮಾಡಿದೆ. ಇದಲ್ಲದೆ 1964ರಲ್ಲಿ ಪ್ರಾರಂಭವಾದ ರಾಜಾಸ್ಥಾನದ ಬಿರ್ಲಾ ಇನ್‍ಸ್ಟ್ಯೂಟ್ ಆಫ್ ಟೆಕ್ನಾಲಜಿ , 1953ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮತ್ತು ರಿಲಯನ್ಸ್ ಸಂಸ್ಥೆಯ ಜಿಯೋ ಇನ್‍ಸ್ಟಿಟ್ಯೂಷನ್‍ಗಳನ್ನು ಆಯ್ಕೆ ಮಾಡಲಾಗಿದೆ.
ಹೀಗೆ ಖಾಸಗಿ ವಲಯದಿಂದ ಆಯ್ಕೆಯಾದ BITS Pilani ಸಂಸ್ಥೆ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಈಗಾಗಲೆ ಹಲವು ದಶಕಗಳ ಕಾಲ ಕಾರ್ಯನಿರ್ವಹಿಸಿ ಪ್ರಸಿದ್ಧಿಗೆ ಬಂದಿವೆ. ಆದರೆ ಈ ಎಮಿನೆನ್ಸ್ ಪಟ್ಟಕ್ಕೇರಿದ ಜಿಯೋ ಇನ್‍ಸ್ಟಿಟ್ಯೂಟ್ ಇನ್ನೂ ಅಸ್ತಿತ್ವಕ್ಕೆ ಬಂದೇ ಇಲ್ಲ ಎಂಬುದು ವಿಚಿತ್ರವಾದರೂ ಸತ್ಯ. ಇನ್ನೂ ಹೇಳಬೇಕೆಂದರೆ, ಜಿಯೋ ಇನ್‍ಸ್ಟಿಟ್ಯೂಟ್ ತನ್ನ ಕಾರ್ಪೋರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ  ಅಡಿ ತೆರಿಗೆ ವಿನಾಯಿತಿ ಪಡೆಯಲಿಕ್ಕಾಗಿಯೇ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ತೆರೆದಿದೆ ಎಂಬ ಆರೋಪವಿದೆ. ಹೀಗೆ ‘ಅಸ್ತಿತ್ವದಲ್ಲಿಯೇ ಇಲ್ಲದ ಈ ಸಂಸ್ಥೆಯನ್ನು ಕೇಂದ್ರ ಸರಕಾರ ಭಾರತದ `ಶ್ರೇಷ್ಠ ಸಂಸ್ಥೆ’  ಎಂದು ಪಟ್ಟಿ ಮಾಡುವ ಜರಾರಾದರೂ ಏನಿತ್ತು?’ ಎಂದು ಖಾಸಗಿ ವಲಯದ ಉನ್ನತ ಶಿಕ್ಷಣ ಸಂಸ್ಥೆಗಳೇ ಪ್ರಶ್ನಿಸುತ್ತಿವೆ. ಕೇಂದ್ರ ಚುನಾವಣಾಧಿಕಾರಿಯಾಗಿದ್ದ ಗೋಪಾಲಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಈ ಶೀರ್ಷಿಕೆಯಡಿ ಪಟ್ಟಿ ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಬೇಕು. ಸದರಿ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಈಗಾಗಲೆ ಉನ್ನತ ಸಾಧನೆ ಮಾಡಿರಬೇಕು. ತನ್ನ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಅಂತರ್‍ಶಿಸ್ತೀಯ ವಿಷಯಗಳನ್ನು ಅಳವಡಿಸಿಕೊಂಡಿರಬೇಕು. ಜೊತೆಗೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಮತ್ತು ಬೋಧಕ ಸಿಬ್ಬಂದಿಯನ್ನು ಹೊಂದಿರಬೇಕು. ಇದಲ್ಲದೆ, ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸವಲತ್ತು ಮತ್ತು ಬೋಧನಾ ವಿಧಾನಗಳನ್ನು ಹೊಂದಿರಬೇಕು. ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯಲ್ಲಿ ಈ ಎಲ್ಲ ವಿಶೇಷಣಗಳನ್ನು ಕಂಡುಹಿಡಿದ ಪ್ರಭೃತಿಗಳ ಅಂಬಾನಿ ನಿಷ್ಠೆ ಮೆಚ್ಚಲೇಬೇಕು.
ಈ ಆಯ್ಕೆ ಕುರಿತು ಹರಿದು ಬಂದ ಪ್ರಶ್ನೆಗಳಿಗೆ ಎನ್ ಗೋಪಾಲಸ್ವಾಮಿ ಇದುವರೆಗೂ ಉತ್ತರಿಸಿಲ್ಲ. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು `ದೇಶದ ಶೈಕ್ಷಣಿಕ ವಲಯದಲ್ಲಿ ಖಾಸಗಿ ಬಂಡವಾಳ ಹರಿದು ಬರಬೇಕು. ಆ ಮೂಲಕ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳು ಭಾರತದಲ್ಲಿ ಸ್ಥಾಪನೆಯಾಗುವಂತಾಗಬೇಕು’ ಎಂಬ ಕಾರಣದಿಂದ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ಶ್ರೇಷ್ಠ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂಬ ಸಮಾಜಾಯಿಷಿಯನ್ನು ನೀಡಿದೆ.
ಈ ಹಿಂದೆ ಜಿಯೋ ಮೊಬೈಲ್ ಸಂಸ್ಥೆಯನ್ನು ಆರಂಭಿಸಿ ಅದರ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನಮಂತ್ರಿಯನ್ನೇ ಆಹ್ವಾನಿಸಿ ಜಿಯೋಗೆ ಅವರನ್ನು ಪ್ರಚಾರ ರಾಯಭಾರಿಯಂತೆ ರಿಲಯನ್ಸ್ ಸಂಸ್ಥೆ ಬಳಸಿತ್ತು. ಈಗ ಅಸ್ತಿತ್ವದಲ್ಲಿಯೇ ಇಲ್ಲದ ತನ್ನ ಸಂಸ್ಥೆಗೆ Institution of Eminence ಸ್ಥಾನಮಾನವನ್ನು ಪಡೆದಿರುವುದು ದೇಶದ ರಾಜಕಾರಣಕ್ಕೆ ಹಿಡಿದ ಕನ್ನಡಿಯಂತಿದೆ.

 

– ಅಲ್ಲಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...