Homeರಾಜಕೀಯಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

ಸ್ಥಾಪನೆಯೇ ಆಗಿರದ ಜಿಯೋ ಭಾರತದ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಂತೆ!

- Advertisement -
- Advertisement -

ಕೇಂದ್ರ ಸರಕಾರ ಯುಜಿಸಿಯನ್ನು ಮುಚ್ಚಿ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತಾನೇ ನೇರವಾಗಿ ನಿಯಂತ್ರಿಸುವ ಹುನ್ನಾರು ನಡೆಸುತ್ತಿರುವ ಸಂದರ್ಭದಲ್ಲೇ ದೇಶದ ಆರು ಶೈಕ್ಷಣಿಕ ಸಂಸ್ಥೆಗಳನ್ನು  Institution of Eminence ಎಂದು ಪಟ್ಟಿ ಮಾಡಿದೆ. ಹೀಗೆ ಪರಿಗಣಿಸಲ್ಪಟ್ಟ ಸಂಸ್ಥೆಗಳಲ್ಲಿ ಮೂರು ಸರಕಾರಿ ವಲಯಕ್ಕೆ ಸೇರಿದ್ದರೆ, ಉಳಿದ ಮೂರು ಖಾಸಗಿ ವಲಯಕ್ಕೆ ಸೇರಿವೆ.
ಮಾನವ ಸಂಪನ್ಮೂಲ ಸಚಿವಾಲಯ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ , ಐಐಟಿ ಬಾಂಬೆ ಮತ್ತು ಐಐಟಿ ದೆಹಲಿ ಸಂಸ್ಥೆಗಳನ್ನು ಸಾರ್ವಜನಿಕ ವಲಯದಿಂದ ಆಯ್ಕೆ ಮಾಡಿದೆ. ಇದಲ್ಲದೆ 1964ರಲ್ಲಿ ಪ್ರಾರಂಭವಾದ ರಾಜಾಸ್ಥಾನದ ಬಿರ್ಲಾ ಇನ್‍ಸ್ಟ್ಯೂಟ್ ಆಫ್ ಟೆಕ್ನಾಲಜಿ , 1953ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮತ್ತು ರಿಲಯನ್ಸ್ ಸಂಸ್ಥೆಯ ಜಿಯೋ ಇನ್‍ಸ್ಟಿಟ್ಯೂಷನ್‍ಗಳನ್ನು ಆಯ್ಕೆ ಮಾಡಲಾಗಿದೆ.
ಹೀಗೆ ಖಾಸಗಿ ವಲಯದಿಂದ ಆಯ್ಕೆಯಾದ BITS Pilani ಸಂಸ್ಥೆ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಈಗಾಗಲೆ ಹಲವು ದಶಕಗಳ ಕಾಲ ಕಾರ್ಯನಿರ್ವಹಿಸಿ ಪ್ರಸಿದ್ಧಿಗೆ ಬಂದಿವೆ. ಆದರೆ ಈ ಎಮಿನೆನ್ಸ್ ಪಟ್ಟಕ್ಕೇರಿದ ಜಿಯೋ ಇನ್‍ಸ್ಟಿಟ್ಯೂಟ್ ಇನ್ನೂ ಅಸ್ತಿತ್ವಕ್ಕೆ ಬಂದೇ ಇಲ್ಲ ಎಂಬುದು ವಿಚಿತ್ರವಾದರೂ ಸತ್ಯ. ಇನ್ನೂ ಹೇಳಬೇಕೆಂದರೆ, ಜಿಯೋ ಇನ್‍ಸ್ಟಿಟ್ಯೂಟ್ ತನ್ನ ಕಾರ್ಪೋರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ  ಅಡಿ ತೆರಿಗೆ ವಿನಾಯಿತಿ ಪಡೆಯಲಿಕ್ಕಾಗಿಯೇ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ತೆರೆದಿದೆ ಎಂಬ ಆರೋಪವಿದೆ. ಹೀಗೆ ‘ಅಸ್ತಿತ್ವದಲ್ಲಿಯೇ ಇಲ್ಲದ ಈ ಸಂಸ್ಥೆಯನ್ನು ಕೇಂದ್ರ ಸರಕಾರ ಭಾರತದ `ಶ್ರೇಷ್ಠ ಸಂಸ್ಥೆ’  ಎಂದು ಪಟ್ಟಿ ಮಾಡುವ ಜರಾರಾದರೂ ಏನಿತ್ತು?’ ಎಂದು ಖಾಸಗಿ ವಲಯದ ಉನ್ನತ ಶಿಕ್ಷಣ ಸಂಸ್ಥೆಗಳೇ ಪ್ರಶ್ನಿಸುತ್ತಿವೆ. ಕೇಂದ್ರ ಚುನಾವಣಾಧಿಕಾರಿಯಾಗಿದ್ದ ಗೋಪಾಲಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಈ ಶೀರ್ಷಿಕೆಯಡಿ ಪಟ್ಟಿ ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಬೇಕು. ಸದರಿ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಈಗಾಗಲೆ ಉನ್ನತ ಸಾಧನೆ ಮಾಡಿರಬೇಕು. ತನ್ನ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಅಂತರ್‍ಶಿಸ್ತೀಯ ವಿಷಯಗಳನ್ನು ಅಳವಡಿಸಿಕೊಂಡಿರಬೇಕು. ಜೊತೆಗೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಮತ್ತು ಬೋಧಕ ಸಿಬ್ಬಂದಿಯನ್ನು ಹೊಂದಿರಬೇಕು. ಇದಲ್ಲದೆ, ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸವಲತ್ತು ಮತ್ತು ಬೋಧನಾ ವಿಧಾನಗಳನ್ನು ಹೊಂದಿರಬೇಕು. ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯಲ್ಲಿ ಈ ಎಲ್ಲ ವಿಶೇಷಣಗಳನ್ನು ಕಂಡುಹಿಡಿದ ಪ್ರಭೃತಿಗಳ ಅಂಬಾನಿ ನಿಷ್ಠೆ ಮೆಚ್ಚಲೇಬೇಕು.
ಈ ಆಯ್ಕೆ ಕುರಿತು ಹರಿದು ಬಂದ ಪ್ರಶ್ನೆಗಳಿಗೆ ಎನ್ ಗೋಪಾಲಸ್ವಾಮಿ ಇದುವರೆಗೂ ಉತ್ತರಿಸಿಲ್ಲ. ಆದರೆ, ಮಾನವ ಸಂಪನ್ಮೂಲ ಸಚಿವಾಲಯವು `ದೇಶದ ಶೈಕ್ಷಣಿಕ ವಲಯದಲ್ಲಿ ಖಾಸಗಿ ಬಂಡವಾಳ ಹರಿದು ಬರಬೇಕು. ಆ ಮೂಲಕ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳು ಭಾರತದಲ್ಲಿ ಸ್ಥಾಪನೆಯಾಗುವಂತಾಗಬೇಕು’ ಎಂಬ ಕಾರಣದಿಂದ ಜಿಯೋ ಇನ್‍ಸ್ಟಿಟ್ಯೂಟ್‍ನ್ನು ಶ್ರೇಷ್ಠ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂಬ ಸಮಾಜಾಯಿಷಿಯನ್ನು ನೀಡಿದೆ.
ಈ ಹಿಂದೆ ಜಿಯೋ ಮೊಬೈಲ್ ಸಂಸ್ಥೆಯನ್ನು ಆರಂಭಿಸಿ ಅದರ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನಮಂತ್ರಿಯನ್ನೇ ಆಹ್ವಾನಿಸಿ ಜಿಯೋಗೆ ಅವರನ್ನು ಪ್ರಚಾರ ರಾಯಭಾರಿಯಂತೆ ರಿಲಯನ್ಸ್ ಸಂಸ್ಥೆ ಬಳಸಿತ್ತು. ಈಗ ಅಸ್ತಿತ್ವದಲ್ಲಿಯೇ ಇಲ್ಲದ ತನ್ನ ಸಂಸ್ಥೆಗೆ Institution of Eminence ಸ್ಥಾನಮಾನವನ್ನು ಪಡೆದಿರುವುದು ದೇಶದ ರಾಜಕಾರಣಕ್ಕೆ ಹಿಡಿದ ಕನ್ನಡಿಯಂತಿದೆ.

 

– ಅಲ್ಲಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...